Homeಮುಖಪುಟಹತ್ರಾಸ್‌: ಸಂತ್ರಸ್ಥೆಯ ಗುಪ್ತಾಂಗದಲ್ಲಿ ಆಳವಾದ ಗಾಯವಿದೆ; ಫೋರೆನ್ಸಿಕ್ ವರದಿ

ಹತ್ರಾಸ್‌: ಸಂತ್ರಸ್ಥೆಯ ಗುಪ್ತಾಂಗದಲ್ಲಿ ಆಳವಾದ ಗಾಯವಿದೆ; ಫೋರೆನ್ಸಿಕ್ ವರದಿ

ಫೋರೆನ್ಸಿಕ್ ವರದಿ ಶನಿವಾರ ಬಂದರೂ ಮುಖ್ಯಮಂತ್ರಿ ಆದಿತ್ಯನಾಥ್ ನೇತೃತ್ವದ ಬಿಜೆಪಿ‌ ಸರ್ಕಾರ ವರದಿಯನ್ನು ಇನ್ನೂ ಬಹಿರಂಗ ಪಡಿಸಿಲ್ಲ.

- Advertisement -
- Advertisement -

ಹತ್ರಾಸ್‌‌ನಲ್ಲಿ ಅತ್ಯಾಚಾರಕ್ಕೆ ಒಳಗಾದ ದಲಿತ ಯುವತಿಯ ಗುಪ್ತಾಂಗದಲ್ಲಿ ಎರಡು ಆಳವಾದ ಗಾಯಗಳಾಗಿವೆ ಎಂದು ವಿಧಿವಿಜ್ಞಾನ ಪ್ರಯೋಗಾಲಯ(ಫೋರೆನ್ಸಿಕ್)ವು ದೃಡಪಡಿಸಿದೆ. ಅಷ್ಟೇ ಅಲ್ಲದೆ ಹಲವಾರು ಅಧಿಕಾರಿಗಳು ಕೂಡಾ ಯುವತಿಯು ಅತ್ಯಾಚಾರಕ್ಕೆ ಒಳಗಾಗಿರುವ ಸಾಧ್ಯತೆಯನ್ನು ಬಹಿರಂಗವಾಗಿ ಹೇಳಿದ್ದಾರೆ.

“ಆಗ್ರಾದ ಫೋರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿಯ ವರದಿಯು ಶನಿವಾರ ಸಂಜೆ ಬಂದಿದ್ದು, ಆಕೆಯ ಗುಪ್ತಾಂಗದಲ್ಲಿ ಎರಡು ಆಳವಾದ ಗಾಯಗಳನ್ನು ದೃಡಪಡಿಸಿದೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾಗಿ ’’ದಿ ಟೆಲಿಗ್ರಾಫ್‌” ವರದಿ ಮಾಡಿದೆ.

ಇದನ್ನೂ ಓದಿ: ಅಡೆತಡೆ ದಾಟಿ ಹತ್ರಾಸ್ ತಲುಪಿದ ಭೀಮ್‌ ಆರ್ಮಿ ಆಜಾದ್‌ಗೆ ಠಾಕೂರ್ ಯುವಕರಿಂದ ಬಹಿರಂಗ ಬೆದರಿಕೆ

“ಆಂತರಿಕ ಆಕ್ರಮಣವಿಲ್ಲದೆ ಈ ಗಾಯಗಳಿರಲು ಸಾಧ್ಯವಿಲ್ಲ. ವರದಿಯು ಅತ್ಯಾಚಾರದ ಬಗ್ಗೆ ಮೌನವಾಗಿದೆಯಾದರೂ, ಗಾಯಗಳು ಯುವತಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವುದನ್ನು ಸೂಚಿಸುತ್ತದೆ” ಎಂದು ಅವರು ಹೇಳಿದ್ದಾರೆ.

“ಯುವತಿಯ ಅಂಗಾಂಗಗಳಿಗೆ ಗಾಯಗಳಾಗಿದೆ ಎಂಬುವುದನ್ನು ಪರೀಕ್ಷಿಸುವುದು ಮಾತ್ರ ಲ್ಯಾಬ್‌ನ ಆದೇಶ, ಅತ್ಯಾಚಾರ ನಡೆದಿದೆಯೆ ಎಂಬುವುದನ್ನು ಸೂಚಿಸುವುದಲ್ಲ” ಎಂದು ಅಧಿಕಾರಿ ಹೇಳಿದ್ದಾರೆ. ಆದರೆ ಮುಖ್ಯಮಂತ್ರಿ ಆದಿತ್ಯನಾಥ್‌ ನೇತೃತ್ವದ ರಾಜ್ಯ ಸರ್ಕಾರ ಈ ವರದಿಯನ್ನು ಇನ್ನೂ ಬಹಿರಂಗಪಡಿಸಿಲ್ಲ.

“ದೆಹಲಿಯ ಸಫ್ಡರ್ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸುವ ಮೊದಲು ಯುವತಿಗೆ ಅಲಿಗಡ್‌‌ನ ಜೆಎನ್ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗಿತ್ತು, ಆದರೆ ಅಲ್ಲಿನ ವೈದ್ಯಕೀಯ ವರದಿಯು ಈ ಗಾಯದ ಬಗ್ಗೆ ಉಲ್ಲೇಖಿಸಿಲ್ಲ” ಎಂದು ಗೃಹ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

 “ಸಫ್ದರ್ಜಂಗ್ ಆಸ್ಪತ್ರೆ ಮರಣೋತ್ತರ ವರದಿಯು ಯುವತಿಯ ಬೆನ್ನುಹುರಿಯ ಗಾಯವೇ ಸಾವಿಗೆ ಕಾರಣ ಎಂದು ಹೇಳಿದೆ” ಎಂದು ಅವರು ತಿಳಿಸಿದ್ದಾರೆ.

“ಸಾಮೂಹಿಕ ಅತ್ಯಾಚಾರ ನಡೆದಿರುವುದನ್ನು ಸ್ವತಃ ಸಂತ್ರಸ್ತೆ ಹೇಳಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಹಿಂದೆ ನಾಲ್ವರು ಆರೋಪಿಗಳಲ್ಲಿ ಒಬ್ಬನಾದ ರವಿಯಿಂದ ಲೈಂಗಿಕ ದೌರ್ಜನ್ಯದಿಂದ ತಾನು ತಪ್ಪಿಸಿಕೊಂಡಿದ್ದೆ ಎಂದು ಯುವತಿ ಹೇಳಿದ್ದರು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣದ ಆರೋಪಿಗಳು ಈಗ ‘ಬಿಂಬಿಸಿರುವಷ್ಟು ತಪ್ಪಿತಸ್ಥರಲ್ಲ’: ಬಿಜೆಪಿ ಮುಖಂಡ

ವೈದ್ಯಕೀಯ ಕಾಲೇಜಿನ ವರದಿ ಮತ್ತು ಮರಣೋತ್ತರ ಪರೀಕ್ಷೆಯು ಅತ್ಯಾಚಾರ, ಗುಪ್ತಾಂಗದಲ್ಲಿ ಗಾಯಗಳು ಮತ್ತು ವೀರ್ಯ ಇರುವಿಕೆಯನ್ನು ದೃಡೀಕರಿಸಿಲ್ಲ ಅಥವಾ ನಿರಾಕರಿಸಿಯೂ ಇಲ್ಲವಾದರೂ, ಹಿರಿಯ ಅಧಿಕಾರಿಗಳು ಮತ್ತು ರಾಜಕಾರಣಿಗಳು ಅತ್ಯಾಚಾರದ ಸಾಧ್ಯತೆಯನ್ನು ಇಲ್ಲವಾಗಿಸಲು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಕಳೆದ ಗುರುವಾರ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಸಂತ್ರಸ್ಥೆಯ ಗುಪ್ತಾಂಗದಲ್ಲಿ ವೀರ್ಯಗಳು ಕಂಡುಬಂದಿಲ್ಲ ಎಂದು ಹೇಳಿದ್ದರು.

ಅಷ್ಟೇ ಅಲ್ಲದೆ ಹತ್ರಾಸ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರವೀಣ್ ಕುಮಾರ್ ಬುಧವಾರ ನೀಡಿದ ಹೇಳಿಕೆಯಲ್ಲಿ, ಸಂತ್ರಸ್ಥೆಯ ಖಾಸಗಿ ಅಂಗಾಗಳಿಗೆ ಯಾವುದೇ ಗಾಯವಾಗಿಲ್ಲ ಎಂದು ಹೇಳಿದ್ದಾರೆ.

ಪೊಲೀಸರು ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆಂದು ಹೇಳುತ್ತಿರುವ ಸಂತ್ರಸ್ತೆಯ ಕುಟುಂಬ, ಸಾರ್ವಜನಿಕ ಪ್ರತಿಭಟನೆಯ ಒತ್ತಡ ಬರುವುದಕ್ಕಿಂತ ಮೊದಲು ಅತ್ಯಾಚಾರ ನಡೆದು ಎಂಟು ದಿನಗಳವರೆಗೂ ಕೊಲೆ ಯತ್ನದ ಪ್ರಕರಣ ದಾಖಲಿಸಿ, ಸಾಮೂಹಿಕ ಅತ್ಯಾಚಾರ ಆರೋಪವನ್ನು ಸೇರಿಸಲು ನಿರಾಕರಿಸಲಾಗಿತ್ತು ಎಂದು ಆರೋಪಿಸಿದ್ದಾರೆ.

ಪ್ರಕರಣದಲ್ಲಿ ಸಾಮೂಹಿಕ ಅತ್ಯಾಚಾರ ಆರೋಪವನ್ನು ಕೈಬಿಟ್ಟು, ಆರೋಪಿಗಳ ಮೇಲೆ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಿದರೆ ಶಿಕ್ಷೆಯ ಪ್ರಮಾಣ ಕಡಿಮೆಯಾಗಲಿದೆ.

ಇದನ್ನೂ ಓದಿ: ಹತ್ರಾಸ್‌ಗೆ ಹೊರಟ SP, RLD ಮುಖಂಡರ ಮೇಲೆ ಯುಪಿ ಪೊಲೀಸರ ಅಮಾನುಷ ದಾಳಿ!

ಆದರೆ ಸಾಮೂಹಿಕ ಅತ್ಯಾಚಾರದ ಜೊತೆಗೆ ಕೊಲೆ ಹಾಗೂ ಕ್ರೂರತೆಯನ್ನು ಸೇರಿಸಿದರೆ – ಸಂತ್ರಸ್ತೆಯ ನಾಲಿಗೆಯನ್ನು ಕತ್ತರಿಸಿ ಕುತ್ತಿಗೆ ಮುರಿದಿದ್ದಾರೆ – ನ್ಯಾಯಾಲಯಗಳು ಈ ಅಪರಾಧವನ್ನು “ಅಪರೂಪದ” ಪ್ರಕರಣ ಎಂದು ಪರಿಗಣಿಸಿ ಮರಣದಂಡನೆಯನ್ನು ವಿಧಿಸುವ ಸಾಧ್ಯತೆ ಇರುತ್ತದೆ ಎಂದು ಕಾನೂನು ತಜ್ಞರು ಅಭಿಪ್ರಾಯ ಪಡುತ್ತಾರೆ.

ಆದರೆ ಆಡಳಿತ ಪಕ್ಷ ಇನ್ನೂ ಯುವತಿಯ ಮೇಲೆ ಅತ್ಯಾಚಾರ ನಡೆಸಿಲ್ಲ ಎಂದು ಪ್ರಚಾರ ಮಾಡುತ್ತಿದೆ. ಬಿಜೆಪಿ ನಾಯಕ ವಿನಯ್ ಕಟಿಯಾರ್‌, “ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದಕ್ಕೆ ಯಾವುದೇ ಪುರಾವೆಗಳಿಲ್ಲ. ಯುವತಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದಾರೆ ಎಂದು ಹೇಳುವುದು ತಪ್ಪು. ಅವರು ಬೆನ್ನುಮೂಳೆಯ ಗಾಯಗಳಿಂದ ಸಾವನ್ನಪ್ಪಿದ್ದಾರೆ” ಎಂದು ಶನಿವಾರ ಹೇಳಿದ್ದರು.

ಆದರೆ ಗೃಹ ಇಲಾಖೆಯ ಅಧಿಕಾರಿ “ಈ ಅಧಿಕಾರಿಗಳು ಮತ್ತು ರಾಜಕಾರಣಿಗಳು ಯಾವ ಆಧಾರದ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಹೇಳಿಕೊಂಡಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ಫೋರೆನ್ಸಿಕ್ ಲ್ಯಾಬ್ ಒಳಾಂಗಗಳನ್ನು ಪರೀಕ್ಷಿಸಲು ಮತ್ತು ವರದಿಯನ್ನು ಕಳುಹಿಸಲು ತೆಗೆದುಕೊಂಡ ಮೂರು ದಿನಗಳವರೆಗೆಯಾದರೂ ಕಾಯಬಹುದಿತ್ತು ” ಎಂದು ಹೇಳಿದ್ದಾರೆ.

ವಿಡಿಯೋ ನೋಡಿ: ಹತ್ರಾಸ್‌ ಘಟನೆಯಲ್ಲಿ ಬಿಜೆಪಿಯ ಮಹಿಳಾ ನಾಯಕರ ಬಾಯಿ ಬಿದ್ದೋಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...