Homeಮುಖಪುಟಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ

ಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ

- Advertisement -
- Advertisement -

ಇದುವರೆಗೂ ಭಾರತೀಯ ರೈಲ್ವೆಯು ಶ್ರಮಿಕ್‌ ರೈಲುಗಳ ಮೂಲಕ 57 ಲಕ್ಷ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಸಾಗಿಸಿದ್ದು, ಕೇವಲ 26 ಲಕ್ಷ ವಲಸೆ ಕಾರ್ಮಿಕರು ಉಳಿದುಕೊಂಡಿದ್ದಾರೆ ಕೇಂದ್ರ ಸರ್ಕಾರದ ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ತನ್ನ ವೆಬ್‌ಸೈಟ್‌ನಲ್ಲಿ ದತ್ತಾಂಶವನ್ನು ಪ್ರಕಟಿಸಿದೆ.

ಅಂದರೆ ಉಳಿದ ಕೋಟ್ಯಾಂತರ ವಲಸೆ ಕಾರ್ಮಿಕರು ಬಸ್‌ ಅಥವಾ ನಡೆದುಕೊಂಡೇ ತಮ್ಮ ಸ್ಥಳಗಳನ್ನು ತಲುಪಿದ್ದಾರೆ ಎಂದು ಅಂದಾಜಿಸಬಹುದಾಗಿದೆ.

ಈ ಡೇಟಾದ ಬಿಡುಗಡೆ ಮುಖ್ಯವಾದುದು. ಏಕೆಂದರೆ ವಲಸೆ ಕಾರ್ಮಿಕರ ಸ್ಥಿತಿಗತಿ ಮತ್ತು ಅವರು ಭಾರತದಾದ್ಯಂತ ಹೇಗೆ ಹರಡಿದ್ದಾರೆ ಎಂದು ತಿಳಿಯಲು ಮಾಹಿತಿ ಹಕ್ಕು ಅರ್ಜಿಗಳನ್ನು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯಕ್ಕೆ ಸಲ್ಲಿಸಲಾಗಿತ್ತು.

ಉಳಿದುಕೊಂಡಿರುವ ವಲಸೆ ಕಾರ್ಮಿಕರಲ್ಲಿ ಶೇ.10 ರಷ್ಟು ಮಾತ್ರ ಪುನರ್ವಸತಿ ಕೇಂದ್ರದಲ್ಲಿದ್ದಾರೆ. ಶೇ.43 ರಷ್ಟು ಜನರು ತಮ್ಮ ಕೆಲಸದ ಸ್ಥಳದಲ್ಲಿದ್ದು, ಉಳಿದ ಶೇ.46 ರಷ್ಟು ಜನರು ಇತರ ಜಾಗಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ಆದರೆ ಸರ್ಕಾರದ ಬಿಡುಗಡೆ ಮಾಡಿದ ಅಂಕಿ ಅಂಶಗಳಲ್ಲಿ ಹಲವು ಅಚ್ಚರಿಗಳು ಕಾಣಸಿಗುತ್ತವೆ. 26 ಲಕ್ಷ ಕಾರ್ಮಿಕರಲ್ಲಿ ಚತ್ತೀಸ್‌ಘಡ ಒಂದರಲ್ಲೇ 10.85 ಲಕ್ಷ ಕಾರ್ಮಿಕರಿದ್ದಾರೆ. ಹೆಚ್ಚಿನ ಸಂಖ್ಯೆಯ ವಲಸೆ ಕಾರ್ಮಿಕರನ್ನು ಹೊಂದಿರುವ ಇತರ ರಾಜ್ಯಗಳು ಕೇರಳ 2.86 ಲಕ್ಷ, ಮಹಾರಾಷ್ಟ್ರ 2.01 ಲಕ್ಷ (ಹೆಚ್ಚುವರಿ 20,000 ಸೇರಿದಂತೆ), ತಮಿಳುನಾಡು 1.93 ಲಕ್ಷ, ತೆಲಂಗಾಣ 1.84 ಲಕ್ಷ ಮತ್ತು ಆಂಧ್ರಪ್ರದೇಶದಲ್ಲಿ 1 ಲಕ್ಷಕ್ಕಿಂತ ಕಡಿಮೆ ಜನರಿದ್ದಾರೆ.

ಒಡಿಶಾ, ರಾಜಸ್ಥಾನ, ಕರ್ನಾಟಕ, ಮತ್ತು ಜಮ್ಮು ಮತ್ತು ಕಾಶ್ಮೀರಗಳು 50,000 ಕ್ಕೂ ಹೆಚ್ಚು ವಲಸೆ ಕಾರ್ಮಿಕರನ್ನು ಹೊಂದಿರುವ ಇತರ ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಾಗಿವೆ.

ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯಗಳಾದ ಉತ್ತರ ಪ್ರದೇಶ (36,421), ಬಿಹಾರ (7,719), ಜಾರ್ಖಂಡ್ (16,616) ಮತ್ತು ಮಧ್ಯಪ್ರದೇಶ (9,621) ನಲ್ಲಿ ಕಡಿಮೆ ಸಂಖ್ಯೆಯ ವಲಸೆ ಕಾರ್ಮಿಕರು ಇದ್ದಾರೆ. ಇದು ಆ ರಾಜ್ಯಗಳಲ್ಲಿನ ಅವಕಾಶಗಳ ಕೊರತೆ, ಕಾರ್ಮಿರ ಸ್ನೇಹಿ ವಾತಾವರಣ ಇಲ್ಲದಿರುವುದನ್ನು ಸೂಚಿಸುತ್ತದೆ. ಆ ರಾಜ್ಯಗಳಿಂದ ಇತರೆ ರಾಜ್ಯಗಳಿಗೆ ವಲಸೆ ಹೋಗಿದ್ದಾರೆಯೇ ಹೊರತು, ಇತರೆ ರಾಜ್ಯಗಳಿಂದ ಈ ರಾಜ್ಯಗಳಿಗೆ ಜನ ವಲಸೆ ಬಂದಿಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.

ಅತಿ ಹೆಚ್ಚಿನ ಆಶ್ರಯ ನೀಡಿದ ಕೇರಳ

ಪುನರ್ವಸತಿ ಶಿಬಿರಗಳಲ್ಲಿ ವಲಸೆ ಕಾರ್ಮಿಕರಿಗೆ ಆತಿಥ್ಯ ವಹಿಸುವ ವಿಷಯ ಬಂದಾಗ, ಕೇರಳವು ಹೆಚ್ಚಿನ ಸಂಖ್ಯೆಯ 134,384 ಕಾರ್ಮಿಕರಿಗೆ ಅಂತಹ ಸೌಲಭ್ಯವನ್ನು ಒದಗಿಸುತ್ತದೆ ಎಂದು ಡೇಟಾ ಬಹಿರಂಗಪಡಿಸುತ್ತದೆ. ಇದು ಒಟ್ಟು ಉಳಿದುಕೊಂಡಿರುವವರಲ್ಲಿ ಶೇ 45% ರಷ್ಟು ವಲಸೆ ಕಾರ್ಮಿಕರನ್ನು ಹೊಂದಿದೆ. ಕೇರಳದಲ್ಲಿ 1.07 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಸಹ ಕೆಲಸದ ಸ್ಥಳಗಳಲ್ಲಿ ಉಳಿದಿದ್ದಾರೆ.

ಮತ್ತೊಂದೆಡೆ, ಚತ್ತೀಸ್‌ಘಡ, ತೆಲಂಗಾಣ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದಂತಹ ರಾಜ್ಯಗಳಲ್ಲಿ ವಲಸೆ ಕಾರ್ಮಿಕರನ್ನು ಪರಿಹಾರ ಶಿಬಿರಗಳಲ್ಲಿ ಉಳಿದುಕೊಳ್ಳಲು ಬಹಳ ಕಡಿಮೆ ವ್ಯವಸ್ಥೆ ಮಾಡಲಾಗಿದೆ ಎಂದು ಅಂಕಿ ಅಂಶಗಳು ತಿಳಿಸಿವೆ. ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಗಳಲ್ಲಿ ಬಹುಪಾಲು ಜನರು ತಮ್ಮ ಕೆಲಸದ ಸ್ಥಳಗಳಲ್ಲಿಯೇ ಇದ್ದಾರೆ. ಚತ್ತೀಸ್‌ಘಡದಲ್ಲಿ 80% ಕ್ಕಿಂತಲೂ ಹೆಚ್ಚು ಜನರು ಇತರ ಪ್ರದೇಶಗಳಲ್ಲಿಯೇ ಇದ್ದಾರೆ.


ಇದನ್ನೂ ಓದಿ: ಒಬಿಸಿ ಅಭ್ಯರ್ಥಿಗಳಿಗೆ ನೀಟ್ ಮೀಸಲಾತಿಯಲ್ಲಿ ಅನ್ಯಾಯ: ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...