Homeಮುಖಪುಟಭೂತಬಂಗಲೆಯಾದ ದೇಶದ 12 ವಿಮಾನ ನಿಲ್ದಾಣಗಳು; ರನ್‌ವೇಯಲ್ಲಿ ಬೀದಿನಾಯಿಗಳು: ವರದಿ

ಭೂತಬಂಗಲೆಯಾದ ದೇಶದ 12 ವಿಮಾನ ನಿಲ್ದಾಣಗಳು; ರನ್‌ವೇಯಲ್ಲಿ ಬೀದಿನಾಯಿಗಳು: ವರದಿ

- Advertisement -
- Advertisement -

ಭಾರತದ 140 ವಿಮಾನ ನಿಲ್ದಾಣಗಳಲ್ಲಿ, 12 ವಿಮಾನ ನಿಲ್ದಾಣಗಳಿಂದ ಕಳೆದ ಡಿಸೆಂಬರ್ ಮತ್ತು ಮಾರ್ಚ್ ನಡುವೆ ಒಬ್ಬ ಪ್ರಯಾಣಿಕ ಕೂಡಾ ಪ್ರಯಾಣ ಮಾಡಿಲ್ಲ ಎಂದು ಸರ್ಕಾರಿ ವಾಯುಯಾನ ಅಂಕಿ ಅಂಶಗಳನ್ನು ಉಲ್ಲೇಖಿಸಿ ಬ್ಲೂಮ್‌ಬರ್ಗ್‌ ವರದಿ ಮಾಡಿದ್ದು, ಈ ವಿಮಾನ ನಿಲ್ದಾಣಗಳು ಭೂತಬಂಗಲೆಗಳಾಗಿ ಪರಿವರ್ತನೆಯಾಗಿದೆ ಎಂದು ವರದಿ ಉಲ್ಲೇಖಿಸಿದೆ. ಭೂತಬಂಗಲೆಯಾದ

ಈ ವಿಮಾನ ನಿಲ್ದಾಣಗಳಲ್ಲಿ ಹೆಚ್ಚಿನವು ಕಳೆದ ವರ್ಷದ ಬಹುತೇಕ ಸಮಯದಲ್ಲಿ ದಿನಕ್ಕೆ ಐದಕ್ಕಿಂತ ಕಡಿಮೆ ವಿಮಾನಗಳನ್ನು ಸರಾಸರಿಯಾಗಿ ನಿರ್ವಹಿಸಿದ್ದು, ಕೆಲವು ದಿನಗಳಲ್ಲಿ ಶೂನ್ಯ ವಿಮಾನಗಳನ್ನು ದಾಖಲಿಸಿವೆ ಎಂದು ವರದಿ ಹೇಳಿದೆ.

ಹರಿಯಾಣದ ಹಿಸಾರ್ ಎಂಬ ಸಣ್ಣ ನಗರದಲ್ಲಿ ಹೊಸ ವಿಮಾನ ನಿಲ್ದಾಣವನ್ನು ಇತ್ತಿಚೆಗೆ ಉದ್ಘಾಟಿಸಲಾಗಿತ್ತು. ಸುಮಾರು 10ರಿಂದ 20 ಲಕ್ಷ ಪ್ರಯಾಣಿಕ ಸಾಮರ್ಥ್ಯದೊಂದಿಗೆ ಪ್ರಾರಂಭವಾದ ಈ ವಿಮಾನ ನಿಲ್ದಾಣವನ್ನು ನವದೆಹಲಿಯ ಹೆಚ್ಚು ಜನನಿಬಿಡ ನಿಲ್ದಾಣಗಳಿಗೆ ಪರ್ಯಾಯವಾಗಿ ನಿರ್ಮಿಸಲಾಗಿತ್ತು ಎನ್ನಲಾಗಿದೆ. ಅದಾಗ್ಯೂ, ಉದ್ಘಾಟನೆಯಾಗಿ ಹಲವಾರು ವರ್ಷಗಳಾದರೂ ಹಿಸಾರ್‌ನ ವಿಮಾನ ನಿಲ್ದಾಣವು ಇನ್ನೂ ಕಾರ್ಯನಿರ್ವಹಿಸುತ್ತಿಲ್ಲ ಎಂದು ವರದಿ ಉಲ್ಲೇಖಿಸಿದೆ.

ಆಗಮನ ಮತ್ತು ನಿರ್ಗಮನ ಸಭಾಂಗಣಗಳು ಹೆಚ್ಚಾಗಿ ಖಾಲಿಯಾಗಿದ್ದು, ಬೀದಿ ನಾಯಿಗಳು ರನ್‌ವೇಯಲ್ಲಿ ವಿಶ್ರಾಂತಿ ಪಡೆಯುತ್ತಿವೆ ಎಂದ ವರದಿ ಹೇಳಿದೆ. ವಿಮಾನ ನಿಲ್ದಾಣವು ಮಿಲಿಟರಿ ಜೆಟ್‌ಗಳು ಮತ್ತು ರಾಜಕಾರಣಿಗಳನ್ನು ಕರೆದೊಯ್ಯುವ ವಿರಳ ವಿಮಾನಗಳನ್ನು ಹೊಂದಿದ್ದರೂ, 2021 ರಿಂದ ಹಿಸಾರ್‌ನಿಂದ ಕೆಲವೇ ಕೆಲವು ಸಬ್ಸಿಡಿ ವಾಣಿಜ್ಯ ವಿಮಾನಗಳು ಹಾರಾಟ ನಡೆಸಿವೆ ಎಂದು ಅದು ಹೇಳಿದೆ.

ವಿಮಾನಯಾನದ ಸರಾಸರಿ ಟಿಕೆಟ್ ಬೆಲೆಗಳು ದೇಶದ ಹೆಚ್ಚಿನ ಜನರಿಗೆ ಇನ್ನೂ ತುಂಬಾ ದುಬಾರಿಯಾಗಿದ್ದರೂ ಚುನಾಯಿತ ನಾಯಕರು ಮತದಾರರನ್ನು ಮೆಚ್ಚಿಸಲು ಆಕರ್ಷಕ ಯೋಜನೆಗಳಿಗೆ ಹಣಕಾಸು ಒದಗಿಸುವ ಒತ್ತಡದಲ್ಲಿದ್ದಾರೆ ಎಂದು ವರದಿ ಹೇಳಿದೆ. ದೇಶದ ಅತ್ಯಂತ ಬಡ ರಾಜ್ಯಗಳಲ್ಲಿ ಒಂದಾದ ಮಧ್ಯಪ್ರದೇಶದ ಮುಖ್ಯಮಂತ್ರಿ ಇತ್ತೀಚೆಗೆ ಪ್ರತಿ 200 ಕಿಲೋಮೀಟರ್ ಭೂಮಿಗೆ ಒಂದು ವಿಮಾನ ನಿಲ್ದಾಣವನ್ನು ನಿರ್ಮಿಸುವುದಾಗಿ ಭರವಸೆ ನೀಡಿರುವ ಬಗ್ಗೆ ವರದಿ ಉಲ್ಲೇಖಿಸಿದೆ.

“ಸ್ಪಷ್ಟವಾಗಿ, ಭಾರತವು ತನ್ನ ವಾಯುಯಾನ ಮೂಲಸೌಕರ್ಯವನ್ನು ಸಂಚಾರ ಮತ್ತು ಬೇಡಿಕೆಯ ತರ್ಕದ ಆಧಾರದ ಮೇಲೆ ಯೋಜಿಸುತ್ತಿಲ್ಲ, ಬದಲಿಗೆ ಚುನಾವಣೆ ಮತ್ತು ರಾಜಕೀಯ ಕಾರ್ಯಸೂಚಿಗಳ ಆಧಾರದ ಮೇಲೆ ಯೋಜಿಸುತ್ತಿದೆ” ಎಂದು ವಾಯುಯಾನ ಸಲಹಾ ಸಂಸ್ಥೆಯಾದ ಮಾರ್ಟಿನ್ ಕನ್ಸಲ್ಟಿಂಗ್‌ನ ಮುಖ್ಯ ಕಾರ್ಯನಿರ್ವಾಹಕ ಮಾರ್ಕ್ ಮಾರ್ಟಿನ್ ಹೇಳಿದರು.

ದೇಶದ ದೊಡ್ಡ ನಗರಗಳಲ್ಲಿ, ಅನೇಕ ಮಹಾನಗರಗಳು ಕೂಡಾ ವಿಮಾನಯಾನ ಉದ್ದಿಮೆಯಲ್ಲಿ ಹೆಣಗಾಡುತ್ತಿವೆ ಎಂದು ವರದಿ ಉಲ್ಲೇಖಿಸಿದೆ. ಮುಂಬೈನ ಪ್ರಯಾಣಿಕರ ಸಂಖ್ಯೆ ಅದರ ಮೂಲ ಗುರಿಯ ಸುಮಾರು 30% ರಷ್ಟಿದ್ದು, ಬೆಂಗಳೂರಿನದು 6% ರಷ್ಟಿದೆ. ನವದೆಹಲಿ ಮತ್ತು ಕೋಲ್ಕತ್ತಾ ಹೊರತುಪಡಿಸಿ, ಭಾರತದಾದ್ಯಂತದ ಮಹಾನಗರಗಳಲ್ಲಿ ನಿಜವಾದ ಪ್ರಯಾಣಿಕರ ಸಂಖ್ಯೆ ಅಪೇಕ್ಷಿತ ಮಟ್ಟಕ್ಕಿಂತ 20% ಕ್ಕಿಂತ ಕಡಿಮೆಯಿದೆ ಎಂದು ವರದಿ ಉಲ್ಲೇಖಿಸಿದೆ.

ಸರ್ಕಾರದ ಅಧಿಕೃತ ಲೆಕ್ಕಪರಿಶೋಧಕರು(ಸಿಎಜಿ) ಹಿಂದೆ ಕೆಲವು ಯೋಜನೆಗಳನ್ನು ಅವುಗಳ ಅಗತ್ಯಕ್ಕಿಂತ ವರ್ಷಗಳ ಅಥವಾ ದಶಕಗಳ ಮೊದಲೇ ನಿರ್ಮಿಸಲಾಗಿದೆ ಎಂದು ಹೇಳಿದ್ದನ್ನು ವರದಿಯು ಉಲ್ಲೇಖಿಸಿದೆ.

“ಸ್ಪಷ್ಟವಾಗಿ, ಭಾರತವು ತನ್ನ ವಾಯುಯಾನ ಮೂಲಸೌಕರ್ಯವನ್ನು ಸಂಚಾರ ಮತ್ತು ಬೇಡಿಕೆಯ ತರ್ಕದ ಆಧಾರದ ಮೇಲೆ ಯೋಜಿಸುತ್ತಿಲ್ಲ. ಬದಲಿಗೆ ಚುನಾವಣೆ ಮತ್ತು ರಾಜಕೀಯ ಕಾರ್ಯಸೂಚಿಗಳ ಆಧಾರದ ಮೇಲೆ ಯೋಜಿಸುತ್ತಿದೆ” ಎಂದು ವಾಯುಯಾನ ಸಲಹಾ ಸಂಸ್ಥೆಯಾದ ಮಾರ್ಟಿನ್ ಕನ್ಸಲ್ಟಿಂಗ್‌ನ ಮುಖ್ಯ ಕಾರ್ಯನಿರ್ವಾಹಕ ಮಾರ್ಕ್ ಮಾರ್ಟಿನ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಭಾರತದ ಖಾಲಿ ವಿಮಾನ ನಿಲ್ದಾಣಗಳು ಬಹುಶಃ ದೇಶದ ನಿರ್ಮಾಣ ಸಮಸ್ಯೆಗಳ ಸಂಕೇತವಾಗಿದೆ ಎಂದು ವರದಿ ಹೇಳಿದ್ದು, ಭಾರತದಲ್ಲಿ ವಾಯು ಸಂಚಾರ ಸಂಖ್ಯೆಗಳು ಎಂದಿಗೂ ಹೆಚ್ಚಿಲ್ಲವಾದರೂ, ಪ್ರಯಾಣಿಕರ ಅಡಚಣೆಗಳು ಹೆಚ್ಚು ಸ್ಪಷ್ಟವಾಗಿರುವಂತಹ ಸ್ಥಳಗಳಲ್ಲಿ, ಸಾಮಾನ್ಯವಾಗಿ ಹೆಚ್ಚಿನ ದಟ್ಟಣೆಯ ಮಹಾನಗರಗಳಲ್ಲಿ, ತೆರಿಗೆ ಹಣಗಳನ್ನು ಪರಿಣಾಮಕಾರಿಯಾಗಿ ಖರ್ಚು ಮಾಡಲಾಗುತ್ತಿದೆಯೇ ಎಂಬ ಪ್ರಶ್ನೆಗಳನ್ನು ವರದಿ ಎತ್ತಿದೆ.

“ಈ ವಿಮಾನ ನಿಲ್ದಾಣಗಳು ಬೇಡಿಕೆಯ ಸವಾಲುಗಳನ್ನು ಎದುರಿಸುತ್ತಿವೆ ಮತ್ತು ಇದು ಶೀಘ್ರದಲ್ಲೇ ಮುಂದುವರಿಯುತ್ತದೆ” ಎಂದು ವಾಯುಯಾನ ಸಲಹಾ ಸಂಸ್ಥೆಯಾದ CAPA ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಮತ್ತು ನಿರ್ದೇಶಕ ಕಪಿಲ್ ಕೌಲ್ ಹೇಳಿದ್ದಾರೆ ಎಂದು ವರದಿ ಹೇಳಿದೆ.

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಪ್ರಸ್ತುತ ಅಧಿಕಾರಿಗಳು ನಷ್ಟ ಅನುಭವಿಸುತ್ತಿರುವ ವಿಮಾನ ನಿಲ್ದಾಣಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಖಾಸಗಿಯಾಗಿ ಹೇಳಿಕೊಂಡಿದ್ದಾರೆ ಎಂದು ವರದಿ ಹೇಳಿದೆ. ಸರ್ಕಾರವು ಇನ್ನೂ 10 ರಿಂದ 15 ವರ್ಷಗಳ ಕಾಲ ಸಂಕಷ್ಟದಲ್ಲಿರುವ ವಿಮಾನ ನಿಲ್ದಾಣಗಳಿಗೆ “ಕಾರ್ಯಸಾಧ್ಯತೆಯ ಅಂತರ ನಿಧಿ”ಯನ್ನು ನೀಡಬೇಕಾಗಬಹುದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹೇಳಿದೆ ಎಂದು ವರದಿ ಉಲ್ಲೇಖಿಸಿದೆ.

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವರದಿಯಲ್ಲಿನ ಅಂದಾಜಿನ ಪ್ರಕಾರ, ಸಣ್ಣ ವಿಮಾನ ನಿಲ್ದಾಣಗಳು ತಮ್ಮ ನಿರ್ವಹಣಾ ವೆಚ್ಚವನ್ನು ಮರುಪಡೆಯಲು ದಿನಕ್ಕೆ ಕನಿಷ್ಠ 8 ರಿಂದ 10 ವಾಣಿಜ್ಯ ವಿಮಾನಗಳ ಅಗತ್ಯವಿರುತ್ತದೆ. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ 140 ವಿಮಾನ ನಿಲ್ದಾಣಗಳಲ್ಲಿ ಅರ್ಧದಷ್ಟು ವಿಮಾನಗಳು ದಿನಕ್ಕೆ 10 ಕ್ಕಿಂತ ಕಡಿಮೆ ವಿಮಾನಗಳನ್ನು ನಿರ್ವಹಿಸುತ್ತದೆ ಎಂದು ಬ್ಲೂಮ್‌ಬರ್ಗ್ ನ್ಯೂಸ್ ಅಂಕಿ ಅಂಶಗಳನ್ನು ಉಲ್ಲೇಖಿಸಿ ಹೇಳಿದೆ. ಭೂತಬಂಗಲೆಯಾದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಪರೇಷನ್ ಕಾಗರ್ ತಕ್ಷಣ ನಿಲ್ಲಿಸಿ, ನಕ್ಸಲರೊಂದಿಗೆ ಮಾತುಕತೆ ನಡೆಸಿ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಬಿ.ವಿ.ರಾಘುವುಲು

ಅಪರೇಷನ್ ಕಾಗರ್ ತಕ್ಷಣ ನಿಲ್ಲಿಸಿ, ನಕ್ಸಲರೊಂದಿಗೆ ಮಾತುಕತೆ ನಡೆಸಿ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಬಿ.ವಿ.ರಾಘುವುಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...