Homeಮುಖಪುಟಹತ್ರಾಸ್‌: ಸಂತ್ರಸ್ಥೆಯ ಗುಪ್ತಾಂಗದಲ್ಲಿ ಆಳವಾದ ಗಾಯವಿದೆ; ಫೋರೆನ್ಸಿಕ್ ವರದಿ

ಹತ್ರಾಸ್‌: ಸಂತ್ರಸ್ಥೆಯ ಗುಪ್ತಾಂಗದಲ್ಲಿ ಆಳವಾದ ಗಾಯವಿದೆ; ಫೋರೆನ್ಸಿಕ್ ವರದಿ

ಫೋರೆನ್ಸಿಕ್ ವರದಿ ಶನಿವಾರ ಬಂದರೂ ಮುಖ್ಯಮಂತ್ರಿ ಆದಿತ್ಯನಾಥ್ ನೇತೃತ್ವದ ಬಿಜೆಪಿ‌ ಸರ್ಕಾರ ವರದಿಯನ್ನು ಇನ್ನೂ ಬಹಿರಂಗ ಪಡಿಸಿಲ್ಲ.

- Advertisement -
- Advertisement -

ಹತ್ರಾಸ್‌‌ನಲ್ಲಿ ಅತ್ಯಾಚಾರಕ್ಕೆ ಒಳಗಾದ ದಲಿತ ಯುವತಿಯ ಗುಪ್ತಾಂಗದಲ್ಲಿ ಎರಡು ಆಳವಾದ ಗಾಯಗಳಾಗಿವೆ ಎಂದು ವಿಧಿವಿಜ್ಞಾನ ಪ್ರಯೋಗಾಲಯ(ಫೋರೆನ್ಸಿಕ್)ವು ದೃಡಪಡಿಸಿದೆ. ಅಷ್ಟೇ ಅಲ್ಲದೆ ಹಲವಾರು ಅಧಿಕಾರಿಗಳು ಕೂಡಾ ಯುವತಿಯು ಅತ್ಯಾಚಾರಕ್ಕೆ ಒಳಗಾಗಿರುವ ಸಾಧ್ಯತೆಯನ್ನು ಬಹಿರಂಗವಾಗಿ ಹೇಳಿದ್ದಾರೆ.

“ಆಗ್ರಾದ ಫೋರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿಯ ವರದಿಯು ಶನಿವಾರ ಸಂಜೆ ಬಂದಿದ್ದು, ಆಕೆಯ ಗುಪ್ತಾಂಗದಲ್ಲಿ ಎರಡು ಆಳವಾದ ಗಾಯಗಳನ್ನು ದೃಡಪಡಿಸಿದೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾಗಿ ’’ದಿ ಟೆಲಿಗ್ರಾಫ್‌” ವರದಿ ಮಾಡಿದೆ.

ಇದನ್ನೂ ಓದಿ: ಅಡೆತಡೆ ದಾಟಿ ಹತ್ರಾಸ್ ತಲುಪಿದ ಭೀಮ್‌ ಆರ್ಮಿ ಆಜಾದ್‌ಗೆ ಠಾಕೂರ್ ಯುವಕರಿಂದ ಬಹಿರಂಗ ಬೆದರಿಕೆ

“ಆಂತರಿಕ ಆಕ್ರಮಣವಿಲ್ಲದೆ ಈ ಗಾಯಗಳಿರಲು ಸಾಧ್ಯವಿಲ್ಲ. ವರದಿಯು ಅತ್ಯಾಚಾರದ ಬಗ್ಗೆ ಮೌನವಾಗಿದೆಯಾದರೂ, ಗಾಯಗಳು ಯುವತಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವುದನ್ನು ಸೂಚಿಸುತ್ತದೆ” ಎಂದು ಅವರು ಹೇಳಿದ್ದಾರೆ.

“ಯುವತಿಯ ಅಂಗಾಂಗಗಳಿಗೆ ಗಾಯಗಳಾಗಿದೆ ಎಂಬುವುದನ್ನು ಪರೀಕ್ಷಿಸುವುದು ಮಾತ್ರ ಲ್ಯಾಬ್‌ನ ಆದೇಶ, ಅತ್ಯಾಚಾರ ನಡೆದಿದೆಯೆ ಎಂಬುವುದನ್ನು ಸೂಚಿಸುವುದಲ್ಲ” ಎಂದು ಅಧಿಕಾರಿ ಹೇಳಿದ್ದಾರೆ. ಆದರೆ ಮುಖ್ಯಮಂತ್ರಿ ಆದಿತ್ಯನಾಥ್‌ ನೇತೃತ್ವದ ರಾಜ್ಯ ಸರ್ಕಾರ ಈ ವರದಿಯನ್ನು ಇನ್ನೂ ಬಹಿರಂಗಪಡಿಸಿಲ್ಲ.

“ದೆಹಲಿಯ ಸಫ್ಡರ್ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸುವ ಮೊದಲು ಯುವತಿಗೆ ಅಲಿಗಡ್‌‌ನ ಜೆಎನ್ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗಿತ್ತು, ಆದರೆ ಅಲ್ಲಿನ ವೈದ್ಯಕೀಯ ವರದಿಯು ಈ ಗಾಯದ ಬಗ್ಗೆ ಉಲ್ಲೇಖಿಸಿಲ್ಲ” ಎಂದು ಗೃಹ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

 “ಸಫ್ದರ್ಜಂಗ್ ಆಸ್ಪತ್ರೆ ಮರಣೋತ್ತರ ವರದಿಯು ಯುವತಿಯ ಬೆನ್ನುಹುರಿಯ ಗಾಯವೇ ಸಾವಿಗೆ ಕಾರಣ ಎಂದು ಹೇಳಿದೆ” ಎಂದು ಅವರು ತಿಳಿಸಿದ್ದಾರೆ.

“ಸಾಮೂಹಿಕ ಅತ್ಯಾಚಾರ ನಡೆದಿರುವುದನ್ನು ಸ್ವತಃ ಸಂತ್ರಸ್ತೆ ಹೇಳಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಹಿಂದೆ ನಾಲ್ವರು ಆರೋಪಿಗಳಲ್ಲಿ ಒಬ್ಬನಾದ ರವಿಯಿಂದ ಲೈಂಗಿಕ ದೌರ್ಜನ್ಯದಿಂದ ತಾನು ತಪ್ಪಿಸಿಕೊಂಡಿದ್ದೆ ಎಂದು ಯುವತಿ ಹೇಳಿದ್ದರು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣದ ಆರೋಪಿಗಳು ಈಗ ‘ಬಿಂಬಿಸಿರುವಷ್ಟು ತಪ್ಪಿತಸ್ಥರಲ್ಲ’: ಬಿಜೆಪಿ ಮುಖಂಡ

ವೈದ್ಯಕೀಯ ಕಾಲೇಜಿನ ವರದಿ ಮತ್ತು ಮರಣೋತ್ತರ ಪರೀಕ್ಷೆಯು ಅತ್ಯಾಚಾರ, ಗುಪ್ತಾಂಗದಲ್ಲಿ ಗಾಯಗಳು ಮತ್ತು ವೀರ್ಯ ಇರುವಿಕೆಯನ್ನು ದೃಡೀಕರಿಸಿಲ್ಲ ಅಥವಾ ನಿರಾಕರಿಸಿಯೂ ಇಲ್ಲವಾದರೂ, ಹಿರಿಯ ಅಧಿಕಾರಿಗಳು ಮತ್ತು ರಾಜಕಾರಣಿಗಳು ಅತ್ಯಾಚಾರದ ಸಾಧ್ಯತೆಯನ್ನು ಇಲ್ಲವಾಗಿಸಲು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಕಳೆದ ಗುರುವಾರ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಸಂತ್ರಸ್ಥೆಯ ಗುಪ್ತಾಂಗದಲ್ಲಿ ವೀರ್ಯಗಳು ಕಂಡುಬಂದಿಲ್ಲ ಎಂದು ಹೇಳಿದ್ದರು.

ಅಷ್ಟೇ ಅಲ್ಲದೆ ಹತ್ರಾಸ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರವೀಣ್ ಕುಮಾರ್ ಬುಧವಾರ ನೀಡಿದ ಹೇಳಿಕೆಯಲ್ಲಿ, ಸಂತ್ರಸ್ಥೆಯ ಖಾಸಗಿ ಅಂಗಾಗಳಿಗೆ ಯಾವುದೇ ಗಾಯವಾಗಿಲ್ಲ ಎಂದು ಹೇಳಿದ್ದಾರೆ.

ಪೊಲೀಸರು ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆಂದು ಹೇಳುತ್ತಿರುವ ಸಂತ್ರಸ್ತೆಯ ಕುಟುಂಬ, ಸಾರ್ವಜನಿಕ ಪ್ರತಿಭಟನೆಯ ಒತ್ತಡ ಬರುವುದಕ್ಕಿಂತ ಮೊದಲು ಅತ್ಯಾಚಾರ ನಡೆದು ಎಂಟು ದಿನಗಳವರೆಗೂ ಕೊಲೆ ಯತ್ನದ ಪ್ರಕರಣ ದಾಖಲಿಸಿ, ಸಾಮೂಹಿಕ ಅತ್ಯಾಚಾರ ಆರೋಪವನ್ನು ಸೇರಿಸಲು ನಿರಾಕರಿಸಲಾಗಿತ್ತು ಎಂದು ಆರೋಪಿಸಿದ್ದಾರೆ.

ಪ್ರಕರಣದಲ್ಲಿ ಸಾಮೂಹಿಕ ಅತ್ಯಾಚಾರ ಆರೋಪವನ್ನು ಕೈಬಿಟ್ಟು, ಆರೋಪಿಗಳ ಮೇಲೆ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಿದರೆ ಶಿಕ್ಷೆಯ ಪ್ರಮಾಣ ಕಡಿಮೆಯಾಗಲಿದೆ.

ಇದನ್ನೂ ಓದಿ: ಹತ್ರಾಸ್‌ಗೆ ಹೊರಟ SP, RLD ಮುಖಂಡರ ಮೇಲೆ ಯುಪಿ ಪೊಲೀಸರ ಅಮಾನುಷ ದಾಳಿ!

ಆದರೆ ಸಾಮೂಹಿಕ ಅತ್ಯಾಚಾರದ ಜೊತೆಗೆ ಕೊಲೆ ಹಾಗೂ ಕ್ರೂರತೆಯನ್ನು ಸೇರಿಸಿದರೆ – ಸಂತ್ರಸ್ತೆಯ ನಾಲಿಗೆಯನ್ನು ಕತ್ತರಿಸಿ ಕುತ್ತಿಗೆ ಮುರಿದಿದ್ದಾರೆ – ನ್ಯಾಯಾಲಯಗಳು ಈ ಅಪರಾಧವನ್ನು “ಅಪರೂಪದ” ಪ್ರಕರಣ ಎಂದು ಪರಿಗಣಿಸಿ ಮರಣದಂಡನೆಯನ್ನು ವಿಧಿಸುವ ಸಾಧ್ಯತೆ ಇರುತ್ತದೆ ಎಂದು ಕಾನೂನು ತಜ್ಞರು ಅಭಿಪ್ರಾಯ ಪಡುತ್ತಾರೆ.

ಆದರೆ ಆಡಳಿತ ಪಕ್ಷ ಇನ್ನೂ ಯುವತಿಯ ಮೇಲೆ ಅತ್ಯಾಚಾರ ನಡೆಸಿಲ್ಲ ಎಂದು ಪ್ರಚಾರ ಮಾಡುತ್ತಿದೆ. ಬಿಜೆಪಿ ನಾಯಕ ವಿನಯ್ ಕಟಿಯಾರ್‌, “ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದಕ್ಕೆ ಯಾವುದೇ ಪುರಾವೆಗಳಿಲ್ಲ. ಯುವತಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದಾರೆ ಎಂದು ಹೇಳುವುದು ತಪ್ಪು. ಅವರು ಬೆನ್ನುಮೂಳೆಯ ಗಾಯಗಳಿಂದ ಸಾವನ್ನಪ್ಪಿದ್ದಾರೆ” ಎಂದು ಶನಿವಾರ ಹೇಳಿದ್ದರು.

ಆದರೆ ಗೃಹ ಇಲಾಖೆಯ ಅಧಿಕಾರಿ “ಈ ಅಧಿಕಾರಿಗಳು ಮತ್ತು ರಾಜಕಾರಣಿಗಳು ಯಾವ ಆಧಾರದ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಹೇಳಿಕೊಂಡಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ಫೋರೆನ್ಸಿಕ್ ಲ್ಯಾಬ್ ಒಳಾಂಗಗಳನ್ನು ಪರೀಕ್ಷಿಸಲು ಮತ್ತು ವರದಿಯನ್ನು ಕಳುಹಿಸಲು ತೆಗೆದುಕೊಂಡ ಮೂರು ದಿನಗಳವರೆಗೆಯಾದರೂ ಕಾಯಬಹುದಿತ್ತು ” ಎಂದು ಹೇಳಿದ್ದಾರೆ.

ವಿಡಿಯೋ ನೋಡಿ: ಹತ್ರಾಸ್‌ ಘಟನೆಯಲ್ಲಿ ಬಿಜೆಪಿಯ ಮಹಿಳಾ ನಾಯಕರ ಬಾಯಿ ಬಿದ್ದೋಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...