Homeಮುಖಪುಟಹತ್ರಾಸ್: ಪ್ರಕರಣವನ್ನು ಶಾಶ್ವತವಾಗಿ ಮುಗಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿತ್ತು-ಸತ್ಯಶೋಧನಾ ಸಮಿತಿ ವರದಿ

ಹತ್ರಾಸ್: ಪ್ರಕರಣವನ್ನು ಶಾಶ್ವತವಾಗಿ ಮುಗಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿತ್ತು-ಸತ್ಯಶೋಧನಾ ಸಮಿತಿ ವರದಿ

ಯುವತಿಯ ಕುಟುಂಬಕ್ಕೆ ಕಿರುಕುಳ ನೀಡಿರುವ ಉತ್ತರಪ್ರದೇಶ ಪೊಲೀಸರು ಅನುಮಾನಾಸ್ಪದವಾಗಿ ಮತ್ತು ಕೆಟ್ಟ ರೀತಿಯಲ್ಲಿ ವರ್ತಿಸಿದ್ದಾರೆ

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್‌‌ನಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟ ದಲಿತ ಯುವತಿಯ ಕುಟುಂಬಕ್ಕೆ ಕಿರುಕುಳ ನೀಡಿರುವ ಉತ್ತರಪ್ರದೇಶ ಪೊಲೀಸರು ಅನುಮಾನಾಸ್ಪದವಾಗಿ ಮತ್ತು ಕೆಟ್ಟ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ಸತ್ಯ ಶೋಧನಾ ಸಮಿತಿ ಆರೋಪಿಸಿದೆ.

’ಫ್ಯಾಕ್ಟ್ ಫೈಂಡಿಂಗ್ ರಿಪೋರ್ಟ್ ಆನ್ ಬ್ರೂಟಲ್ ಗ್ಯಾಂಗ್ ರೇಪ್, ಅಸಾಲ್ಟ್ ಆ್ಯಂಡ್ ಮರ್ಡರ್ ಆಫ್ ಎ ದಲಿತ್ ಗರ್ಲ್ ಬೈ ಅಪ್ಪರ್ ಕಾಸ್ಟ್ ಠಾಕೂರ್ ಮೆನ್ ಇನ್ ಬುಲ್‌ಗರ್ಹಿ ವಿಲೇಜ್, ಹತ್ರಾಸ್’ ಎಂಬ ಹೆಸರಿನ ಸಾಮಾಜಿಕ ಹೋರಾಟಗಾರರು ನಡೆಸಿರುವ ಸತ್ಯಶೋಧನಾ ವರದಿಯಲ್ಲಿ, ತಡವಾಗಿ ಪರೀಕ್ಷೆ ನಡೆಸುವುದು ಅತ್ಯಾಚಾರವನ್ನು ಸಾಬೀತುಪಡಿಸಲು ಅಸಾಧ್ಯವಾಗಿರುವುದರಿಂದ, ದೌರ್ಜನ್ಯದ ವೈದ್ಯಕೀಯ ತನಿಖೆ ನಡೆಸಲು ಉದ್ದೇಶಪೂರ್ವಕವಾಗಿ ಸಮಯ ವ್ಯರ್ಥ ಮಾಡಲಾಗಿದೆ. ಶಾಶ್ವತವಾಗಿ ಪುರಾವೆಯನ್ನು ನಾಶಮಾಡುವುದು ಇದರ ಉದ್ದೇಶ ಎಂದು ಸಮಿತಿ ಹೇಳಿದೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣ ತನಿಖೆ: CBI ತಂಡದಲ್ಲಿ SC/ST/OBC ಸಮುದಾಯದವರಿಲ್ಲ- ಚಂದ್ರಶೇಖರ್ ಆಜಾದ್

ಅಲ್ಲದೆ ದೌರ್ಜನ್ಯಕ್ಕೊಳಗಾದ ಯುವತಿಯ ತಂದೆಗೆ ತನಿಖೆ ಹಾಗೂ ಚಿಕಿತ್ಸೆಯಿಂದ ತಾನು ಮತ್ತು ಕುಟುಂಬ ಸಂತೃಪ್ತರಾಗಿದ್ದೇವೆಂದು ಎಲ್ಲರಿಗೂ ತಿಳಿಸುವಂತೆ ಜಿಲ್ಲಾಡಳಿತ ಒತ್ತಡ ಹೇರಿತ್ತು ಎಂದು ಸಮಿತಿ ಹೇಳಿದೆ. ಇದು ಸತ್ಯವನ್ನು ಮುಚ್ಚಿಡಲು ಹಾಗೂ ಪ್ರಕರಣವನ್ನು ಶಾಶ್ವತವಾಗಿ ಮುಗಿಸಲು ರಾಜ್ಯ ಸರಕಾರ ನಡೆಸಿದ ಸಿದ್ಧತೆ ಎಂಬುದನ್ನು ತಿಳಿಸುತ್ತದೆ ಎಂದು ವರದಿ ಹೇಳಿದೆ.

ಸತ್ಯಶೋಧನಾ ಸಮಿತಿಯಲ್ಲಿ, ‘ನರ್ಮದಾ ಬಚಾವೊ’ ಆಂದೋಲನದ ಮೇಧಾ ಪಾಟ್ಕರ್, ಮ್ಯಾಗ್ಸಸೆ ಪ್ರಶಸ್ತಿ ಪುರಷ್ಕೃತ ಸಂದೀಪ್ ಪಾಂಡೆ, ಆರ್‌ಟಿಐ ಕಾರ್ಯಕರ್ತೆ ಹಾಗೂ ಲೇಖಕಿ ಮಣಿಮಾಲಾ, ‘ದಿಲ್ಲಿ ಏಕತಾ’ ಗುಂಪಿನ ಇಬ್ಬರು ಸದಸ್ಯರು ಸೇರಿದಂತೆ 9 ಸದಸ್ಯರಿದ್ದು ಸಂತ್ರಸ್ಥ ಯುವತಿಯ ಮನೆಗೆ ಅಕ್ಟೋಬರ್ 9 ರಂದು ಭೇಟಿ ನೀಡಿತ್ತು.

ವರದಿಯಲ್ಲಿ, ಪ್ರಜ್ಞೆ ಮರುಕಳಿಸುವವರೆಗೆ ಯುವತಿಯನ್ನು ಬೇರೆ ಆಸ್ಪತ್ರೆಗೆ ವರ್ಗಾಯಿಸಬಾರದು ಎಂದು ಕೆಲವು ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದರೂ, ಅನಗತ್ಯ ಆತುರ ತೋರಿಸಿ ಅಲಿಗಢದ ಜವಾಹರ್‌ಲಾಲ್ ನೆಹರೂ ವೈದ್ಯಕೀಯ ಕಾಲೇಜಿನಿಂದ ದಿಲ್ಲಿಗೆ ವರ್ಗಾಯಿಸಲಾಗಿದೆ ಎಂದು ಹೇಳಿದೆ.

‘‘ಈ ಪರಿಸ್ಥಿತಿಯಲ್ಲಿ ಯುವತಿಯನ್ನು ವರ್ಗಾಯಿಸುವುದು ಅಪಾಯಕಾರಿ ಎಂದು ಅರಿತ ಕುಟುಂಬ ವರ್ಗಾವಣೆಗೆ ಒಪ್ಪಿಗೆ ನೀಡಲು ನಿರಾಕರಿಸಿತ್ತು. ಸಂತ್ರಸ್ಥೆಗೆ ತೀವ್ರ ನೋವು ಸೇರಿದಂತೆ ನರಕ್ಕೆ ಆದ ಘಾಸಿಯಿಂದ ಬೆನ್ನು ಹುರಿಯ ಮೇಲೆ ಪರಿಣಾಮ ಉಂಟಾಗಿರುವುದು ಹಾಗೂ ಕತ್ತು ಮತ್ತು ಹಿಂಭಾಗದ ಚಲನೆ ಸಾಧ್ಯವಾಗುತ್ತಿರಲಿಲ್ಲ. ಸಂತ್ರಸ್ಥೆಯನ್ನು ದಿಲ್ಲಿ ಏಮ್ಸ್‌ಗೆ ವರ್ಗಾಯಿಸಲು ಕುಟುಂಬವು ಜಿಲ್ಲಾಡಳಿತಕ್ಕೆ ಅನುಮತಿ ನೀಡಿಲ್ಲ ಎಂಬುವುದು ಸುಳ್ಳಾಗಿದ್ದು, ಈಗ ಬಹಿರಂಗಗೊಂಡಿದೆ’’ ಎಂದು ವರದಿ ಹೇಳಿದೆ.

ವಾಸ್ತವವಾಗಿ ಸಂತ್ರಸ್ಥೆಯನ್ನು ಏಮ್ಸ್‌ನ ಸನಿಹದಲ್ಲಿರುವ ಕೇಂದ್ರ ಸರಕಾರದ ಸ್ವಾಮ್ಯದ ಸಪ್ಧರಂಜಂಗ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಈ ಬಗ್ಗೆ ಆಕೆಯ ಕುಟುಂಬ ಪ್ರಶ್ನಿಸಿದಾಗ, ಎರಡೂ ಆಸ್ಪತ್ರೆ ಒಂದೇ ಎಂದು ಜಿಲ್ಲಾಡಳಿತ ಹೇಳಿತ್ತು ಎಂದು ಸತ್ಯಶೋಧನ ವರದಿಯು ಆರೋಪಿಸಿದೆ.

ಇದನ್ನೂ ಓದಿ: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....