Homeಮುಖಪುಟಹತ್ರಾಸ್: ಶವ ಸುಟ್ಟಿದ್ದನ್ನು ಸುಪ್ರೀಂ‌ನಲ್ಲಿ ಸಮರ್ಥಿಸಿಕೊಂಡ ಯುಪಿ ಸರ್ಕಾರ!

ಹತ್ರಾಸ್: ಶವ ಸುಟ್ಟಿದ್ದನ್ನು ಸುಪ್ರೀಂ‌ನಲ್ಲಿ ಸಮರ್ಥಿಸಿಕೊಂಡ ಯುಪಿ ಸರ್ಕಾರ!

ಯುಪಿ ಸರ್ಕಾರದ ಅಫಿಡವಿಟ್‌ಗೆ ವಿರುದ್ಧವಾಗಿ ಸಂತ್ರಸ್ತ ಕುಟುಂಬವು ಶವ ನೀಡುವಂತೆ ಗೋಗರೆಯುತ್ತಿರುವ ಮತ್ತು ಹತ್ರಾಸ್ ಜಿಲ್ಲಾಧಿಕಾರಿ ಸಂತ್ರಸ್ತೆಗೆ ತಂದೆಗೆ ಧಮಕಿ ಹಾಕುತ್ತಿರುವ ವಿಡಿಯೋಗಳು ವೈರಲ್ ಆಗಿದ್ದವು. 

- Advertisement -
- Advertisement -

ಹತ್ರಾಸ್‌‌ನಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟಿದ್ದ ದಲಿತ ಯುವತಿಯ ಶವವನ್ನು ’ರಾಜ್ಯದಲ್ಲಿ ದೊಡ್ಡ ಪ್ರಮಾಣದ ಹಿಂಸಾಚಾರ ನಡೆಯುವುದನ್ನು ತಪ್ಪಿಸುವುದಕ್ಕಾಗಿ ಬೇಕಾಗಿಯೇ’ ರಾತ್ರೋ ರಾತ್ರಿ ಸುಟ್ಟಿದ್ದೇವೆ ಎಂದು ಗುಪ್ತಚರ ಇಲಾಖೆಯ ಮಾಹಿತಿ ಉಲ್ಲೇಖಿಸಿ ಸುಪ್ರೀಂ ಕೋರ್ಟ್‌ನಲ್ಲಿ ಉತ್ತರ ಪ್ರದೇಶ ಸರ್ಕಾರ ಸಮರ್ಥನೆ ಮಾಡಿಕೊಂಡಿದೆ

ಉತ್ತರ ಪ್ರದೇಶ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ನೀಡಿದ ಅಫಿಡವಿಟ್‌ನಲ್ಲಿ, “ಬಾಬರಿ ಮಸೀದಿ ತೀರ್ಪು ಬರುತ್ತಿದ್ದರಿಂದ ಜಿಲ್ಲೆಯಲ್ಲಿ ಹೈಅಲರ್ಟ್ ಘೋಷನೆಯಾಗಿತ್ತು. ಹಾಗಾಗಿ ಮುಂಜಾನೆ 2.30 ರಲ್ಲಿ ಅಂತ್ಯಕ್ರಿಯೆ ನಡೆಸಿದ್ದೇವೆ” ಎಂದು ಸಮರ್ಥಿಸಿಕೊಂಡಿದೆ.

ಇದನ್ನೂ ಓದಿ: ಹತ್ರಾಸ್‌: ಸಂತ್ರಸ್ಥೆಯ ಗುಪ್ತಾಂಗದಲ್ಲಿ ಆಳವಾದ ಗಾಯವಿದೆ; ಫೋರೆನ್ಸಿಕ್ ವರದಿ

“ಇಡೀ ಪ್ರಕರಣಕ್ಕೆ ಜಾತಿ/ಕೋಮು ಬಣ್ಣವನ್ನು ನೀಡಲಾಗುತ್ತಿದೆ ಹಾಗೂ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಧರಣಿ ನಡೆಯುತ್ತಿರುವ ಬಗ್ಗೆ ಸೆಪ್ಟೆಂಬರ್ 29 ರ ಬೆಳಿಗ್ಗೆಯಿಂದಲೆ ಹತ್ರಾಸ್‌ನಲ್ಲಿನ ಜಿಲ್ಲಾಡಳಿತವು ಹಲವಾರು ಗುಪ್ತಚರ ಮಾಹಿತಿಯನ್ನು ಪಡೆದಿತ್ತು” ಎಂದು ಉತ್ತರ ಪ್ರದೇಶ ಹೇಳಿದೆ.

ರಾಜಕೀಯ ಪಕ್ಷಗಳ ಬೆಂಬಲಿಗರೊಂದಿಗೆ ಎರಡೂ ಸಮುದಾಯಗಳ/ಜಾತಿಗಳ ಲಕ್ಷಾಂತರ ಪ್ರತಿಭಟನಾಕಾರರು ಹಾಗೂ ಮಾಧ್ಯಮಗಳು ಮರುದಿನ ಬೆಳಿಗ್ಗೆ ಹಳ್ಳಿಯಲ್ಲಿ ಒಟ್ಟುಗೂಡುತ್ತಾರೆ ಎಂಬ ಮಾಹಿತಿ ಸರ್ಕಾರಕ್ಕೆ ಲಭಿಸಿತ್ತು ಮತ್ತು ಇದು ಹಿಂಸಾಚಾರಕ್ಕೆ ಹಾಗೂ ಕಾನೂನು ಸುವ್ಯವಸ್ಥೆಗೆ ದಕ್ಕೆ ತರಬಹುದಾಗಿತ್ತು ಎಂದು ಸರ್ಕಾರ ಹೇಳಿದೆ.

ಅಷ್ಟೇ ಅಲ್ಲದೆ ಬಾಬ್ರಿ ಮಸೀದಿ ತೀರ್ಪು ಮತ್ತು ಕೊರೊನಾ ವೈರಸ್ ಸುರಕ್ಷತಾ ನಿಯಮಗಳಿಂದಾಗಿ ಅಲರ್ಟ್ ಕೂಡಾ ಇತ್ತು ಎಂದು ತನ್ನ ಅಫಿಡವಿಟ್‌ನಲ್ಲಿ ತಿಳಿಸಿದೆ.

“ಇಂತಹ ಅಸಾಮಾನ್ಯ ಮತ್ತು ತೀವ್ರವಾದ ಸನ್ನಿವೇಶದಲ್ಲಿ, ಬೆಳಿಗ್ಗೆ ನಡೆಯುವ ದೊಡ್ಡ ಪ್ರಮಾಣದ ಹಿಂಸಾಚಾರವನ್ನು ತಪ್ಪಿಸಲು ಬೇಕಾಗಿಯೇ, ಯುವತಿ ಮೃತಪಟ್ಟು ಆಕೆಯ ಮರಣೋತ್ತರ ಪರೀಕ್ಷೆಯ 20 ಗಂಟೆಗಳ ನಂತರ ಎಲ್ಲಾ ಧಾರ್ಮಿಕ ವಿಧಿಗಳೊಂದಿಗೆ ಸಂತ್ರಸ್ತ ಕುಟುಂಬದ ಮನವೊಲಿಸಿ ಜಿಲ್ಲಾಡಳಿತವು ನಿರ್ಧಾರ ತೆಗೆದುಕೊಂಡಿತ್ತು” ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿದೆ.

ಇದನ್ನೂ ಓದಿ: ಬಹುಜನರಿಗೆ ಬಂದೂಕು ನೀಡಿ: ಹತ್ರಾಸ್‌ಗೆ ಹೊರಟ ಭೀಮ್ ಆರ್ಮಿ ಮುಖ್ಯಸ್ಥ ಆಜಾದ್

“ಕೆಲವು ಪಟ್ಟಭದ್ರ ಹಿತಾಸಕ್ತಿಗಳಿಂದ ಉಂಟಾಗುವ ಯೋಜಿತ ಜಾತಿ ಸಂಘರ್ಷವನ್ನು ತಪ್ಪಿಸಲು ಮಾತ್ರವೆ ಶವಸಂಸ್ಕಾರವನ್ನು ತರಾತುರಿಯಲ್ಲಿ ಮಾಡಲಾಗಿತ್ತೇ ಹೊರತು, ಯಾವುದೇ ಕೆಟ್ಟ ಉದ್ದೇಶವಿಲ್ಲ” ಎಂದು ಅದು ನ್ಯಾಯಾಲಯಕ್ಕೆ ತಿಳಿಸಿದೆ.

ಕಳೆದ ಮಂಗಳವಾರ ಕುಟುಂಬದ ಅನುಪಸ್ಥಿತಿಯಲ್ಲಿ ಪೊಲೀಸರು ದಲಿತ ಯುವತಿಯ ದೇಹವನ್ನು ಸುಟ್ಟಿದ್ದು ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದೆ. ಯುಪಿ ಸರ್ಕಾರ ಸುಪ್ರೀಂನಲ್ಲಿ ಸಲ್ಲಿಸಿರುವ ಅಫಿಡವಿಡ್‌ಗೆ ವಿರುದ್ಧವಾಗಿ ಸಂತ್ರಸ್ತ ಕುಟುಂಬವು ಶವ ನೀಡುವಂತೆ ಗೋಗರೆಯುತ್ತಿರುವ ಮತ್ತು ಹತ್ರಾಸ್ ಜಿಲ್ಲಾಧಿಕಾರಿ ಸಂತ್ರಸ್ತೆಗೆ ತಂದೆಗೆ ಧಮಕಿ ಹಾಕುತ್ತಿರುವ ವಿಡಿಯೋಗಳು ವೈರಲ್ ಆಗಿದ್ದವು.

ಸೆಪ್ಟೆಂಬರ್ 14 ರಂದು ತನ್ನ ಗ್ರಾಮದ ನಾಲ್ಕು ಮೇಲ್ಜಾತಿಯವರಿಂದ ಹಲ್ಲೆ ಮತ್ತು ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಗಂಭೀರ ಗಾಯಗಳಿಂದಾಗಿ ದಲಿತ ಯುವತಿ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಇದರ ನಂತರ ಯುಪಿ ಪೊಲೀಸರು ಯುವತಿಯ ಶವವನ್ನು ತೆಗೆದುಕೊಂಡು ಹತ್ರಾಸ್‌ಗೆ ಕೊಂಡೊಯ್ದಿದ್ದರು, ಶವವನ್ನು ಮನೆಗೆ ಕೊಂಡೊಯ್ಯಲು ಅನುಮತಿ ನೀಡುವಂತೆ ಆಕೆಯ ಕುಟುಂಬ ಪರಿಪರಿಯಾಗಿ ಬೇಡಿಕೊಂಡರು ಕೂಡಾ ಅದಕ್ಕೆ ಸಮ್ಮತಿಸದ ಪೊಲೀಸರು ಮನೆಯವರನ್ನು ಬಂಧಿಸಿ ಮಧ್ಯರಾತ್ರಿಯೇ ಶವವನ್ನು ಸುಟ್ಟಿದ್ದರು. ಈ ದೃಶ್ಯವನ್ನು ರಾಷ್ಟ್ರೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿದ್ದವು.

ಇದನ್ನೂ ಓದಿ: ಹತ್ರಾಸ್‌‌ ಅತ್ಯಾಚಾರ: ಸಂತ್ರಸ್ಥೆಯ ತಂದೆಗೆ ಧಮಕಿ ಹಾಕುತ್ತಿರುವ ಜಿಲ್ಲಾಧಿಕಾರಿ ವಿಡಿಯೋ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...