Homeಮುಖಪುಟಹತ್ರಾಸ್ ಅತ್ಯಾಚಾರ: ಕೊಲೆಗೀಡಾದ ಯುವತಿಯ ಪೋಸ್ಟ್‌ಮಾರ್ಟಂ ರಿಪೋರ್ಟ್ ಏನು ಹೇಳುತ್ತಿದೆ?

ಹತ್ರಾಸ್ ಅತ್ಯಾಚಾರ: ಕೊಲೆಗೀಡಾದ ಯುವತಿಯ ಪೋಸ್ಟ್‌ಮಾರ್ಟಂ ರಿಪೋರ್ಟ್ ಏನು ಹೇಳುತ್ತಿದೆ?

ದೆಹಲಿ ಆಸ್ಪತ್ರೆ ನೀಡಿರುವ ಮರಣೋತ್ತರ ವರದಿಯಲ್ಲಿ, "ಹಲ್ಲೆ ಮಾಡಿರುವವರು ಆಕೆಯ ಕತ್ತನ್ನು ಹಿಸುಕಲು ಪ್ರಯತ್ನಿಸಿದ್ದಾರೆ. ಆದರೆ ಅದು ಆಕೆಯ ಸಾವಿಗೆ ಕಾರಣವಾಗಿಲ್ಲ. ಬೆನ್ನುಮೂಳೆಗೆ ಬಲವಾದ ಹೊಡೆತ ಬಿದ್ದಿದ್ದರಿಂದ ಆಕೆ ಸಾವನ್ನಪ್ಪಿದ್ದಾಳೆ" ಎಂದು ಉಲ್ಲೇಖವಾಗಿದೆ.

- Advertisement -
- Advertisement -

ಸಾಮೂಹಿಕ ಅತ್ಯಾಚಾರ ಮತ್ತು ಮಾರಣಾಂತಿಕ ಹಲ್ಲೆಗೊಳಗಾಗಿ ಸಾವನಪ್ಪಿದ ದಲಿತ ಯುವತಿಯ ಪೋಸ್ಟ್‌ಮಾರ್ಟಂ ವರದಿಯ ಪ್ರಕಾರ, “ಕತ್ತು ಹಿಸುಕಲಾಗಿದ್ದು, ಆಕೆಯ ಬೆನ್ನುಮೂಳೆ ಮುರಿದಿತ್ತು” ಎಂದು ತಿಳಿದುಬಂದಿದೆ. ಆದರೆ ಅಂತಿಮ ವರದಿಯಲ್ಲಿ ಅತ್ಯಾಚಾರ ನಡೆದಿರುವುದರ ಬಗ್ಗೆ ಉಲ್ಲೇಖವಿಲ್ಲ!

ದೆಹಲಿ ಆಸ್ಪತ್ರೆ ನೀಡಿರುವ ಪೋಸ್ಟ್‌ಮಾರ್ಟಂ ವರದಿಯಲ್ಲಿ, “ಹಲ್ಲೆ ಮಾಡಿರುವವರು ಆಕೆಯ ಕತ್ತನ್ನು ಹಿಸುಕಲು ಪ್ರಯತ್ನಿಸಿದ್ದಾರೆ. ಆದರೆ ಅದು ಆಕೆಯ ಸಾವಿಗೆ ಕಾರಣವಾಗಿಲ್ಲ. ಬೆನ್ನುಮೂಳೆಗೆ ಬಲವಾದ ಹೊಡೆತ ಬಿದ್ದಿದ್ದರಿಂದ ಆಕೆ ಸಾವನ್ನಪ್ಪಿದ್ದಾಳೆ” ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ, ಕೊಲೆ: ರಾಜ್ಯದಲ್ಲಿ ಸಿಡಿದೆದ್ದ ಆಕ್ರೋಶ -ತೀವ್ರಗೊಂಡ ಸರಣಿ ಪ್ರತಿಭಟನೆಗಳು

ಸೆಪ್ಟೆಂಬರ್ 14 ರಂದು ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್ ಎಂಬ ಹಳ್ಳಿಯಲ್ಲಿ, ಯುವತಿ ತನ್ನ ಹೊಲದಲ್ಲಿ ಕುಟುಂಬದೊಂದಿಗೆ ಹುಲ್ಲು ಕತ್ತರಿಸುತ್ತಿದ್ದ ಸ್ಥಳದಿಂದ ಆಕೆಯ ಬಟ್ಟೆಯಿಂದಲೇ ಕಟ್ಟಿ ಪಕ್ಕದ ಹೊಲಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿತ್ತು. ಗಾಯಗಳು, ಮೂಳೆ ಮುರಿತ ಸೇರಿದಂತೆ ನಾಲಿಗೆ ತುಂಡಾಗಿದ್ದ ಯುವತಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದರು. ಮಂಗಳವಾರ ದೆಹಲಿಗೆ ತೆರಳುವವರೆಗೂ ಆಕೆಯನ್ನು ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಐಸಿಯುನಲ್ಲಿಡಲಾಗಿತ್ತು. ನಂತರ ಯುವತಿ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು. ಅಂದು ಮಧ್ಯರಾತ್ರಿ ಪೊಲೀಸರು ಆಕೆಯ ಕುಟುಂಬದವರಿಗೂ ತಿಳಿಸದೇ ಶವಸಂಸ್ಕಾರ ಮಾಡಿದ್ದರು. ಇದರ ವಿರುದ್ಧ ದೇಶದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ಯುವತಿಯ ವೈದ್ಯಕೀಯ ದಾಖಲೆಗಳಲ್ಲಿ ಅತ್ಯಾಚಾರ ಮತ್ತು ಕತ್ತುಹಿಸುಕುವಿಕೆಯನ್ನು ಉಲ್ಲೇಖಿಸಲಾಗಿದೆ. ಆದರೆ ನಂತರದಲ್ಲಿ ಬೆನ್ನುಮೂಳೆಯ ತೊಂದರೆಯಿಂದ ಬಳಲುತ್ತಿದ್ದಳು ಎಂದು ವರದಿಯಲ್ಲಿ ಹೇಳಲಾಗಿದೆ. ಅಂತಿಮ ವರದಿಯಲ್ಲಿ, “ಕತ್ತುಹಿಸುಕುವಿಕೆಯ ನಂತರ ಬೆನ್ನುಮೂಳೆಯ ತೊಂದರೆಯೊಂದಿಗೆ, ಹೃದಯಬಡಿತ ನಿಂತುಹೋಗಿ ರಕ್ತ ಹೆಪ್ಪುಗಟ್ಟಿತ್ತು” ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಮತ್ತೊಬ್ಬ ದಲಿತ ಯುವತಿ ಮೇಲೆ ಅತ್ಯಾಚಾರ, ಕೊಲೆ

ಅವಳ ಕುತ್ತಿಗೆಗೆ ಆದ ಗಾಯವು ಪಾರ್ಶ್ವವಾಯುವಿಗೆ ಕಾರಣವಾಗಿತ್ತು. ಹಾಗಾಗಿ ಆಕೆ ಉಸಿರಾಡಲು ಕಷ್ಟಪಡುತ್ತಿದ್ದಳು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

“ಅತ್ಯಾಚಾರ ನಡೆದಿರುವುದನ್ನು ದೃಢೀಕರಿಸಲು ವಿಧಿವಿಜ್ಞಾನ ವರದಿಗಳಿಗಾಗಿ ಕಾಯುತ್ತಿದ್ದೇವೆ. ಹಲ್ಲೆ ಮಾಡಿದವರು ಆಕೆಯ ಕತ್ತನ್ನು ಹಿಸುಕುತ್ತಿರುವಾಗ ಆಕೆ ತನ್ನ ನಾಲಿಗೆಯನ್ನು ಕಚ್ಚಿದ್ದರಿಂದ ನಾಲಿಗೆ ತುಂಡಾಗಿದೆ” ಎಂದು ಉತ್ತರ ಪ್ರದೇಶ ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಯುವತಿಯ ಶವವನ್ನು ಮಧ್ಯರಾತ್ರಿಯಲ್ಲಿ ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್‌ನಲ್ಲಿರುವ ಹಳ್ಳಿಗೆ ಕೊಂಡೊಯ್ಯಲಾಯಿತು. ಪೊಲೀಸರು ಶವಸಂಸ್ಕಾರ ಮಾಡುತ್ತಿದ್ದಾರೆ ಎಂಬುದು ಕುಟುಂಬದವರಿಗೆ ತಿಳಿದನಂತರ ಇದನ್ನು ಕುಟುಂಬದವರು ಮತ್ತು ಗ್ರಾಮಸ್ಥರು ವಿರೋಧಿಸಿದ್ದಾರೆ. ಶವವನ್ನು ಮನೆಗೆ ತಂದು, ನಂತರ ಬೆಳಿಗ್ಗೆ ಶವಸಂಸ್ಕಾರ ಮಾಡುವಂತೆ ಆಕೆಯ ತಂದೆ ಬೇಡಿಕೊಂಡಿದ್ದಾರೆ.

ಆದರೂ, ಪ್ರತಿಭಟಿಸುತ್ತಿದ್ದವರನ್ನು ದೂರ ತಳ್ಳಿದ ಪೊಲೀಸರು ಸ್ಮಶಾನದ ಬಳಿಗೆ ವಾಹನವನ್ನು ತೆಗೆದುಕೊಂಡು ಹೋದರು. “ಕೊನೆಯ ವಿಧಿಗಳಿಗಾಗಿ ಶವವನ್ನು ಮನೆಗೆ ನೀಡುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರವೀಣ್ ಕುಮಾರ್ ಲಕ್ಷ್ಕರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ, ಬೆಳಿಗ್ಗೆ 2:30 ಕ್ಕೆ, ಆಕೆಯ ಕುಟುಂಬದ ಬಹುಪಾಲು ಜನ ಮನೆಯಲ್ಲಿದ್ದಾಗ, ಪೊಲೀಸರು ಶವವನ್ನು ಸುಟ್ಟಿದ್ದಾರೆ. ವರದಿಗಾರರನ್ನು, ಕುಟುಂಬ ಮತ್ತು ಗ್ರಾಮಸ್ಥರನ್ನು ದೂರವಿರಿಸಲು ಹತ್ರಾಸ್ ಪೊಲೀಸರು ಮಾನವ ಸರಪಳಿಯನ್ನು ರಚಿಸಿದರು. ಪೊಲೀಸರು ಮಾತ್ರ ಹಾಜರಿದ್ದರು. ಕುಟುಂಬದವರು ಅವಳನ್ನು ಕೊನೆಯ ಬಾರಿಯೂ ನೋಡಲಾಗಲಿಲ್ಲ. ಅವರನ್ನು ಮನೆಯಲ್ಲಿ ಬಂಧಿಸಲಾಗಿತ್ತು” ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.


ಇದನ್ನೂ ಓದಿ: ದಲಿತ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗಳ ಪರ ನಿಂತ ಸವರ್ಣ ಪರಿಷತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...