Homeಮುಖಪುಟಹತ್ರಾಸ್‌: ಸಂತ್ರಸ್ಥೆಯ ಗುಪ್ತಾಂಗದಲ್ಲಿ ಆಳವಾದ ಗಾಯವಿದೆ; ಫೋರೆನ್ಸಿಕ್ ವರದಿ

ಹತ್ರಾಸ್‌: ಸಂತ್ರಸ್ಥೆಯ ಗುಪ್ತಾಂಗದಲ್ಲಿ ಆಳವಾದ ಗಾಯವಿದೆ; ಫೋರೆನ್ಸಿಕ್ ವರದಿ

ಫೋರೆನ್ಸಿಕ್ ವರದಿ ಶನಿವಾರ ಬಂದರೂ ಮುಖ್ಯಮಂತ್ರಿ ಆದಿತ್ಯನಾಥ್ ನೇತೃತ್ವದ ಬಿಜೆಪಿ‌ ಸರ್ಕಾರ ವರದಿಯನ್ನು ಇನ್ನೂ ಬಹಿರಂಗ ಪಡಿಸಿಲ್ಲ.

- Advertisement -
- Advertisement -

ಹತ್ರಾಸ್‌‌ನಲ್ಲಿ ಅತ್ಯಾಚಾರಕ್ಕೆ ಒಳಗಾದ ದಲಿತ ಯುವತಿಯ ಗುಪ್ತಾಂಗದಲ್ಲಿ ಎರಡು ಆಳವಾದ ಗಾಯಗಳಾಗಿವೆ ಎಂದು ವಿಧಿವಿಜ್ಞಾನ ಪ್ರಯೋಗಾಲಯ(ಫೋರೆನ್ಸಿಕ್)ವು ದೃಡಪಡಿಸಿದೆ. ಅಷ್ಟೇ ಅಲ್ಲದೆ ಹಲವಾರು ಅಧಿಕಾರಿಗಳು ಕೂಡಾ ಯುವತಿಯು ಅತ್ಯಾಚಾರಕ್ಕೆ ಒಳಗಾಗಿರುವ ಸಾಧ್ಯತೆಯನ್ನು ಬಹಿರಂಗವಾಗಿ ಹೇಳಿದ್ದಾರೆ.

“ಆಗ್ರಾದ ಫೋರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿಯ ವರದಿಯು ಶನಿವಾರ ಸಂಜೆ ಬಂದಿದ್ದು, ಆಕೆಯ ಗುಪ್ತಾಂಗದಲ್ಲಿ ಎರಡು ಆಳವಾದ ಗಾಯಗಳನ್ನು ದೃಡಪಡಿಸಿದೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾಗಿ ’’ದಿ ಟೆಲಿಗ್ರಾಫ್‌” ವರದಿ ಮಾಡಿದೆ.

ಇದನ್ನೂ ಓದಿ: ಅಡೆತಡೆ ದಾಟಿ ಹತ್ರಾಸ್ ತಲುಪಿದ ಭೀಮ್‌ ಆರ್ಮಿ ಆಜಾದ್‌ಗೆ ಠಾಕೂರ್ ಯುವಕರಿಂದ ಬಹಿರಂಗ ಬೆದರಿಕೆ

“ಆಂತರಿಕ ಆಕ್ರಮಣವಿಲ್ಲದೆ ಈ ಗಾಯಗಳಿರಲು ಸಾಧ್ಯವಿಲ್ಲ. ವರದಿಯು ಅತ್ಯಾಚಾರದ ಬಗ್ಗೆ ಮೌನವಾಗಿದೆಯಾದರೂ, ಗಾಯಗಳು ಯುವತಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವುದನ್ನು ಸೂಚಿಸುತ್ತದೆ” ಎಂದು ಅವರು ಹೇಳಿದ್ದಾರೆ.

“ಯುವತಿಯ ಅಂಗಾಂಗಗಳಿಗೆ ಗಾಯಗಳಾಗಿದೆ ಎಂಬುವುದನ್ನು ಪರೀಕ್ಷಿಸುವುದು ಮಾತ್ರ ಲ್ಯಾಬ್‌ನ ಆದೇಶ, ಅತ್ಯಾಚಾರ ನಡೆದಿದೆಯೆ ಎಂಬುವುದನ್ನು ಸೂಚಿಸುವುದಲ್ಲ” ಎಂದು ಅಧಿಕಾರಿ ಹೇಳಿದ್ದಾರೆ. ಆದರೆ ಮುಖ್ಯಮಂತ್ರಿ ಆದಿತ್ಯನಾಥ್‌ ನೇತೃತ್ವದ ರಾಜ್ಯ ಸರ್ಕಾರ ಈ ವರದಿಯನ್ನು ಇನ್ನೂ ಬಹಿರಂಗಪಡಿಸಿಲ್ಲ.

“ದೆಹಲಿಯ ಸಫ್ಡರ್ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸುವ ಮೊದಲು ಯುವತಿಗೆ ಅಲಿಗಡ್‌‌ನ ಜೆಎನ್ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗಿತ್ತು, ಆದರೆ ಅಲ್ಲಿನ ವೈದ್ಯಕೀಯ ವರದಿಯು ಈ ಗಾಯದ ಬಗ್ಗೆ ಉಲ್ಲೇಖಿಸಿಲ್ಲ” ಎಂದು ಗೃಹ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

 “ಸಫ್ದರ್ಜಂಗ್ ಆಸ್ಪತ್ರೆ ಮರಣೋತ್ತರ ವರದಿಯು ಯುವತಿಯ ಬೆನ್ನುಹುರಿಯ ಗಾಯವೇ ಸಾವಿಗೆ ಕಾರಣ ಎಂದು ಹೇಳಿದೆ” ಎಂದು ಅವರು ತಿಳಿಸಿದ್ದಾರೆ.

“ಸಾಮೂಹಿಕ ಅತ್ಯಾಚಾರ ನಡೆದಿರುವುದನ್ನು ಸ್ವತಃ ಸಂತ್ರಸ್ತೆ ಹೇಳಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಹಿಂದೆ ನಾಲ್ವರು ಆರೋಪಿಗಳಲ್ಲಿ ಒಬ್ಬನಾದ ರವಿಯಿಂದ ಲೈಂಗಿಕ ದೌರ್ಜನ್ಯದಿಂದ ತಾನು ತಪ್ಪಿಸಿಕೊಂಡಿದ್ದೆ ಎಂದು ಯುವತಿ ಹೇಳಿದ್ದರು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣದ ಆರೋಪಿಗಳು ಈಗ ‘ಬಿಂಬಿಸಿರುವಷ್ಟು ತಪ್ಪಿತಸ್ಥರಲ್ಲ’: ಬಿಜೆಪಿ ಮುಖಂಡ

ವೈದ್ಯಕೀಯ ಕಾಲೇಜಿನ ವರದಿ ಮತ್ತು ಮರಣೋತ್ತರ ಪರೀಕ್ಷೆಯು ಅತ್ಯಾಚಾರ, ಗುಪ್ತಾಂಗದಲ್ಲಿ ಗಾಯಗಳು ಮತ್ತು ವೀರ್ಯ ಇರುವಿಕೆಯನ್ನು ದೃಡೀಕರಿಸಿಲ್ಲ ಅಥವಾ ನಿರಾಕರಿಸಿಯೂ ಇಲ್ಲವಾದರೂ, ಹಿರಿಯ ಅಧಿಕಾರಿಗಳು ಮತ್ತು ರಾಜಕಾರಣಿಗಳು ಅತ್ಯಾಚಾರದ ಸಾಧ್ಯತೆಯನ್ನು ಇಲ್ಲವಾಗಿಸಲು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಕಳೆದ ಗುರುವಾರ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಸಂತ್ರಸ್ಥೆಯ ಗುಪ್ತಾಂಗದಲ್ಲಿ ವೀರ್ಯಗಳು ಕಂಡುಬಂದಿಲ್ಲ ಎಂದು ಹೇಳಿದ್ದರು.

ಅಷ್ಟೇ ಅಲ್ಲದೆ ಹತ್ರಾಸ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರವೀಣ್ ಕುಮಾರ್ ಬುಧವಾರ ನೀಡಿದ ಹೇಳಿಕೆಯಲ್ಲಿ, ಸಂತ್ರಸ್ಥೆಯ ಖಾಸಗಿ ಅಂಗಾಗಳಿಗೆ ಯಾವುದೇ ಗಾಯವಾಗಿಲ್ಲ ಎಂದು ಹೇಳಿದ್ದಾರೆ.

ಪೊಲೀಸರು ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆಂದು ಹೇಳುತ್ತಿರುವ ಸಂತ್ರಸ್ತೆಯ ಕುಟುಂಬ, ಸಾರ್ವಜನಿಕ ಪ್ರತಿಭಟನೆಯ ಒತ್ತಡ ಬರುವುದಕ್ಕಿಂತ ಮೊದಲು ಅತ್ಯಾಚಾರ ನಡೆದು ಎಂಟು ದಿನಗಳವರೆಗೂ ಕೊಲೆ ಯತ್ನದ ಪ್ರಕರಣ ದಾಖಲಿಸಿ, ಸಾಮೂಹಿಕ ಅತ್ಯಾಚಾರ ಆರೋಪವನ್ನು ಸೇರಿಸಲು ನಿರಾಕರಿಸಲಾಗಿತ್ತು ಎಂದು ಆರೋಪಿಸಿದ್ದಾರೆ.

ಪ್ರಕರಣದಲ್ಲಿ ಸಾಮೂಹಿಕ ಅತ್ಯಾಚಾರ ಆರೋಪವನ್ನು ಕೈಬಿಟ್ಟು, ಆರೋಪಿಗಳ ಮೇಲೆ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಿದರೆ ಶಿಕ್ಷೆಯ ಪ್ರಮಾಣ ಕಡಿಮೆಯಾಗಲಿದೆ.

ಇದನ್ನೂ ಓದಿ: ಹತ್ರಾಸ್‌ಗೆ ಹೊರಟ SP, RLD ಮುಖಂಡರ ಮೇಲೆ ಯುಪಿ ಪೊಲೀಸರ ಅಮಾನುಷ ದಾಳಿ!

ಆದರೆ ಸಾಮೂಹಿಕ ಅತ್ಯಾಚಾರದ ಜೊತೆಗೆ ಕೊಲೆ ಹಾಗೂ ಕ್ರೂರತೆಯನ್ನು ಸೇರಿಸಿದರೆ – ಸಂತ್ರಸ್ತೆಯ ನಾಲಿಗೆಯನ್ನು ಕತ್ತರಿಸಿ ಕುತ್ತಿಗೆ ಮುರಿದಿದ್ದಾರೆ – ನ್ಯಾಯಾಲಯಗಳು ಈ ಅಪರಾಧವನ್ನು “ಅಪರೂಪದ” ಪ್ರಕರಣ ಎಂದು ಪರಿಗಣಿಸಿ ಮರಣದಂಡನೆಯನ್ನು ವಿಧಿಸುವ ಸಾಧ್ಯತೆ ಇರುತ್ತದೆ ಎಂದು ಕಾನೂನು ತಜ್ಞರು ಅಭಿಪ್ರಾಯ ಪಡುತ್ತಾರೆ.

ಆದರೆ ಆಡಳಿತ ಪಕ್ಷ ಇನ್ನೂ ಯುವತಿಯ ಮೇಲೆ ಅತ್ಯಾಚಾರ ನಡೆಸಿಲ್ಲ ಎಂದು ಪ್ರಚಾರ ಮಾಡುತ್ತಿದೆ. ಬಿಜೆಪಿ ನಾಯಕ ವಿನಯ್ ಕಟಿಯಾರ್‌, “ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದಕ್ಕೆ ಯಾವುದೇ ಪುರಾವೆಗಳಿಲ್ಲ. ಯುವತಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದಾರೆ ಎಂದು ಹೇಳುವುದು ತಪ್ಪು. ಅವರು ಬೆನ್ನುಮೂಳೆಯ ಗಾಯಗಳಿಂದ ಸಾವನ್ನಪ್ಪಿದ್ದಾರೆ” ಎಂದು ಶನಿವಾರ ಹೇಳಿದ್ದರು.

ಆದರೆ ಗೃಹ ಇಲಾಖೆಯ ಅಧಿಕಾರಿ “ಈ ಅಧಿಕಾರಿಗಳು ಮತ್ತು ರಾಜಕಾರಣಿಗಳು ಯಾವ ಆಧಾರದ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಹೇಳಿಕೊಂಡಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ಫೋರೆನ್ಸಿಕ್ ಲ್ಯಾಬ್ ಒಳಾಂಗಗಳನ್ನು ಪರೀಕ್ಷಿಸಲು ಮತ್ತು ವರದಿಯನ್ನು ಕಳುಹಿಸಲು ತೆಗೆದುಕೊಂಡ ಮೂರು ದಿನಗಳವರೆಗೆಯಾದರೂ ಕಾಯಬಹುದಿತ್ತು ” ಎಂದು ಹೇಳಿದ್ದಾರೆ.

ವಿಡಿಯೋ ನೋಡಿ: ಹತ್ರಾಸ್‌ ಘಟನೆಯಲ್ಲಿ ಬಿಜೆಪಿಯ ಮಹಿಳಾ ನಾಯಕರ ಬಾಯಿ ಬಿದ್ದೋಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...