Homeಮುಖಪುಟಹತ್ರಾಸ್ ಸಂತ್ರಸ್ತ ಕುಟುಂಬದ ಭೇಟಿ: ಭೀಮ್ ಆರ್ಮಿ ಮುಖ್ಯಸ್ಥ ಆಜಾದ್‌ ಮೇಲೆ FIR

ಹತ್ರಾಸ್ ಸಂತ್ರಸ್ತ ಕುಟುಂಬದ ಭೇಟಿ: ಭೀಮ್ ಆರ್ಮಿ ಮುಖ್ಯಸ್ಥ ಆಜಾದ್‌ ಮೇಲೆ FIR

ವಿಪರ್ಯಾಸವೆಂದರೆ ಆಜಾದ್‌ಗೆ ಪೊಲೀಸರ ಸಮ್ಮುಖದಲ್ಲೇ ಬೆದರಿಕೆ ಹಾಕಿದ್ದ ಠಾಕೂರ್ ಯುವಕರ ವಿರುದ್ಧವಾಗಲಿ, ಸಂತ್ರಸ್ತ ಕುಟುಂಬದ ವಿರುದ್ಧ ಪ್ರತಿಭಟನೆ ನಡೆಸಿದ ಠಾಕೂರರ ವಿರುದ್ಧವಾಗಲಿ ಪೊಲೀಸರು ಯಾವುದೇ ಪ್ರಕರಣ ದಾಖಲಿಸಿಲ್ಲ.

- Advertisement -
- Advertisement -

ನಿನ್ನೆ ಹತ್ರಾಸ್‌ನಲ್ಲಿ ಸಂತ್ರಸ್ತೆ ಕುಟುಂಬವನ್ನು ಭೇಟಿ ಮಾಡಿದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ವಿರುದ್ಧ ಸೆಕ್ಷನ್ 144 ಅನ್ನು ಉಲ್ಲಂಘಿಸಿದ್ದಕ್ಕಾಗಿ FIR ದಾಖಲಿಸಲಾಗಿದೆ. ಸಂತ್ರಸ್ತ ಕುಟುಂಬವನ್ನು ಭೇಟಿಯಾಗಲು ಪೊಲೀಸರು ಅನುಮತಿ ನಿರಾಕರಿಸಿದ್ದ ಕಾರಣ ಚಂದ್ರಶೇಖರ್ ಆಜಾದ್ ಭಾನುವಾರ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಬೂಲ್‌ಗರಿ ಗ್ರಾಮಕ್ಕೆ ರ್‍ಯಾಲಿ ನಡೆಸಿದ್ದರು.

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಜೊತೆಗೆ ಇನ್ನೂ 400 ಮಂದಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ. ವಿಪರ್ಯಾಸವೆಂದರೆ ಆಜಾದ್‌ಗೆ ಪೊಲೀಸರ ಸಮ್ಮುಖದಲ್ಲೇ ಬೆದರಿಕೆ ಹಾಕಿದ್ದ ಠಾಕೂರ್ ಯುವಕರ ವಿರುದ್ಧವಾಗಲಿ, ಸಂತ್ರಸ್ತ ಕುಟುಂಬದ ವಿರುದ್ಧ ಪ್ರತಿಭಟನೆ ನಡೆಸಿದ ಠಾಕೂರರ ವಿರುದ್ಧವಾಗಲಿ ಪೊಲೀಸರು ಯಾವುದೇ ಪ್ರಕರಣ ದಾಖಲಿಸಿಲ್ಲ.

ಸಂತ್ರಸ್ತ ಕುಟುಂಬದ ವಿರುದ್ಧ ಠಾಕೂರರ ಪ್ರತಿಭಟನೆ.

Some people from Thakur Caste rallying in favor of rape accused in Hathras Yogi Adityanath himself is from Thakur Caste. Is that the reason the police is doing everything possible to bury all evidence of rape?

Posted by Dhruv Rathee on Sunday, October 4, 2020

ಅಲಿಗಡ್-ಹತ್ರಾಸ್ ಮಾರ್ಗದಲ್ಲಿ ಚಂದ್ರಶೇಖರ್ ಆಜಾದ್ ಮತ್ತು ಅವರ ಬೆಂಗಾವಲು ಪಡೆಯನ್ನು ಬೂಲ್‌ಗರಿಯಿಂದ 20 ಕಿ.ಮೀ ದೂರದಲ್ಲಿ ಪೊಲೀಸರು ನಿಲ್ಲಿಸಲಾಯಿತು. ಹೀಗಾಗಿ ಆಜಾದ್ ತಮ್ಮ ಅನುಯಾಯಿಗಳೊಂದಿಗೆ ಗ್ರಾಮಕ್ಕೆ ಕಾಲ್ನಡಿಗೆಯಲ್ಲಿ ಹೊರಟಿದ್ದರು.

ಇದನ್ನೂ ಓದಿ: ಹತ್ರಾಸ್‌ಗೆ ಹೊರಟ SP, RLD ಮುಖಂಡರ ಮೇಲೆ ಯುಪಿ ಪೊಲೀಸರ ಅಮಾನುಷ ದಾಳಿ!

ಚಂದ್ರಶೇಖರ್ ಅಜಾದ್‌ರನ್ನು ಪೊಲೀಸರು ಹತ್ರಾಸ್‌ಗೆ ಹೋಗದಂತೆ ಆರಂಭದಲ್ಲಿ ತಡೆದರು. ನಂತರ ಪಟ್ಟು ಬಿಡದ ಆಜಾದ್‌ರವರಿಗೆ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಲು ಅನುಮತಿ ನೀಡಿದರು.

ಬರ್ಬರ ಅತ್ಯಾಚಾರಕ್ಕೊಳಗಾಗಿ ಕೊಲೆಗೀಡಾದ 19 ವರ್ಷದ ದಲಿತ ಯುವತಿಯ ಕುಟುಂಬವನ್ನು ಕೊನೆಗೂ ಭೇಟಿಯಾದ ಆಜಾದ್ “ಮೇಲ್ಜಾತಿ ಠಾಕೂರರು ಸಭೆ ನಡೆಸಿ ಸಂತ್ರಸ್ತ ಕುಟುಂಬದ ವಿರುದ್ಧ ಹರಿಹಾಯ್ದಿದ್ದಾರೆ. ಇಂತಹ ಸಮಯದಲ್ಲಿ ಕುಟುಂಬಕ್ಕೆ ರಕ್ಷಣೆ ಬೇಕು. ಹಾಗಾಗಿ ಕೂಡಲೇ ಕೇಂದ್ರ ಸರ್ಕಾರ ವೈ ಪ್ಲಸ್ ಭದ್ರತೆ ಒದಗಿಸಬೇಕೆಂದು” ಆಗ್ರಹಿಸಿದ್ದರು. ಸರ್ಕಾರ ಭದ್ರತೆ ನೀಡದಿದ್ದರೆ ಸಂತ್ರಸ್ತರನ್ನು ತನ್ನ ಮನೆಗೆ ಕೊರೆದೊಯ್ದು ರಕ್ಷಣೆ ನೀಡುವುದಾಗಿ ಅವರು ಹೇಳಿದ್ದರು.

ಈ ನಡುವೆ ಸಂತ್ರಸ್ತೆಯ ಗ್ರಾಮಕ್ಕೆ ಭೇಟಿ ನೀಡಿದ್ದ ಚಂದ್ರಶೇಖರ್ ಆಜಾದ್‌ಗೆ ‘ಸವರ್ಣ ಜಾಗೋ’ ಹೆಸರಿನಲ್ಲಿ ಆರೋಪಿಗಳ ಪರ ಪ್ರತಿಭಟನೆ ನಡೆಸುತ್ತಿರುವ ಠಾಕೂರ್ ಯುವಕರಿಬ್ಬರು ಪೊಲೀಸರ ಸಮ್ಮುಖದಲ್ಲಿ ಬಹಿರಂಗ ಬೆದರಿಕೆ ಹಾಕಿದ್ದರು.


ಇದನ್ನೂ ಓದಿ: ಅಡೆತಡೆ ದಾಟಿ ಹತ್ರಾಸ್ ತಲುಪಿದ ಭೀಮ್‌ ಆರ್ಮಿ ಆಜಾದ್‌ಗೆ ಠಾಕೂರ್ ಯುವಕರಿಂದ ಬಹಿರಂಗ ಬೆದರಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

0
ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)...