Homeಮುಖಪುಟಯುಪಿ ಪೊಲೀಸರ ಅಟ್ಟಹಾಸ: ಮಹಿಳಾ ಸಂಸದೆಯನ್ನು ದೂಡಿ, ಡೆರೆಕ್ ಒಬ್ರಿಯೆನ್‌ರನ್ನು ನೆಲಕ್ಕೆ ಬೀಳಿಸಿದ ಪುರುಷ ಪೊಲೀಸರು

ಯುಪಿ ಪೊಲೀಸರ ಅಟ್ಟಹಾಸ: ಮಹಿಳಾ ಸಂಸದೆಯನ್ನು ದೂಡಿ, ಡೆರೆಕ್ ಒಬ್ರಿಯೆನ್‌ರನ್ನು ನೆಲಕ್ಕೆ ಬೀಳಿಸಿದ ಪುರುಷ ಪೊಲೀಸರು

ಪೊಲೀಸರು ಸಂತ್ರಸ್ತೆಯ ಕುಟುಂಬದವರನ್ನು ಭೇಟಿ ಮಾಡಲು ಬಿಡದ ಕಾರಣ ಟಿಎಂಸಿ ಸಂಸದರು ಕಳೆದ ಒಂದು ಗಂಟೆಯಿಂದ ಸ್ಥಳದಲ್ಲೇ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.

- Advertisement -
- Advertisement -

ಹತ್ರಾಸ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂತ್ರಸ್ತ ಕುಟುಂಬದ ಭೇಟಿಗೆ ಬಂದಿದ್ದ ಟಿಎಂಸಿ ನಿಯೋಗವನ್ನು ದಾರಿಯಲ್ಲೇ ಉತ್ತರಪ್ರದೇಶ ಪೊಲೀಸರು ಬಲಪ್ರಯೋಗದಿಂದ ತಡೆದಿದ್ದಾರೆ. ಸಂಸದೆ ಪ್ರತಿಮಾ ಮೊಂಡಾಲ್‌ರ ಭುಜ ಹಿಡಿದು ಪುರುಷ ಪೊಲೀಸನೊಬ್ಬ ದೂಡಿರುವ ಮತ್ತು ಪಕ್ಷದ ಹಿರಿಯ ಮುಖಂಡ ಡೆರೆಕ್ ಒಬ್ರಿಯೆನ್ನ ನೆಲಕ್ಕೆ ಬೀಳಿಸಿರುವ ಘಟನೆ ಜರುಗಿದ್ದು ತೀವ್ರ ಟೀಕೆಗೆ ಕಾರಣವಾಗಿದೆ.

ಎಎನ್‌ಐ ಟ್ವೀಟ್ ಮಾಡಿರುವ 29 ಸೆಕೆಂಡುಗಳ ವಿಡಿಯೋ ದೃಶ್ಯದಲ್ಲಿ ಟಿಎಂಸಿ ನಿಯೋಗದ ಜೊತೆ ಪೊಲೀಸರ ಅಟ್ಟಹಾಸ ಕಾಣಿಸುತ್ತದೆ. ಬಿಳಿ ಅಂಗಿ ಮತ್ತು ಹೆಲ್ಮೆಟ್ ಧರಿಸಿರುವ ಪುರುಷ ಪೊಲೀಸನೊಬ್ಬ ಸಂಸದೆ ಪ್ರತಿಮಾ ಮೊಂಡಾಲ್‌ರ ಭುಜ ಹಿಡಿದು ದೂಡುತ್ತಿದ್ದಾಗ ಅದನ್ನು ಪ್ರಶ್ನಿಸಿ ಅವರ ರಕ್ಷಣೆಗೆ ಪಕ್ಷದ ಹಿರಿಯ ಮುಖಂಡ ಒಬ್ರಿಯನ್ ಧಾವಿಸಿದ್ದಾರೆ. ಆಗ ಅವರನ್ನು ನೆಲಕ್ಕೆ ತಳ್ಳಿ ಬೀಳಿಸಲಾಗಿದೆ.

ಸಂತ್ರಸ್ತೆ ಕುಟುಂಬಕ್ಕೆ ಸಂತಾಪ ಸೂಚಿಸಲು ಹೊರಟಿದ್ದ ಸಂಸದರನ್ನು ಆಕೆಯ ಮನೆಯಿಂದ ಒಂದೂವರೆ ಕಿಲೋಮೀಟರ್ ದೂರದಲ್ಲೇ ಪೊಲೀಸರು ತಡೆದಿದ್ದಾರೆ ಎಂದು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷ ತಿಳಿಸಿದೆ. ನಿಯೋಗದಲ್ಲಿ ಡೆರೆಕ್ ಒಬ್ರಯೆನ್, ಡಾ.ಕಾಕೋಲಿ ಘೋಷ್ ದಸ್ತಿದಾರ್, ಪ್ರತಿಮಾ ಮೊಂಡಾಲ್ ಮತ್ತು ಮಾಜಿ ಸಂಸತ್ ಸದಸ್ಯೆ ಮಮತಾ ಠಾಕೂರ್ ಇದ್ದರು.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬ ಭೇಟಿಗೆ ಪಾದಯಾತ್ರೆ: ರಾಹುಲ್, ಪ್ರಿಯಾಂಕಾ ಬಂಧನ

ಟಿಎಂಸಿ ಸಂಸದರು ಪೊಲೀಸರು ತಡೆದ ಸ್ಥಳದಲ್ಲೇ ಧರಣಿ ನಡೆಸುತ್ತಿದ್ದಾರೆ. ಸಂಸದೆ ಡಾ.ಕಾಕೋಲಿ ಘೋಷ್ ದಸ್ತಿದಾರ್ ಉತ್ತರ ಪ್ರದೇಶ ಸರ್ಕಾರ ಮತ್ತು ಪೊಲೀಸರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯುವತಿಯ ಮೇಲೆ ಅತ್ಯಾಚಾರವಾದಾಗ ಎಲ್ಲಿ ಹೇಗಿದ್ದಿರಿ..? ಆ ಕ್ರಿಮಿನಲ್‌ಗಳು ಆಕೆಯನ್ನು ಕೊಂದುಹಾಕಿದ್ದಾರೆ ಆಗ ಎಲ್ಲಿ ಇದ್ದಿರಿ..? ಲಾಠಿ, ಬಂದೂಕುಗಳನ್ನು ಹಿಡಿದು ಕೊಂಡಿದ್ದಿರಿ… ನಾಚಿಕೆಯಾಗಬೇಕು ನಿಮಗೆ, ನಿಮ್ಮ ಸರ್ಕಾರಕ್ಕೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಪೊಲೀಸರು ಸಂತ್ರಸ್ತೆಯ ಕುಟುಂಬದವರನ್ನು ಭೇಟಿ ಮಾಡಲು ಬಿಡದ ಕಾರಣ ಟಿಎಂಸಿ ಸಂಸದರು ಕಳೆದ ಒಂದು ಗಂಟೆಯಿಂದ ಸ್ಥಳದಲ್ಲೇ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಹತ್ರಾಸ್: ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ 200 ಕಾರ್ಯಕರ್ತರ ವಿರುದ್ಧ FIR

ನಿನ್ನೆ ಕೂಡ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಯುವತಿಯ ಕುಟುಂಬವನ್ನು ಭೇಟಿಯಾಗಲು ಹೋಗುವಾಗ ತಡೆದು ಸ್ವಲ್ಪ ಸಮಯದವರೆಗೆ ಬಂಧಿಸಲಾಗಿತ್ತು. ಉತ್ತರ ಪ್ರದೇಶದ ಗೌತಮ ಬುದ್ಧ ಪೊಲೀಸ್ ಠಾನೆಯಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿ 200 ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌ ಕೂಡ ದಾಖಲಿಸಲಾಗಿದೆ.

ಸೆಪ್ಟೆಂಬರ್ 14 ರಂದು ದನದ ಮೇವನ್ನು ಸಂಗ್ರಹಿಸಲು ಕುಟುಂಬದ ಜೊತೆ ತನ್ನ ಹಳ್ಳಿಯ ಹೊಲಕ್ಕೆ ಹೋಗಿದ್ದಾಗ ನಾಲ್ಕು ಮೇಲ್ಜಾತಿಯ ಪುರುಷರು ಅತ್ಯಾಚಾರ ಎಸಗಿ, ಚಿತ್ರಹಿಂಸೆ ನೀಡಿದ್ದರು. ಅಲಿಘಡ್ ಮುಸ್ಲಿಂ ವಿಶ್ವವಿದ್ಯಾಲಯದ ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜಿನಲ್ಲಿ ಯುವತಿಗೆ ಚಿಕಿತ್ಸೆ ನೀಡಲಾಗಿತ್ತು.

ಆದರೆ ಆಕೆಯ ಸ್ಥಿತಿ ಸುಧಾರಿಸದಿದ್ದಾಗ ನವದೆಹಲಿಯ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆಕೆ ಅಲ್ಲೇ ನಿಧನರಾಗಿದ್ದರು. ಕುಟುಂಬದವರನ್ನು ದೂರವಿರಿಸಿ ಪೊಲೀಸರೇ ಯುವತಿಯ ಮೃತದೇಹವನ್ನು ಸುಟ್ಟುಹಾಕಿದ್ದರು. ಈ ಪ್ರಕರಣ ದೇಶಾದ್ಯಂತ ವ್ಯಾಪಕ ಟೀಕೆ ಮತ್ತು ಪ್ರತಿಭಟನೆಗೆ ಕಾರಣವಾಗಿದೆ. ಪ್ರತಿಪಕ್ಷಗಳು ಸೇರಿ ಹಲವು ಸಂಘಟನೆಗಳು ಹೋರಾಟ ನಡೆಸುತ್ತಿವೆ. ಆದರೆ ಪ್ರತಿಭಟನೆಗಳನ್ನು ಹತ್ತಿಕ್ಕುವ ಕೆಲಸ ಉತ್ತರ ಪ್ರದೇಶ ಸರ್ಕಾರ ಮಾಡುತ್ತಿದ್ದು, ವಿಪಕ್ಷಗಳು ಸಂತ್ರಸ್ತೆಯ ಮನೆಗೆ ಭೇಟಿ ನೀಡದಂತೆ ತಡೆಯುತ್ತಿದೆ.


ಇದನ್ನೂ ಓದಿ: ಹತ್ರಾಸ್: ತೀವ್ರಗೊಂಡ ಆಕ್ರೋಶ, ಪ್ರತಿಭಟನೆ ಹತ್ತಿಕ್ಕಲು ಇಂಡಿಯಾ ಗೇಟ್ ಬಳಿ ನಿಷೇದಾಜ್ಞೆ ಹೇರಿದ ದೆಹಲಿ ಪೊಲೀಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...