Homeಮುಖಪುಟಹತ್ರಾಸ್ ಅತ್ಯಾಚಾರ: ಕೊಲೆಗೀಡಾದ ಯುವತಿಯ ಪೋಸ್ಟ್‌ಮಾರ್ಟಂ ರಿಪೋರ್ಟ್ ಏನು ಹೇಳುತ್ತಿದೆ?

ಹತ್ರಾಸ್ ಅತ್ಯಾಚಾರ: ಕೊಲೆಗೀಡಾದ ಯುವತಿಯ ಪೋಸ್ಟ್‌ಮಾರ್ಟಂ ರಿಪೋರ್ಟ್ ಏನು ಹೇಳುತ್ತಿದೆ?

ದೆಹಲಿ ಆಸ್ಪತ್ರೆ ನೀಡಿರುವ ಮರಣೋತ್ತರ ವರದಿಯಲ್ಲಿ, "ಹಲ್ಲೆ ಮಾಡಿರುವವರು ಆಕೆಯ ಕತ್ತನ್ನು ಹಿಸುಕಲು ಪ್ರಯತ್ನಿಸಿದ್ದಾರೆ. ಆದರೆ ಅದು ಆಕೆಯ ಸಾವಿಗೆ ಕಾರಣವಾಗಿಲ್ಲ. ಬೆನ್ನುಮೂಳೆಗೆ ಬಲವಾದ ಹೊಡೆತ ಬಿದ್ದಿದ್ದರಿಂದ ಆಕೆ ಸಾವನ್ನಪ್ಪಿದ್ದಾಳೆ" ಎಂದು ಉಲ್ಲೇಖವಾಗಿದೆ.

- Advertisement -
- Advertisement -

ಸಾಮೂಹಿಕ ಅತ್ಯಾಚಾರ ಮತ್ತು ಮಾರಣಾಂತಿಕ ಹಲ್ಲೆಗೊಳಗಾಗಿ ಸಾವನಪ್ಪಿದ ದಲಿತ ಯುವತಿಯ ಪೋಸ್ಟ್‌ಮಾರ್ಟಂ ವರದಿಯ ಪ್ರಕಾರ, “ಕತ್ತು ಹಿಸುಕಲಾಗಿದ್ದು, ಆಕೆಯ ಬೆನ್ನುಮೂಳೆ ಮುರಿದಿತ್ತು” ಎಂದು ತಿಳಿದುಬಂದಿದೆ. ಆದರೆ ಅಂತಿಮ ವರದಿಯಲ್ಲಿ ಅತ್ಯಾಚಾರ ನಡೆದಿರುವುದರ ಬಗ್ಗೆ ಉಲ್ಲೇಖವಿಲ್ಲ!

ದೆಹಲಿ ಆಸ್ಪತ್ರೆ ನೀಡಿರುವ ಪೋಸ್ಟ್‌ಮಾರ್ಟಂ ವರದಿಯಲ್ಲಿ, “ಹಲ್ಲೆ ಮಾಡಿರುವವರು ಆಕೆಯ ಕತ್ತನ್ನು ಹಿಸುಕಲು ಪ್ರಯತ್ನಿಸಿದ್ದಾರೆ. ಆದರೆ ಅದು ಆಕೆಯ ಸಾವಿಗೆ ಕಾರಣವಾಗಿಲ್ಲ. ಬೆನ್ನುಮೂಳೆಗೆ ಬಲವಾದ ಹೊಡೆತ ಬಿದ್ದಿದ್ದರಿಂದ ಆಕೆ ಸಾವನ್ನಪ್ಪಿದ್ದಾಳೆ” ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ, ಕೊಲೆ: ರಾಜ್ಯದಲ್ಲಿ ಸಿಡಿದೆದ್ದ ಆಕ್ರೋಶ -ತೀವ್ರಗೊಂಡ ಸರಣಿ ಪ್ರತಿಭಟನೆಗಳು

ಸೆಪ್ಟೆಂಬರ್ 14 ರಂದು ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್ ಎಂಬ ಹಳ್ಳಿಯಲ್ಲಿ, ಯುವತಿ ತನ್ನ ಹೊಲದಲ್ಲಿ ಕುಟುಂಬದೊಂದಿಗೆ ಹುಲ್ಲು ಕತ್ತರಿಸುತ್ತಿದ್ದ ಸ್ಥಳದಿಂದ ಆಕೆಯ ಬಟ್ಟೆಯಿಂದಲೇ ಕಟ್ಟಿ ಪಕ್ಕದ ಹೊಲಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿತ್ತು. ಗಾಯಗಳು, ಮೂಳೆ ಮುರಿತ ಸೇರಿದಂತೆ ನಾಲಿಗೆ ತುಂಡಾಗಿದ್ದ ಯುವತಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದರು. ಮಂಗಳವಾರ ದೆಹಲಿಗೆ ತೆರಳುವವರೆಗೂ ಆಕೆಯನ್ನು ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಐಸಿಯುನಲ್ಲಿಡಲಾಗಿತ್ತು. ನಂತರ ಯುವತಿ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು. ಅಂದು ಮಧ್ಯರಾತ್ರಿ ಪೊಲೀಸರು ಆಕೆಯ ಕುಟುಂಬದವರಿಗೂ ತಿಳಿಸದೇ ಶವಸಂಸ್ಕಾರ ಮಾಡಿದ್ದರು. ಇದರ ವಿರುದ್ಧ ದೇಶದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ಯುವತಿಯ ವೈದ್ಯಕೀಯ ದಾಖಲೆಗಳಲ್ಲಿ ಅತ್ಯಾಚಾರ ಮತ್ತು ಕತ್ತುಹಿಸುಕುವಿಕೆಯನ್ನು ಉಲ್ಲೇಖಿಸಲಾಗಿದೆ. ಆದರೆ ನಂತರದಲ್ಲಿ ಬೆನ್ನುಮೂಳೆಯ ತೊಂದರೆಯಿಂದ ಬಳಲುತ್ತಿದ್ದಳು ಎಂದು ವರದಿಯಲ್ಲಿ ಹೇಳಲಾಗಿದೆ. ಅಂತಿಮ ವರದಿಯಲ್ಲಿ, “ಕತ್ತುಹಿಸುಕುವಿಕೆಯ ನಂತರ ಬೆನ್ನುಮೂಳೆಯ ತೊಂದರೆಯೊಂದಿಗೆ, ಹೃದಯಬಡಿತ ನಿಂತುಹೋಗಿ ರಕ್ತ ಹೆಪ್ಪುಗಟ್ಟಿತ್ತು” ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಮತ್ತೊಬ್ಬ ದಲಿತ ಯುವತಿ ಮೇಲೆ ಅತ್ಯಾಚಾರ, ಕೊಲೆ

ಅವಳ ಕುತ್ತಿಗೆಗೆ ಆದ ಗಾಯವು ಪಾರ್ಶ್ವವಾಯುವಿಗೆ ಕಾರಣವಾಗಿತ್ತು. ಹಾಗಾಗಿ ಆಕೆ ಉಸಿರಾಡಲು ಕಷ್ಟಪಡುತ್ತಿದ್ದಳು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

“ಅತ್ಯಾಚಾರ ನಡೆದಿರುವುದನ್ನು ದೃಢೀಕರಿಸಲು ವಿಧಿವಿಜ್ಞಾನ ವರದಿಗಳಿಗಾಗಿ ಕಾಯುತ್ತಿದ್ದೇವೆ. ಹಲ್ಲೆ ಮಾಡಿದವರು ಆಕೆಯ ಕತ್ತನ್ನು ಹಿಸುಕುತ್ತಿರುವಾಗ ಆಕೆ ತನ್ನ ನಾಲಿಗೆಯನ್ನು ಕಚ್ಚಿದ್ದರಿಂದ ನಾಲಿಗೆ ತುಂಡಾಗಿದೆ” ಎಂದು ಉತ್ತರ ಪ್ರದೇಶ ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಯುವತಿಯ ಶವವನ್ನು ಮಧ್ಯರಾತ್ರಿಯಲ್ಲಿ ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್‌ನಲ್ಲಿರುವ ಹಳ್ಳಿಗೆ ಕೊಂಡೊಯ್ಯಲಾಯಿತು. ಪೊಲೀಸರು ಶವಸಂಸ್ಕಾರ ಮಾಡುತ್ತಿದ್ದಾರೆ ಎಂಬುದು ಕುಟುಂಬದವರಿಗೆ ತಿಳಿದನಂತರ ಇದನ್ನು ಕುಟುಂಬದವರು ಮತ್ತು ಗ್ರಾಮಸ್ಥರು ವಿರೋಧಿಸಿದ್ದಾರೆ. ಶವವನ್ನು ಮನೆಗೆ ತಂದು, ನಂತರ ಬೆಳಿಗ್ಗೆ ಶವಸಂಸ್ಕಾರ ಮಾಡುವಂತೆ ಆಕೆಯ ತಂದೆ ಬೇಡಿಕೊಂಡಿದ್ದಾರೆ.

ಆದರೂ, ಪ್ರತಿಭಟಿಸುತ್ತಿದ್ದವರನ್ನು ದೂರ ತಳ್ಳಿದ ಪೊಲೀಸರು ಸ್ಮಶಾನದ ಬಳಿಗೆ ವಾಹನವನ್ನು ತೆಗೆದುಕೊಂಡು ಹೋದರು. “ಕೊನೆಯ ವಿಧಿಗಳಿಗಾಗಿ ಶವವನ್ನು ಮನೆಗೆ ನೀಡುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರವೀಣ್ ಕುಮಾರ್ ಲಕ್ಷ್ಕರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ, ಬೆಳಿಗ್ಗೆ 2:30 ಕ್ಕೆ, ಆಕೆಯ ಕುಟುಂಬದ ಬಹುಪಾಲು ಜನ ಮನೆಯಲ್ಲಿದ್ದಾಗ, ಪೊಲೀಸರು ಶವವನ್ನು ಸುಟ್ಟಿದ್ದಾರೆ. ವರದಿಗಾರರನ್ನು, ಕುಟುಂಬ ಮತ್ತು ಗ್ರಾಮಸ್ಥರನ್ನು ದೂರವಿರಿಸಲು ಹತ್ರಾಸ್ ಪೊಲೀಸರು ಮಾನವ ಸರಪಳಿಯನ್ನು ರಚಿಸಿದರು. ಪೊಲೀಸರು ಮಾತ್ರ ಹಾಜರಿದ್ದರು. ಕುಟುಂಬದವರು ಅವಳನ್ನು ಕೊನೆಯ ಬಾರಿಯೂ ನೋಡಲಾಗಲಿಲ್ಲ. ಅವರನ್ನು ಮನೆಯಲ್ಲಿ ಬಂಧಿಸಲಾಗಿತ್ತು” ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.


ಇದನ್ನೂ ಓದಿ: ದಲಿತ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗಳ ಪರ ನಿಂತ ಸವರ್ಣ ಪರಿಷತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...