ಕೊರೊನಾ ಸಾಂಕ್ರಾಮಿಕ ರೋಗ ಎಲ್ಲೆಡೆ ತನ್ನ ವ್ಯಾಪ್ತಿ ವಿಸ್ತರಿಸುತ್ತಲೇ ಇದೆ. ಜನಪ್ರತಿನಿಧಿಗಳು ಈ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಬೇಕಾಗಿದೆ. ಇಂತಹ ಪರಿಸ್ಥಿತಿಯಲ್ಲಿ ತಿಳಿ ಹೇಳಬೇಕಾದ ಶಾಸಕರೇ ಅವಘಡ ಮಾಡಿಕೊಂಡಿದ್ದಾರೆ. ಆಪ್ ಶಾಸಕ ಕುಲದೀಪ್ ಕುಮಾರ್ ಕೊರೊನಾ ಪಾಸಿಟಿವ್ ಇದ್ದರೂ ಹತ್ರಾಸ್ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿದ್ದಾರೆ.
ಹತ್ರಾಸ್ನಲ್ಲಿ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂತ್ರಸ್ತ ಕುಟುಂಬದವರಿಗೆ ಸಾಂತ್ವನ ಹೇಳಲು ರಾಜಕೀಯ ಪಕ್ಷಗಳ ಮುಖಂಡರು, ಸಂಘಟನೆಗಳು ಕೊರೊನಾ ಮುನ್ನೆಚ್ಚರಿಕೆಗಳೊಂದಿಗೆ ಹತ್ರಾಸ್ಗೆ ತೆರಳುತ್ತಿವೆ.
ಆದರೆ ಆಮ್ ಆದ್ಮಿ ಪಕ್ಷದ ಶಾಸಕ ಕುಲದೀಪ್ ಕುಮಾರ್ ಕೊರೊನಾ ಪಾಸಿಟಿವ್ ಬಂದ ಮೇಲೆ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿದ್ದಾರೆ ಎಂದು ಶಾಸಕರ ವಿರುದ್ಧ ಚಂದ್ಪಾ ಪೊಲೀಸ್ ಠಾಣೆಯಲ್ಲಿ 1897 ರ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಕೊಂಡ್ಲಿ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ.
ಇದನ್ನೂ ಓದಿ: ಹತ್ರಾಸ್: ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ 200 ಕಾರ್ಯಕರ್ತರ ವಿರುದ್ಧ FIR
ಶಾಸಕ ಕುಲದೀಪ್ ಕುಮಾರ್ ಟ್ವಿಟ್ಟರ್ ಖಾತೆಯ ಪ್ರಕಾರ, ಅವರು ಸೆಪ್ಟೆಂಬರ್ 29 ರಂದು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಅದನ್ನು ಖುದ್ದು ಅವರೇ ಟ್ವೀಟ್ ಮಾಡಿದ್ದಾರೆ. ಆದರೆ ಅಕ್ಟೋಬರ್ 4 ರಂದು ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
पिछले दो दिनों से मुझे हल्का बुख़ार होने की वजह से आज मैंने #Covid19Test कराया जिसकी रिपोर्ट postive आयी है जिसके बाद मैं घर पर #HomeIsolation में रहूँगा जो भी साथी पिछले 2-3 दिनो में मुझसे मिले है वो अपना टेस्ट ज़रूर करा ले !
— MLA Kuldeep Kumar (@KuldeepKumarAAP) September 29, 2020
ಶಾಸಕರು 14 ದಿನಗಳ ಕ್ವಾರಂಟೈನ್ನಲ್ಲಿ ಪ್ರತ್ಯೇಕವಾಗಿ ಇರಬೇಕಾಗಿತ್ತು. ಆದರೆ ಅವರು ನಿಯಮ ಉಲ್ಲಂಘಿಸಿದ್ದಾರೆ ಮತ್ತು ಅವರಿಗೆ ನೋಟಿಸ್ ಕಳುಹಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ಶಾಸಕ ಅಕ್ಟೋಬರ್ 4ರಂದು ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿ, ಅಕ್ಟೋಬರ್ 5 ರಂದು ಸಂತ್ರಸ್ತ ಕುಟುಂಬದೊಂದಿಗಿನ ವಿಡಿಯೋ ಶೇರ್ ಮಾಡಿದ್ದರು.
अभी हाथरस में पीड़ित परिवार से मिलकर लौटा हूँ ।परिवार में डर और भय का माहौल पैदा किया जा रहा है।
ये लोकतंत्र और संविधान की हत्या है।
उत्तर प्रदेश में योगी राज में क़ानून नही जंगल राज चल रहा है !#JusticeForManisha pic.twitter.com/nMs0BdCvG6— MLA Kuldeep Kumar (@KuldeepKumarAAP) October 4, 2020
ಸಂತ್ರಸ್ತ ಕುಟುಂಬದ ಭೇಟಿಗೆ ಹೋಗಿದ್ದ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು 200 ಕಾರ್ಯಕರ್ತರ ಮೇಲೆ ಕೊರೊನಾ ನಿಯಮ ಉಲ್ಲಂಘನೆ ಎಂದು ಎಫ್ಐಆರ್ ದಾಖಲಿಸಲಾಗಿತ್ತು. ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್, 400 ಮಂದಿ ಕಾರ್ಯಕರ್ತರ ವಿರುದ್ಧ ಪ್ರಸೆಕ್ಷನ್ 144 ಅನ್ನು ಉಲ್ಲಂಘಿಸಿದ್ದಕ್ಕಾಗಿ FIR ದಾಖಲಿಸಲಾಗಿದೆ.
ಸೆಪ್ಟೆಂಬರ್ 14 ರಂದು ಉತ್ತರ ಪ್ರದೇಶದ ಹತ್ರಾಸ್ನಲ್ಲಿ 19 ವರ್ಷದ ಯುವತಿಯ ಮೇಲೆ ನಾಲ್ವರು ಮೇಲ್ಜಾತಿಯ ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಸೆಪ್ಟೆಂಬರ್ 29 ರಂದು ಯುವತಿ ಸಾವನ್ನಪ್ಪಿದರು, ಸ್ಥಳೀಯ ಪೊಲೀಸರು ಮರುದಿನ ಮುಂಜಾನೆ 2.30ಕ್ಕೆ ಮೃತ ಯುವತಿಯ ದೇಹವನ್ನು ಕುಟುಂಬಕ್ಕೆ ಒಪ್ಪಿಸದೇ ಸುಟ್ಟುಹಾಕಿದ್ದರು. ತಮ್ಮ ಒಪ್ಪಿಗೆಯಿಲ್ಲದೇ ಶವಸಂಸ್ಕಾರ ಬಲವಂತವಾಗಿ ಮಾಡಲಾಯಿತು ಎಂದು ಕುಟುಂಬವು ಆರೋಪಿಸಿದೆ.