Homeಮುಖಪುಟಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ

ಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ

- Advertisement -
- Advertisement -

ಇದುವರೆಗೂ ಭಾರತೀಯ ರೈಲ್ವೆಯು ಶ್ರಮಿಕ್‌ ರೈಲುಗಳ ಮೂಲಕ 57 ಲಕ್ಷ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಸಾಗಿಸಿದ್ದು, ಕೇವಲ 26 ಲಕ್ಷ ವಲಸೆ ಕಾರ್ಮಿಕರು ಉಳಿದುಕೊಂಡಿದ್ದಾರೆ ಕೇಂದ್ರ ಸರ್ಕಾರದ ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ತನ್ನ ವೆಬ್‌ಸೈಟ್‌ನಲ್ಲಿ ದತ್ತಾಂಶವನ್ನು ಪ್ರಕಟಿಸಿದೆ.

ಅಂದರೆ ಉಳಿದ ಕೋಟ್ಯಾಂತರ ವಲಸೆ ಕಾರ್ಮಿಕರು ಬಸ್‌ ಅಥವಾ ನಡೆದುಕೊಂಡೇ ತಮ್ಮ ಸ್ಥಳಗಳನ್ನು ತಲುಪಿದ್ದಾರೆ ಎಂದು ಅಂದಾಜಿಸಬಹುದಾಗಿದೆ.

ಈ ಡೇಟಾದ ಬಿಡುಗಡೆ ಮುಖ್ಯವಾದುದು. ಏಕೆಂದರೆ ವಲಸೆ ಕಾರ್ಮಿಕರ ಸ್ಥಿತಿಗತಿ ಮತ್ತು ಅವರು ಭಾರತದಾದ್ಯಂತ ಹೇಗೆ ಹರಡಿದ್ದಾರೆ ಎಂದು ತಿಳಿಯಲು ಮಾಹಿತಿ ಹಕ್ಕು ಅರ್ಜಿಗಳನ್ನು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯಕ್ಕೆ ಸಲ್ಲಿಸಲಾಗಿತ್ತು.

ಉಳಿದುಕೊಂಡಿರುವ ವಲಸೆ ಕಾರ್ಮಿಕರಲ್ಲಿ ಶೇ.10 ರಷ್ಟು ಮಾತ್ರ ಪುನರ್ವಸತಿ ಕೇಂದ್ರದಲ್ಲಿದ್ದಾರೆ. ಶೇ.43 ರಷ್ಟು ಜನರು ತಮ್ಮ ಕೆಲಸದ ಸ್ಥಳದಲ್ಲಿದ್ದು, ಉಳಿದ ಶೇ.46 ರಷ್ಟು ಜನರು ಇತರ ಜಾಗಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ಆದರೆ ಸರ್ಕಾರದ ಬಿಡುಗಡೆ ಮಾಡಿದ ಅಂಕಿ ಅಂಶಗಳಲ್ಲಿ ಹಲವು ಅಚ್ಚರಿಗಳು ಕಾಣಸಿಗುತ್ತವೆ. 26 ಲಕ್ಷ ಕಾರ್ಮಿಕರಲ್ಲಿ ಚತ್ತೀಸ್‌ಘಡ ಒಂದರಲ್ಲೇ 10.85 ಲಕ್ಷ ಕಾರ್ಮಿಕರಿದ್ದಾರೆ. ಹೆಚ್ಚಿನ ಸಂಖ್ಯೆಯ ವಲಸೆ ಕಾರ್ಮಿಕರನ್ನು ಹೊಂದಿರುವ ಇತರ ರಾಜ್ಯಗಳು ಕೇರಳ 2.86 ಲಕ್ಷ, ಮಹಾರಾಷ್ಟ್ರ 2.01 ಲಕ್ಷ (ಹೆಚ್ಚುವರಿ 20,000 ಸೇರಿದಂತೆ), ತಮಿಳುನಾಡು 1.93 ಲಕ್ಷ, ತೆಲಂಗಾಣ 1.84 ಲಕ್ಷ ಮತ್ತು ಆಂಧ್ರಪ್ರದೇಶದಲ್ಲಿ 1 ಲಕ್ಷಕ್ಕಿಂತ ಕಡಿಮೆ ಜನರಿದ್ದಾರೆ.

ಒಡಿಶಾ, ರಾಜಸ್ಥಾನ, ಕರ್ನಾಟಕ, ಮತ್ತು ಜಮ್ಮು ಮತ್ತು ಕಾಶ್ಮೀರಗಳು 50,000 ಕ್ಕೂ ಹೆಚ್ಚು ವಲಸೆ ಕಾರ್ಮಿಕರನ್ನು ಹೊಂದಿರುವ ಇತರ ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಾಗಿವೆ.

ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯಗಳಾದ ಉತ್ತರ ಪ್ರದೇಶ (36,421), ಬಿಹಾರ (7,719), ಜಾರ್ಖಂಡ್ (16,616) ಮತ್ತು ಮಧ್ಯಪ್ರದೇಶ (9,621) ನಲ್ಲಿ ಕಡಿಮೆ ಸಂಖ್ಯೆಯ ವಲಸೆ ಕಾರ್ಮಿಕರು ಇದ್ದಾರೆ. ಇದು ಆ ರಾಜ್ಯಗಳಲ್ಲಿನ ಅವಕಾಶಗಳ ಕೊರತೆ, ಕಾರ್ಮಿರ ಸ್ನೇಹಿ ವಾತಾವರಣ ಇಲ್ಲದಿರುವುದನ್ನು ಸೂಚಿಸುತ್ತದೆ. ಆ ರಾಜ್ಯಗಳಿಂದ ಇತರೆ ರಾಜ್ಯಗಳಿಗೆ ವಲಸೆ ಹೋಗಿದ್ದಾರೆಯೇ ಹೊರತು, ಇತರೆ ರಾಜ್ಯಗಳಿಂದ ಈ ರಾಜ್ಯಗಳಿಗೆ ಜನ ವಲಸೆ ಬಂದಿಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.

ಅತಿ ಹೆಚ್ಚಿನ ಆಶ್ರಯ ನೀಡಿದ ಕೇರಳ

ಪುನರ್ವಸತಿ ಶಿಬಿರಗಳಲ್ಲಿ ವಲಸೆ ಕಾರ್ಮಿಕರಿಗೆ ಆತಿಥ್ಯ ವಹಿಸುವ ವಿಷಯ ಬಂದಾಗ, ಕೇರಳವು ಹೆಚ್ಚಿನ ಸಂಖ್ಯೆಯ 134,384 ಕಾರ್ಮಿಕರಿಗೆ ಅಂತಹ ಸೌಲಭ್ಯವನ್ನು ಒದಗಿಸುತ್ತದೆ ಎಂದು ಡೇಟಾ ಬಹಿರಂಗಪಡಿಸುತ್ತದೆ. ಇದು ಒಟ್ಟು ಉಳಿದುಕೊಂಡಿರುವವರಲ್ಲಿ ಶೇ 45% ರಷ್ಟು ವಲಸೆ ಕಾರ್ಮಿಕರನ್ನು ಹೊಂದಿದೆ. ಕೇರಳದಲ್ಲಿ 1.07 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಸಹ ಕೆಲಸದ ಸ್ಥಳಗಳಲ್ಲಿ ಉಳಿದಿದ್ದಾರೆ.

ಮತ್ತೊಂದೆಡೆ, ಚತ್ತೀಸ್‌ಘಡ, ತೆಲಂಗಾಣ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದಂತಹ ರಾಜ್ಯಗಳಲ್ಲಿ ವಲಸೆ ಕಾರ್ಮಿಕರನ್ನು ಪರಿಹಾರ ಶಿಬಿರಗಳಲ್ಲಿ ಉಳಿದುಕೊಳ್ಳಲು ಬಹಳ ಕಡಿಮೆ ವ್ಯವಸ್ಥೆ ಮಾಡಲಾಗಿದೆ ಎಂದು ಅಂಕಿ ಅಂಶಗಳು ತಿಳಿಸಿವೆ. ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಗಳಲ್ಲಿ ಬಹುಪಾಲು ಜನರು ತಮ್ಮ ಕೆಲಸದ ಸ್ಥಳಗಳಲ್ಲಿಯೇ ಇದ್ದಾರೆ. ಚತ್ತೀಸ್‌ಘಡದಲ್ಲಿ 80% ಕ್ಕಿಂತಲೂ ಹೆಚ್ಚು ಜನರು ಇತರ ಪ್ರದೇಶಗಳಲ್ಲಿಯೇ ಇದ್ದಾರೆ.


ಇದನ್ನೂ ಓದಿ: ಒಬಿಸಿ ಅಭ್ಯರ್ಥಿಗಳಿಗೆ ನೀಟ್ ಮೀಸಲಾತಿಯಲ್ಲಿ ಅನ್ಯಾಯ: ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...