Homeಮುಖಪುಟಹತ್ರಾಸ್ ಕಾಲ್ತುಳಿತ: ಸಾವಿನ ಸಂಖ್ಯೆ 121ಕ್ಕೆ ಏರಿಕೆ, ತಲೆಮರೆಸಿಕೊಂಡ ಭೋಲೆ ಬಾಬಾ

ಹತ್ರಾಸ್ ಕಾಲ್ತುಳಿತ: ಸಾವಿನ ಸಂಖ್ಯೆ 121ಕ್ಕೆ ಏರಿಕೆ, ತಲೆಮರೆಸಿಕೊಂಡ ಭೋಲೆ ಬಾಬಾ

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಧಾರ್ಮಿಕ ಸಭೆಯೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 121 ಕ್ಕೆ ಏರಿದೆ ಮತ್ತು 28 ಮಂದಿ ಗಾಯಗೊಂಡಿದ್ದಾರೆ ಎಂದು ಪರಿಹಾರ ಆಯುಕ್ತರ ಕಚೇರಿ ಬುಧವಾರ ತಿಳಿಸಿದೆ.

ಉತ್ತರ ಪ್ರದೇಶ ಪೊಲೀಸರು ಮೈನ್‌ಪುರಿ ಜಿಲ್ಲೆಯ ರಾಮ್ ಕುಟಿರ್ ಚಾರಿಟೇಬಲ್ ಟ್ರಸ್ಟ್‌ನಲ್ಲಿ ತಲೆಮರೆಸಿಕೊಂಡಿರುವ ಭೋಲೆ ಬಾಬಾ ಅವರಿಗಾಗಿ ಶೋಧ ಕಾರ್ಯಾಚರಣೆಯನ್ನು ನಡೆಸಿದ ನಂತರ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುನೀಲ್ ಕುಮಾರ್ ಅವರು “ಕ್ಯಾಂಪಸ್‌ನಲ್ಲಿ ಬಾಬಾ ಅವರು ಪತ್ತೆಯಾಗಿಲ್ಲ” ಎಂದು ಬಹಿರಂಗಪಡಿಸಿದರು.

‘ಮುಖ್ಯ ಸೇವಾದಾರ್’ ಎಂದು ಕರೆಯಲ್ಪಡುವ ದೇವಪ್ರಕಾಶ್ ಮಧುಕರ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್‌), 2023ರ ಸೆಕ್ಷನ್ 105, 110, 126 (2), 223 ಮತ್ತು 238 ರ ಅಡಿಯಲ್ಲಿ ಕಾಲ್ತುಳಿತ ಸಂಭವಿಸಿದ ಧಾರ್ಮಿಕ ಕಾರ್ಯಕ್ರಮದ ಇತರ ಸಂಘಟಕರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಇಂದು ಘಟನಾ ಸ್ಥಳಕ್ಕೆ ಸಿಎಂ ಭೇಟಿ

ಇಂದು ಘಟನಾ ಸ್ಥಳಕ್ಕೆ ಭೇಟಿ  ನೀಡಲಿರುವ ಮುಖ್ಯಮಂತ್ರಿ  ಯೋಗಿ ಆದಿತ್ಯನಾಥ್, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವುದಾಗಿ ಭರವಸೆ ನೀಡಿದ್ದಾರೆ. ಧಾರ್ಮಿಕ ಸಭೆಯ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ 121 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಮಾಹಿತಿಯ ಪ್ರಕಾರ, ಮುಖ್ಯಮಂತ್ರಿಗಳು ಬೆಳಗ್ಗೆ 11 ಗಂಟೆ ಸುಮಾರಿಗೆ ಹತ್ರಾಸ್ ತಲುಪುವ ನಿರೀಕ್ಷೆಯಿದೆ. ಇದು “ಅಪಘಾತವೋ ಅಥವಾ ಪಿತೂರಿ” ಎಂದು ನಿರ್ಧರಿಸಲು ಅವರು ಘಟನೆಯ ಬಗ್ಗೆ ಸಂಪೂರ್ಣ ತನಿಖೆಗೆ ಆದೇಶಿಸಿದ್ದಾರೆ.

ಹತ್ರಾಸ್ ಘಟನೆಯ ಹಿಂದಿನ ಸತ್ಯವನ್ನು ಬಯಲಿಗೆಳೆಯಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ದೃಢಪಡಿಸಿದರು. ಇಂತಹ ಘಟನೆಗೆ ಸಂತಾಪ ಸೂಚಿಸುವ ಬದಲು ರಾಜಕೀಯ ಮಾಡುತ್ತಿರುವುದು ದುರದೃಷ್ಟಕರ ಹಾಗೂ ಖಂಡನೀಯ, ಈ ವಿಚಾರದಲ್ಲಿ ಸರ್ಕಾರ ಈಗಾಗಲೇ ಸೂಕ್ಷ್ಮವಾಗಿ ವರ್ತಿಸಿದ್ದು, ಇದು ಅಪಘಾತವೇ ಅಥವಾ ಷಡ್ಯಂತ್ರವೇ ಎಂಬ ವಿಚಾರವನ್ನು ಸರ್ಕಾರ ಬೇಧಿಸಿ ಸೂಕ್ತ ಶಿಕ್ಷೆ ನೀಡಲಿದೆ. ಈ ಘಟನೆಗೆ ಎಲ್ಲರೂ ಕಾರಣರಾಗಿದ್ದಾರೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಘಟನಾ ಸ್ಥಳಕ್ಕೆ ಫೋರೆನ್ಸಿಕ್ ತಜ್ಞರು ಆಗಮನ

ವಿಧಿವಿಜ್ಞಾನ ತಜ್ಞರು ಮತ್ತು ಶ್ವಾನ ದಳ ಘಟನಾ ಸ್ಥಳಕ್ಕೆ ತಲುಪಿದೆ. ಫೋರೆನ್ಸಿಕ್ ತಂಡವು ತನಿಖೆಗೆ ಸಹಾಯ ಮಾಡಲು ಸ್ಥಳದಿಂದ ಎಲ್ಲ ಸಂಬಂಧಿತ ಸಾಕ್ಷ್ಯಗಳನ್ನು ಸಂಗ್ರಹಿಸಲು ಸಜ್ಜಾಗಿದೆ. ಎನ್‌ಡಿಆರ್‌ಎಫ್-ಎಸ್‌ಡಿಆರ್‌ಎಫ್ ತಂಡವೂ ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಘಟನೆಯ ಕಾರಣದ ಬಗ್ಗೆ ತನಿಖೆ ನಡೆಸಲು ಎಡಿಜಿ ಆಗ್ರಾ ಮತ್ತು ಅಲಿಗಢ ವಿಭಾಗೀಯ ಆಯುಕ್ತರನ್ನು ಒಳಗೊಂಡ ತಂಡವನ್ನು ರಚಿಸಲಾಗಿದೆ. ವರದಿಯನ್ನು 24 ಗಂಟೆಗಳ ಒಳಗೆ ಸಲ್ಲಿಸಬೇಕು ಎಂದು ಯುಪಿ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ; ಉತ್ತರ ಪ್ರದೇಶ| ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ: 100ಕ್ಕೂ ಅಧಿಕ ಜನರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...