Homeಮುಖಪುಟಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ

ಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ

- Advertisement -
- Advertisement -

ಇದುವರೆಗೂ ಭಾರತೀಯ ರೈಲ್ವೆಯು ಶ್ರಮಿಕ್‌ ರೈಲುಗಳ ಮೂಲಕ 57 ಲಕ್ಷ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಸಾಗಿಸಿದ್ದು, ಕೇವಲ 26 ಲಕ್ಷ ವಲಸೆ ಕಾರ್ಮಿಕರು ಉಳಿದುಕೊಂಡಿದ್ದಾರೆ ಕೇಂದ್ರ ಸರ್ಕಾರದ ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ತನ್ನ ವೆಬ್‌ಸೈಟ್‌ನಲ್ಲಿ ದತ್ತಾಂಶವನ್ನು ಪ್ರಕಟಿಸಿದೆ.

ಅಂದರೆ ಉಳಿದ ಕೋಟ್ಯಾಂತರ ವಲಸೆ ಕಾರ್ಮಿಕರು ಬಸ್‌ ಅಥವಾ ನಡೆದುಕೊಂಡೇ ತಮ್ಮ ಸ್ಥಳಗಳನ್ನು ತಲುಪಿದ್ದಾರೆ ಎಂದು ಅಂದಾಜಿಸಬಹುದಾಗಿದೆ.

ಈ ಡೇಟಾದ ಬಿಡುಗಡೆ ಮುಖ್ಯವಾದುದು. ಏಕೆಂದರೆ ವಲಸೆ ಕಾರ್ಮಿಕರ ಸ್ಥಿತಿಗತಿ ಮತ್ತು ಅವರು ಭಾರತದಾದ್ಯಂತ ಹೇಗೆ ಹರಡಿದ್ದಾರೆ ಎಂದು ತಿಳಿಯಲು ಮಾಹಿತಿ ಹಕ್ಕು ಅರ್ಜಿಗಳನ್ನು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯಕ್ಕೆ ಸಲ್ಲಿಸಲಾಗಿತ್ತು.

ಉಳಿದುಕೊಂಡಿರುವ ವಲಸೆ ಕಾರ್ಮಿಕರಲ್ಲಿ ಶೇ.10 ರಷ್ಟು ಮಾತ್ರ ಪುನರ್ವಸತಿ ಕೇಂದ್ರದಲ್ಲಿದ್ದಾರೆ. ಶೇ.43 ರಷ್ಟು ಜನರು ತಮ್ಮ ಕೆಲಸದ ಸ್ಥಳದಲ್ಲಿದ್ದು, ಉಳಿದ ಶೇ.46 ರಷ್ಟು ಜನರು ಇತರ ಜಾಗಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ಆದರೆ ಸರ್ಕಾರದ ಬಿಡುಗಡೆ ಮಾಡಿದ ಅಂಕಿ ಅಂಶಗಳಲ್ಲಿ ಹಲವು ಅಚ್ಚರಿಗಳು ಕಾಣಸಿಗುತ್ತವೆ. 26 ಲಕ್ಷ ಕಾರ್ಮಿಕರಲ್ಲಿ ಚತ್ತೀಸ್‌ಘಡ ಒಂದರಲ್ಲೇ 10.85 ಲಕ್ಷ ಕಾರ್ಮಿಕರಿದ್ದಾರೆ. ಹೆಚ್ಚಿನ ಸಂಖ್ಯೆಯ ವಲಸೆ ಕಾರ್ಮಿಕರನ್ನು ಹೊಂದಿರುವ ಇತರ ರಾಜ್ಯಗಳು ಕೇರಳ 2.86 ಲಕ್ಷ, ಮಹಾರಾಷ್ಟ್ರ 2.01 ಲಕ್ಷ (ಹೆಚ್ಚುವರಿ 20,000 ಸೇರಿದಂತೆ), ತಮಿಳುನಾಡು 1.93 ಲಕ್ಷ, ತೆಲಂಗಾಣ 1.84 ಲಕ್ಷ ಮತ್ತು ಆಂಧ್ರಪ್ರದೇಶದಲ್ಲಿ 1 ಲಕ್ಷಕ್ಕಿಂತ ಕಡಿಮೆ ಜನರಿದ್ದಾರೆ.

ಒಡಿಶಾ, ರಾಜಸ್ಥಾನ, ಕರ್ನಾಟಕ, ಮತ್ತು ಜಮ್ಮು ಮತ್ತು ಕಾಶ್ಮೀರಗಳು 50,000 ಕ್ಕೂ ಹೆಚ್ಚು ವಲಸೆ ಕಾರ್ಮಿಕರನ್ನು ಹೊಂದಿರುವ ಇತರ ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಾಗಿವೆ.

ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯಗಳಾದ ಉತ್ತರ ಪ್ರದೇಶ (36,421), ಬಿಹಾರ (7,719), ಜಾರ್ಖಂಡ್ (16,616) ಮತ್ತು ಮಧ್ಯಪ್ರದೇಶ (9,621) ನಲ್ಲಿ ಕಡಿಮೆ ಸಂಖ್ಯೆಯ ವಲಸೆ ಕಾರ್ಮಿಕರು ಇದ್ದಾರೆ. ಇದು ಆ ರಾಜ್ಯಗಳಲ್ಲಿನ ಅವಕಾಶಗಳ ಕೊರತೆ, ಕಾರ್ಮಿರ ಸ್ನೇಹಿ ವಾತಾವರಣ ಇಲ್ಲದಿರುವುದನ್ನು ಸೂಚಿಸುತ್ತದೆ. ಆ ರಾಜ್ಯಗಳಿಂದ ಇತರೆ ರಾಜ್ಯಗಳಿಗೆ ವಲಸೆ ಹೋಗಿದ್ದಾರೆಯೇ ಹೊರತು, ಇತರೆ ರಾಜ್ಯಗಳಿಂದ ಈ ರಾಜ್ಯಗಳಿಗೆ ಜನ ವಲಸೆ ಬಂದಿಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.

ಅತಿ ಹೆಚ್ಚಿನ ಆಶ್ರಯ ನೀಡಿದ ಕೇರಳ

ಪುನರ್ವಸತಿ ಶಿಬಿರಗಳಲ್ಲಿ ವಲಸೆ ಕಾರ್ಮಿಕರಿಗೆ ಆತಿಥ್ಯ ವಹಿಸುವ ವಿಷಯ ಬಂದಾಗ, ಕೇರಳವು ಹೆಚ್ಚಿನ ಸಂಖ್ಯೆಯ 134,384 ಕಾರ್ಮಿಕರಿಗೆ ಅಂತಹ ಸೌಲಭ್ಯವನ್ನು ಒದಗಿಸುತ್ತದೆ ಎಂದು ಡೇಟಾ ಬಹಿರಂಗಪಡಿಸುತ್ತದೆ. ಇದು ಒಟ್ಟು ಉಳಿದುಕೊಂಡಿರುವವರಲ್ಲಿ ಶೇ 45% ರಷ್ಟು ವಲಸೆ ಕಾರ್ಮಿಕರನ್ನು ಹೊಂದಿದೆ. ಕೇರಳದಲ್ಲಿ 1.07 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಸಹ ಕೆಲಸದ ಸ್ಥಳಗಳಲ್ಲಿ ಉಳಿದಿದ್ದಾರೆ.

ಮತ್ತೊಂದೆಡೆ, ಚತ್ತೀಸ್‌ಘಡ, ತೆಲಂಗಾಣ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದಂತಹ ರಾಜ್ಯಗಳಲ್ಲಿ ವಲಸೆ ಕಾರ್ಮಿಕರನ್ನು ಪರಿಹಾರ ಶಿಬಿರಗಳಲ್ಲಿ ಉಳಿದುಕೊಳ್ಳಲು ಬಹಳ ಕಡಿಮೆ ವ್ಯವಸ್ಥೆ ಮಾಡಲಾಗಿದೆ ಎಂದು ಅಂಕಿ ಅಂಶಗಳು ತಿಳಿಸಿವೆ. ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಗಳಲ್ಲಿ ಬಹುಪಾಲು ಜನರು ತಮ್ಮ ಕೆಲಸದ ಸ್ಥಳಗಳಲ್ಲಿಯೇ ಇದ್ದಾರೆ. ಚತ್ತೀಸ್‌ಘಡದಲ್ಲಿ 80% ಕ್ಕಿಂತಲೂ ಹೆಚ್ಚು ಜನರು ಇತರ ಪ್ರದೇಶಗಳಲ್ಲಿಯೇ ಇದ್ದಾರೆ.


ಇದನ್ನೂ ಓದಿ: ಒಬಿಸಿ ಅಭ್ಯರ್ಥಿಗಳಿಗೆ ನೀಟ್ ಮೀಸಲಾತಿಯಲ್ಲಿ ಅನ್ಯಾಯ: ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...