Homeಮುಖಪುಟಹತ್ರಾಸ್ ಕಾಲ್ತುಳಿತ: ಸಾವಿನ ಸಂಖ್ಯೆ 121ಕ್ಕೆ ಏರಿಕೆ, ತಲೆಮರೆಸಿಕೊಂಡ ಭೋಲೆ ಬಾಬಾ

ಹತ್ರಾಸ್ ಕಾಲ್ತುಳಿತ: ಸಾವಿನ ಸಂಖ್ಯೆ 121ಕ್ಕೆ ಏರಿಕೆ, ತಲೆಮರೆಸಿಕೊಂಡ ಭೋಲೆ ಬಾಬಾ

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಧಾರ್ಮಿಕ ಸಭೆಯೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 121 ಕ್ಕೆ ಏರಿದೆ ಮತ್ತು 28 ಮಂದಿ ಗಾಯಗೊಂಡಿದ್ದಾರೆ ಎಂದು ಪರಿಹಾರ ಆಯುಕ್ತರ ಕಚೇರಿ ಬುಧವಾರ ತಿಳಿಸಿದೆ.

ಉತ್ತರ ಪ್ರದೇಶ ಪೊಲೀಸರು ಮೈನ್‌ಪುರಿ ಜಿಲ್ಲೆಯ ರಾಮ್ ಕುಟಿರ್ ಚಾರಿಟೇಬಲ್ ಟ್ರಸ್ಟ್‌ನಲ್ಲಿ ತಲೆಮರೆಸಿಕೊಂಡಿರುವ ಭೋಲೆ ಬಾಬಾ ಅವರಿಗಾಗಿ ಶೋಧ ಕಾರ್ಯಾಚರಣೆಯನ್ನು ನಡೆಸಿದ ನಂತರ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುನೀಲ್ ಕುಮಾರ್ ಅವರು “ಕ್ಯಾಂಪಸ್‌ನಲ್ಲಿ ಬಾಬಾ ಅವರು ಪತ್ತೆಯಾಗಿಲ್ಲ” ಎಂದು ಬಹಿರಂಗಪಡಿಸಿದರು.

‘ಮುಖ್ಯ ಸೇವಾದಾರ್’ ಎಂದು ಕರೆಯಲ್ಪಡುವ ದೇವಪ್ರಕಾಶ್ ಮಧುಕರ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್‌), 2023ರ ಸೆಕ್ಷನ್ 105, 110, 126 (2), 223 ಮತ್ತು 238 ರ ಅಡಿಯಲ್ಲಿ ಕಾಲ್ತುಳಿತ ಸಂಭವಿಸಿದ ಧಾರ್ಮಿಕ ಕಾರ್ಯಕ್ರಮದ ಇತರ ಸಂಘಟಕರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಇಂದು ಘಟನಾ ಸ್ಥಳಕ್ಕೆ ಸಿಎಂ ಭೇಟಿ

ಇಂದು ಘಟನಾ ಸ್ಥಳಕ್ಕೆ ಭೇಟಿ  ನೀಡಲಿರುವ ಮುಖ್ಯಮಂತ್ರಿ  ಯೋಗಿ ಆದಿತ್ಯನಾಥ್, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವುದಾಗಿ ಭರವಸೆ ನೀಡಿದ್ದಾರೆ. ಧಾರ್ಮಿಕ ಸಭೆಯ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ 121 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಮಾಹಿತಿಯ ಪ್ರಕಾರ, ಮುಖ್ಯಮಂತ್ರಿಗಳು ಬೆಳಗ್ಗೆ 11 ಗಂಟೆ ಸುಮಾರಿಗೆ ಹತ್ರಾಸ್ ತಲುಪುವ ನಿರೀಕ್ಷೆಯಿದೆ. ಇದು “ಅಪಘಾತವೋ ಅಥವಾ ಪಿತೂರಿ” ಎಂದು ನಿರ್ಧರಿಸಲು ಅವರು ಘಟನೆಯ ಬಗ್ಗೆ ಸಂಪೂರ್ಣ ತನಿಖೆಗೆ ಆದೇಶಿಸಿದ್ದಾರೆ.

ಹತ್ರಾಸ್ ಘಟನೆಯ ಹಿಂದಿನ ಸತ್ಯವನ್ನು ಬಯಲಿಗೆಳೆಯಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ದೃಢಪಡಿಸಿದರು. ಇಂತಹ ಘಟನೆಗೆ ಸಂತಾಪ ಸೂಚಿಸುವ ಬದಲು ರಾಜಕೀಯ ಮಾಡುತ್ತಿರುವುದು ದುರದೃಷ್ಟಕರ ಹಾಗೂ ಖಂಡನೀಯ, ಈ ವಿಚಾರದಲ್ಲಿ ಸರ್ಕಾರ ಈಗಾಗಲೇ ಸೂಕ್ಷ್ಮವಾಗಿ ವರ್ತಿಸಿದ್ದು, ಇದು ಅಪಘಾತವೇ ಅಥವಾ ಷಡ್ಯಂತ್ರವೇ ಎಂಬ ವಿಚಾರವನ್ನು ಸರ್ಕಾರ ಬೇಧಿಸಿ ಸೂಕ್ತ ಶಿಕ್ಷೆ ನೀಡಲಿದೆ. ಈ ಘಟನೆಗೆ ಎಲ್ಲರೂ ಕಾರಣರಾಗಿದ್ದಾರೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಘಟನಾ ಸ್ಥಳಕ್ಕೆ ಫೋರೆನ್ಸಿಕ್ ತಜ್ಞರು ಆಗಮನ

ವಿಧಿವಿಜ್ಞಾನ ತಜ್ಞರು ಮತ್ತು ಶ್ವಾನ ದಳ ಘಟನಾ ಸ್ಥಳಕ್ಕೆ ತಲುಪಿದೆ. ಫೋರೆನ್ಸಿಕ್ ತಂಡವು ತನಿಖೆಗೆ ಸಹಾಯ ಮಾಡಲು ಸ್ಥಳದಿಂದ ಎಲ್ಲ ಸಂಬಂಧಿತ ಸಾಕ್ಷ್ಯಗಳನ್ನು ಸಂಗ್ರಹಿಸಲು ಸಜ್ಜಾಗಿದೆ. ಎನ್‌ಡಿಆರ್‌ಎಫ್-ಎಸ್‌ಡಿಆರ್‌ಎಫ್ ತಂಡವೂ ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಘಟನೆಯ ಕಾರಣದ ಬಗ್ಗೆ ತನಿಖೆ ನಡೆಸಲು ಎಡಿಜಿ ಆಗ್ರಾ ಮತ್ತು ಅಲಿಗಢ ವಿಭಾಗೀಯ ಆಯುಕ್ತರನ್ನು ಒಳಗೊಂಡ ತಂಡವನ್ನು ರಚಿಸಲಾಗಿದೆ. ವರದಿಯನ್ನು 24 ಗಂಟೆಗಳ ಒಳಗೆ ಸಲ್ಲಿಸಬೇಕು ಎಂದು ಯುಪಿ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ; ಉತ್ತರ ಪ್ರದೇಶ| ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ: 100ಕ್ಕೂ ಅಧಿಕ ಜನರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...