Homeಮುಖಪುಟಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ

ಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ

- Advertisement -
- Advertisement -

ಇದುವರೆಗೂ ಭಾರತೀಯ ರೈಲ್ವೆಯು ಶ್ರಮಿಕ್‌ ರೈಲುಗಳ ಮೂಲಕ 57 ಲಕ್ಷ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಸಾಗಿಸಿದ್ದು, ಕೇವಲ 26 ಲಕ್ಷ ವಲಸೆ ಕಾರ್ಮಿಕರು ಉಳಿದುಕೊಂಡಿದ್ದಾರೆ ಕೇಂದ್ರ ಸರ್ಕಾರದ ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ತನ್ನ ವೆಬ್‌ಸೈಟ್‌ನಲ್ಲಿ ದತ್ತಾಂಶವನ್ನು ಪ್ರಕಟಿಸಿದೆ.

ಅಂದರೆ ಉಳಿದ ಕೋಟ್ಯಾಂತರ ವಲಸೆ ಕಾರ್ಮಿಕರು ಬಸ್‌ ಅಥವಾ ನಡೆದುಕೊಂಡೇ ತಮ್ಮ ಸ್ಥಳಗಳನ್ನು ತಲುಪಿದ್ದಾರೆ ಎಂದು ಅಂದಾಜಿಸಬಹುದಾಗಿದೆ.

ಈ ಡೇಟಾದ ಬಿಡುಗಡೆ ಮುಖ್ಯವಾದುದು. ಏಕೆಂದರೆ ವಲಸೆ ಕಾರ್ಮಿಕರ ಸ್ಥಿತಿಗತಿ ಮತ್ತು ಅವರು ಭಾರತದಾದ್ಯಂತ ಹೇಗೆ ಹರಡಿದ್ದಾರೆ ಎಂದು ತಿಳಿಯಲು ಮಾಹಿತಿ ಹಕ್ಕು ಅರ್ಜಿಗಳನ್ನು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯಕ್ಕೆ ಸಲ್ಲಿಸಲಾಗಿತ್ತು.

ಉಳಿದುಕೊಂಡಿರುವ ವಲಸೆ ಕಾರ್ಮಿಕರಲ್ಲಿ ಶೇ.10 ರಷ್ಟು ಮಾತ್ರ ಪುನರ್ವಸತಿ ಕೇಂದ್ರದಲ್ಲಿದ್ದಾರೆ. ಶೇ.43 ರಷ್ಟು ಜನರು ತಮ್ಮ ಕೆಲಸದ ಸ್ಥಳದಲ್ಲಿದ್ದು, ಉಳಿದ ಶೇ.46 ರಷ್ಟು ಜನರು ಇತರ ಜಾಗಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ಆದರೆ ಸರ್ಕಾರದ ಬಿಡುಗಡೆ ಮಾಡಿದ ಅಂಕಿ ಅಂಶಗಳಲ್ಲಿ ಹಲವು ಅಚ್ಚರಿಗಳು ಕಾಣಸಿಗುತ್ತವೆ. 26 ಲಕ್ಷ ಕಾರ್ಮಿಕರಲ್ಲಿ ಚತ್ತೀಸ್‌ಘಡ ಒಂದರಲ್ಲೇ 10.85 ಲಕ್ಷ ಕಾರ್ಮಿಕರಿದ್ದಾರೆ. ಹೆಚ್ಚಿನ ಸಂಖ್ಯೆಯ ವಲಸೆ ಕಾರ್ಮಿಕರನ್ನು ಹೊಂದಿರುವ ಇತರ ರಾಜ್ಯಗಳು ಕೇರಳ 2.86 ಲಕ್ಷ, ಮಹಾರಾಷ್ಟ್ರ 2.01 ಲಕ್ಷ (ಹೆಚ್ಚುವರಿ 20,000 ಸೇರಿದಂತೆ), ತಮಿಳುನಾಡು 1.93 ಲಕ್ಷ, ತೆಲಂಗಾಣ 1.84 ಲಕ್ಷ ಮತ್ತು ಆಂಧ್ರಪ್ರದೇಶದಲ್ಲಿ 1 ಲಕ್ಷಕ್ಕಿಂತ ಕಡಿಮೆ ಜನರಿದ್ದಾರೆ.

ಒಡಿಶಾ, ರಾಜಸ್ಥಾನ, ಕರ್ನಾಟಕ, ಮತ್ತು ಜಮ್ಮು ಮತ್ತು ಕಾಶ್ಮೀರಗಳು 50,000 ಕ್ಕೂ ಹೆಚ್ಚು ವಲಸೆ ಕಾರ್ಮಿಕರನ್ನು ಹೊಂದಿರುವ ಇತರ ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಾಗಿವೆ.

ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯಗಳಾದ ಉತ್ತರ ಪ್ರದೇಶ (36,421), ಬಿಹಾರ (7,719), ಜಾರ್ಖಂಡ್ (16,616) ಮತ್ತು ಮಧ್ಯಪ್ರದೇಶ (9,621) ನಲ್ಲಿ ಕಡಿಮೆ ಸಂಖ್ಯೆಯ ವಲಸೆ ಕಾರ್ಮಿಕರು ಇದ್ದಾರೆ. ಇದು ಆ ರಾಜ್ಯಗಳಲ್ಲಿನ ಅವಕಾಶಗಳ ಕೊರತೆ, ಕಾರ್ಮಿರ ಸ್ನೇಹಿ ವಾತಾವರಣ ಇಲ್ಲದಿರುವುದನ್ನು ಸೂಚಿಸುತ್ತದೆ. ಆ ರಾಜ್ಯಗಳಿಂದ ಇತರೆ ರಾಜ್ಯಗಳಿಗೆ ವಲಸೆ ಹೋಗಿದ್ದಾರೆಯೇ ಹೊರತು, ಇತರೆ ರಾಜ್ಯಗಳಿಂದ ಈ ರಾಜ್ಯಗಳಿಗೆ ಜನ ವಲಸೆ ಬಂದಿಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.

ಅತಿ ಹೆಚ್ಚಿನ ಆಶ್ರಯ ನೀಡಿದ ಕೇರಳ

ಪುನರ್ವಸತಿ ಶಿಬಿರಗಳಲ್ಲಿ ವಲಸೆ ಕಾರ್ಮಿಕರಿಗೆ ಆತಿಥ್ಯ ವಹಿಸುವ ವಿಷಯ ಬಂದಾಗ, ಕೇರಳವು ಹೆಚ್ಚಿನ ಸಂಖ್ಯೆಯ 134,384 ಕಾರ್ಮಿಕರಿಗೆ ಅಂತಹ ಸೌಲಭ್ಯವನ್ನು ಒದಗಿಸುತ್ತದೆ ಎಂದು ಡೇಟಾ ಬಹಿರಂಗಪಡಿಸುತ್ತದೆ. ಇದು ಒಟ್ಟು ಉಳಿದುಕೊಂಡಿರುವವರಲ್ಲಿ ಶೇ 45% ರಷ್ಟು ವಲಸೆ ಕಾರ್ಮಿಕರನ್ನು ಹೊಂದಿದೆ. ಕೇರಳದಲ್ಲಿ 1.07 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಸಹ ಕೆಲಸದ ಸ್ಥಳಗಳಲ್ಲಿ ಉಳಿದಿದ್ದಾರೆ.

ಮತ್ತೊಂದೆಡೆ, ಚತ್ತೀಸ್‌ಘಡ, ತೆಲಂಗಾಣ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದಂತಹ ರಾಜ್ಯಗಳಲ್ಲಿ ವಲಸೆ ಕಾರ್ಮಿಕರನ್ನು ಪರಿಹಾರ ಶಿಬಿರಗಳಲ್ಲಿ ಉಳಿದುಕೊಳ್ಳಲು ಬಹಳ ಕಡಿಮೆ ವ್ಯವಸ್ಥೆ ಮಾಡಲಾಗಿದೆ ಎಂದು ಅಂಕಿ ಅಂಶಗಳು ತಿಳಿಸಿವೆ. ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಗಳಲ್ಲಿ ಬಹುಪಾಲು ಜನರು ತಮ್ಮ ಕೆಲಸದ ಸ್ಥಳಗಳಲ್ಲಿಯೇ ಇದ್ದಾರೆ. ಚತ್ತೀಸ್‌ಘಡದಲ್ಲಿ 80% ಕ್ಕಿಂತಲೂ ಹೆಚ್ಚು ಜನರು ಇತರ ಪ್ರದೇಶಗಳಲ್ಲಿಯೇ ಇದ್ದಾರೆ.


ಇದನ್ನೂ ಓದಿ: ಒಬಿಸಿ ಅಭ್ಯರ್ಥಿಗಳಿಗೆ ನೀಟ್ ಮೀಸಲಾತಿಯಲ್ಲಿ ಅನ್ಯಾಯ: ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....