Homeಮುಖಪುಟಹತ್ರಾಸ್‌: ಸಿದ್ದೀಕ್‌ ಕಪ್ಪನ್‌‌ರನ್ನು ಕರೆದೊಯ್ದ ಚಾಲಕನಿಗೆ ಹೈಕೋರ್ಟ್‌ನಿಂದ ಜಾಮೀನು

ಹತ್ರಾಸ್‌: ಸಿದ್ದೀಕ್‌ ಕಪ್ಪನ್‌‌ರನ್ನು ಕರೆದೊಯ್ದ ಚಾಲಕನಿಗೆ ಹೈಕೋರ್ಟ್‌ನಿಂದ ಜಾಮೀನು

- Advertisement -
- Advertisement -

2020 ರ ಅಕ್ಟೋಬರ್ 5 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಯುವತಿಯ ಅತ್ಯಾಚಾರ ನಡೆದ ಪ್ರಕರಣದ ಬಗ್ಗೆ ವರದಿಗೆ ತೆರಳಿದ್ದ ಪತ್ರಕರ್ತ ಸಿದ್ದಿಕ್ ಕಪ್ಪನ್ ಮತ್ತು ಇತರ ಇಬ್ಬರೊಂದಿಗೆ ಬಂಧಿಸಲ್ಪಟ್ಟ ಕ್ಯಾಬ್ ಚಾಲಕನಿಗೆ ಅಲಹಾಬಾದ್ ಹೈಕೋರ್ಟ್ ಮಂಗಳವಾರ ಜಾಮೀನು ನೀಡಿದೆ. ಸಾಮೂಹಿಕ ಅತ್ಯಾಚಾರಕ್ಕೊಳಗಾದ ನಂತರ ದಲಿತ ಯುವತಿ ಸಾವನ್ನಪ್ಪಿದ್ದರು.

ರಾಂಪುರ ನಿವಾಸಿ ಮೊಹಮ್ಮದ್ ಆಲಂ (33) ಅವರಿಗೆ ಜಾಮೀನು ಮಂಜೂರು ಮಾಡಿದ ನ್ಯಾಯಮೂರ್ತಿಗಳಾದ ರಮೇಶ್ ಸಿನ್ಹಾ ಮತ್ತು ಸರೋಜ್ ಯಾದವ್ ಅವರ ವಿಭಾಗೀಯ ಪೀಠವು, “ಮೇಲ್ಮನವಿದಾರರ ವಿರುದ್ಧದ ಆರೋಪಗಳನ್ನು ಪ್ರಾಥಮಿಕವಾಗಿ ನಂಬಲು ಯಾವುದೇ ಸಮಂಜಸವಾದ ಆಧಾರವಿಲ್ಲ ಎಂಬುವುದು ನಿಜ” ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಯೋತ್ಪಾದಕ ಚಟುವಟಿಕೆಗಳು ಅಥವಾ ರಾಷ್ಟ್ರದ ವಿರುದ್ಧದ ಇನ್ನಿತರ ಯಾವುದೇ ಚಟುವಟಿಕೆಗಳೊಂದಿಗೆ ಮೇಲ್ಮನವಿದಾರ ಒಳಗೊಂಡಿರುವುದು ಕಂಡುಬರುವುದಿಲ್ಲ” ಎಂದು ಪೀಠ ಹೇಳಿದೆ.

ಇದನ್ನೂ ಓದಿ: ‘ಹತ್ರಾಸ್‌ನಲ್ಲಿ ಯಾವುದೇ ಕೆಲಸ ಇರಲಿಲ್ಲ’: ಪತ್ರಕರ್ತ ಸಿದ್ದಿಕ್ ಕಪ್ಪನ್‌‌ಗೆ ಜಾಮೀನು ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

ಕ್ಯಾಬ್‌ ಚಾಲಕ ಮೊಹಮ್ಮದ್ ಆಲಂ, ಪತ್ರಕರ್ತ ಸಿದ್ದೀಕ್ ಕಪ್ಪನ್ ಮತ್ತು ಪಿಎಫ್‌ಐ ಸದಸ್ಯರಾದ ಅತಿಕುರ್ ರೆಹಮಾನ್ ಮತ್ತು ಮಸೂದ್ ಅಹ್ಮದ್ ವಿರುದ್ಧ ಯುಪಿ ಪೊಲೀಸರು ಯುಎಪಿಎ, ದೇಶದ್ರೋಹ ಮತ್ತು ಇತರ ಐಪಿಸಿ ಸೆಕ್ಷನ್‌ಗಳು ಮತ್ತು ಐಟಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆಲಂ ಅವರ ಜಾಮೀನು ಅರ್ಜಿಯನ್ನು ಈ ಹಿಂದೆ ಎನ್‌ಐಎ ವಿಶೇಷ ನ್ಯಾಯಾಲಯ ತಿರಸ್ಕರಿಸಿತ್ತು. ವಿಶೇಷ ಕಾರ್ಯಪಡೆ ಕಳೆದ ವರ್ಷ ಏಪ್ರಿಲ್‌ನಲ್ಲಿ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ಆದರೂ, ಹೈಕೋರ್ಟ್ ಆಲಂ ಪ್ರಕರಣ ಮತ್ತು ಕಪ್ಪನ್ ಪ್ರಕರಣದ ನಡುವೆ ವ್ಯತ್ಯಾಸವನ್ನು ತೋರಿಸಿದೆ. “ಈ ಆರೋಪಿ ಮೇಲ್ಮಮನವಿರರ (ಆಲಂ) ಪ್ರಕರಣವು ಸಹ ಆರೋಪಿ ಸಿದ್ದಿಕ್ ಕಪ್ಪನ್ ಪ್ರಕರಣಕ್ಕಿಂತ ಪ್ರತ್ಯೇಕವಾಗಿದೆ. ಯಾಕೆಂದರೆ ಕಪ್ಪನ್‌ ವಶದಿಂದ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವರು ಪತ್ರಿಕಾ ವರದಿಗಾರರಾಗಿದ್ದು, ಅವರ ವಶದಿಂದ ವಶಪಡಿಸಿಕೊಂಡ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್, ದೋಷಾರೋಪಣೆಯ ಲೇಖನಗಳು ಮತ್ತು ವೀಡಿಯೊ ಕ್ಲಿಪ್‌ಗಳು ಇತ್ಯಾದಿಗಳು ಕಂಡುಬಂದಿವೆ.  ಆದರೆ ಪ್ರಸ್ತುತ ಆರೋಪಿ ಮೇಲ್ಮನವಿದಾರರ (ಆಲಂ) ವಶದಿಂದ ಅಂತಹ ಯಾವುದೇ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಂಡಿಲ್ಲ ಎಂದು ಒಪ್ಪಿಕೊಳ್ಳಲಾಗಿದೆ” ಎಂದು ಹೈಕೋರ್ಟ್ ಹೇಳಿದೆ.

ಆಲಂ ಅವರನ್ನು ಪ್ರತಿನಿಧಿಸಿದ ವಕೀಲ ಅಮರಜೀತ್ ಸಿಂಗ್ ರಖ್ರಾ ಅವರು, “ಆಲಂ ಅವರು ತಮ್ಮ ಟ್ಯಾಕ್ಸಿಯಲ್ಲಿ ಪ್ರಯಾಣಿಕರನ್ನು ಅವರ ಗಮ್ಯಸ್ಥಾನಕ್ಕೆ ಸಾಗಿಸುತ್ತಿದ್ದರು” ಎಂದು ಹೇಳಿದ್ದಾರೆ. “ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾದ ಸೆಕ್ಷನ್‌ಗಳ ಅಡಿಯ ಅಪರಾಧಗಳನ್ನು ಆಲಂ ವಿರುದ್ಧ ಮಾಡಲು ಸಾಧ್ಯವಿಲ್ಲ” ಎಂದು ವಕೀಲರು ಹೇಳಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ಪಟ್ಟಿಯಲ್ಲಿದ್ದ ಜಾರ್ಖಂಡ್ ಪತ್ರಕರ್ತನ ಬಂಧನ; ದಿಟ್ಟ ವರದಿಗಾರಿಕೆಯೇ ಮುಳುವಾಯಿತೆ?

ಆಲಂ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿದ ಹೆಚ್ಚುವರಿ ಸರ್ಕಾರಿ ವಕೀಲ ಉಮೇಶ್ ಚಂದ್ರ ವರ್ಮಾ ಅವರು “ಅವರು ಬಳಸುತ್ತಿರುವ ಕಾರನ್ನು ಖರೀದಿಸಲು ಭಯೋತ್ಪಾದಕ ನಿಧಿಯಿಂದ ಪಡೆದ ಹಣವನ್ನು ಬಳಸಿರುವ ಸಾಕಷ್ಟು ಪುರಾವೆಗಳು ತನಿಖೆಯಲ್ಲಿ ಕಂಡುಬಂದಿವೆ” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....