Homeಮುಖಪುಟಹತ್ರಾಸ್: ಪ್ರಕರಣವನ್ನು ಶಾಶ್ವತವಾಗಿ ಮುಗಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿತ್ತು-ಸತ್ಯಶೋಧನಾ ಸಮಿತಿ ವರದಿ

ಹತ್ರಾಸ್: ಪ್ರಕರಣವನ್ನು ಶಾಶ್ವತವಾಗಿ ಮುಗಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿತ್ತು-ಸತ್ಯಶೋಧನಾ ಸಮಿತಿ ವರದಿ

ಯುವತಿಯ ಕುಟುಂಬಕ್ಕೆ ಕಿರುಕುಳ ನೀಡಿರುವ ಉತ್ತರಪ್ರದೇಶ ಪೊಲೀಸರು ಅನುಮಾನಾಸ್ಪದವಾಗಿ ಮತ್ತು ಕೆಟ್ಟ ರೀತಿಯಲ್ಲಿ ವರ್ತಿಸಿದ್ದಾರೆ

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್‌‌ನಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟ ದಲಿತ ಯುವತಿಯ ಕುಟುಂಬಕ್ಕೆ ಕಿರುಕುಳ ನೀಡಿರುವ ಉತ್ತರಪ್ರದೇಶ ಪೊಲೀಸರು ಅನುಮಾನಾಸ್ಪದವಾಗಿ ಮತ್ತು ಕೆಟ್ಟ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ಸತ್ಯ ಶೋಧನಾ ಸಮಿತಿ ಆರೋಪಿಸಿದೆ.

’ಫ್ಯಾಕ್ಟ್ ಫೈಂಡಿಂಗ್ ರಿಪೋರ್ಟ್ ಆನ್ ಬ್ರೂಟಲ್ ಗ್ಯಾಂಗ್ ರೇಪ್, ಅಸಾಲ್ಟ್ ಆ್ಯಂಡ್ ಮರ್ಡರ್ ಆಫ್ ಎ ದಲಿತ್ ಗರ್ಲ್ ಬೈ ಅಪ್ಪರ್ ಕಾಸ್ಟ್ ಠಾಕೂರ್ ಮೆನ್ ಇನ್ ಬುಲ್‌ಗರ್ಹಿ ವಿಲೇಜ್, ಹತ್ರಾಸ್’ ಎಂಬ ಹೆಸರಿನ ಸಾಮಾಜಿಕ ಹೋರಾಟಗಾರರು ನಡೆಸಿರುವ ಸತ್ಯಶೋಧನಾ ವರದಿಯಲ್ಲಿ, ತಡವಾಗಿ ಪರೀಕ್ಷೆ ನಡೆಸುವುದು ಅತ್ಯಾಚಾರವನ್ನು ಸಾಬೀತುಪಡಿಸಲು ಅಸಾಧ್ಯವಾಗಿರುವುದರಿಂದ, ದೌರ್ಜನ್ಯದ ವೈದ್ಯಕೀಯ ತನಿಖೆ ನಡೆಸಲು ಉದ್ದೇಶಪೂರ್ವಕವಾಗಿ ಸಮಯ ವ್ಯರ್ಥ ಮಾಡಲಾಗಿದೆ. ಶಾಶ್ವತವಾಗಿ ಪುರಾವೆಯನ್ನು ನಾಶಮಾಡುವುದು ಇದರ ಉದ್ದೇಶ ಎಂದು ಸಮಿತಿ ಹೇಳಿದೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣ ತನಿಖೆ: CBI ತಂಡದಲ್ಲಿ SC/ST/OBC ಸಮುದಾಯದವರಿಲ್ಲ- ಚಂದ್ರಶೇಖರ್ ಆಜಾದ್

ಅಲ್ಲದೆ ದೌರ್ಜನ್ಯಕ್ಕೊಳಗಾದ ಯುವತಿಯ ತಂದೆಗೆ ತನಿಖೆ ಹಾಗೂ ಚಿಕಿತ್ಸೆಯಿಂದ ತಾನು ಮತ್ತು ಕುಟುಂಬ ಸಂತೃಪ್ತರಾಗಿದ್ದೇವೆಂದು ಎಲ್ಲರಿಗೂ ತಿಳಿಸುವಂತೆ ಜಿಲ್ಲಾಡಳಿತ ಒತ್ತಡ ಹೇರಿತ್ತು ಎಂದು ಸಮಿತಿ ಹೇಳಿದೆ. ಇದು ಸತ್ಯವನ್ನು ಮುಚ್ಚಿಡಲು ಹಾಗೂ ಪ್ರಕರಣವನ್ನು ಶಾಶ್ವತವಾಗಿ ಮುಗಿಸಲು ರಾಜ್ಯ ಸರಕಾರ ನಡೆಸಿದ ಸಿದ್ಧತೆ ಎಂಬುದನ್ನು ತಿಳಿಸುತ್ತದೆ ಎಂದು ವರದಿ ಹೇಳಿದೆ.

ಸತ್ಯಶೋಧನಾ ಸಮಿತಿಯಲ್ಲಿ, ‘ನರ್ಮದಾ ಬಚಾವೊ’ ಆಂದೋಲನದ ಮೇಧಾ ಪಾಟ್ಕರ್, ಮ್ಯಾಗ್ಸಸೆ ಪ್ರಶಸ್ತಿ ಪುರಷ್ಕೃತ ಸಂದೀಪ್ ಪಾಂಡೆ, ಆರ್‌ಟಿಐ ಕಾರ್ಯಕರ್ತೆ ಹಾಗೂ ಲೇಖಕಿ ಮಣಿಮಾಲಾ, ‘ದಿಲ್ಲಿ ಏಕತಾ’ ಗುಂಪಿನ ಇಬ್ಬರು ಸದಸ್ಯರು ಸೇರಿದಂತೆ 9 ಸದಸ್ಯರಿದ್ದು ಸಂತ್ರಸ್ಥ ಯುವತಿಯ ಮನೆಗೆ ಅಕ್ಟೋಬರ್ 9 ರಂದು ಭೇಟಿ ನೀಡಿತ್ತು.

ವರದಿಯಲ್ಲಿ, ಪ್ರಜ್ಞೆ ಮರುಕಳಿಸುವವರೆಗೆ ಯುವತಿಯನ್ನು ಬೇರೆ ಆಸ್ಪತ್ರೆಗೆ ವರ್ಗಾಯಿಸಬಾರದು ಎಂದು ಕೆಲವು ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದರೂ, ಅನಗತ್ಯ ಆತುರ ತೋರಿಸಿ ಅಲಿಗಢದ ಜವಾಹರ್‌ಲಾಲ್ ನೆಹರೂ ವೈದ್ಯಕೀಯ ಕಾಲೇಜಿನಿಂದ ದಿಲ್ಲಿಗೆ ವರ್ಗಾಯಿಸಲಾಗಿದೆ ಎಂದು ಹೇಳಿದೆ.

‘‘ಈ ಪರಿಸ್ಥಿತಿಯಲ್ಲಿ ಯುವತಿಯನ್ನು ವರ್ಗಾಯಿಸುವುದು ಅಪಾಯಕಾರಿ ಎಂದು ಅರಿತ ಕುಟುಂಬ ವರ್ಗಾವಣೆಗೆ ಒಪ್ಪಿಗೆ ನೀಡಲು ನಿರಾಕರಿಸಿತ್ತು. ಸಂತ್ರಸ್ಥೆಗೆ ತೀವ್ರ ನೋವು ಸೇರಿದಂತೆ ನರಕ್ಕೆ ಆದ ಘಾಸಿಯಿಂದ ಬೆನ್ನು ಹುರಿಯ ಮೇಲೆ ಪರಿಣಾಮ ಉಂಟಾಗಿರುವುದು ಹಾಗೂ ಕತ್ತು ಮತ್ತು ಹಿಂಭಾಗದ ಚಲನೆ ಸಾಧ್ಯವಾಗುತ್ತಿರಲಿಲ್ಲ. ಸಂತ್ರಸ್ಥೆಯನ್ನು ದಿಲ್ಲಿ ಏಮ್ಸ್‌ಗೆ ವರ್ಗಾಯಿಸಲು ಕುಟುಂಬವು ಜಿಲ್ಲಾಡಳಿತಕ್ಕೆ ಅನುಮತಿ ನೀಡಿಲ್ಲ ಎಂಬುವುದು ಸುಳ್ಳಾಗಿದ್ದು, ಈಗ ಬಹಿರಂಗಗೊಂಡಿದೆ’’ ಎಂದು ವರದಿ ಹೇಳಿದೆ.

ವಾಸ್ತವವಾಗಿ ಸಂತ್ರಸ್ಥೆಯನ್ನು ಏಮ್ಸ್‌ನ ಸನಿಹದಲ್ಲಿರುವ ಕೇಂದ್ರ ಸರಕಾರದ ಸ್ವಾಮ್ಯದ ಸಪ್ಧರಂಜಂಗ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಈ ಬಗ್ಗೆ ಆಕೆಯ ಕುಟುಂಬ ಪ್ರಶ್ನಿಸಿದಾಗ, ಎರಡೂ ಆಸ್ಪತ್ರೆ ಒಂದೇ ಎಂದು ಜಿಲ್ಲಾಡಳಿತ ಹೇಳಿತ್ತು ಎಂದು ಸತ್ಯಶೋಧನ ವರದಿಯು ಆರೋಪಿಸಿದೆ.

ಇದನ್ನೂ ಓದಿ: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...