Homeಮುಖಪುಟಭೂತಬಂಗಲೆಯಾದ ದೇಶದ 12 ವಿಮಾನ ನಿಲ್ದಾಣಗಳು; ರನ್‌ವೇಯಲ್ಲಿ ಬೀದಿನಾಯಿಗಳು: ವರದಿ

ಭೂತಬಂಗಲೆಯಾದ ದೇಶದ 12 ವಿಮಾನ ನಿಲ್ದಾಣಗಳು; ರನ್‌ವೇಯಲ್ಲಿ ಬೀದಿನಾಯಿಗಳು: ವರದಿ

- Advertisement -
- Advertisement -

ಭಾರತದ 140 ವಿಮಾನ ನಿಲ್ದಾಣಗಳಲ್ಲಿ, 12 ವಿಮಾನ ನಿಲ್ದಾಣಗಳಿಂದ ಕಳೆದ ಡಿಸೆಂಬರ್ ಮತ್ತು ಮಾರ್ಚ್ ನಡುವೆ ಒಬ್ಬ ಪ್ರಯಾಣಿಕ ಕೂಡಾ ಪ್ರಯಾಣ ಮಾಡಿಲ್ಲ ಎಂದು ಸರ್ಕಾರಿ ವಾಯುಯಾನ ಅಂಕಿ ಅಂಶಗಳನ್ನು ಉಲ್ಲೇಖಿಸಿ ಬ್ಲೂಮ್‌ಬರ್ಗ್‌ ವರದಿ ಮಾಡಿದ್ದು, ಈ ವಿಮಾನ ನಿಲ್ದಾಣಗಳು ಭೂತಬಂಗಲೆಗಳಾಗಿ ಪರಿವರ್ತನೆಯಾಗಿದೆ ಎಂದು ವರದಿ ಉಲ್ಲೇಖಿಸಿದೆ. ಭೂತಬಂಗಲೆಯಾದ

ಈ ವಿಮಾನ ನಿಲ್ದಾಣಗಳಲ್ಲಿ ಹೆಚ್ಚಿನವು ಕಳೆದ ವರ್ಷದ ಬಹುತೇಕ ಸಮಯದಲ್ಲಿ ದಿನಕ್ಕೆ ಐದಕ್ಕಿಂತ ಕಡಿಮೆ ವಿಮಾನಗಳನ್ನು ಸರಾಸರಿಯಾಗಿ ನಿರ್ವಹಿಸಿದ್ದು, ಕೆಲವು ದಿನಗಳಲ್ಲಿ ಶೂನ್ಯ ವಿಮಾನಗಳನ್ನು ದಾಖಲಿಸಿವೆ ಎಂದು ವರದಿ ಹೇಳಿದೆ.

ಹರಿಯಾಣದ ಹಿಸಾರ್ ಎಂಬ ಸಣ್ಣ ನಗರದಲ್ಲಿ ಹೊಸ ವಿಮಾನ ನಿಲ್ದಾಣವನ್ನು ಇತ್ತಿಚೆಗೆ ಉದ್ಘಾಟಿಸಲಾಗಿತ್ತು. ಸುಮಾರು 10ರಿಂದ 20 ಲಕ್ಷ ಪ್ರಯಾಣಿಕ ಸಾಮರ್ಥ್ಯದೊಂದಿಗೆ ಪ್ರಾರಂಭವಾದ ಈ ವಿಮಾನ ನಿಲ್ದಾಣವನ್ನು ನವದೆಹಲಿಯ ಹೆಚ್ಚು ಜನನಿಬಿಡ ನಿಲ್ದಾಣಗಳಿಗೆ ಪರ್ಯಾಯವಾಗಿ ನಿರ್ಮಿಸಲಾಗಿತ್ತು ಎನ್ನಲಾಗಿದೆ. ಅದಾಗ್ಯೂ, ಉದ್ಘಾಟನೆಯಾಗಿ ಹಲವಾರು ವರ್ಷಗಳಾದರೂ ಹಿಸಾರ್‌ನ ವಿಮಾನ ನಿಲ್ದಾಣವು ಇನ್ನೂ ಕಾರ್ಯನಿರ್ವಹಿಸುತ್ತಿಲ್ಲ ಎಂದು ವರದಿ ಉಲ್ಲೇಖಿಸಿದೆ.

ಆಗಮನ ಮತ್ತು ನಿರ್ಗಮನ ಸಭಾಂಗಣಗಳು ಹೆಚ್ಚಾಗಿ ಖಾಲಿಯಾಗಿದ್ದು, ಬೀದಿ ನಾಯಿಗಳು ರನ್‌ವೇಯಲ್ಲಿ ವಿಶ್ರಾಂತಿ ಪಡೆಯುತ್ತಿವೆ ಎಂದ ವರದಿ ಹೇಳಿದೆ. ವಿಮಾನ ನಿಲ್ದಾಣವು ಮಿಲಿಟರಿ ಜೆಟ್‌ಗಳು ಮತ್ತು ರಾಜಕಾರಣಿಗಳನ್ನು ಕರೆದೊಯ್ಯುವ ವಿರಳ ವಿಮಾನಗಳನ್ನು ಹೊಂದಿದ್ದರೂ, 2021 ರಿಂದ ಹಿಸಾರ್‌ನಿಂದ ಕೆಲವೇ ಕೆಲವು ಸಬ್ಸಿಡಿ ವಾಣಿಜ್ಯ ವಿಮಾನಗಳು ಹಾರಾಟ ನಡೆಸಿವೆ ಎಂದು ಅದು ಹೇಳಿದೆ.

ವಿಮಾನಯಾನದ ಸರಾಸರಿ ಟಿಕೆಟ್ ಬೆಲೆಗಳು ದೇಶದ ಹೆಚ್ಚಿನ ಜನರಿಗೆ ಇನ್ನೂ ತುಂಬಾ ದುಬಾರಿಯಾಗಿದ್ದರೂ ಚುನಾಯಿತ ನಾಯಕರು ಮತದಾರರನ್ನು ಮೆಚ್ಚಿಸಲು ಆಕರ್ಷಕ ಯೋಜನೆಗಳಿಗೆ ಹಣಕಾಸು ಒದಗಿಸುವ ಒತ್ತಡದಲ್ಲಿದ್ದಾರೆ ಎಂದು ವರದಿ ಹೇಳಿದೆ. ದೇಶದ ಅತ್ಯಂತ ಬಡ ರಾಜ್ಯಗಳಲ್ಲಿ ಒಂದಾದ ಮಧ್ಯಪ್ರದೇಶದ ಮುಖ್ಯಮಂತ್ರಿ ಇತ್ತೀಚೆಗೆ ಪ್ರತಿ 200 ಕಿಲೋಮೀಟರ್ ಭೂಮಿಗೆ ಒಂದು ವಿಮಾನ ನಿಲ್ದಾಣವನ್ನು ನಿರ್ಮಿಸುವುದಾಗಿ ಭರವಸೆ ನೀಡಿರುವ ಬಗ್ಗೆ ವರದಿ ಉಲ್ಲೇಖಿಸಿದೆ.

“ಸ್ಪಷ್ಟವಾಗಿ, ಭಾರತವು ತನ್ನ ವಾಯುಯಾನ ಮೂಲಸೌಕರ್ಯವನ್ನು ಸಂಚಾರ ಮತ್ತು ಬೇಡಿಕೆಯ ತರ್ಕದ ಆಧಾರದ ಮೇಲೆ ಯೋಜಿಸುತ್ತಿಲ್ಲ, ಬದಲಿಗೆ ಚುನಾವಣೆ ಮತ್ತು ರಾಜಕೀಯ ಕಾರ್ಯಸೂಚಿಗಳ ಆಧಾರದ ಮೇಲೆ ಯೋಜಿಸುತ್ತಿದೆ” ಎಂದು ವಾಯುಯಾನ ಸಲಹಾ ಸಂಸ್ಥೆಯಾದ ಮಾರ್ಟಿನ್ ಕನ್ಸಲ್ಟಿಂಗ್‌ನ ಮುಖ್ಯ ಕಾರ್ಯನಿರ್ವಾಹಕ ಮಾರ್ಕ್ ಮಾರ್ಟಿನ್ ಹೇಳಿದರು.

ದೇಶದ ದೊಡ್ಡ ನಗರಗಳಲ್ಲಿ, ಅನೇಕ ಮಹಾನಗರಗಳು ಕೂಡಾ ವಿಮಾನಯಾನ ಉದ್ದಿಮೆಯಲ್ಲಿ ಹೆಣಗಾಡುತ್ತಿವೆ ಎಂದು ವರದಿ ಉಲ್ಲೇಖಿಸಿದೆ. ಮುಂಬೈನ ಪ್ರಯಾಣಿಕರ ಸಂಖ್ಯೆ ಅದರ ಮೂಲ ಗುರಿಯ ಸುಮಾರು 30% ರಷ್ಟಿದ್ದು, ಬೆಂಗಳೂರಿನದು 6% ರಷ್ಟಿದೆ. ನವದೆಹಲಿ ಮತ್ತು ಕೋಲ್ಕತ್ತಾ ಹೊರತುಪಡಿಸಿ, ಭಾರತದಾದ್ಯಂತದ ಮಹಾನಗರಗಳಲ್ಲಿ ನಿಜವಾದ ಪ್ರಯಾಣಿಕರ ಸಂಖ್ಯೆ ಅಪೇಕ್ಷಿತ ಮಟ್ಟಕ್ಕಿಂತ 20% ಕ್ಕಿಂತ ಕಡಿಮೆಯಿದೆ ಎಂದು ವರದಿ ಉಲ್ಲೇಖಿಸಿದೆ.

ಸರ್ಕಾರದ ಅಧಿಕೃತ ಲೆಕ್ಕಪರಿಶೋಧಕರು(ಸಿಎಜಿ) ಹಿಂದೆ ಕೆಲವು ಯೋಜನೆಗಳನ್ನು ಅವುಗಳ ಅಗತ್ಯಕ್ಕಿಂತ ವರ್ಷಗಳ ಅಥವಾ ದಶಕಗಳ ಮೊದಲೇ ನಿರ್ಮಿಸಲಾಗಿದೆ ಎಂದು ಹೇಳಿದ್ದನ್ನು ವರದಿಯು ಉಲ್ಲೇಖಿಸಿದೆ.

“ಸ್ಪಷ್ಟವಾಗಿ, ಭಾರತವು ತನ್ನ ವಾಯುಯಾನ ಮೂಲಸೌಕರ್ಯವನ್ನು ಸಂಚಾರ ಮತ್ತು ಬೇಡಿಕೆಯ ತರ್ಕದ ಆಧಾರದ ಮೇಲೆ ಯೋಜಿಸುತ್ತಿಲ್ಲ. ಬದಲಿಗೆ ಚುನಾವಣೆ ಮತ್ತು ರಾಜಕೀಯ ಕಾರ್ಯಸೂಚಿಗಳ ಆಧಾರದ ಮೇಲೆ ಯೋಜಿಸುತ್ತಿದೆ” ಎಂದು ವಾಯುಯಾನ ಸಲಹಾ ಸಂಸ್ಥೆಯಾದ ಮಾರ್ಟಿನ್ ಕನ್ಸಲ್ಟಿಂಗ್‌ನ ಮುಖ್ಯ ಕಾರ್ಯನಿರ್ವಾಹಕ ಮಾರ್ಕ್ ಮಾರ್ಟಿನ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಭಾರತದ ಖಾಲಿ ವಿಮಾನ ನಿಲ್ದಾಣಗಳು ಬಹುಶಃ ದೇಶದ ನಿರ್ಮಾಣ ಸಮಸ್ಯೆಗಳ ಸಂಕೇತವಾಗಿದೆ ಎಂದು ವರದಿ ಹೇಳಿದ್ದು, ಭಾರತದಲ್ಲಿ ವಾಯು ಸಂಚಾರ ಸಂಖ್ಯೆಗಳು ಎಂದಿಗೂ ಹೆಚ್ಚಿಲ್ಲವಾದರೂ, ಪ್ರಯಾಣಿಕರ ಅಡಚಣೆಗಳು ಹೆಚ್ಚು ಸ್ಪಷ್ಟವಾಗಿರುವಂತಹ ಸ್ಥಳಗಳಲ್ಲಿ, ಸಾಮಾನ್ಯವಾಗಿ ಹೆಚ್ಚಿನ ದಟ್ಟಣೆಯ ಮಹಾನಗರಗಳಲ್ಲಿ, ತೆರಿಗೆ ಹಣಗಳನ್ನು ಪರಿಣಾಮಕಾರಿಯಾಗಿ ಖರ್ಚು ಮಾಡಲಾಗುತ್ತಿದೆಯೇ ಎಂಬ ಪ್ರಶ್ನೆಗಳನ್ನು ವರದಿ ಎತ್ತಿದೆ.

“ಈ ವಿಮಾನ ನಿಲ್ದಾಣಗಳು ಬೇಡಿಕೆಯ ಸವಾಲುಗಳನ್ನು ಎದುರಿಸುತ್ತಿವೆ ಮತ್ತು ಇದು ಶೀಘ್ರದಲ್ಲೇ ಮುಂದುವರಿಯುತ್ತದೆ” ಎಂದು ವಾಯುಯಾನ ಸಲಹಾ ಸಂಸ್ಥೆಯಾದ CAPA ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಮತ್ತು ನಿರ್ದೇಶಕ ಕಪಿಲ್ ಕೌಲ್ ಹೇಳಿದ್ದಾರೆ ಎಂದು ವರದಿ ಹೇಳಿದೆ.

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಪ್ರಸ್ತುತ ಅಧಿಕಾರಿಗಳು ನಷ್ಟ ಅನುಭವಿಸುತ್ತಿರುವ ವಿಮಾನ ನಿಲ್ದಾಣಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಖಾಸಗಿಯಾಗಿ ಹೇಳಿಕೊಂಡಿದ್ದಾರೆ ಎಂದು ವರದಿ ಹೇಳಿದೆ. ಸರ್ಕಾರವು ಇನ್ನೂ 10 ರಿಂದ 15 ವರ್ಷಗಳ ಕಾಲ ಸಂಕಷ್ಟದಲ್ಲಿರುವ ವಿಮಾನ ನಿಲ್ದಾಣಗಳಿಗೆ “ಕಾರ್ಯಸಾಧ್ಯತೆಯ ಅಂತರ ನಿಧಿ”ಯನ್ನು ನೀಡಬೇಕಾಗಬಹುದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹೇಳಿದೆ ಎಂದು ವರದಿ ಉಲ್ಲೇಖಿಸಿದೆ.

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವರದಿಯಲ್ಲಿನ ಅಂದಾಜಿನ ಪ್ರಕಾರ, ಸಣ್ಣ ವಿಮಾನ ನಿಲ್ದಾಣಗಳು ತಮ್ಮ ನಿರ್ವಹಣಾ ವೆಚ್ಚವನ್ನು ಮರುಪಡೆಯಲು ದಿನಕ್ಕೆ ಕನಿಷ್ಠ 8 ರಿಂದ 10 ವಾಣಿಜ್ಯ ವಿಮಾನಗಳ ಅಗತ್ಯವಿರುತ್ತದೆ. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ 140 ವಿಮಾನ ನಿಲ್ದಾಣಗಳಲ್ಲಿ ಅರ್ಧದಷ್ಟು ವಿಮಾನಗಳು ದಿನಕ್ಕೆ 10 ಕ್ಕಿಂತ ಕಡಿಮೆ ವಿಮಾನಗಳನ್ನು ನಿರ್ವಹಿಸುತ್ತದೆ ಎಂದು ಬ್ಲೂಮ್‌ಬರ್ಗ್ ನ್ಯೂಸ್ ಅಂಕಿ ಅಂಶಗಳನ್ನು ಉಲ್ಲೇಖಿಸಿ ಹೇಳಿದೆ. ಭೂತಬಂಗಲೆಯಾದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಪರೇಷನ್ ಕಾಗರ್ ತಕ್ಷಣ ನಿಲ್ಲಿಸಿ, ನಕ್ಸಲರೊಂದಿಗೆ ಮಾತುಕತೆ ನಡೆಸಿ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಬಿ.ವಿ.ರಾಘುವುಲು

ಅಪರೇಷನ್ ಕಾಗರ್ ತಕ್ಷಣ ನಿಲ್ಲಿಸಿ, ನಕ್ಸಲರೊಂದಿಗೆ ಮಾತುಕತೆ ನಡೆಸಿ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಬಿ.ವಿ.ರಾಘುವುಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...