Homeಮುಖಪುಟಹತ್ರಾಸ್: ಪ್ರಕರಣವನ್ನು ಶಾಶ್ವತವಾಗಿ ಮುಗಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿತ್ತು-ಸತ್ಯಶೋಧನಾ ಸಮಿತಿ ವರದಿ

ಹತ್ರಾಸ್: ಪ್ರಕರಣವನ್ನು ಶಾಶ್ವತವಾಗಿ ಮುಗಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿತ್ತು-ಸತ್ಯಶೋಧನಾ ಸಮಿತಿ ವರದಿ

ಯುವತಿಯ ಕುಟುಂಬಕ್ಕೆ ಕಿರುಕುಳ ನೀಡಿರುವ ಉತ್ತರಪ್ರದೇಶ ಪೊಲೀಸರು ಅನುಮಾನಾಸ್ಪದವಾಗಿ ಮತ್ತು ಕೆಟ್ಟ ರೀತಿಯಲ್ಲಿ ವರ್ತಿಸಿದ್ದಾರೆ

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್‌‌ನಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟ ದಲಿತ ಯುವತಿಯ ಕುಟುಂಬಕ್ಕೆ ಕಿರುಕುಳ ನೀಡಿರುವ ಉತ್ತರಪ್ರದೇಶ ಪೊಲೀಸರು ಅನುಮಾನಾಸ್ಪದವಾಗಿ ಮತ್ತು ಕೆಟ್ಟ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ಸತ್ಯ ಶೋಧನಾ ಸಮಿತಿ ಆರೋಪಿಸಿದೆ.

’ಫ್ಯಾಕ್ಟ್ ಫೈಂಡಿಂಗ್ ರಿಪೋರ್ಟ್ ಆನ್ ಬ್ರೂಟಲ್ ಗ್ಯಾಂಗ್ ರೇಪ್, ಅಸಾಲ್ಟ್ ಆ್ಯಂಡ್ ಮರ್ಡರ್ ಆಫ್ ಎ ದಲಿತ್ ಗರ್ಲ್ ಬೈ ಅಪ್ಪರ್ ಕಾಸ್ಟ್ ಠಾಕೂರ್ ಮೆನ್ ಇನ್ ಬುಲ್‌ಗರ್ಹಿ ವಿಲೇಜ್, ಹತ್ರಾಸ್’ ಎಂಬ ಹೆಸರಿನ ಸಾಮಾಜಿಕ ಹೋರಾಟಗಾರರು ನಡೆಸಿರುವ ಸತ್ಯಶೋಧನಾ ವರದಿಯಲ್ಲಿ, ತಡವಾಗಿ ಪರೀಕ್ಷೆ ನಡೆಸುವುದು ಅತ್ಯಾಚಾರವನ್ನು ಸಾಬೀತುಪಡಿಸಲು ಅಸಾಧ್ಯವಾಗಿರುವುದರಿಂದ, ದೌರ್ಜನ್ಯದ ವೈದ್ಯಕೀಯ ತನಿಖೆ ನಡೆಸಲು ಉದ್ದೇಶಪೂರ್ವಕವಾಗಿ ಸಮಯ ವ್ಯರ್ಥ ಮಾಡಲಾಗಿದೆ. ಶಾಶ್ವತವಾಗಿ ಪುರಾವೆಯನ್ನು ನಾಶಮಾಡುವುದು ಇದರ ಉದ್ದೇಶ ಎಂದು ಸಮಿತಿ ಹೇಳಿದೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣ ತನಿಖೆ: CBI ತಂಡದಲ್ಲಿ SC/ST/OBC ಸಮುದಾಯದವರಿಲ್ಲ- ಚಂದ್ರಶೇಖರ್ ಆಜಾದ್

ಅಲ್ಲದೆ ದೌರ್ಜನ್ಯಕ್ಕೊಳಗಾದ ಯುವತಿಯ ತಂದೆಗೆ ತನಿಖೆ ಹಾಗೂ ಚಿಕಿತ್ಸೆಯಿಂದ ತಾನು ಮತ್ತು ಕುಟುಂಬ ಸಂತೃಪ್ತರಾಗಿದ್ದೇವೆಂದು ಎಲ್ಲರಿಗೂ ತಿಳಿಸುವಂತೆ ಜಿಲ್ಲಾಡಳಿತ ಒತ್ತಡ ಹೇರಿತ್ತು ಎಂದು ಸಮಿತಿ ಹೇಳಿದೆ. ಇದು ಸತ್ಯವನ್ನು ಮುಚ್ಚಿಡಲು ಹಾಗೂ ಪ್ರಕರಣವನ್ನು ಶಾಶ್ವತವಾಗಿ ಮುಗಿಸಲು ರಾಜ್ಯ ಸರಕಾರ ನಡೆಸಿದ ಸಿದ್ಧತೆ ಎಂಬುದನ್ನು ತಿಳಿಸುತ್ತದೆ ಎಂದು ವರದಿ ಹೇಳಿದೆ.

ಸತ್ಯಶೋಧನಾ ಸಮಿತಿಯಲ್ಲಿ, ‘ನರ್ಮದಾ ಬಚಾವೊ’ ಆಂದೋಲನದ ಮೇಧಾ ಪಾಟ್ಕರ್, ಮ್ಯಾಗ್ಸಸೆ ಪ್ರಶಸ್ತಿ ಪುರಷ್ಕೃತ ಸಂದೀಪ್ ಪಾಂಡೆ, ಆರ್‌ಟಿಐ ಕಾರ್ಯಕರ್ತೆ ಹಾಗೂ ಲೇಖಕಿ ಮಣಿಮಾಲಾ, ‘ದಿಲ್ಲಿ ಏಕತಾ’ ಗುಂಪಿನ ಇಬ್ಬರು ಸದಸ್ಯರು ಸೇರಿದಂತೆ 9 ಸದಸ್ಯರಿದ್ದು ಸಂತ್ರಸ್ಥ ಯುವತಿಯ ಮನೆಗೆ ಅಕ್ಟೋಬರ್ 9 ರಂದು ಭೇಟಿ ನೀಡಿತ್ತು.

ವರದಿಯಲ್ಲಿ, ಪ್ರಜ್ಞೆ ಮರುಕಳಿಸುವವರೆಗೆ ಯುವತಿಯನ್ನು ಬೇರೆ ಆಸ್ಪತ್ರೆಗೆ ವರ್ಗಾಯಿಸಬಾರದು ಎಂದು ಕೆಲವು ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದರೂ, ಅನಗತ್ಯ ಆತುರ ತೋರಿಸಿ ಅಲಿಗಢದ ಜವಾಹರ್‌ಲಾಲ್ ನೆಹರೂ ವೈದ್ಯಕೀಯ ಕಾಲೇಜಿನಿಂದ ದಿಲ್ಲಿಗೆ ವರ್ಗಾಯಿಸಲಾಗಿದೆ ಎಂದು ಹೇಳಿದೆ.

‘‘ಈ ಪರಿಸ್ಥಿತಿಯಲ್ಲಿ ಯುವತಿಯನ್ನು ವರ್ಗಾಯಿಸುವುದು ಅಪಾಯಕಾರಿ ಎಂದು ಅರಿತ ಕುಟುಂಬ ವರ್ಗಾವಣೆಗೆ ಒಪ್ಪಿಗೆ ನೀಡಲು ನಿರಾಕರಿಸಿತ್ತು. ಸಂತ್ರಸ್ಥೆಗೆ ತೀವ್ರ ನೋವು ಸೇರಿದಂತೆ ನರಕ್ಕೆ ಆದ ಘಾಸಿಯಿಂದ ಬೆನ್ನು ಹುರಿಯ ಮೇಲೆ ಪರಿಣಾಮ ಉಂಟಾಗಿರುವುದು ಹಾಗೂ ಕತ್ತು ಮತ್ತು ಹಿಂಭಾಗದ ಚಲನೆ ಸಾಧ್ಯವಾಗುತ್ತಿರಲಿಲ್ಲ. ಸಂತ್ರಸ್ಥೆಯನ್ನು ದಿಲ್ಲಿ ಏಮ್ಸ್‌ಗೆ ವರ್ಗಾಯಿಸಲು ಕುಟುಂಬವು ಜಿಲ್ಲಾಡಳಿತಕ್ಕೆ ಅನುಮತಿ ನೀಡಿಲ್ಲ ಎಂಬುವುದು ಸುಳ್ಳಾಗಿದ್ದು, ಈಗ ಬಹಿರಂಗಗೊಂಡಿದೆ’’ ಎಂದು ವರದಿ ಹೇಳಿದೆ.

ವಾಸ್ತವವಾಗಿ ಸಂತ್ರಸ್ಥೆಯನ್ನು ಏಮ್ಸ್‌ನ ಸನಿಹದಲ್ಲಿರುವ ಕೇಂದ್ರ ಸರಕಾರದ ಸ್ವಾಮ್ಯದ ಸಪ್ಧರಂಜಂಗ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಈ ಬಗ್ಗೆ ಆಕೆಯ ಕುಟುಂಬ ಪ್ರಶ್ನಿಸಿದಾಗ, ಎರಡೂ ಆಸ್ಪತ್ರೆ ಒಂದೇ ಎಂದು ಜಿಲ್ಲಾಡಳಿತ ಹೇಳಿತ್ತು ಎಂದು ಸತ್ಯಶೋಧನ ವರದಿಯು ಆರೋಪಿಸಿದೆ.

ಇದನ್ನೂ ಓದಿ: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...