Homeಮುಖಪುಟ121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ

121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಆಯೋಜಿಸಿದ್ದ ಸತ್ಸಂಗ ಪ್ರಾರ್ಥನಾ ಸಭೆಯಲ್ಲಿ ಕಾಲ್ತುಳಿತ ಸಂಭವಿಸಿ 121 ಜನರು ಸಾವನ್ನಪ್ಪಿದ ಪ್ರಕರಣದಲ್ಲಿ ಸ್ವಯಂಘೋಷಿತ ದೇವಮಾನವ ಸೂರಜ್ ಪಾಲ್ ಅಲಿಯಾಸ್ ಭೋಲೆ ಬಾಬಾಗೆ ತನಿಖಾ ಆಯೋಗ ಕ್ಲೀನ್ ಚಿಟ್ ನೀಡಿದೆ ಎಂದು ವರದಿಯಾಗಿದೆ.

ಪ್ರಕರಣದ ತನಿಖೆಗೆ ನೇಮಿಸಿದ್ದ ಆಯೋಗವು ತನ್ನ ತನಿಖೆಯನ್ನು ಪೂರ್ಣಗೊಳಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಗುರುವಾರ (ಫೆ.20) ನಡೆದ ಸಚಿವ ಸಂಪುಟ ಸಭೆಯಲ್ಲಿ ನ್ಯಾಯಾಂಗ ಆಯೋಗದ ವರದಿಯನ್ನು ಅನುಮೋದಿಸಲಾಗಿದೆ. ವರದಿಯನ್ನು ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಸರ್ಕಾರ ಮಂಡಿಸುವ ಸಾಧ್ಯತೆ ಇದೆ.

ವರದಿಗಳ ಪ್ರಕಾರ, ನ್ಯಾಯಾಂಗ ಆಯೋಗವು ಸೂರಜ್ ಪಾಲ್ ಅಲಿಯಾಸ್ ಬೋಲೆ ಬಾಬಾಗೆ ಕ್ಲೀನ್ ಚಿಟ್ ನೀಡಿದೆ. ಆದರೆ, ಘಟನೆಯ ಹಿಂದಿನ ಸಂಭಾವ್ಯ ಪಿತೂರಿಯ ಬಗ್ಗೆ ಇನ್ನೂ ಅನಿಶ್ಚಿತತೆ ಉಳಿದಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಆದೇಶ ಮೇರೆಗೆ ಜುಲೈ 3, 2024 ರಂದು ಮೂವರು ಸದಸ್ಯರ ನ್ಯಾಯಾಂಗ ಆಯೋಗವನ್ನು ಕಾಲ್ತುಳಿತ ಘಟನೆಯ ತನಿಖೆಗಾಗಿ ರಚಿಸಲಾಗಿತ್ತು.

ಅಲಹಾಬಾದ್ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಬ್ರಿಜೇಶ್ ಕುಮಾರ್ ಶ್ರೀವಾಸ್ತವ ನೇತೃತ್ವದ ಸಮಿತಿಯಲ್ಲಿ ಮಾಜಿ ಐಎಎಸ್ ಅಧಿಕಾರಿ ಹೇಮಂತ್ ರಾವ್ ಮತ್ತು ಮಾಜಿ ಐಪಿಎಸ್ ಅಧಿಕಾರಿ ಭವೇಶ್ ಕುಮಾರ್ ಸಿಂಗ್ ಇದ್ದರು. ತನಿಖೆಗೆ ಆರಂಭದಲ್ಲಿ ಎರಡು ತಿಂಗಳುಗಳ ಕಾಲಾವಕಾಶ ನೀಡಲಾಗಿತ್ತು, ಆದರೆ ನಂತರ ಗಡುವನ್ನು ವಿಸ್ತರಿಸಲಾಗಿತ್ತು.

ಜಿಲ್ಲಾಡಳಿತ ಸತ್ಸಂಗ ಕಾರ್ಯಕ್ರಮಕ್ಕೆ ಅನುಮತಿ ನೀಡುವ ವೇಳೆ ವಿಧಿಸಿದ್ದ ಷರತ್ತುಗಳನ್ನು
ಆಯೋಜಕರು ಪಾಲಿಸಿದ್ದಾರೆಯೇ, ಅಧಿಕಾರಿಗಳು ತೆಗೆದುಕೊಂಡ ಜನಸಂದಣಿ ನಿರ್ವಹಣಾ ಕ್ರಮಗಳು ಮತ್ತು ದುರಂತದ ಹಿಂದಿನ ಯೋಜಿತ ಪಿತೂರಿಯ ಸಾಧ್ಯತೆಯ ಮೇಲೆ ಕೇಂದ್ರೀಕರಿಸಿ ನ್ಯಾಯಾಂಗ ಆಯೋಗ ತನಿಖೆ ನಡೆಸಿದೆ.

ಆಯೋಗದ ವರದಿಯು ಕಾಲ್ತುಳಿತ ದುರಂತದ ಕಾರಣಗಳು, ದುರಂತ ನಡೆದ ಸಂದರ್ಭ, ಆಗ ಅಧಿಕಾರಿಗಳು, ಕಾರ್ಯಕ್ರಮ ಆಯೋಜಕರು ವಹಿಸಿದ್ದ ಪಾತ್ರ ಮತ್ತು ಭವಿಷ್ಯದಲ್ಲಿ ಇಂತಹ ದುರಂತಗಳನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತ ಶಿಫಾಸ್ಸುಗಳನ್ನು ಒಳಗೊಂಡಿದೆ ಎಂದು Jagran.com ವರದಿ ತಿಳಿಸಿದೆ.

ಆಯೋಗವು ಕಳೆದ ಜುಲೈ 5 ರಂದು ಹತ್ರಾಸ್‌ನಲ್ಲಿ ಸ್ಥಳದಲ್ಲೇ ಪರಿಶೀಲನೆ ನಡೆಸಿ, ಎರಡು ದಿನಗಳ ಕಾಲ ವಾಸ್ತವ್ಯ ಹೂಡಿ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಪ್ರತ್ಯಕ್ಷದರ್ಶಿಗಳು, ಸಂತ್ರಸ್ತರ ಕುಟುಂಬಸ್ಥರು ಮತ್ತು ಅಕ್ಟೋಬರ್ 10, 2024 ರಂದು ಭಾಷಣ ಮಾಡಿದ್ದ ಸೂರಜ್ ಪಾಲ್ ಅವರಂತಹ ಪ್ರಮುಖ ವ್ಯಕ್ತಿಗಳು ಸೇರಿದಂತೆ 1,500 ಕ್ಕೂ ಹೆಚ್ಚು ಜನರ ಹೇಳಿಕೆಗಳನ್ನು ದಾಖಲಿಸಿದೆ.

ಸತ್ಸಂಗ ಕಾರ್ಯಕ್ರಮದಲ್ಲಿ ಜುಲೈ 2, 2024ರಂದು ಸಂಭವಿಸಿದ್ದ ಕಾಲ್ತುಳಿತದಲ್ಲಿ ಹೆಚ್ಚಿನವರು ಮಹಿಳೆಯರು ಸೇರಿದಂತೆ 121 ಜನರು ಸಾವನ್ನಪ್ಪಿದ್ದರು ಮತ್ತು ಹಲವಾರು ಜನರು ಗಾಯಗೊಂಡಿದ್ದರು.

ಅಸ್ಸಾಂ | ಸಂಸದನಿಗೆ ಬ್ಯಾಟ್‌ನಿಂದ ಹಲ್ಲೆ : ಸರ್ಕಾರಿ ಯೋಜಿತ ಕೃತ್ಯ ಎಂದ ಕಾಂಗ್ರೆಸ್ ; ವಿಧಾನಸಭೆಯಲ್ಲಿ ಕೋಲಾಹಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...