Homeಮುಖಪುಟಹತ್ರಾಸ್‌: ಸಂತ್ರಸ್ಥೆಯ ಗುಪ್ತಾಂಗದಲ್ಲಿ ಆಳವಾದ ಗಾಯವಿದೆ; ಫೋರೆನ್ಸಿಕ್ ವರದಿ

ಹತ್ರಾಸ್‌: ಸಂತ್ರಸ್ಥೆಯ ಗುಪ್ತಾಂಗದಲ್ಲಿ ಆಳವಾದ ಗಾಯವಿದೆ; ಫೋರೆನ್ಸಿಕ್ ವರದಿ

ಫೋರೆನ್ಸಿಕ್ ವರದಿ ಶನಿವಾರ ಬಂದರೂ ಮುಖ್ಯಮಂತ್ರಿ ಆದಿತ್ಯನಾಥ್ ನೇತೃತ್ವದ ಬಿಜೆಪಿ‌ ಸರ್ಕಾರ ವರದಿಯನ್ನು ಇನ್ನೂ ಬಹಿರಂಗ ಪಡಿಸಿಲ್ಲ.

- Advertisement -
- Advertisement -

ಹತ್ರಾಸ್‌‌ನಲ್ಲಿ ಅತ್ಯಾಚಾರಕ್ಕೆ ಒಳಗಾದ ದಲಿತ ಯುವತಿಯ ಗುಪ್ತಾಂಗದಲ್ಲಿ ಎರಡು ಆಳವಾದ ಗಾಯಗಳಾಗಿವೆ ಎಂದು ವಿಧಿವಿಜ್ಞಾನ ಪ್ರಯೋಗಾಲಯ(ಫೋರೆನ್ಸಿಕ್)ವು ದೃಡಪಡಿಸಿದೆ. ಅಷ್ಟೇ ಅಲ್ಲದೆ ಹಲವಾರು ಅಧಿಕಾರಿಗಳು ಕೂಡಾ ಯುವತಿಯು ಅತ್ಯಾಚಾರಕ್ಕೆ ಒಳಗಾಗಿರುವ ಸಾಧ್ಯತೆಯನ್ನು ಬಹಿರಂಗವಾಗಿ ಹೇಳಿದ್ದಾರೆ.

“ಆಗ್ರಾದ ಫೋರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿಯ ವರದಿಯು ಶನಿವಾರ ಸಂಜೆ ಬಂದಿದ್ದು, ಆಕೆಯ ಗುಪ್ತಾಂಗದಲ್ಲಿ ಎರಡು ಆಳವಾದ ಗಾಯಗಳನ್ನು ದೃಡಪಡಿಸಿದೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾಗಿ ’’ದಿ ಟೆಲಿಗ್ರಾಫ್‌” ವರದಿ ಮಾಡಿದೆ.

ಇದನ್ನೂ ಓದಿ: ಅಡೆತಡೆ ದಾಟಿ ಹತ್ರಾಸ್ ತಲುಪಿದ ಭೀಮ್‌ ಆರ್ಮಿ ಆಜಾದ್‌ಗೆ ಠಾಕೂರ್ ಯುವಕರಿಂದ ಬಹಿರಂಗ ಬೆದರಿಕೆ

“ಆಂತರಿಕ ಆಕ್ರಮಣವಿಲ್ಲದೆ ಈ ಗಾಯಗಳಿರಲು ಸಾಧ್ಯವಿಲ್ಲ. ವರದಿಯು ಅತ್ಯಾಚಾರದ ಬಗ್ಗೆ ಮೌನವಾಗಿದೆಯಾದರೂ, ಗಾಯಗಳು ಯುವತಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವುದನ್ನು ಸೂಚಿಸುತ್ತದೆ” ಎಂದು ಅವರು ಹೇಳಿದ್ದಾರೆ.

“ಯುವತಿಯ ಅಂಗಾಂಗಗಳಿಗೆ ಗಾಯಗಳಾಗಿದೆ ಎಂಬುವುದನ್ನು ಪರೀಕ್ಷಿಸುವುದು ಮಾತ್ರ ಲ್ಯಾಬ್‌ನ ಆದೇಶ, ಅತ್ಯಾಚಾರ ನಡೆದಿದೆಯೆ ಎಂಬುವುದನ್ನು ಸೂಚಿಸುವುದಲ್ಲ” ಎಂದು ಅಧಿಕಾರಿ ಹೇಳಿದ್ದಾರೆ. ಆದರೆ ಮುಖ್ಯಮಂತ್ರಿ ಆದಿತ್ಯನಾಥ್‌ ನೇತೃತ್ವದ ರಾಜ್ಯ ಸರ್ಕಾರ ಈ ವರದಿಯನ್ನು ಇನ್ನೂ ಬಹಿರಂಗಪಡಿಸಿಲ್ಲ.

“ದೆಹಲಿಯ ಸಫ್ಡರ್ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸುವ ಮೊದಲು ಯುವತಿಗೆ ಅಲಿಗಡ್‌‌ನ ಜೆಎನ್ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗಿತ್ತು, ಆದರೆ ಅಲ್ಲಿನ ವೈದ್ಯಕೀಯ ವರದಿಯು ಈ ಗಾಯದ ಬಗ್ಗೆ ಉಲ್ಲೇಖಿಸಿಲ್ಲ” ಎಂದು ಗೃಹ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

 “ಸಫ್ದರ್ಜಂಗ್ ಆಸ್ಪತ್ರೆ ಮರಣೋತ್ತರ ವರದಿಯು ಯುವತಿಯ ಬೆನ್ನುಹುರಿಯ ಗಾಯವೇ ಸಾವಿಗೆ ಕಾರಣ ಎಂದು ಹೇಳಿದೆ” ಎಂದು ಅವರು ತಿಳಿಸಿದ್ದಾರೆ.

“ಸಾಮೂಹಿಕ ಅತ್ಯಾಚಾರ ನಡೆದಿರುವುದನ್ನು ಸ್ವತಃ ಸಂತ್ರಸ್ತೆ ಹೇಳಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಹಿಂದೆ ನಾಲ್ವರು ಆರೋಪಿಗಳಲ್ಲಿ ಒಬ್ಬನಾದ ರವಿಯಿಂದ ಲೈಂಗಿಕ ದೌರ್ಜನ್ಯದಿಂದ ತಾನು ತಪ್ಪಿಸಿಕೊಂಡಿದ್ದೆ ಎಂದು ಯುವತಿ ಹೇಳಿದ್ದರು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣದ ಆರೋಪಿಗಳು ಈಗ ‘ಬಿಂಬಿಸಿರುವಷ್ಟು ತಪ್ಪಿತಸ್ಥರಲ್ಲ’: ಬಿಜೆಪಿ ಮುಖಂಡ

ವೈದ್ಯಕೀಯ ಕಾಲೇಜಿನ ವರದಿ ಮತ್ತು ಮರಣೋತ್ತರ ಪರೀಕ್ಷೆಯು ಅತ್ಯಾಚಾರ, ಗುಪ್ತಾಂಗದಲ್ಲಿ ಗಾಯಗಳು ಮತ್ತು ವೀರ್ಯ ಇರುವಿಕೆಯನ್ನು ದೃಡೀಕರಿಸಿಲ್ಲ ಅಥವಾ ನಿರಾಕರಿಸಿಯೂ ಇಲ್ಲವಾದರೂ, ಹಿರಿಯ ಅಧಿಕಾರಿಗಳು ಮತ್ತು ರಾಜಕಾರಣಿಗಳು ಅತ್ಯಾಚಾರದ ಸಾಧ್ಯತೆಯನ್ನು ಇಲ್ಲವಾಗಿಸಲು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಕಳೆದ ಗುರುವಾರ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಸಂತ್ರಸ್ಥೆಯ ಗುಪ್ತಾಂಗದಲ್ಲಿ ವೀರ್ಯಗಳು ಕಂಡುಬಂದಿಲ್ಲ ಎಂದು ಹೇಳಿದ್ದರು.

ಅಷ್ಟೇ ಅಲ್ಲದೆ ಹತ್ರಾಸ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರವೀಣ್ ಕುಮಾರ್ ಬುಧವಾರ ನೀಡಿದ ಹೇಳಿಕೆಯಲ್ಲಿ, ಸಂತ್ರಸ್ಥೆಯ ಖಾಸಗಿ ಅಂಗಾಗಳಿಗೆ ಯಾವುದೇ ಗಾಯವಾಗಿಲ್ಲ ಎಂದು ಹೇಳಿದ್ದಾರೆ.

ಪೊಲೀಸರು ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆಂದು ಹೇಳುತ್ತಿರುವ ಸಂತ್ರಸ್ತೆಯ ಕುಟುಂಬ, ಸಾರ್ವಜನಿಕ ಪ್ರತಿಭಟನೆಯ ಒತ್ತಡ ಬರುವುದಕ್ಕಿಂತ ಮೊದಲು ಅತ್ಯಾಚಾರ ನಡೆದು ಎಂಟು ದಿನಗಳವರೆಗೂ ಕೊಲೆ ಯತ್ನದ ಪ್ರಕರಣ ದಾಖಲಿಸಿ, ಸಾಮೂಹಿಕ ಅತ್ಯಾಚಾರ ಆರೋಪವನ್ನು ಸೇರಿಸಲು ನಿರಾಕರಿಸಲಾಗಿತ್ತು ಎಂದು ಆರೋಪಿಸಿದ್ದಾರೆ.

ಪ್ರಕರಣದಲ್ಲಿ ಸಾಮೂಹಿಕ ಅತ್ಯಾಚಾರ ಆರೋಪವನ್ನು ಕೈಬಿಟ್ಟು, ಆರೋಪಿಗಳ ಮೇಲೆ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಿದರೆ ಶಿಕ್ಷೆಯ ಪ್ರಮಾಣ ಕಡಿಮೆಯಾಗಲಿದೆ.

ಇದನ್ನೂ ಓದಿ: ಹತ್ರಾಸ್‌ಗೆ ಹೊರಟ SP, RLD ಮುಖಂಡರ ಮೇಲೆ ಯುಪಿ ಪೊಲೀಸರ ಅಮಾನುಷ ದಾಳಿ!

ಆದರೆ ಸಾಮೂಹಿಕ ಅತ್ಯಾಚಾರದ ಜೊತೆಗೆ ಕೊಲೆ ಹಾಗೂ ಕ್ರೂರತೆಯನ್ನು ಸೇರಿಸಿದರೆ – ಸಂತ್ರಸ್ತೆಯ ನಾಲಿಗೆಯನ್ನು ಕತ್ತರಿಸಿ ಕುತ್ತಿಗೆ ಮುರಿದಿದ್ದಾರೆ – ನ್ಯಾಯಾಲಯಗಳು ಈ ಅಪರಾಧವನ್ನು “ಅಪರೂಪದ” ಪ್ರಕರಣ ಎಂದು ಪರಿಗಣಿಸಿ ಮರಣದಂಡನೆಯನ್ನು ವಿಧಿಸುವ ಸಾಧ್ಯತೆ ಇರುತ್ತದೆ ಎಂದು ಕಾನೂನು ತಜ್ಞರು ಅಭಿಪ್ರಾಯ ಪಡುತ್ತಾರೆ.

ಆದರೆ ಆಡಳಿತ ಪಕ್ಷ ಇನ್ನೂ ಯುವತಿಯ ಮೇಲೆ ಅತ್ಯಾಚಾರ ನಡೆಸಿಲ್ಲ ಎಂದು ಪ್ರಚಾರ ಮಾಡುತ್ತಿದೆ. ಬಿಜೆಪಿ ನಾಯಕ ವಿನಯ್ ಕಟಿಯಾರ್‌, “ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದಕ್ಕೆ ಯಾವುದೇ ಪುರಾವೆಗಳಿಲ್ಲ. ಯುವತಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದಾರೆ ಎಂದು ಹೇಳುವುದು ತಪ್ಪು. ಅವರು ಬೆನ್ನುಮೂಳೆಯ ಗಾಯಗಳಿಂದ ಸಾವನ್ನಪ್ಪಿದ್ದಾರೆ” ಎಂದು ಶನಿವಾರ ಹೇಳಿದ್ದರು.

ಆದರೆ ಗೃಹ ಇಲಾಖೆಯ ಅಧಿಕಾರಿ “ಈ ಅಧಿಕಾರಿಗಳು ಮತ್ತು ರಾಜಕಾರಣಿಗಳು ಯಾವ ಆಧಾರದ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಹೇಳಿಕೊಂಡಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ಫೋರೆನ್ಸಿಕ್ ಲ್ಯಾಬ್ ಒಳಾಂಗಗಳನ್ನು ಪರೀಕ್ಷಿಸಲು ಮತ್ತು ವರದಿಯನ್ನು ಕಳುಹಿಸಲು ತೆಗೆದುಕೊಂಡ ಮೂರು ದಿನಗಳವರೆಗೆಯಾದರೂ ಕಾಯಬಹುದಿತ್ತು ” ಎಂದು ಹೇಳಿದ್ದಾರೆ.

ವಿಡಿಯೋ ನೋಡಿ: ಹತ್ರಾಸ್‌ ಘಟನೆಯಲ್ಲಿ ಬಿಜೆಪಿಯ ಮಹಿಳಾ ನಾಯಕರ ಬಾಯಿ ಬಿದ್ದೋಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...