Homeಮುಖಪುಟಭೂತಬಂಗಲೆಯಾದ ದೇಶದ 12 ವಿಮಾನ ನಿಲ್ದಾಣಗಳು; ರನ್‌ವೇಯಲ್ಲಿ ಬೀದಿನಾಯಿಗಳು: ವರದಿ

ಭೂತಬಂಗಲೆಯಾದ ದೇಶದ 12 ವಿಮಾನ ನಿಲ್ದಾಣಗಳು; ರನ್‌ವೇಯಲ್ಲಿ ಬೀದಿನಾಯಿಗಳು: ವರದಿ

- Advertisement -
- Advertisement -

ಭಾರತದ 140 ವಿಮಾನ ನಿಲ್ದಾಣಗಳಲ್ಲಿ, 12 ವಿಮಾನ ನಿಲ್ದಾಣಗಳಿಂದ ಕಳೆದ ಡಿಸೆಂಬರ್ ಮತ್ತು ಮಾರ್ಚ್ ನಡುವೆ ಒಬ್ಬ ಪ್ರಯಾಣಿಕ ಕೂಡಾ ಪ್ರಯಾಣ ಮಾಡಿಲ್ಲ ಎಂದು ಸರ್ಕಾರಿ ವಾಯುಯಾನ ಅಂಕಿ ಅಂಶಗಳನ್ನು ಉಲ್ಲೇಖಿಸಿ ಬ್ಲೂಮ್‌ಬರ್ಗ್‌ ವರದಿ ಮಾಡಿದ್ದು, ಈ ವಿಮಾನ ನಿಲ್ದಾಣಗಳು ಭೂತಬಂಗಲೆಗಳಾಗಿ ಪರಿವರ್ತನೆಯಾಗಿದೆ ಎಂದು ವರದಿ ಉಲ್ಲೇಖಿಸಿದೆ. ಭೂತಬಂಗಲೆಯಾದ

ಈ ವಿಮಾನ ನಿಲ್ದಾಣಗಳಲ್ಲಿ ಹೆಚ್ಚಿನವು ಕಳೆದ ವರ್ಷದ ಬಹುತೇಕ ಸಮಯದಲ್ಲಿ ದಿನಕ್ಕೆ ಐದಕ್ಕಿಂತ ಕಡಿಮೆ ವಿಮಾನಗಳನ್ನು ಸರಾಸರಿಯಾಗಿ ನಿರ್ವಹಿಸಿದ್ದು, ಕೆಲವು ದಿನಗಳಲ್ಲಿ ಶೂನ್ಯ ವಿಮಾನಗಳನ್ನು ದಾಖಲಿಸಿವೆ ಎಂದು ವರದಿ ಹೇಳಿದೆ.

ಹರಿಯಾಣದ ಹಿಸಾರ್ ಎಂಬ ಸಣ್ಣ ನಗರದಲ್ಲಿ ಹೊಸ ವಿಮಾನ ನಿಲ್ದಾಣವನ್ನು ಇತ್ತಿಚೆಗೆ ಉದ್ಘಾಟಿಸಲಾಗಿತ್ತು. ಸುಮಾರು 10ರಿಂದ 20 ಲಕ್ಷ ಪ್ರಯಾಣಿಕ ಸಾಮರ್ಥ್ಯದೊಂದಿಗೆ ಪ್ರಾರಂಭವಾದ ಈ ವಿಮಾನ ನಿಲ್ದಾಣವನ್ನು ನವದೆಹಲಿಯ ಹೆಚ್ಚು ಜನನಿಬಿಡ ನಿಲ್ದಾಣಗಳಿಗೆ ಪರ್ಯಾಯವಾಗಿ ನಿರ್ಮಿಸಲಾಗಿತ್ತು ಎನ್ನಲಾಗಿದೆ. ಅದಾಗ್ಯೂ, ಉದ್ಘಾಟನೆಯಾಗಿ ಹಲವಾರು ವರ್ಷಗಳಾದರೂ ಹಿಸಾರ್‌ನ ವಿಮಾನ ನಿಲ್ದಾಣವು ಇನ್ನೂ ಕಾರ್ಯನಿರ್ವಹಿಸುತ್ತಿಲ್ಲ ಎಂದು ವರದಿ ಉಲ್ಲೇಖಿಸಿದೆ.

ಆಗಮನ ಮತ್ತು ನಿರ್ಗಮನ ಸಭಾಂಗಣಗಳು ಹೆಚ್ಚಾಗಿ ಖಾಲಿಯಾಗಿದ್ದು, ಬೀದಿ ನಾಯಿಗಳು ರನ್‌ವೇಯಲ್ಲಿ ವಿಶ್ರಾಂತಿ ಪಡೆಯುತ್ತಿವೆ ಎಂದ ವರದಿ ಹೇಳಿದೆ. ವಿಮಾನ ನಿಲ್ದಾಣವು ಮಿಲಿಟರಿ ಜೆಟ್‌ಗಳು ಮತ್ತು ರಾಜಕಾರಣಿಗಳನ್ನು ಕರೆದೊಯ್ಯುವ ವಿರಳ ವಿಮಾನಗಳನ್ನು ಹೊಂದಿದ್ದರೂ, 2021 ರಿಂದ ಹಿಸಾರ್‌ನಿಂದ ಕೆಲವೇ ಕೆಲವು ಸಬ್ಸಿಡಿ ವಾಣಿಜ್ಯ ವಿಮಾನಗಳು ಹಾರಾಟ ನಡೆಸಿವೆ ಎಂದು ಅದು ಹೇಳಿದೆ.

ವಿಮಾನಯಾನದ ಸರಾಸರಿ ಟಿಕೆಟ್ ಬೆಲೆಗಳು ದೇಶದ ಹೆಚ್ಚಿನ ಜನರಿಗೆ ಇನ್ನೂ ತುಂಬಾ ದುಬಾರಿಯಾಗಿದ್ದರೂ ಚುನಾಯಿತ ನಾಯಕರು ಮತದಾರರನ್ನು ಮೆಚ್ಚಿಸಲು ಆಕರ್ಷಕ ಯೋಜನೆಗಳಿಗೆ ಹಣಕಾಸು ಒದಗಿಸುವ ಒತ್ತಡದಲ್ಲಿದ್ದಾರೆ ಎಂದು ವರದಿ ಹೇಳಿದೆ. ದೇಶದ ಅತ್ಯಂತ ಬಡ ರಾಜ್ಯಗಳಲ್ಲಿ ಒಂದಾದ ಮಧ್ಯಪ್ರದೇಶದ ಮುಖ್ಯಮಂತ್ರಿ ಇತ್ತೀಚೆಗೆ ಪ್ರತಿ 200 ಕಿಲೋಮೀಟರ್ ಭೂಮಿಗೆ ಒಂದು ವಿಮಾನ ನಿಲ್ದಾಣವನ್ನು ನಿರ್ಮಿಸುವುದಾಗಿ ಭರವಸೆ ನೀಡಿರುವ ಬಗ್ಗೆ ವರದಿ ಉಲ್ಲೇಖಿಸಿದೆ.

“ಸ್ಪಷ್ಟವಾಗಿ, ಭಾರತವು ತನ್ನ ವಾಯುಯಾನ ಮೂಲಸೌಕರ್ಯವನ್ನು ಸಂಚಾರ ಮತ್ತು ಬೇಡಿಕೆಯ ತರ್ಕದ ಆಧಾರದ ಮೇಲೆ ಯೋಜಿಸುತ್ತಿಲ್ಲ, ಬದಲಿಗೆ ಚುನಾವಣೆ ಮತ್ತು ರಾಜಕೀಯ ಕಾರ್ಯಸೂಚಿಗಳ ಆಧಾರದ ಮೇಲೆ ಯೋಜಿಸುತ್ತಿದೆ” ಎಂದು ವಾಯುಯಾನ ಸಲಹಾ ಸಂಸ್ಥೆಯಾದ ಮಾರ್ಟಿನ್ ಕನ್ಸಲ್ಟಿಂಗ್‌ನ ಮುಖ್ಯ ಕಾರ್ಯನಿರ್ವಾಹಕ ಮಾರ್ಕ್ ಮಾರ್ಟಿನ್ ಹೇಳಿದರು.

ದೇಶದ ದೊಡ್ಡ ನಗರಗಳಲ್ಲಿ, ಅನೇಕ ಮಹಾನಗರಗಳು ಕೂಡಾ ವಿಮಾನಯಾನ ಉದ್ದಿಮೆಯಲ್ಲಿ ಹೆಣಗಾಡುತ್ತಿವೆ ಎಂದು ವರದಿ ಉಲ್ಲೇಖಿಸಿದೆ. ಮುಂಬೈನ ಪ್ರಯಾಣಿಕರ ಸಂಖ್ಯೆ ಅದರ ಮೂಲ ಗುರಿಯ ಸುಮಾರು 30% ರಷ್ಟಿದ್ದು, ಬೆಂಗಳೂರಿನದು 6% ರಷ್ಟಿದೆ. ನವದೆಹಲಿ ಮತ್ತು ಕೋಲ್ಕತ್ತಾ ಹೊರತುಪಡಿಸಿ, ಭಾರತದಾದ್ಯಂತದ ಮಹಾನಗರಗಳಲ್ಲಿ ನಿಜವಾದ ಪ್ರಯಾಣಿಕರ ಸಂಖ್ಯೆ ಅಪೇಕ್ಷಿತ ಮಟ್ಟಕ್ಕಿಂತ 20% ಕ್ಕಿಂತ ಕಡಿಮೆಯಿದೆ ಎಂದು ವರದಿ ಉಲ್ಲೇಖಿಸಿದೆ.

ಸರ್ಕಾರದ ಅಧಿಕೃತ ಲೆಕ್ಕಪರಿಶೋಧಕರು(ಸಿಎಜಿ) ಹಿಂದೆ ಕೆಲವು ಯೋಜನೆಗಳನ್ನು ಅವುಗಳ ಅಗತ್ಯಕ್ಕಿಂತ ವರ್ಷಗಳ ಅಥವಾ ದಶಕಗಳ ಮೊದಲೇ ನಿರ್ಮಿಸಲಾಗಿದೆ ಎಂದು ಹೇಳಿದ್ದನ್ನು ವರದಿಯು ಉಲ್ಲೇಖಿಸಿದೆ.

“ಸ್ಪಷ್ಟವಾಗಿ, ಭಾರತವು ತನ್ನ ವಾಯುಯಾನ ಮೂಲಸೌಕರ್ಯವನ್ನು ಸಂಚಾರ ಮತ್ತು ಬೇಡಿಕೆಯ ತರ್ಕದ ಆಧಾರದ ಮೇಲೆ ಯೋಜಿಸುತ್ತಿಲ್ಲ. ಬದಲಿಗೆ ಚುನಾವಣೆ ಮತ್ತು ರಾಜಕೀಯ ಕಾರ್ಯಸೂಚಿಗಳ ಆಧಾರದ ಮೇಲೆ ಯೋಜಿಸುತ್ತಿದೆ” ಎಂದು ವಾಯುಯಾನ ಸಲಹಾ ಸಂಸ್ಥೆಯಾದ ಮಾರ್ಟಿನ್ ಕನ್ಸಲ್ಟಿಂಗ್‌ನ ಮುಖ್ಯ ಕಾರ್ಯನಿರ್ವಾಹಕ ಮಾರ್ಕ್ ಮಾರ್ಟಿನ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಭಾರತದ ಖಾಲಿ ವಿಮಾನ ನಿಲ್ದಾಣಗಳು ಬಹುಶಃ ದೇಶದ ನಿರ್ಮಾಣ ಸಮಸ್ಯೆಗಳ ಸಂಕೇತವಾಗಿದೆ ಎಂದು ವರದಿ ಹೇಳಿದ್ದು, ಭಾರತದಲ್ಲಿ ವಾಯು ಸಂಚಾರ ಸಂಖ್ಯೆಗಳು ಎಂದಿಗೂ ಹೆಚ್ಚಿಲ್ಲವಾದರೂ, ಪ್ರಯಾಣಿಕರ ಅಡಚಣೆಗಳು ಹೆಚ್ಚು ಸ್ಪಷ್ಟವಾಗಿರುವಂತಹ ಸ್ಥಳಗಳಲ್ಲಿ, ಸಾಮಾನ್ಯವಾಗಿ ಹೆಚ್ಚಿನ ದಟ್ಟಣೆಯ ಮಹಾನಗರಗಳಲ್ಲಿ, ತೆರಿಗೆ ಹಣಗಳನ್ನು ಪರಿಣಾಮಕಾರಿಯಾಗಿ ಖರ್ಚು ಮಾಡಲಾಗುತ್ತಿದೆಯೇ ಎಂಬ ಪ್ರಶ್ನೆಗಳನ್ನು ವರದಿ ಎತ್ತಿದೆ.

“ಈ ವಿಮಾನ ನಿಲ್ದಾಣಗಳು ಬೇಡಿಕೆಯ ಸವಾಲುಗಳನ್ನು ಎದುರಿಸುತ್ತಿವೆ ಮತ್ತು ಇದು ಶೀಘ್ರದಲ್ಲೇ ಮುಂದುವರಿಯುತ್ತದೆ” ಎಂದು ವಾಯುಯಾನ ಸಲಹಾ ಸಂಸ್ಥೆಯಾದ CAPA ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಮತ್ತು ನಿರ್ದೇಶಕ ಕಪಿಲ್ ಕೌಲ್ ಹೇಳಿದ್ದಾರೆ ಎಂದು ವರದಿ ಹೇಳಿದೆ.

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಪ್ರಸ್ತುತ ಅಧಿಕಾರಿಗಳು ನಷ್ಟ ಅನುಭವಿಸುತ್ತಿರುವ ವಿಮಾನ ನಿಲ್ದಾಣಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಖಾಸಗಿಯಾಗಿ ಹೇಳಿಕೊಂಡಿದ್ದಾರೆ ಎಂದು ವರದಿ ಹೇಳಿದೆ. ಸರ್ಕಾರವು ಇನ್ನೂ 10 ರಿಂದ 15 ವರ್ಷಗಳ ಕಾಲ ಸಂಕಷ್ಟದಲ್ಲಿರುವ ವಿಮಾನ ನಿಲ್ದಾಣಗಳಿಗೆ “ಕಾರ್ಯಸಾಧ್ಯತೆಯ ಅಂತರ ನಿಧಿ”ಯನ್ನು ನೀಡಬೇಕಾಗಬಹುದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹೇಳಿದೆ ಎಂದು ವರದಿ ಉಲ್ಲೇಖಿಸಿದೆ.

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವರದಿಯಲ್ಲಿನ ಅಂದಾಜಿನ ಪ್ರಕಾರ, ಸಣ್ಣ ವಿಮಾನ ನಿಲ್ದಾಣಗಳು ತಮ್ಮ ನಿರ್ವಹಣಾ ವೆಚ್ಚವನ್ನು ಮರುಪಡೆಯಲು ದಿನಕ್ಕೆ ಕನಿಷ್ಠ 8 ರಿಂದ 10 ವಾಣಿಜ್ಯ ವಿಮಾನಗಳ ಅಗತ್ಯವಿರುತ್ತದೆ. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ 140 ವಿಮಾನ ನಿಲ್ದಾಣಗಳಲ್ಲಿ ಅರ್ಧದಷ್ಟು ವಿಮಾನಗಳು ದಿನಕ್ಕೆ 10 ಕ್ಕಿಂತ ಕಡಿಮೆ ವಿಮಾನಗಳನ್ನು ನಿರ್ವಹಿಸುತ್ತದೆ ಎಂದು ಬ್ಲೂಮ್‌ಬರ್ಗ್ ನ್ಯೂಸ್ ಅಂಕಿ ಅಂಶಗಳನ್ನು ಉಲ್ಲೇಖಿಸಿ ಹೇಳಿದೆ. ಭೂತಬಂಗಲೆಯಾದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಪರೇಷನ್ ಕಾಗರ್ ತಕ್ಷಣ ನಿಲ್ಲಿಸಿ, ನಕ್ಸಲರೊಂದಿಗೆ ಮಾತುಕತೆ ನಡೆಸಿ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಬಿ.ವಿ.ರಾಘುವುಲು

ಅಪರೇಷನ್ ಕಾಗರ್ ತಕ್ಷಣ ನಿಲ್ಲಿಸಿ, ನಕ್ಸಲರೊಂದಿಗೆ ಮಾತುಕತೆ ನಡೆಸಿ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಬಿ.ವಿ.ರಾಘುವುಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...