Homeಮುಖಪುಟಹತ್ರಾಸ್‌‌ ಅತ್ಯಾಚಾರ: ಸಂತ್ರಸ್ಥೆಯ ತಂದೆಗೆ ಧಮಕಿ ಹಾಕುತ್ತಿರುವ ಜಿಲ್ಲಾಧಿಕಾರಿ ವಿಡಿಯೋ ವೈರಲ್‌

ಹತ್ರಾಸ್‌‌ ಅತ್ಯಾಚಾರ: ಸಂತ್ರಸ್ಥೆಯ ತಂದೆಗೆ ಧಮಕಿ ಹಾಕುತ್ತಿರುವ ಜಿಲ್ಲಾಧಿಕಾರಿ ವಿಡಿಯೋ ವೈರಲ್‌

- Advertisement -
- Advertisement -

ಹತ್ರಾಸ್‌‌ನಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ, ಕೊಲೆ ಹಾಗೂ ನಂತರ ಯುವತಿಯ ಮೃತದೇಹವನ್ನು ಕುಟುಂಬವರಿಗೆ ನೀಡದೇ ತಾವೇ ರಾತ್ರೋರಾತ್ರಿ ಸುಟ್ಟು ಹಾಕಿದ್ದು ದೇಶದಾದ್ಯಂತ ಹಲವು ಅನುಮಾನ ಹಾಗೂ ತೀವ್ರ ಆಕ್ರೋಶಗಳಿಗೆ ಕಾರಣವಾಗಿದೆ. ಇಂತಹ ಸಮಯದಲ್ಲೇ ಹತ್ರಾಸ್ ಡಿಎಂ (ಜಿಲ್ಲಾಧಿಕಾರಿ) ಯುವತಿಯ ತಂದೆಯ ಬಳಿ ಹೋಗಿ ಹೇಳಿಕೆಯನ್ನು ಬದಲಾಯಿಸುವಂತೆ ಧಮಕಿ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.

“ತಾನು ಮುಖ್ಯಮಂತ್ರಿಯೊಂದಿಗೆ ಮಾತನಾಡಿದ್ದು, ನನ್ನ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಅವರ ಆಶ್ವಾಸನೆಯಿಂದ ನಾನು ತೃಪ್ತನಾಗಿದ್ದೇನೆ. ಜನರು ಯಾವುದೇ ರೀತಿಯ ಪ್ರತಿಭಟನೆ ಮಾಡಬೇಡಿ ಎಂದು ಮನವಿ ಮಾಡುತ್ತೇನೆ” ಎಂದು ಯುವತಿಯ ತಂದೆ ಹೇಳಿದ್ದಾಗಿ ಮಾಧ್ಯಮಗಳು ಹೇಳಿತ್ತು. ಜೊತೆಗೆ ಅವರು ಸಹಿ ಮಾಡಿದ ಪತ್ರವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

ಇದನ್ನೂ ಓದಿ: ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ಯುವತಿಯ ತಂದೆಯ ಹೇಳಿಕೆ ಎನ್ನಲಾದ ಪತ್ರ

ಆದರೆ ಹಲವಾರು ಜನರು, ಇದು ಯುವತಿಯ ತಂದೆಯನ್ನು ಬೆದರಿಸಿ ಕೊಡಿಸಿರುವ ಹೇಳಿಕೆ ಎಂದು ಅನುಮಾನ ವ್ಯಕ್ತಪಡಿಸಿದ್ದರು. ಇದೀಗ ಜಿಲ್ಲಾಧಿಕಾರಿ ಬೆದರಿಸುವ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ಜಿಲ್ಲಾಧಿಕಾರಿಯೂ ಯುವತಿಯ ತಂದೆಯೊಂದಿಗೆ, “2-3 ದಿನಗಳಲ್ಲಿ ಮಾಧ್ಯಮಗಳು ಹೊರಡುತ್ತವೆ. ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ. ನಿಮ್ಮ ಹೇಳಿಕೆಯನ್ನು ಬದಲಾಯಿಸಲು ನೀವು ಬಯಸುತ್ತೀರಾ ಎಂಬುದು ನಿಮಗೆ ಬಿಟ್ಟದ್ದು” ಎಂದು ಒತ್ತಾಯಿಸುವುದನ್ನು ಕೇಳಬಹುದಾಗಿದೆ.

Watch- District Magistrate of Hathras(an employee of UP CM Adityanath) caught on camera telling the family,'Media will…

Posted by Saahil Murli Menghani on Thursday, October 1, 2020

ಇದನ್ನು ಆಮ್ ಆದ್ಮಿ ಪಕ್ಷ ತನ್ನ ಟ್ವಿಟ್ಟರ್‌ನಲ್ಲಿ ಹಾಕಿ, “ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ತಂದೆಯ ಮೇಲೆ ಒತ್ತಡ ಹೇರಲು ಆದಿತ್ಯನಾಥ್ ಸರ್ಕಾರದ ಹತ್ರಾಸ್‌ನ ಡಿಎಂ ಬೆದರಿಕೆ ಹಾಕುತ್ತಿದ್ದಾರೆ” ಎಂದು ಬರೆದಿದೆ.

ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿ “ಸಂತ್ರಸ್ತೆಯ ಹಳ್ಳಿಗೆ ಹೋಗುವುದನ್ನು ಯುಪಿ ಸರ್ಕಾರ ಏಕೆ ತಡೆಯುತ್ತಿದೆ? ಹತ್ರಾಸ್ ಡಿಎಂ ಸಂತ್ರಸ್ತೆಯ ಕುಟುಂಬಕ್ಕೆ ಬೆದರಿಕೆ ಹಾಕುತ್ತಿದ್ದಾನೆ. ಅಲ್ಲಿಗೆ ಮಾಧ್ಯಮಗಳಿಗೆ ಹೋಗಲು ಸಾಧ್ಯವಾಗುವುದಿಲ್ಲ. ಜೊತೆಗೆ ಯುಪಿ ಸರ್ಕಾರವು ಸಂತ್ರಸ್ತೆಯ ಕುಟುಂಬಕ್ಕೆ ಬಹಿರಂಗವಾಗಿ ಬೆದರಿಕೆ ಹಾಕುತ್ತಿದ್ದಾರೆ. ಈ ಜನರು ದಬ್ಬಾಳಿಕೆಯವರು.” ಎಂದು ಕಿಡಿಕಾರಿದ್ದಾರೆ.

ಸೆಪ್ಟೆಂಬರ್ 14 ರಂದು ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್ ಎಂಬ ಹಳ್ಳಿಯಲ್ಲಿ ದಲಿತ ಯುವತಿಯನ್ನು ಸಾಮೂಹಿಕ ಅತ್ಯಾಚಾರ ಮಾಡಲಾಗಿತ್ತು. ಯುವತಿ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಗಾಯಗಳು, ಮೂಳೆ ಮುರಿತ ಸೇರಿದಂತೆ ನಾಲಿಗೆ ತುಂಡಾಗಿ ಅತ್ಯಂತ ಗಂಭೀರ ಸ್ಥಿತಿಯಲ್ಲಿ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನಲಾಗಿದೆ.

ಇದನ್ನೂ ಓದಿ: ಲಾಕಪ್ ಡೆತ್: ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಪ್ರಕರಣ ದಾಖಲು!

ವಿಡಿಯೋ ನೋಡಿ: ರಾಮನ ಭಕ್ತರು ಇಂದು ಹತ್ರಾಸ್‌ನ ದಲಿತ ಯುವತಿಯ ನಾಲಿಗೆ ಕತ್ತರಿಸಿದರು. ನಿಜವಾಗಿಯೂ ರಾಮರಾಜ್ಯ ಬಂದರೆ ಹೇಗಿರುತ್ತದೆ ಎನ್ನುವುದಕ್ಕೆ ಇದು ಉತ್ತಮ ಉದಾಹರಣೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಉದ್ವಿಗ್ನತೆ: ಅಂತರರಾಷ್ಟ್ರೀಯ ಕಾನೂನು ಸತ್ತಿದೆ ಎಂದ ರಷ್ಯಾ, ಯುಎನ್ಎಸ್‌ಸಿ ಪಿ-5 ಶೃಂಗಸಭೆಗೆ ಒತ್ತಾಯ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ನಡುವೆ, ಇರಾನ್ ಮೇಲೆ ಅಮೆರಿಕ-ಇಸ್ರೇಲಿ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಅಂತರರಾಷ್ಟ್ರೀಯ ಕಾನೂನು ಪರಿಣಾಮಕಾರಿಯಾಗಿ ಸತ್ತಿದೆ ಎಂದು ರಷ್ಯಾ ಹೇಳಿದೆ ಮತ್ತು ಯುಎನ್ ಭದ್ರತಾ...

ಕೊಚ್ಚಿ ಬಂದರಿನಲ್ಲಿ ಇರಾನ್ ಯುದ್ಧನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನ : ಇಬ್ಬರು ‘ರಿಪಬ್ಲಿಕ್ ಟಿವಿ’ ಪತ್ರಕರ್ತರ ಬಂಧನ-ವರದಿ

ಕೇರಳದ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿರುವ ಇರಾನಿನ ಯುದ್ಧ ನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನಿಸಿದ ಇಬ್ಬರು ರಿಪಬ್ಲಿಕ್ ಟಿವಿ ಪತ್ರಕರ್ತರು ಸೇರಿದಂತೆ ಮೂವರನ್ನು ಶನಿವಾರ (ಮಾ.7) ಬಂಧಿಸಲಾಗಿದೆ ಎಂದು thenewsminute.com ವರದಿ ಮಾಡಿದೆ. ಅಂತಾರಾಷ್ಟ್ರೀಯ...

ಬಿಹಾರ | ಅಧಿಕೃತವಾಗಿ ಜೆಡಿಯು ಸೇರಿದ ನಿತೀಶ್ ಕುಮಾರ್ ಮಗ ನಿಶಾಂತ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ಕುಮಾರ್ ಅವರು ಭಾನುವಾರ (ಮಾ.8) ಔಪಚಾರಿಕವಾಗಿ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪಾದಾರ್ಪಾಣೆ ಮಾಡಿದ್ದಾರೆ. ಸಿಎಂ ನಿತೀಶ್ ಕುಮಾರ್...

ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಹೆಚ್ಚಳ; 2025 ರ ವರದಿಯಲ್ಲಿ 3.6 ಲಕ್ಷ ದಾಟಿದ ಅತಿಸಾರ ಪ್ರಕರಣಗಳು

ಮುಂಬೈ: ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಸಂಖ್ಯೆ ಹೆಚ್ಚುತ್ತಿರುವುದು ಆರೋಗ್ಯ ಅಧಿಕಾರಿಗಳಲ್ಲಿ ಕಳವಳವನ್ನು ಮೂಡಿಸಿದೆ.  ಅಧಿಕೃತ ಅಂಕಿಅಂಶಗಳು ಪ್ರತಿ ವರ್ಷ ಸಾವಿರಾರು ಜನರು ಕಲುಷಿತ ನೀರು ಮತ್ತು ಕಳಪೆ ನೈರ್ಮಲ್ಯಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ...

ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ : ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಕೇಂದ್ರ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪಶ್ಚಿಮ ಬಂಗಾಳ ಭೇಟಿಗೆ ಸಂಬಂಧಿಸಿದಂತೆ ರಾಜ್ಯದ ಟಿಎಂಸಿ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ನಡುವೆ ರಾಜಕೀಯ ಕಿತ್ತಾಟ ತೀವ್ರಗೊಂಡಂತೆ ಗೋಚರಿಸುತ್ತಿದೆ. ರಾಷ್ಟ್ರಪತಿ ಭೇಟಿಯ ವೇಳೆ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಒಂದು ವಾರದಲ್ಲಿ ಗಲ್ಫ್ ದೇಶಗಳಿಂದ 52,000 ಕ್ಕೂ ಹೆಚ್ಚು ಭಾರತೀಯರು ಮರಳಿದ್ದಾರೆ: ವಿದೇಶಾಂಗ ಸಚಿವಾಲಯ

ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯನ್ನು ಸರ್ಕಾರ ಮೇಲ್ವಿಚಾರಣೆ ಮಾಡುತ್ತಿರುವುದರಿಂದ ಮಾರ್ಚ್ 1 ರಿಂದ 7 ರವರೆಗೆ ಗಲ್ಫ್ ಪ್ರದೇಶದಿಂದ 52,000 ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

‘ನೀವು ಅಮೆರಿಕನ್ನರನ್ನು ಕೊಂದರೆ ನಾವು, ನಿಮ್ಮನ್ನು ಬೇಟೆಯಾಡುತ್ತೇವೆ’: ಅಮೆರಿಕ ಬೆದರಿಕೆ 

ವಾಷಿಂಗ್ಟನ್: "ನೀವು ಅಮೆರಿಕನ್ನರನ್ನು ಕೊಂದರೆ, ನಾವು ನಿಮ್ಮನ್ನು ಬೇಟೆಯಾಡುತ್ತೇವೆ" ಎಂದು ಯುದ್ಧ ಕಾರ್ಯದರ್ಶಿ ಪೀಟ್ ಹೆಗ್ಸೆತ್ ರೀಡ್ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದಾರೆ.  ಅಮೆರಿಕ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಯಾವುದೇ ದೇಶ...

ಬಳ್ಳಾರಿ | ವಸತಿ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ದಾಳಿ : ಓರ್ವ ಸಾವು, 8 ಜನರಿಗೆ ಗಾಯ

ಬಳ್ಳಾರಿ ನಗರದ 'ಗುರುಕುಲ ವಸತಿ ಶಾಲೆ'ಯಲ್ಲಿ ಶನಿವಾರ (ಮಾ.7) ರಾತ್ರಿ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಗಳ ಮೇಲೆ ರಾಡ್, ಸ್ಕ್ರೂ ಡ್ರೈವರ್‌ನಿಂದ ದಾಳಿ ನಡೆಸಿದ್ದು, ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಎಂಟು ಜನರು ಗಾಯಗೊಂಡಿದ್ದಾರೆ...

ಗೋವುಗಳ ಕಳ್ಳಸಾಗಣೆ ಆರೋಪ: ಹಣ್ಣು-ತರಕಾರಿ ಸಾಗಿಸುತ್ತಿದ್ದ 28 ವರ್ಷದ ಮುಸ್ಲಿಂ ಚಾಲಕನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಹಿಂದುತ್ವ ಗುಂಪು

ಭಿವಾಡಿ: ರಾಜಸ್ಥಾನದ ಭಿವಾಡಿ ಪ್ರದೇಶದಲ್ಲಿ ಮಾರ್ಚ್ 2 ರ ಮುಂಜಾನೆ 28 ವರ್ಷದ ಆಮಿರ್ ಎಂಬ ವ್ಯಕ್ತಿಯನ್ನು ಗೋರಕ್ಷಕರು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ರಮವಾಗಿ ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಶಂಕಿಸಿ ಬಜರಂಗದಳದ ಸದಸ್ಯರು...