Homeಅಂತರಾಷ್ಟ್ರೀಯಟ್ರಂಪ್ ಆಡಳಿತದಲ್ಲಿ ಏಷ್ಯನ್ ಅಮೆರಿಕನ್ನರ ವಿರುದ್ಧ ದ್ವೇಷ ಹರಡಲಾಗಿತ್ತು: ಜೋ ಬೈಡೆನ್

ಟ್ರಂಪ್ ಆಡಳಿತದಲ್ಲಿ ಏಷ್ಯನ್ ಅಮೆರಿಕನ್ನರ ವಿರುದ್ಧ ದ್ವೇಷ ಹರಡಲಾಗಿತ್ತು: ಜೋ ಬೈಡೆನ್

ಕೊರೊನಾ ಸಾಂಕ್ರಾಮಿಕ ರೋಗದ ಆರಂಭದಿಂದ ಏಷ್ಯನ್ ಅಮೆರಿಕನ್ನರ ವಿರುದ್ಧದ ಅಪರಾಧ ಪ್ರಕರಣಗಳು ದ್ವಿಗುಣಗೊಂಡಿದ್ದು, ಇದು ಅನ್-ಅಮೆರಿಕನ್- ಬೈಡೆನ್

- Advertisement -
- Advertisement -

“ಕೊರೊನಾ ಸಾಂಕ್ರಾಮಿಕ ರೋಗದ ಆರಂಭದಿಂದಲೂ ಏಷ್ಯನ್ ಅಮೆರಿಕನ್ನರ ವಿರುದ್ಧದ ಅಪರಾಧ ಪ್ರಕರಣಗಳು ದ್ವಿಗುಣಗೊಂಡಿದ್ದು, ಇದು ಅನ್-ಅಮೆರಿಕನ್ (ಅಮೆರಿಕದ ಧೊರಣೆಯಲ್ಲ)” ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ವಿಷಾದ ವ್ಯಕ್ತಪಡಿಸಿದ್ದಾರೆ. “ಆಗಾಗ್ಗೆ, ನಾವು ಪರಸ್ಪರ ವಿರುದ್ಧ ತಿರುಗಿಬಿದ್ದಿದ್ದೇವೆ” ಎಂದು ಹೇಳುತ್ತಾ ಏಷ್ಯನ್ ಅಮೆರಿಕನ್ನರ ವಿರುದ್ಧ ನಡೆದ ದ್ವೇಷದ ಅಪರಾಧಗಳನ್ನು ತಮ್ಮ ಮೊದಲ ಪ್ರೈಮ್‌ಟೈಮ್ ಭಾಷಣದಲ್ಲಿ ಬೈಡನ್ ಖಂಡಿಸಿದ್ದಾರೆ.

ಕೊರೊನಾ ವಿರುದ್ಧದ ಹೋರಾಟದಲ್ಲಿ ಅವರು ಸಾಧಿಸಿದ ಪ್ರಗತಿಯನ್ನು ವಿವರಿಸುತ್ತಾ ಮಾತನಾಡಿದ ಅವರು, “ಕೊರೊನಾ ವೈರಸ್ ಚೀನಾದಲ್ಲಿ ಹುಟ್ಟಿರುವ ಹಿನ್ನೆಲೆಯಲ್ಲಿ, ಏಷ್ಯನ್ನ ಅಮೆರಿಕನ್ನರ ಮೇಲೆ ಆಕ್ರಮಣ ಮಾಡಿ ಕಿರುಕುಳ ನೀಡಲಾಗಿತ್ತು. ಜೊತೆಗೆ ದ್ವೇಷದ ಅಪರಾಧಗಳ ಬಲಿಪಶುಗಳನ್ನಾಗಿ ಮಾಡಲಾಗಿತ್ತು” ಎಂದು ಬೈಡೆನ್ ಹೇಳಿದರು.

ಇದನ್ನೂ ಓದಿ: ಮಹಾರಾಷ್ಟ್ರ:ಕೊರೊನಾ ನಿಯಮ ಉಲ್ಲಂಘಿಸಿ ಮದುವೆಯಲ್ಲಿ700 ಮಂದಿ ಭಾಗಿ, ಪ್ರಕರಣ ದಾಖಲು

“ಈ ಕ್ಷಣದಲ್ಲಿಯೂ ಅವರಲ್ಲಿ ಅನೇಕರು ನಮ್ಮ ಸಹ ಅಮೆರಿಕನ್ನರಾಗಿದ್ದಾರೆ. ಜೊತೆಗೆ ಈ ಸಾಂಕ್ರಾಮಿಕ ರೋಗವನ್ನು ನಿರ್ಮೂಲನೆ ಮಾಡುವಲ್ಲಿ, ಜೀವಗಳನ್ನು ಉಳಿಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ ಅವರು ಇನ್ನೂ ಭಯದಿಂದಲೇ ಬದುಕುತ್ತಿದ್ದಾರೆ. ಇದು ತಪ್ಪು. ಇದು ಅನ್-ಅಮೆರಿಕನ್. ಇದನ್ನು ತಡೆಯಬೇಕು” ಎಂದು ಹೇಳಿದರು.

ಚೀನಾ ವೈರಸ್ ಕುರಿತು ಮಾತನಾಡುತ್ತಾ ಮಾಜಿ ಅಧ್ಯಕ್ಷ ಟ್ರಂಪ್ ಸೇರಿದಂತೆ ಇತರರು, ವ್ಯಾಪಕವಾಗಿ ಏಷ್ಯನ್ ವಿರುದ್ಧದ ತಾರತಮ್ಯವನ್ನು ಉತ್ತೇಜಿಸಿದ್ದಾರೆ ಎಂದು ಹೇಳಲಾಗುತ್ತಿದೆ ಎಂದು ಹೇಳಿದ್ದಾರೆ.

ಜನಾಂಗೀಯ ಪ್ರೇರಣೆಯನ್ನು ಅನೇಕ ಅಪರಾಧ ಪ್ರಕರಣಗಳಲ್ಲಿ ಗುರುತಿಸುವುದು ಕಷ್ಟ. ಆದರೆ ನ್ಯೂಯಾರ್ಕ್ ಮತ್ತು ಲಾಸ್ ಏಂಜಲೀಸ್ ಸೇರಿದಂತೆ ಅಮೆರಿಕದ 16 ಪ್ರಮುಖ ನಗರಗಳಲ್ಲಿ ಏಷ್ಯನ್ ವಿರೋಧಿ ದ್ವೇಷದ ಅಪರಾಧಗಳು ಕಳೆದ ವರ್ಷ 49 ರಿಂದ 122 ಕ್ಕೆ ಏರಿವೆ. ಅವುಗಳ ಸಂಖ್ಯೆ ದ್ವಿಗುಣಗೊಂಡಿವೆ ಎಂದು ಕ್ಯಾಲಿಫೋರ್ನಿಯಾದ ರಾಜ್ಯ ವಿಶ್ವವಿದ್ಯಾಲಯದ ಅಧ್ಯಯನ ತಿಳಿಸಿದೆ.


ಇದನ್ನೂ ಓದಿ: ಬಹುಜನ ಭಾರತ; ಚಂಬಲ್ ಸೀಮೆಯಲ್ಲೊಂದು ಹೆಣ್ಣುನೋಟದ ದಲಿತ ಪತ್ರಿಕೋದ್ಯಮ: ಡಿ. ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...