Homeಮುಖಪುಟಹತ್ರಾಸ್‌: ಸಿದ್ದೀಕ್‌ ಕಪ್ಪನ್‌‌ರನ್ನು ಕರೆದೊಯ್ದ ಚಾಲಕನಿಗೆ ಹೈಕೋರ್ಟ್‌ನಿಂದ ಜಾಮೀನು

ಹತ್ರಾಸ್‌: ಸಿದ್ದೀಕ್‌ ಕಪ್ಪನ್‌‌ರನ್ನು ಕರೆದೊಯ್ದ ಚಾಲಕನಿಗೆ ಹೈಕೋರ್ಟ್‌ನಿಂದ ಜಾಮೀನು

- Advertisement -
- Advertisement -

2020 ರ ಅಕ್ಟೋಬರ್ 5 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಯುವತಿಯ ಅತ್ಯಾಚಾರ ನಡೆದ ಪ್ರಕರಣದ ಬಗ್ಗೆ ವರದಿಗೆ ತೆರಳಿದ್ದ ಪತ್ರಕರ್ತ ಸಿದ್ದಿಕ್ ಕಪ್ಪನ್ ಮತ್ತು ಇತರ ಇಬ್ಬರೊಂದಿಗೆ ಬಂಧಿಸಲ್ಪಟ್ಟ ಕ್ಯಾಬ್ ಚಾಲಕನಿಗೆ ಅಲಹಾಬಾದ್ ಹೈಕೋರ್ಟ್ ಮಂಗಳವಾರ ಜಾಮೀನು ನೀಡಿದೆ. ಸಾಮೂಹಿಕ ಅತ್ಯಾಚಾರಕ್ಕೊಳಗಾದ ನಂತರ ದಲಿತ ಯುವತಿ ಸಾವನ್ನಪ್ಪಿದ್ದರು.

ರಾಂಪುರ ನಿವಾಸಿ ಮೊಹಮ್ಮದ್ ಆಲಂ (33) ಅವರಿಗೆ ಜಾಮೀನು ಮಂಜೂರು ಮಾಡಿದ ನ್ಯಾಯಮೂರ್ತಿಗಳಾದ ರಮೇಶ್ ಸಿನ್ಹಾ ಮತ್ತು ಸರೋಜ್ ಯಾದವ್ ಅವರ ವಿಭಾಗೀಯ ಪೀಠವು, “ಮೇಲ್ಮನವಿದಾರರ ವಿರುದ್ಧದ ಆರೋಪಗಳನ್ನು ಪ್ರಾಥಮಿಕವಾಗಿ ನಂಬಲು ಯಾವುದೇ ಸಮಂಜಸವಾದ ಆಧಾರವಿಲ್ಲ ಎಂಬುವುದು ನಿಜ” ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಯೋತ್ಪಾದಕ ಚಟುವಟಿಕೆಗಳು ಅಥವಾ ರಾಷ್ಟ್ರದ ವಿರುದ್ಧದ ಇನ್ನಿತರ ಯಾವುದೇ ಚಟುವಟಿಕೆಗಳೊಂದಿಗೆ ಮೇಲ್ಮನವಿದಾರ ಒಳಗೊಂಡಿರುವುದು ಕಂಡುಬರುವುದಿಲ್ಲ” ಎಂದು ಪೀಠ ಹೇಳಿದೆ.

ಇದನ್ನೂ ಓದಿ: ‘ಹತ್ರಾಸ್‌ನಲ್ಲಿ ಯಾವುದೇ ಕೆಲಸ ಇರಲಿಲ್ಲ’: ಪತ್ರಕರ್ತ ಸಿದ್ದಿಕ್ ಕಪ್ಪನ್‌‌ಗೆ ಜಾಮೀನು ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

ಕ್ಯಾಬ್‌ ಚಾಲಕ ಮೊಹಮ್ಮದ್ ಆಲಂ, ಪತ್ರಕರ್ತ ಸಿದ್ದೀಕ್ ಕಪ್ಪನ್ ಮತ್ತು ಪಿಎಫ್‌ಐ ಸದಸ್ಯರಾದ ಅತಿಕುರ್ ರೆಹಮಾನ್ ಮತ್ತು ಮಸೂದ್ ಅಹ್ಮದ್ ವಿರುದ್ಧ ಯುಪಿ ಪೊಲೀಸರು ಯುಎಪಿಎ, ದೇಶದ್ರೋಹ ಮತ್ತು ಇತರ ಐಪಿಸಿ ಸೆಕ್ಷನ್‌ಗಳು ಮತ್ತು ಐಟಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆಲಂ ಅವರ ಜಾಮೀನು ಅರ್ಜಿಯನ್ನು ಈ ಹಿಂದೆ ಎನ್‌ಐಎ ವಿಶೇಷ ನ್ಯಾಯಾಲಯ ತಿರಸ್ಕರಿಸಿತ್ತು. ವಿಶೇಷ ಕಾರ್ಯಪಡೆ ಕಳೆದ ವರ್ಷ ಏಪ್ರಿಲ್‌ನಲ್ಲಿ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ಆದರೂ, ಹೈಕೋರ್ಟ್ ಆಲಂ ಪ್ರಕರಣ ಮತ್ತು ಕಪ್ಪನ್ ಪ್ರಕರಣದ ನಡುವೆ ವ್ಯತ್ಯಾಸವನ್ನು ತೋರಿಸಿದೆ. “ಈ ಆರೋಪಿ ಮೇಲ್ಮಮನವಿರರ (ಆಲಂ) ಪ್ರಕರಣವು ಸಹ ಆರೋಪಿ ಸಿದ್ದಿಕ್ ಕಪ್ಪನ್ ಪ್ರಕರಣಕ್ಕಿಂತ ಪ್ರತ್ಯೇಕವಾಗಿದೆ. ಯಾಕೆಂದರೆ ಕಪ್ಪನ್‌ ವಶದಿಂದ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವರು ಪತ್ರಿಕಾ ವರದಿಗಾರರಾಗಿದ್ದು, ಅವರ ವಶದಿಂದ ವಶಪಡಿಸಿಕೊಂಡ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್, ದೋಷಾರೋಪಣೆಯ ಲೇಖನಗಳು ಮತ್ತು ವೀಡಿಯೊ ಕ್ಲಿಪ್‌ಗಳು ಇತ್ಯಾದಿಗಳು ಕಂಡುಬಂದಿವೆ.  ಆದರೆ ಪ್ರಸ್ತುತ ಆರೋಪಿ ಮೇಲ್ಮನವಿದಾರರ (ಆಲಂ) ವಶದಿಂದ ಅಂತಹ ಯಾವುದೇ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಂಡಿಲ್ಲ ಎಂದು ಒಪ್ಪಿಕೊಳ್ಳಲಾಗಿದೆ” ಎಂದು ಹೈಕೋರ್ಟ್ ಹೇಳಿದೆ.

ಆಲಂ ಅವರನ್ನು ಪ್ರತಿನಿಧಿಸಿದ ವಕೀಲ ಅಮರಜೀತ್ ಸಿಂಗ್ ರಖ್ರಾ ಅವರು, “ಆಲಂ ಅವರು ತಮ್ಮ ಟ್ಯಾಕ್ಸಿಯಲ್ಲಿ ಪ್ರಯಾಣಿಕರನ್ನು ಅವರ ಗಮ್ಯಸ್ಥಾನಕ್ಕೆ ಸಾಗಿಸುತ್ತಿದ್ದರು” ಎಂದು ಹೇಳಿದ್ದಾರೆ. “ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾದ ಸೆಕ್ಷನ್‌ಗಳ ಅಡಿಯ ಅಪರಾಧಗಳನ್ನು ಆಲಂ ವಿರುದ್ಧ ಮಾಡಲು ಸಾಧ್ಯವಿಲ್ಲ” ಎಂದು ವಕೀಲರು ಹೇಳಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ಪಟ್ಟಿಯಲ್ಲಿದ್ದ ಜಾರ್ಖಂಡ್ ಪತ್ರಕರ್ತನ ಬಂಧನ; ದಿಟ್ಟ ವರದಿಗಾರಿಕೆಯೇ ಮುಳುವಾಯಿತೆ?

ಆಲಂ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿದ ಹೆಚ್ಚುವರಿ ಸರ್ಕಾರಿ ವಕೀಲ ಉಮೇಶ್ ಚಂದ್ರ ವರ್ಮಾ ಅವರು “ಅವರು ಬಳಸುತ್ತಿರುವ ಕಾರನ್ನು ಖರೀದಿಸಲು ಭಯೋತ್ಪಾದಕ ನಿಧಿಯಿಂದ ಪಡೆದ ಹಣವನ್ನು ಬಳಸಿರುವ ಸಾಕಷ್ಟು ಪುರಾವೆಗಳು ತನಿಖೆಯಲ್ಲಿ ಕಂಡುಬಂದಿವೆ” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...