Homeಮುಖಪುಟಹತ್ರಾಸ್: ಶವ ಸುಟ್ಟಿದ್ದನ್ನು ಸುಪ್ರೀಂ‌ನಲ್ಲಿ ಸಮರ್ಥಿಸಿಕೊಂಡ ಯುಪಿ ಸರ್ಕಾರ!

ಹತ್ರಾಸ್: ಶವ ಸುಟ್ಟಿದ್ದನ್ನು ಸುಪ್ರೀಂ‌ನಲ್ಲಿ ಸಮರ್ಥಿಸಿಕೊಂಡ ಯುಪಿ ಸರ್ಕಾರ!

ಯುಪಿ ಸರ್ಕಾರದ ಅಫಿಡವಿಟ್‌ಗೆ ವಿರುದ್ಧವಾಗಿ ಸಂತ್ರಸ್ತ ಕುಟುಂಬವು ಶವ ನೀಡುವಂತೆ ಗೋಗರೆಯುತ್ತಿರುವ ಮತ್ತು ಹತ್ರಾಸ್ ಜಿಲ್ಲಾಧಿಕಾರಿ ಸಂತ್ರಸ್ತೆಗೆ ತಂದೆಗೆ ಧಮಕಿ ಹಾಕುತ್ತಿರುವ ವಿಡಿಯೋಗಳು ವೈರಲ್ ಆಗಿದ್ದವು. 

- Advertisement -
- Advertisement -

ಹತ್ರಾಸ್‌‌ನಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟಿದ್ದ ದಲಿತ ಯುವತಿಯ ಶವವನ್ನು ’ರಾಜ್ಯದಲ್ಲಿ ದೊಡ್ಡ ಪ್ರಮಾಣದ ಹಿಂಸಾಚಾರ ನಡೆಯುವುದನ್ನು ತಪ್ಪಿಸುವುದಕ್ಕಾಗಿ ಬೇಕಾಗಿಯೇ’ ರಾತ್ರೋ ರಾತ್ರಿ ಸುಟ್ಟಿದ್ದೇವೆ ಎಂದು ಗುಪ್ತಚರ ಇಲಾಖೆಯ ಮಾಹಿತಿ ಉಲ್ಲೇಖಿಸಿ ಸುಪ್ರೀಂ ಕೋರ್ಟ್‌ನಲ್ಲಿ ಉತ್ತರ ಪ್ರದೇಶ ಸರ್ಕಾರ ಸಮರ್ಥನೆ ಮಾಡಿಕೊಂಡಿದೆ

ಉತ್ತರ ಪ್ರದೇಶ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ನೀಡಿದ ಅಫಿಡವಿಟ್‌ನಲ್ಲಿ, “ಬಾಬರಿ ಮಸೀದಿ ತೀರ್ಪು ಬರುತ್ತಿದ್ದರಿಂದ ಜಿಲ್ಲೆಯಲ್ಲಿ ಹೈಅಲರ್ಟ್ ಘೋಷನೆಯಾಗಿತ್ತು. ಹಾಗಾಗಿ ಮುಂಜಾನೆ 2.30 ರಲ್ಲಿ ಅಂತ್ಯಕ್ರಿಯೆ ನಡೆಸಿದ್ದೇವೆ” ಎಂದು ಸಮರ್ಥಿಸಿಕೊಂಡಿದೆ.

ಇದನ್ನೂ ಓದಿ: ಹತ್ರಾಸ್‌: ಸಂತ್ರಸ್ಥೆಯ ಗುಪ್ತಾಂಗದಲ್ಲಿ ಆಳವಾದ ಗಾಯವಿದೆ; ಫೋರೆನ್ಸಿಕ್ ವರದಿ

“ಇಡೀ ಪ್ರಕರಣಕ್ಕೆ ಜಾತಿ/ಕೋಮು ಬಣ್ಣವನ್ನು ನೀಡಲಾಗುತ್ತಿದೆ ಹಾಗೂ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಧರಣಿ ನಡೆಯುತ್ತಿರುವ ಬಗ್ಗೆ ಸೆಪ್ಟೆಂಬರ್ 29 ರ ಬೆಳಿಗ್ಗೆಯಿಂದಲೆ ಹತ್ರಾಸ್‌ನಲ್ಲಿನ ಜಿಲ್ಲಾಡಳಿತವು ಹಲವಾರು ಗುಪ್ತಚರ ಮಾಹಿತಿಯನ್ನು ಪಡೆದಿತ್ತು” ಎಂದು ಉತ್ತರ ಪ್ರದೇಶ ಹೇಳಿದೆ.

ರಾಜಕೀಯ ಪಕ್ಷಗಳ ಬೆಂಬಲಿಗರೊಂದಿಗೆ ಎರಡೂ ಸಮುದಾಯಗಳ/ಜಾತಿಗಳ ಲಕ್ಷಾಂತರ ಪ್ರತಿಭಟನಾಕಾರರು ಹಾಗೂ ಮಾಧ್ಯಮಗಳು ಮರುದಿನ ಬೆಳಿಗ್ಗೆ ಹಳ್ಳಿಯಲ್ಲಿ ಒಟ್ಟುಗೂಡುತ್ತಾರೆ ಎಂಬ ಮಾಹಿತಿ ಸರ್ಕಾರಕ್ಕೆ ಲಭಿಸಿತ್ತು ಮತ್ತು ಇದು ಹಿಂಸಾಚಾರಕ್ಕೆ ಹಾಗೂ ಕಾನೂನು ಸುವ್ಯವಸ್ಥೆಗೆ ದಕ್ಕೆ ತರಬಹುದಾಗಿತ್ತು ಎಂದು ಸರ್ಕಾರ ಹೇಳಿದೆ.

ಅಷ್ಟೇ ಅಲ್ಲದೆ ಬಾಬ್ರಿ ಮಸೀದಿ ತೀರ್ಪು ಮತ್ತು ಕೊರೊನಾ ವೈರಸ್ ಸುರಕ್ಷತಾ ನಿಯಮಗಳಿಂದಾಗಿ ಅಲರ್ಟ್ ಕೂಡಾ ಇತ್ತು ಎಂದು ತನ್ನ ಅಫಿಡವಿಟ್‌ನಲ್ಲಿ ತಿಳಿಸಿದೆ.

“ಇಂತಹ ಅಸಾಮಾನ್ಯ ಮತ್ತು ತೀವ್ರವಾದ ಸನ್ನಿವೇಶದಲ್ಲಿ, ಬೆಳಿಗ್ಗೆ ನಡೆಯುವ ದೊಡ್ಡ ಪ್ರಮಾಣದ ಹಿಂಸಾಚಾರವನ್ನು ತಪ್ಪಿಸಲು ಬೇಕಾಗಿಯೇ, ಯುವತಿ ಮೃತಪಟ್ಟು ಆಕೆಯ ಮರಣೋತ್ತರ ಪರೀಕ್ಷೆಯ 20 ಗಂಟೆಗಳ ನಂತರ ಎಲ್ಲಾ ಧಾರ್ಮಿಕ ವಿಧಿಗಳೊಂದಿಗೆ ಸಂತ್ರಸ್ತ ಕುಟುಂಬದ ಮನವೊಲಿಸಿ ಜಿಲ್ಲಾಡಳಿತವು ನಿರ್ಧಾರ ತೆಗೆದುಕೊಂಡಿತ್ತು” ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿದೆ.

ಇದನ್ನೂ ಓದಿ: ಬಹುಜನರಿಗೆ ಬಂದೂಕು ನೀಡಿ: ಹತ್ರಾಸ್‌ಗೆ ಹೊರಟ ಭೀಮ್ ಆರ್ಮಿ ಮುಖ್ಯಸ್ಥ ಆಜಾದ್

“ಕೆಲವು ಪಟ್ಟಭದ್ರ ಹಿತಾಸಕ್ತಿಗಳಿಂದ ಉಂಟಾಗುವ ಯೋಜಿತ ಜಾತಿ ಸಂಘರ್ಷವನ್ನು ತಪ್ಪಿಸಲು ಮಾತ್ರವೆ ಶವಸಂಸ್ಕಾರವನ್ನು ತರಾತುರಿಯಲ್ಲಿ ಮಾಡಲಾಗಿತ್ತೇ ಹೊರತು, ಯಾವುದೇ ಕೆಟ್ಟ ಉದ್ದೇಶವಿಲ್ಲ” ಎಂದು ಅದು ನ್ಯಾಯಾಲಯಕ್ಕೆ ತಿಳಿಸಿದೆ.

ಕಳೆದ ಮಂಗಳವಾರ ಕುಟುಂಬದ ಅನುಪಸ್ಥಿತಿಯಲ್ಲಿ ಪೊಲೀಸರು ದಲಿತ ಯುವತಿಯ ದೇಹವನ್ನು ಸುಟ್ಟಿದ್ದು ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದೆ. ಯುಪಿ ಸರ್ಕಾರ ಸುಪ್ರೀಂನಲ್ಲಿ ಸಲ್ಲಿಸಿರುವ ಅಫಿಡವಿಡ್‌ಗೆ ವಿರುದ್ಧವಾಗಿ ಸಂತ್ರಸ್ತ ಕುಟುಂಬವು ಶವ ನೀಡುವಂತೆ ಗೋಗರೆಯುತ್ತಿರುವ ಮತ್ತು ಹತ್ರಾಸ್ ಜಿಲ್ಲಾಧಿಕಾರಿ ಸಂತ್ರಸ್ತೆಗೆ ತಂದೆಗೆ ಧಮಕಿ ಹಾಕುತ್ತಿರುವ ವಿಡಿಯೋಗಳು ವೈರಲ್ ಆಗಿದ್ದವು.

ಸೆಪ್ಟೆಂಬರ್ 14 ರಂದು ತನ್ನ ಗ್ರಾಮದ ನಾಲ್ಕು ಮೇಲ್ಜಾತಿಯವರಿಂದ ಹಲ್ಲೆ ಮತ್ತು ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಗಂಭೀರ ಗಾಯಗಳಿಂದಾಗಿ ದಲಿತ ಯುವತಿ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಇದರ ನಂತರ ಯುಪಿ ಪೊಲೀಸರು ಯುವತಿಯ ಶವವನ್ನು ತೆಗೆದುಕೊಂಡು ಹತ್ರಾಸ್‌ಗೆ ಕೊಂಡೊಯ್ದಿದ್ದರು, ಶವವನ್ನು ಮನೆಗೆ ಕೊಂಡೊಯ್ಯಲು ಅನುಮತಿ ನೀಡುವಂತೆ ಆಕೆಯ ಕುಟುಂಬ ಪರಿಪರಿಯಾಗಿ ಬೇಡಿಕೊಂಡರು ಕೂಡಾ ಅದಕ್ಕೆ ಸಮ್ಮತಿಸದ ಪೊಲೀಸರು ಮನೆಯವರನ್ನು ಬಂಧಿಸಿ ಮಧ್ಯರಾತ್ರಿಯೇ ಶವವನ್ನು ಸುಟ್ಟಿದ್ದರು. ಈ ದೃಶ್ಯವನ್ನು ರಾಷ್ಟ್ರೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿದ್ದವು.

ಇದನ್ನೂ ಓದಿ: ಹತ್ರಾಸ್‌‌ ಅತ್ಯಾಚಾರ: ಸಂತ್ರಸ್ಥೆಯ ತಂದೆಗೆ ಧಮಕಿ ಹಾಕುತ್ತಿರುವ ಜಿಲ್ಲಾಧಿಕಾರಿ ವಿಡಿಯೋ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....