Homeಮುಖಪುಟಹತ್ರಾಸ್‌| ರಜೆಗಾಗಿ ಎರಡನೇ ತರಗತಿ ಬಾಲಕನನ್ನು ಕೊಂದ ವಸತಿ ಶಾಲೆ ಹಿರಿಯ ವಿದ್ಯಾರ್ಥಿ?

ಹತ್ರಾಸ್‌| ರಜೆಗಾಗಿ ಎರಡನೇ ತರಗತಿ ಬಾಲಕನನ್ನು ಕೊಂದ ವಸತಿ ಶಾಲೆ ಹಿರಿಯ ವಿದ್ಯಾರ್ಥಿ?

- Advertisement -
- Advertisement -

ಹತ್ರಾಸ್‌ನಲ್ಲಿರುವ ಡಿಎಲ್ ಪಬ್ಲಿಕ್ ಸ್ಕೂಲ್‌ನ ವಸತಿ ಹಾಸ್ಟೆಲ್‌ನಲ್ಲಿ 11 ವರ್ಷದ 2 ನೇ ತರಗತಿ ವಿದ್ಯಾರ್ಥಿ ಕೃತಾರ್ಥ್ ಎಂಬ ಬಾಳಕನ ಭೀಕರ ಹತ್ಯೆ ಪ್ರಕರಣ ಆಘಾತ ಮೂಡಿಸಿದ್ದು, ಶಿಕ್ಷಣ ಸಂಸ್ಥೆಗಳಲ್ಲಿ ಸುರಕ್ಷತೆ ಮತ್ತು ಹೊಣೆಗಾರಿಕೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಬಾಲಕನ ಕೊಲೆಗೆ ಕಾರಣ ಕೇಳಿ ಎಲ್ಲರೂ ಬೆಚ್ಚಿಬಿದ್ದಿದ್ದಾರೆ.

“ಶಾಲೆಗೆ ರಜೆ ಘೋಷಿಸಬೇಕು ಎಂಬ ಕಾರಣಕ್ಕಾಗಿ ಕೃತಾರ್ಥ್‌ನನ್ನು ಕೊಂದಿದ್ದಾನೆ” ಎಂದು ಆರೋಪಿಸಿ ಪೊಲೀಸರು ಹಿರಿಯ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಆದರೂ, ಕೃತಾರ್ಥ್ ಅವರ ಕುಟುಂಬವು ಈ ಹೇಳಿಕೆಯನ್ನು ತಿರಸ್ಕರಿಸಿದ್ದಾರೆ. ಶಾಲೆಯ ಆಡಳಿತದ ನಿರ್ಲಕ್ಷ್ಯವಿದೆ ಎಂದು ಆರೋಪಿಸಿರುವ ಅವರು, ಸಾವಿನ ಕುರಿತು ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಚಂದ್ಪಾದಲ್ಲಿನ ಚುರ್ಸೆನ್ ಗ್ರಾಮದ ನಿವಾಸಿ ಕೃತಾರ್ಥ್, ಸೆಪ್ಟೆಂಬರ್ 23, 2024 ರಂದು ಶಾಲಾ ವ್ಯವಸ್ಥಾಪಕ ದಿನೇಶ್ ಬಾಘೆಲ್ ಅವರ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದ. ಪೊಲೀಸ್ ವರದಿಗಳ ಪ್ರಕಾರ, ಆರೋಪಿ, ಮಥುರಾದ 8 ನೇ ತರಗತಿ ವಿದ್ಯಾರ್ಥಿ, ಸೆಪ್ಟೆಂಬರ್ 22 ರ ರಾತ್ರಿ ಎಲ್ಲಾ ಹಾಸ್ಟೆಲ್ ವಿದ್ಯಾರ್ಥಿಗಳು ಮಲಗಿದ್ದಾಗ ಕೃತಾರ್ಥ್ ಅವರನ್ನು ಟವೆಲ್‌ನಿಂದ ಕತ್ತು ಹಿಸುಕಿ ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ.

ಗಂಭೀರ ಘಟನೆಗಳು ಅಥವಾ ಸಾವಿನ ಪ್ರಕರಣಗಳಲ್ಲಿ ಶಾಲೆಗಳನ್ನು ತಾತ್ಕಾಲಿಕವಾಗಿ ಮುಚ್ಚುವುದನ್ನು ಆನ್‌ಲೈನ್‌ನಲ್ಲಿ ನೋಡಿದ್ದೇನೆ ಎಂದು ಆರೋಪಿ ವಿಚಾರಣೆಯ ಸಮಯದಲ್ಲಿ ಹೇಳಿಕೊಂಡಿದ್ದಾನೆ. ಇದನ್ನು ನಂಬಿದ ಆತ ಜೂನಿಯರ್ ವಿದ್ಯಾರ್ಥಿಯನ್ನು ಕೊಲ್ಲಲು ಯೋಜನೆ ರೂಪಿಸಿದ್ದ. “ನಾನು ಕಿರಿಯ ಮಗುವನ್ನು ಕತ್ತು ಹಿಸುಕಿದರೆ, ಇದು ತಕ್ಷಣ ಶಾಲೆಯನ್ನು ಮುಚ್ಚಲು ಕಾರಣವಾಗುತ್ತದೆ ಎಂದು ನಾನು ಭಾವಿಸಿದೆ” ಎಂದು ಬಾಲಕ ಪೊಲೀಸರಿಗೆ ಹೇಳಿದ್ದಾನೆ.

ಕೃತಾರ್ಥ್ ಕತ್ತು ಹಿಸುಕಿ ಕೊಲೆ ಮಾಡಿರುವುದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ದೃಢಪಟ್ಟಿದೆ. ಆತನ ಕುತ್ತಿಗೆಯ ಮೇಲೆ ಗಾಯದ ಗುರುತುಗಳು ಗೋಚರಿಸಿದ್ದು, ಪೊಲೀಸರ ಹೇಳಿಕೆಯನ್ನು ದೃಢಪಡಿಸುತ್ತದೆ.

ಕೊಲೆಯಾಗುವ ನಾಲ್ಕು ದಿನಗಳ ಮೊದಲು ಆರೋಪಿಗಳು ಸಿಕ್ಕಿಬೀಳುವುದನ್ನು ತಪ್ಪಿಸಲು ಹಾಸ್ಟೆಲ್ ಮೆಟ್ಟಿಲುಗಳ ಬಳಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಒಡೆದಿದ್ದರು. ಈ ಹಿಂದೆ ಇನ್ನಿಬ್ಬರು ವಿದ್ಯಾರ್ಥಿಗಳನ್ನು ಕೊಲ್ಲಲು ಯತ್ನಿಸಿ ವಿಫಲರಾಗಿದ್ದಾಗಿಯೂ ಆತ ತಪ್ಪೊಪ್ಪಿಕೊಂಡಿದ್ದಾನೆ.

ಕೊಲೆಯ ನಂತರ ಅಪರಾಧಕ್ಕೆ ಬಳಸಿದ ಟವೆಲ್ ಅನ್ನು ಶಾಲೆಯ ಹಿಂಭಾಗದ ಮರಗಳ ಬಳಿ ಎಸೆದಿದ್ದಾನೆ. ಆರೋಪಿಯ ಹೇಳಿಕೆಯ ಆಧಾರದ ಮೇಲೆ ಡಿಸೆಂಬರ್ 16 ರಂದು ಪೊಲೀಸರು ಟವೆಲ್ ಅನ್ನು ವಶಪಡಿಸಿಕೊಂಡರು.

ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಕೃತಾರ್ಥ್ ತಂದೆ ಶ್ರೀ ಕೃಷ್ಣ ಮತ್ತು ಚಿಕ್ಕಪ್ಪ ಪೊಲೀಸರ ಘಟನೆಗಳ ಆವೃತ್ತಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ಹತ್ಯೆಗೆ ಪ್ರಾಥಮಿಕವಾಗಿ ಶಾಲಾ ಮ್ಯಾನೇಜರ್ ದಿನೇಶ್ ಬಾಘೇಲ್ ಕಾರಣ ಎಂದು ಆರೋಪಿಸಿದ್ದಾರೆ.

ಕೃತಾರ್ಥ್‌ನ ಅನಾರೋಗ್ಯದ ಬಗ್ಗೆ ಶಾಲೆಯವರು ತಿಳಿಸಿದಾಗ, ಅವರು ಹಾಸ್ಟೆಲ್‌ಗೆ ಧಾವಿಸಿದರು. ಆದರೆ, ಅವನು ಕಾಣೆಯಾಗಿರುವುದನ್ನು ಕಂಡು ಕುಟುಂಬವು ತಮ್ಮ ಸಂಕಟವನ್ನು ವಿವರಿಸಿದರು. ಬಾಘೆಲ್‌ನನ್ನು ಹಲವು ಬಾರಿ ಎದುರಿಸಿದ ನಂತರ, ಶಾಲಾ ಉಸ್ತುವಾರಿ ಅಂತಿಮವಾಗಿ ಸಾದಾಬಾದ್ ಬಳಿ ಕೃತಾರ್ಥ್‌ನ ನಿರ್ಜೀವ ದೇಹವನ್ನು ಅವನ ಕಾರಿನಲ್ಲಿ ತೋರಿಸಿದ್ದಾರೆ.

“ಪೊಲೀಸರು ನಿಜವಾದ ಅಪರಾಧಿಗಳನ್ನು ರಕ್ಷಿಸುತ್ತಿದ್ದಾರೆ. ಮ್ಯಾನೇಜರ್ ಕಾರಿನಲ್ಲಿ ಮೃತ ದೇಹ ಪತ್ತೆಯಾಗಿದೆ, ಆದರೂ ಅವರನ್ನು ಕೊಲೆ ಆರೋಪದಿಂದ ಖುಲಾಸೆಗೊಳಿಸಲಾಗಿದೆ. ನಾವು ಹೈಕೋರ್ಟ್‌ಗೆ ಹೋಗುತ್ತೇವೆ” ಎಂದು ಘನಶ್ಯಾಮ್ ಹೇಳಿದರು.

ಇದನ್ನೂ ಓದಿ; ಹೆಚ್ಚುತ್ತಿರುವ ಆದಿವಾಸಿಗಳ ಆತ್ಮಹತ್ಯೆ: ಕೇರಳ ಸರ್ಕಾರ, ಪೊಲೀಸ್ ಮುಖ್ಯಸ್ಥರಿಗೆ ನೋಟಿಸ್ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...