Homeಮುಖಪುಟಹತ್ರಾಸ್‌‌ ಅತ್ಯಾಚಾರ: ಸಂತ್ರಸ್ಥೆಯ ತಂದೆಗೆ ಧಮಕಿ ಹಾಕುತ್ತಿರುವ ಜಿಲ್ಲಾಧಿಕಾರಿ ವಿಡಿಯೋ ವೈರಲ್‌

ಹತ್ರಾಸ್‌‌ ಅತ್ಯಾಚಾರ: ಸಂತ್ರಸ್ಥೆಯ ತಂದೆಗೆ ಧಮಕಿ ಹಾಕುತ್ತಿರುವ ಜಿಲ್ಲಾಧಿಕಾರಿ ವಿಡಿಯೋ ವೈರಲ್‌

- Advertisement -
- Advertisement -

ಹತ್ರಾಸ್‌‌ನಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ, ಕೊಲೆ ಹಾಗೂ ನಂತರ ಯುವತಿಯ ಮೃತದೇಹವನ್ನು ಕುಟುಂಬವರಿಗೆ ನೀಡದೇ ತಾವೇ ರಾತ್ರೋರಾತ್ರಿ ಸುಟ್ಟು ಹಾಕಿದ್ದು ದೇಶದಾದ್ಯಂತ ಹಲವು ಅನುಮಾನ ಹಾಗೂ ತೀವ್ರ ಆಕ್ರೋಶಗಳಿಗೆ ಕಾರಣವಾಗಿದೆ. ಇಂತಹ ಸಮಯದಲ್ಲೇ ಹತ್ರಾಸ್ ಡಿಎಂ (ಜಿಲ್ಲಾಧಿಕಾರಿ) ಯುವತಿಯ ತಂದೆಯ ಬಳಿ ಹೋಗಿ ಹೇಳಿಕೆಯನ್ನು ಬದಲಾಯಿಸುವಂತೆ ಧಮಕಿ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.

“ತಾನು ಮುಖ್ಯಮಂತ್ರಿಯೊಂದಿಗೆ ಮಾತನಾಡಿದ್ದು, ನನ್ನ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಅವರ ಆಶ್ವಾಸನೆಯಿಂದ ನಾನು ತೃಪ್ತನಾಗಿದ್ದೇನೆ. ಜನರು ಯಾವುದೇ ರೀತಿಯ ಪ್ರತಿಭಟನೆ ಮಾಡಬೇಡಿ ಎಂದು ಮನವಿ ಮಾಡುತ್ತೇನೆ” ಎಂದು ಯುವತಿಯ ತಂದೆ ಹೇಳಿದ್ದಾಗಿ ಮಾಧ್ಯಮಗಳು ಹೇಳಿತ್ತು. ಜೊತೆಗೆ ಅವರು ಸಹಿ ಮಾಡಿದ ಪತ್ರವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

ಇದನ್ನೂ ಓದಿ: ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ಯುವತಿಯ ತಂದೆಯ ಹೇಳಿಕೆ ಎನ್ನಲಾದ ಪತ್ರ

ಆದರೆ ಹಲವಾರು ಜನರು, ಇದು ಯುವತಿಯ ತಂದೆಯನ್ನು ಬೆದರಿಸಿ ಕೊಡಿಸಿರುವ ಹೇಳಿಕೆ ಎಂದು ಅನುಮಾನ ವ್ಯಕ್ತಪಡಿಸಿದ್ದರು. ಇದೀಗ ಜಿಲ್ಲಾಧಿಕಾರಿ ಬೆದರಿಸುವ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ಜಿಲ್ಲಾಧಿಕಾರಿಯೂ ಯುವತಿಯ ತಂದೆಯೊಂದಿಗೆ, “2-3 ದಿನಗಳಲ್ಲಿ ಮಾಧ್ಯಮಗಳು ಹೊರಡುತ್ತವೆ. ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ. ನಿಮ್ಮ ಹೇಳಿಕೆಯನ್ನು ಬದಲಾಯಿಸಲು ನೀವು ಬಯಸುತ್ತೀರಾ ಎಂಬುದು ನಿಮಗೆ ಬಿಟ್ಟದ್ದು” ಎಂದು ಒತ್ತಾಯಿಸುವುದನ್ನು ಕೇಳಬಹುದಾಗಿದೆ.

Watch- District Magistrate of Hathras(an employee of UP CM Adityanath) caught on camera telling the family,'Media will…

Posted by Saahil Murli Menghani on Thursday, October 1, 2020

ಇದನ್ನು ಆಮ್ ಆದ್ಮಿ ಪಕ್ಷ ತನ್ನ ಟ್ವಿಟ್ಟರ್‌ನಲ್ಲಿ ಹಾಕಿ, “ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ತಂದೆಯ ಮೇಲೆ ಒತ್ತಡ ಹೇರಲು ಆದಿತ್ಯನಾಥ್ ಸರ್ಕಾರದ ಹತ್ರಾಸ್‌ನ ಡಿಎಂ ಬೆದರಿಕೆ ಹಾಕುತ್ತಿದ್ದಾರೆ” ಎಂದು ಬರೆದಿದೆ.

ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿ “ಸಂತ್ರಸ್ತೆಯ ಹಳ್ಳಿಗೆ ಹೋಗುವುದನ್ನು ಯುಪಿ ಸರ್ಕಾರ ಏಕೆ ತಡೆಯುತ್ತಿದೆ? ಹತ್ರಾಸ್ ಡಿಎಂ ಸಂತ್ರಸ್ತೆಯ ಕುಟುಂಬಕ್ಕೆ ಬೆದರಿಕೆ ಹಾಕುತ್ತಿದ್ದಾನೆ. ಅಲ್ಲಿಗೆ ಮಾಧ್ಯಮಗಳಿಗೆ ಹೋಗಲು ಸಾಧ್ಯವಾಗುವುದಿಲ್ಲ. ಜೊತೆಗೆ ಯುಪಿ ಸರ್ಕಾರವು ಸಂತ್ರಸ್ತೆಯ ಕುಟುಂಬಕ್ಕೆ ಬಹಿರಂಗವಾಗಿ ಬೆದರಿಕೆ ಹಾಕುತ್ತಿದ್ದಾರೆ. ಈ ಜನರು ದಬ್ಬಾಳಿಕೆಯವರು.” ಎಂದು ಕಿಡಿಕಾರಿದ್ದಾರೆ.

ಸೆಪ್ಟೆಂಬರ್ 14 ರಂದು ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್ ಎಂಬ ಹಳ್ಳಿಯಲ್ಲಿ ದಲಿತ ಯುವತಿಯನ್ನು ಸಾಮೂಹಿಕ ಅತ್ಯಾಚಾರ ಮಾಡಲಾಗಿತ್ತು. ಯುವತಿ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಗಾಯಗಳು, ಮೂಳೆ ಮುರಿತ ಸೇರಿದಂತೆ ನಾಲಿಗೆ ತುಂಡಾಗಿ ಅತ್ಯಂತ ಗಂಭೀರ ಸ್ಥಿತಿಯಲ್ಲಿ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನಲಾಗಿದೆ.

ಇದನ್ನೂ ಓದಿ: ಲಾಕಪ್ ಡೆತ್: ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಪ್ರಕರಣ ದಾಖಲು!

ವಿಡಿಯೋ ನೋಡಿ: ರಾಮನ ಭಕ್ತರು ಇಂದು ಹತ್ರಾಸ್‌ನ ದಲಿತ ಯುವತಿಯ ನಾಲಿಗೆ ಕತ್ತರಿಸಿದರು. ನಿಜವಾಗಿಯೂ ರಾಮರಾಜ್ಯ ಬಂದರೆ ಹೇಗಿರುತ್ತದೆ ಎನ್ನುವುದಕ್ಕೆ ಇದು ಉತ್ತಮ ಉದಾಹರಣೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಉತ್ತರಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಬರೆದಿದ್ದ ವಿದ್ಯಾರ್ಥಿಗಳಿಗೆ 50% ಅಂಕ: ಮರುಮೌಲ್ಯಮಾಪನ ಮಾಡಿದಾಗ ಶೂನ್ಯಕ್ಕಿಳಿದ ಅಂಕ

0
ಪರೀಕ್ಷೆಗಳಿಗೆ ಬರೆದಿರುವ ಉತ್ತರಗಳ ಗುಣಮಟ್ಟದ ಆಧಾರದಲ್ಲಿ ಅಂಕಗಳನ್ನು ನೀಡಲಾಗುತ್ತದೆ. ಆದರೆ ಉತ್ತರಪ್ರದೇಶದ  ಜೌನ್‌ಪುರದಲ್ಲಿರುವ ವೀರ್‌ ಬಹದ್ದೂರ್‌ ಸಿಂಗ್‌ ಪೂರ್ವಾಂಚಲ ವಿಶ್ವವಿದ್ಯಾಲಯದಲ್ಲಿನ ಪರೀಕ್ಷೆಯಲ್ಲಿನ ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಮತ್ತು ಕ್ರಿಕೆಟ್‌ ಆಟಗಾರರ ಹೆಸರುಗಳನ್ನು...