HomeUncategorizedಹತ್ರಾಸ್ ಕಾಲ್ತುಳಿತದ ಪ್ರಕರಣ: ತನಿಖೆ ಕೋರಿ ಸಲ್ಲಿಸಿದ್ದ ಪಿಐಎಲ್ ಪರಿಗಣಿಸಲು ನಿರಾಕರಿಸಿದ ಸುಪ್ರೀಂ

ಹತ್ರಾಸ್ ಕಾಲ್ತುಳಿತದ ಪ್ರಕರಣ: ತನಿಖೆ ಕೋರಿ ಸಲ್ಲಿಸಿದ್ದ ಪಿಐಎಲ್ ಪರಿಗಣಿಸಲು ನಿರಾಕರಿಸಿದ ಸುಪ್ರೀಂ

- Advertisement -
- Advertisement -

121 ಮಂದಿ ಸಾವಿಗೆ ಕಾರಣವಾದ ಹತ್ರಾಸ್ ಕಾಲ್ತುಳಿತ ದುರ್ಘಟನೆಯ ಕುರಿತು ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದ್ದು, ಅಲಹಾಬಾದ್ ಹೈಕೋರ್ಟ್‌ಗೆ ತೆರಳಲು ಅರ್ಜಿದಾರರಿಗೆ ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ, ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, “ಇಂತಹ ಘಟನೆಗಳು ಗೊಂದಲಕಾರಿ; ಆದರೆ ಅಂತಹ ಪ್ರಕರಣಗಳನ್ನು ಎದುರಿಸಲು ಹೈಕೋರ್ಟ್‌ಗಳು ಸಜ್ಜಾಗಿದೆ” ಎಂದು ಹೇಳಿದರು.

“ಖಂಡಿತ, ಇವು ಗೊಂದಲದ ಘಟನೆಗಳು. ಇಂತಹ ಘಟನೆಗಳನ್ನು ದೊಡ್ಡದಾಗಿ ಮಾಡಲು ಸಾಮಾನ್ಯವಾಗಿ ಇಲ್ಲಿ (ಪಿಐಎಲ್ ಸಲ್ಲಿಸುವುದು) ಅರ್ಜಿ ಸಲ್ಲಿಸಲಾಗುತ್ತದೆ. ಈ ಪ್ರಕರಣವನ್ನು ಎದುರಿಸಲು ಹೈಕೋರ್ಟ್ ಸಜ್ಜಾಗಿದೆ” ಎಂದು ಪೀಠ ಹೇಳಿದೆ.

ವಕೀಲರು ಮತ್ತು ಅರ್ಜಿದಾರ ವಿಶಾಲ್ ತಿವಾರಿ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ಹೋಗುವಂತೆ ಸುಪ್ರೀಂ ಸೂಚಿಸಿದ್ದು, ಪಿಐಎಲ್ ಅನ್ನು ವಿಲೇವಾರಿ ಮಾಡಿದೆ.

ಇಂತಹ ಘಟನೆಗಳನ್ನು ಎದುರಿಸಲು ಸರಿಯಾದ ವೈದ್ಯಕೀಯ ಸೌಲಭ್ಯಗಳ ಲಭ್ಯತೆಯಿಲ್ಲದಿರುವ ವಿಷಯವು ರಾಷ್ಟ್ರಮಟ್ಟದ ಕಾಳಜಿಯಾಗಿದ್ದು, ಪಿಐಎಲ್‌ ಅನ್ನು ಸುಪ್ರೀಂ ಕೋರ್ಟ್ ಕೂಡ ವ್ಯವಹರಿಸಬಹುದು ಎಂದು ತಿವಾರಿ ಹೇಳಿದರು.

ಜುಲೈ 2 ರಂದು ನಡೆದ ಕಾಲ್ತುಳಿತ ಘಟನೆಯ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಐದು ಸದಸ್ಯರ ತಜ್ಞರ ಸಮಿತಿಯನ್ನು ನೇಮಿಸಬೇಕೆಂದು ಮನವಿಯಲ್ಲಿ ಕೋರಲಾಗಿತ್ತು. ಜುಲೈ 2 ರಂದು ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಧಾರ್ಮಿಕ ಸಭೆಯೊಂದರಲ್ಲಿ ಕಾಲ್ತುಳಿತ ಸಂಭವಿಸಿದೆ.

ಹತ್ರಾಸ್ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ಸಾಕರ್ ವಿಶ್ವಹಾರಿ ಮತ್ತು ಭೋಲೆ ಬಾಬಾ ಎಂದು ಕರೆಯಲ್ಪಡುವ ಬಾಬಾ ನಾರಾಯಣ ಹರಿ ನಡೆಸಿದ ‘ಸತ್ಸಂಗ’ಕ್ಕಾಗಿ 2.5 ಲಕ್ಷಕ್ಕೂ ಹೆಚ್ಚು ಭಕ್ತರು ಜಮಾಯಿಸಿದ್ದರು. ಕೇವಲ 80,000 ಮಂದಿಗೆ ಮಾತ್ರ ಅನುಮತಿ ನೀಡಲಾಗಿದ್ದ ಕಾರ್ಯಕ್ರಮಕ್ಕೆ 2.5 ಲಕ್ಷ ಜನರು ಸೇರಿದ್ದು, ಸಾಕ್ಷಿಗಳನ್ನು ಮರೆಮಾಚಿದ್ದಾರೆ ಮತ್ತು ಷರತ್ತುಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶ ಪೊಲೀಸರು ಸಂಘಟಕರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ; ದೆಹಲಿ ವಿಶ್ವವಿದ್ಯಾಲಯದ ಕಾನೂನು ಕೋರ್ಸ್‌ನಲ್ಲಿ ಮನುಸ್ಮೃತಿ ಬೋಧನೆಗೆ ಶಿಕ್ಷಕರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...