Homeಮುಖಪುಟಹತ್ರಾಸ್: ಪ್ರಕರಣವನ್ನು ಶಾಶ್ವತವಾಗಿ ಮುಗಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿತ್ತು-ಸತ್ಯಶೋಧನಾ ಸಮಿತಿ ವರದಿ

ಹತ್ರಾಸ್: ಪ್ರಕರಣವನ್ನು ಶಾಶ್ವತವಾಗಿ ಮುಗಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿತ್ತು-ಸತ್ಯಶೋಧನಾ ಸಮಿತಿ ವರದಿ

ಯುವತಿಯ ಕುಟುಂಬಕ್ಕೆ ಕಿರುಕುಳ ನೀಡಿರುವ ಉತ್ತರಪ್ರದೇಶ ಪೊಲೀಸರು ಅನುಮಾನಾಸ್ಪದವಾಗಿ ಮತ್ತು ಕೆಟ್ಟ ರೀತಿಯಲ್ಲಿ ವರ್ತಿಸಿದ್ದಾರೆ

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್‌‌ನಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟ ದಲಿತ ಯುವತಿಯ ಕುಟುಂಬಕ್ಕೆ ಕಿರುಕುಳ ನೀಡಿರುವ ಉತ್ತರಪ್ರದೇಶ ಪೊಲೀಸರು ಅನುಮಾನಾಸ್ಪದವಾಗಿ ಮತ್ತು ಕೆಟ್ಟ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ಸತ್ಯ ಶೋಧನಾ ಸಮಿತಿ ಆರೋಪಿಸಿದೆ.

’ಫ್ಯಾಕ್ಟ್ ಫೈಂಡಿಂಗ್ ರಿಪೋರ್ಟ್ ಆನ್ ಬ್ರೂಟಲ್ ಗ್ಯಾಂಗ್ ರೇಪ್, ಅಸಾಲ್ಟ್ ಆ್ಯಂಡ್ ಮರ್ಡರ್ ಆಫ್ ಎ ದಲಿತ್ ಗರ್ಲ್ ಬೈ ಅಪ್ಪರ್ ಕಾಸ್ಟ್ ಠಾಕೂರ್ ಮೆನ್ ಇನ್ ಬುಲ್‌ಗರ್ಹಿ ವಿಲೇಜ್, ಹತ್ರಾಸ್’ ಎಂಬ ಹೆಸರಿನ ಸಾಮಾಜಿಕ ಹೋರಾಟಗಾರರು ನಡೆಸಿರುವ ಸತ್ಯಶೋಧನಾ ವರದಿಯಲ್ಲಿ, ತಡವಾಗಿ ಪರೀಕ್ಷೆ ನಡೆಸುವುದು ಅತ್ಯಾಚಾರವನ್ನು ಸಾಬೀತುಪಡಿಸಲು ಅಸಾಧ್ಯವಾಗಿರುವುದರಿಂದ, ದೌರ್ಜನ್ಯದ ವೈದ್ಯಕೀಯ ತನಿಖೆ ನಡೆಸಲು ಉದ್ದೇಶಪೂರ್ವಕವಾಗಿ ಸಮಯ ವ್ಯರ್ಥ ಮಾಡಲಾಗಿದೆ. ಶಾಶ್ವತವಾಗಿ ಪುರಾವೆಯನ್ನು ನಾಶಮಾಡುವುದು ಇದರ ಉದ್ದೇಶ ಎಂದು ಸಮಿತಿ ಹೇಳಿದೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣ ತನಿಖೆ: CBI ತಂಡದಲ್ಲಿ SC/ST/OBC ಸಮುದಾಯದವರಿಲ್ಲ- ಚಂದ್ರಶೇಖರ್ ಆಜಾದ್

ಅಲ್ಲದೆ ದೌರ್ಜನ್ಯಕ್ಕೊಳಗಾದ ಯುವತಿಯ ತಂದೆಗೆ ತನಿಖೆ ಹಾಗೂ ಚಿಕಿತ್ಸೆಯಿಂದ ತಾನು ಮತ್ತು ಕುಟುಂಬ ಸಂತೃಪ್ತರಾಗಿದ್ದೇವೆಂದು ಎಲ್ಲರಿಗೂ ತಿಳಿಸುವಂತೆ ಜಿಲ್ಲಾಡಳಿತ ಒತ್ತಡ ಹೇರಿತ್ತು ಎಂದು ಸಮಿತಿ ಹೇಳಿದೆ. ಇದು ಸತ್ಯವನ್ನು ಮುಚ್ಚಿಡಲು ಹಾಗೂ ಪ್ರಕರಣವನ್ನು ಶಾಶ್ವತವಾಗಿ ಮುಗಿಸಲು ರಾಜ್ಯ ಸರಕಾರ ನಡೆಸಿದ ಸಿದ್ಧತೆ ಎಂಬುದನ್ನು ತಿಳಿಸುತ್ತದೆ ಎಂದು ವರದಿ ಹೇಳಿದೆ.

ಸತ್ಯಶೋಧನಾ ಸಮಿತಿಯಲ್ಲಿ, ‘ನರ್ಮದಾ ಬಚಾವೊ’ ಆಂದೋಲನದ ಮೇಧಾ ಪಾಟ್ಕರ್, ಮ್ಯಾಗ್ಸಸೆ ಪ್ರಶಸ್ತಿ ಪುರಷ್ಕೃತ ಸಂದೀಪ್ ಪಾಂಡೆ, ಆರ್‌ಟಿಐ ಕಾರ್ಯಕರ್ತೆ ಹಾಗೂ ಲೇಖಕಿ ಮಣಿಮಾಲಾ, ‘ದಿಲ್ಲಿ ಏಕತಾ’ ಗುಂಪಿನ ಇಬ್ಬರು ಸದಸ್ಯರು ಸೇರಿದಂತೆ 9 ಸದಸ್ಯರಿದ್ದು ಸಂತ್ರಸ್ಥ ಯುವತಿಯ ಮನೆಗೆ ಅಕ್ಟೋಬರ್ 9 ರಂದು ಭೇಟಿ ನೀಡಿತ್ತು.

ವರದಿಯಲ್ಲಿ, ಪ್ರಜ್ಞೆ ಮರುಕಳಿಸುವವರೆಗೆ ಯುವತಿಯನ್ನು ಬೇರೆ ಆಸ್ಪತ್ರೆಗೆ ವರ್ಗಾಯಿಸಬಾರದು ಎಂದು ಕೆಲವು ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದರೂ, ಅನಗತ್ಯ ಆತುರ ತೋರಿಸಿ ಅಲಿಗಢದ ಜವಾಹರ್‌ಲಾಲ್ ನೆಹರೂ ವೈದ್ಯಕೀಯ ಕಾಲೇಜಿನಿಂದ ದಿಲ್ಲಿಗೆ ವರ್ಗಾಯಿಸಲಾಗಿದೆ ಎಂದು ಹೇಳಿದೆ.

‘‘ಈ ಪರಿಸ್ಥಿತಿಯಲ್ಲಿ ಯುವತಿಯನ್ನು ವರ್ಗಾಯಿಸುವುದು ಅಪಾಯಕಾರಿ ಎಂದು ಅರಿತ ಕುಟುಂಬ ವರ್ಗಾವಣೆಗೆ ಒಪ್ಪಿಗೆ ನೀಡಲು ನಿರಾಕರಿಸಿತ್ತು. ಸಂತ್ರಸ್ಥೆಗೆ ತೀವ್ರ ನೋವು ಸೇರಿದಂತೆ ನರಕ್ಕೆ ಆದ ಘಾಸಿಯಿಂದ ಬೆನ್ನು ಹುರಿಯ ಮೇಲೆ ಪರಿಣಾಮ ಉಂಟಾಗಿರುವುದು ಹಾಗೂ ಕತ್ತು ಮತ್ತು ಹಿಂಭಾಗದ ಚಲನೆ ಸಾಧ್ಯವಾಗುತ್ತಿರಲಿಲ್ಲ. ಸಂತ್ರಸ್ಥೆಯನ್ನು ದಿಲ್ಲಿ ಏಮ್ಸ್‌ಗೆ ವರ್ಗಾಯಿಸಲು ಕುಟುಂಬವು ಜಿಲ್ಲಾಡಳಿತಕ್ಕೆ ಅನುಮತಿ ನೀಡಿಲ್ಲ ಎಂಬುವುದು ಸುಳ್ಳಾಗಿದ್ದು, ಈಗ ಬಹಿರಂಗಗೊಂಡಿದೆ’’ ಎಂದು ವರದಿ ಹೇಳಿದೆ.

ವಾಸ್ತವವಾಗಿ ಸಂತ್ರಸ್ಥೆಯನ್ನು ಏಮ್ಸ್‌ನ ಸನಿಹದಲ್ಲಿರುವ ಕೇಂದ್ರ ಸರಕಾರದ ಸ್ವಾಮ್ಯದ ಸಪ್ಧರಂಜಂಗ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಈ ಬಗ್ಗೆ ಆಕೆಯ ಕುಟುಂಬ ಪ್ರಶ್ನಿಸಿದಾಗ, ಎರಡೂ ಆಸ್ಪತ್ರೆ ಒಂದೇ ಎಂದು ಜಿಲ್ಲಾಡಳಿತ ಹೇಳಿತ್ತು ಎಂದು ಸತ್ಯಶೋಧನ ವರದಿಯು ಆರೋಪಿಸಿದೆ.

ಇದನ್ನೂ ಓದಿ: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...