Homeಮುಖಪುಟಯುಪಿ ಪೊಲೀಸರ ಅಟ್ಟಹಾಸ: ಮಹಿಳಾ ಸಂಸದೆಯನ್ನು ದೂಡಿ, ಡೆರೆಕ್ ಒಬ್ರಿಯೆನ್‌ರನ್ನು ನೆಲಕ್ಕೆ ಬೀಳಿಸಿದ ಪುರುಷ ಪೊಲೀಸರು

ಯುಪಿ ಪೊಲೀಸರ ಅಟ್ಟಹಾಸ: ಮಹಿಳಾ ಸಂಸದೆಯನ್ನು ದೂಡಿ, ಡೆರೆಕ್ ಒಬ್ರಿಯೆನ್‌ರನ್ನು ನೆಲಕ್ಕೆ ಬೀಳಿಸಿದ ಪುರುಷ ಪೊಲೀಸರು

ಪೊಲೀಸರು ಸಂತ್ರಸ್ತೆಯ ಕುಟುಂಬದವರನ್ನು ಭೇಟಿ ಮಾಡಲು ಬಿಡದ ಕಾರಣ ಟಿಎಂಸಿ ಸಂಸದರು ಕಳೆದ ಒಂದು ಗಂಟೆಯಿಂದ ಸ್ಥಳದಲ್ಲೇ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.

- Advertisement -
- Advertisement -

ಹತ್ರಾಸ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂತ್ರಸ್ತ ಕುಟುಂಬದ ಭೇಟಿಗೆ ಬಂದಿದ್ದ ಟಿಎಂಸಿ ನಿಯೋಗವನ್ನು ದಾರಿಯಲ್ಲೇ ಉತ್ತರಪ್ರದೇಶ ಪೊಲೀಸರು ಬಲಪ್ರಯೋಗದಿಂದ ತಡೆದಿದ್ದಾರೆ. ಸಂಸದೆ ಪ್ರತಿಮಾ ಮೊಂಡಾಲ್‌ರ ಭುಜ ಹಿಡಿದು ಪುರುಷ ಪೊಲೀಸನೊಬ್ಬ ದೂಡಿರುವ ಮತ್ತು ಪಕ್ಷದ ಹಿರಿಯ ಮುಖಂಡ ಡೆರೆಕ್ ಒಬ್ರಿಯೆನ್ನ ನೆಲಕ್ಕೆ ಬೀಳಿಸಿರುವ ಘಟನೆ ಜರುಗಿದ್ದು ತೀವ್ರ ಟೀಕೆಗೆ ಕಾರಣವಾಗಿದೆ.

ಎಎನ್‌ಐ ಟ್ವೀಟ್ ಮಾಡಿರುವ 29 ಸೆಕೆಂಡುಗಳ ವಿಡಿಯೋ ದೃಶ್ಯದಲ್ಲಿ ಟಿಎಂಸಿ ನಿಯೋಗದ ಜೊತೆ ಪೊಲೀಸರ ಅಟ್ಟಹಾಸ ಕಾಣಿಸುತ್ತದೆ. ಬಿಳಿ ಅಂಗಿ ಮತ್ತು ಹೆಲ್ಮೆಟ್ ಧರಿಸಿರುವ ಪುರುಷ ಪೊಲೀಸನೊಬ್ಬ ಸಂಸದೆ ಪ್ರತಿಮಾ ಮೊಂಡಾಲ್‌ರ ಭುಜ ಹಿಡಿದು ದೂಡುತ್ತಿದ್ದಾಗ ಅದನ್ನು ಪ್ರಶ್ನಿಸಿ ಅವರ ರಕ್ಷಣೆಗೆ ಪಕ್ಷದ ಹಿರಿಯ ಮುಖಂಡ ಒಬ್ರಿಯನ್ ಧಾವಿಸಿದ್ದಾರೆ. ಆಗ ಅವರನ್ನು ನೆಲಕ್ಕೆ ತಳ್ಳಿ ಬೀಳಿಸಲಾಗಿದೆ.

ಸಂತ್ರಸ್ತೆ ಕುಟುಂಬಕ್ಕೆ ಸಂತಾಪ ಸೂಚಿಸಲು ಹೊರಟಿದ್ದ ಸಂಸದರನ್ನು ಆಕೆಯ ಮನೆಯಿಂದ ಒಂದೂವರೆ ಕಿಲೋಮೀಟರ್ ದೂರದಲ್ಲೇ ಪೊಲೀಸರು ತಡೆದಿದ್ದಾರೆ ಎಂದು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷ ತಿಳಿಸಿದೆ. ನಿಯೋಗದಲ್ಲಿ ಡೆರೆಕ್ ಒಬ್ರಯೆನ್, ಡಾ.ಕಾಕೋಲಿ ಘೋಷ್ ದಸ್ತಿದಾರ್, ಪ್ರತಿಮಾ ಮೊಂಡಾಲ್ ಮತ್ತು ಮಾಜಿ ಸಂಸತ್ ಸದಸ್ಯೆ ಮಮತಾ ಠಾಕೂರ್ ಇದ್ದರು.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬ ಭೇಟಿಗೆ ಪಾದಯಾತ್ರೆ: ರಾಹುಲ್, ಪ್ರಿಯಾಂಕಾ ಬಂಧನ

ಟಿಎಂಸಿ ಸಂಸದರು ಪೊಲೀಸರು ತಡೆದ ಸ್ಥಳದಲ್ಲೇ ಧರಣಿ ನಡೆಸುತ್ತಿದ್ದಾರೆ. ಸಂಸದೆ ಡಾ.ಕಾಕೋಲಿ ಘೋಷ್ ದಸ್ತಿದಾರ್ ಉತ್ತರ ಪ್ರದೇಶ ಸರ್ಕಾರ ಮತ್ತು ಪೊಲೀಸರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯುವತಿಯ ಮೇಲೆ ಅತ್ಯಾಚಾರವಾದಾಗ ಎಲ್ಲಿ ಹೇಗಿದ್ದಿರಿ..? ಆ ಕ್ರಿಮಿನಲ್‌ಗಳು ಆಕೆಯನ್ನು ಕೊಂದುಹಾಕಿದ್ದಾರೆ ಆಗ ಎಲ್ಲಿ ಇದ್ದಿರಿ..? ಲಾಠಿ, ಬಂದೂಕುಗಳನ್ನು ಹಿಡಿದು ಕೊಂಡಿದ್ದಿರಿ… ನಾಚಿಕೆಯಾಗಬೇಕು ನಿಮಗೆ, ನಿಮ್ಮ ಸರ್ಕಾರಕ್ಕೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಪೊಲೀಸರು ಸಂತ್ರಸ್ತೆಯ ಕುಟುಂಬದವರನ್ನು ಭೇಟಿ ಮಾಡಲು ಬಿಡದ ಕಾರಣ ಟಿಎಂಸಿ ಸಂಸದರು ಕಳೆದ ಒಂದು ಗಂಟೆಯಿಂದ ಸ್ಥಳದಲ್ಲೇ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಹತ್ರಾಸ್: ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ 200 ಕಾರ್ಯಕರ್ತರ ವಿರುದ್ಧ FIR

ನಿನ್ನೆ ಕೂಡ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಯುವತಿಯ ಕುಟುಂಬವನ್ನು ಭೇಟಿಯಾಗಲು ಹೋಗುವಾಗ ತಡೆದು ಸ್ವಲ್ಪ ಸಮಯದವರೆಗೆ ಬಂಧಿಸಲಾಗಿತ್ತು. ಉತ್ತರ ಪ್ರದೇಶದ ಗೌತಮ ಬುದ್ಧ ಪೊಲೀಸ್ ಠಾನೆಯಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿ 200 ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌ ಕೂಡ ದಾಖಲಿಸಲಾಗಿದೆ.

ಸೆಪ್ಟೆಂಬರ್ 14 ರಂದು ದನದ ಮೇವನ್ನು ಸಂಗ್ರಹಿಸಲು ಕುಟುಂಬದ ಜೊತೆ ತನ್ನ ಹಳ್ಳಿಯ ಹೊಲಕ್ಕೆ ಹೋಗಿದ್ದಾಗ ನಾಲ್ಕು ಮೇಲ್ಜಾತಿಯ ಪುರುಷರು ಅತ್ಯಾಚಾರ ಎಸಗಿ, ಚಿತ್ರಹಿಂಸೆ ನೀಡಿದ್ದರು. ಅಲಿಘಡ್ ಮುಸ್ಲಿಂ ವಿಶ್ವವಿದ್ಯಾಲಯದ ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜಿನಲ್ಲಿ ಯುವತಿಗೆ ಚಿಕಿತ್ಸೆ ನೀಡಲಾಗಿತ್ತು.

ಆದರೆ ಆಕೆಯ ಸ್ಥಿತಿ ಸುಧಾರಿಸದಿದ್ದಾಗ ನವದೆಹಲಿಯ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆಕೆ ಅಲ್ಲೇ ನಿಧನರಾಗಿದ್ದರು. ಕುಟುಂಬದವರನ್ನು ದೂರವಿರಿಸಿ ಪೊಲೀಸರೇ ಯುವತಿಯ ಮೃತದೇಹವನ್ನು ಸುಟ್ಟುಹಾಕಿದ್ದರು. ಈ ಪ್ರಕರಣ ದೇಶಾದ್ಯಂತ ವ್ಯಾಪಕ ಟೀಕೆ ಮತ್ತು ಪ್ರತಿಭಟನೆಗೆ ಕಾರಣವಾಗಿದೆ. ಪ್ರತಿಪಕ್ಷಗಳು ಸೇರಿ ಹಲವು ಸಂಘಟನೆಗಳು ಹೋರಾಟ ನಡೆಸುತ್ತಿವೆ. ಆದರೆ ಪ್ರತಿಭಟನೆಗಳನ್ನು ಹತ್ತಿಕ್ಕುವ ಕೆಲಸ ಉತ್ತರ ಪ್ರದೇಶ ಸರ್ಕಾರ ಮಾಡುತ್ತಿದ್ದು, ವಿಪಕ್ಷಗಳು ಸಂತ್ರಸ್ತೆಯ ಮನೆಗೆ ಭೇಟಿ ನೀಡದಂತೆ ತಡೆಯುತ್ತಿದೆ.


ಇದನ್ನೂ ಓದಿ: ಹತ್ರಾಸ್: ತೀವ್ರಗೊಂಡ ಆಕ್ರೋಶ, ಪ್ರತಿಭಟನೆ ಹತ್ತಿಕ್ಕಲು ಇಂಡಿಯಾ ಗೇಟ್ ಬಳಿ ನಿಷೇದಾಜ್ಞೆ ಹೇರಿದ ದೆಹಲಿ ಪೊಲೀಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...