Homeಮುಖಪುಟಹತ್ರಾಸ್: ಕೊನೆಗೂ ಸಂತ್ರಸ್ತೆಯ ಮನೆ ತಲುಪಿದ ರಾಹುಲ್ ಗಾಂಧಿ-ವಿಡಿಯೋ ನೋಡಿ

ಹತ್ರಾಸ್: ಕೊನೆಗೂ ಸಂತ್ರಸ್ತೆಯ ಮನೆ ತಲುಪಿದ ರಾಹುಲ್ ಗಾಂಧಿ-ವಿಡಿಯೋ ನೋಡಿ

ಮಧ್ಯಾಹ್ನ ದೆಹಲಿಯಿಂದ ಹೊರಟಿದ್ದ ರಾಹುಲ್ ಗಾಂಧಿಯನ್ನು ಉತ್ತರ ಪ್ರದೇಶದ ಗಡಿಯಲ್ಲಿ ತಡೆಯಲಾಗಿತ್ತು.

- Advertisement -
- Advertisement -

ಸತತ ಎರಡನೆ ಬಾರಿ ಹತ್ರಾಸ್‌ಗೆ ಹೊರಟಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಕೊನೆಗೂ ಸಂತ್ರಸ್ತೆಯ ಮನೆಗೆ ತಲುಪಿದ್ದಾರೆ. ಮನೆಯ ಸುತ್ತ ಭಾರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದ್ದು, ಯಾವುದೇ ಮಾಧ್ಯಮದವರನ್ನು ಒಳಗೆ ಬಿಡುತ್ತಿಲ್ಲ ಎಂದು ವರದಿಯಾಗಿದೆ.

ಇಂದು ಮಧ್ಯಾಹ್ನ ದೆಹಲಿಯಿಂದ ಹೊರಟಿದ್ದ ರಾಹುಲ್ ಗಾಂಧಿಯನ್ನು ಉತ್ತರ ಪ್ರದೇಶದ ಗಡಿಯಲ್ಲಿ ತಡೆಯಲಾಗಿತ್ತಾದರೂ, ಸ್ವಲ್ಪ ಹೊತ್ತಿನ ನಂತರ ಅವರನ್ನು ಮುಂದಕ್ಕೆ ಪ್ರಯಾಣಿಸಲು ಅನುಮತಿಸಲಾಯಿತು. ನಾನು ಹತ್ರಾಸ್‌ನ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡುವ ಹಾಗೂ ಅವರ ನೋವು ಹಂಚಿಕೊಳ್ಳುವುದನ್ನು ಜಗತ್ತಿನ ಯಾವುದೂ ತಡೆಯಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು.

ಎರಡು ದಿನಗಳ ಹಿಂದೆಯಷ್ಟೇ ಹತ್ರಾಸ್ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಲು ಹೊರಟಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿಯನ್ನು ಉತ್ತರ ಪ್ರದೇಶದ ಪೊಲೀಸರು ತಳ್ಳಾಡಿ ಬಂಧಿಸಿದ್ದರು. ಆದರೆ ಅವರು ಇಂದು ಪಟ್ಟು ಬಿಡದೆ ಹತ್ರಾಸ್‌ಗೆ ಪ್ರಯಾಣಿಸಿದ್ದರು.

ಇದನ್ನೂ ಓದಿ: ಪಟ್ಟು ಬಿಡದೇ ಕೊನೆಗೂ ಹತ್ರಾಸ್‌ ಸಂತ್ರಸ್ತ ಕುಟುಂಬ ಭೇಟಿಗೆ ಹೊರಟ ರಾಹುಲ್, ಪ್ರಿಯಾಂಕ ಗಾಂಧಿ

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಇತರ ಮೂವರೊಂದಿಗೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಗೆ ಪ್ರಯಾಣಿಸುತ್ತಿದ್ದಾರೆ. ಮುಂದಿನ ಸೀಟಿನಲ್ಲಿ ರಾಹುಲ್ ಗಾಂಧಿ ಕುಳಿತಿದ್ದು, ಟೊಯೋಟಾ ಇನ್ನೋವಾ ಕಾರನ್ನು ಸ್ವತಃ ಪ್ರಿಯಾಂಕಾ ಗಾಂಧಿ ಚಲಾಯಿಸುತ್ತಿರುವ ಫೋಟೊಗಳನ್ನು ಎನ್‌ಡಿಟಿವಿ ಪ್ರಕಟಿಸಿತ್ತು.

ಸಿಆರ್‌ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ವಿಧಿಸಿರುವ ನಿರ್ಬಂಧಗಳನ್ನು ಪರಿಗಣಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದ ಸಂಸದರ ನಿಯೋಗದ ಐವರು ಸದಸ್ಯರಿಗೆ ಮಾತ್ರ ನೋಯ್ಡಾ ಮೂಲಕ ಹತ್ರಾಸ್‌ಗೆ ಹೋಗಲು ಅನುಮತಿ ನೀಡಲಾಗಿದೆ ಎಂದು ಗೌತಮ ಬುದ್ಧ ನಗರ ಪೊಲೀಸರು ತಿಳಿಸಿದ್ದರು.

“ಐದು ಜನರಿಗಿಂತ ಹೆಚ್ಚಿನ ಜನರಿಲ್ಲದ ಯಾವುದೇ ಗುಂಪಿಗೆ ಹತ್ರಾಸ್ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಲು ಅವಕಾಶವಿದೆ” ಎಂದು ಯುಪಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್ ಅವಸ್ಥಿ ಹೇಳಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಕುರಿತು ನೀವು ದನಿಯೆತ್ತದಿದ್ದರೆ..: ರಮ್ಯಾ ದಿವ್ಯಸ್ಪಂದನ ಮನವಿ ಮಾಡಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...