Homeಮುಖಪುಟ'ತಕ್ಷಣ ಮಕ್ಕಳನ್ನು ಹೊಂದಿ' | ಕ್ಷೇತ್ರ ವಿಂಗಡನೆ ಬಗ್ಗೆ ತಮಿಳುನಾಡು ನಿವಾಸಿಗಳಿಗೆ ಸಿಎಂ ಸ್ಟಾಲಿನ್...

‘ತಕ್ಷಣ ಮಕ್ಕಳನ್ನು ಹೊಂದಿ’ | ಕ್ಷೇತ್ರ ವಿಂಗಡನೆ ಬಗ್ಗೆ ತಮಿಳುನಾಡು ನಿವಾಸಿಗಳಿಗೆ ಸಿಎಂ ಸ್ಟಾಲಿನ್ ಸಲಹೆ

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸೋಮವಾರ ರಾಜ್ಯದ ನವವಿವಾಹಿತ ನಿವಾಸಿಗಳಿಗೆ “ತಕ್ಷಣ ಮಕ್ಕಳನ್ನು ಹೊಂದುವ ಬಗ್ಗೆ ಯೋಜನೆ ರೂಪಿಸಿ” ಎಂದು ಒತ್ತಾಯಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಜನಸಂಖ್ಯಾ ಆಧಾರಿತ ರಾಷ್ಟ್ರವ್ಯಾಪಿ ಕ್ಷೇತ್ರ ವಿಂಗಡಣೆಯು ಸಂಸತ್ತಿನಲ್ಲಿ ರಾಜ್ಯದ ಪ್ರಾತಿನಿಧ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಬಗ್ಗೆಗಿನ ಕಳವಳಗಳ ನಡುವೆ ಅವರು ಈ ಹೇಳಿಕೆ ನೀಡಿದ್ದಾರೆ. ತಕ್ಷಣ ಮಕ್ಕಳನ್ನು ಹೊಂದಿ

“ಈ ಹಿಂದೆ, ನವವಿವಾಹಿತರು ತಮ್ಮ ಕುಟುಂಬವನ್ನು ವಿಸ್ತರಿಸುವ ಮೊದಲು ಸಮಯ ತೆಗೆದುಕೊಳ್ಳುವಂತೆ ನಾನು ಕೇಳುತ್ತಿದ್ದೆ. ಈಗ ಕೇಂದ್ರ ಸರ್ಕಾರ ಜಾರಿಗೆ ತರಲು ಯೋಜಿಸುತ್ತಿರುವ ಕ್ಷೇತ್ರ ವಿಂಗಡಣೆಯಿಂದಾಗಿ ಅಂತಹ ಸಲಹೆಯು ನೀಡುವುದಿಲ್ಲ.” ಎಂದು ತಮ್ಮ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂ ಕಾರ್ಯಕರ್ತನ ಮಗನ ವಿವಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಸ್ಟಾಲಿನ್ ಹೇಳಿದ್ದಾರೆ.

ಇದೇ ವೇಳೆ ನಿವಾಸಿಗಳು ತಮ್ಮ ಮಕ್ಕಳಿಗೆ “ಸುಂದರವಾದ ತಮಿಳು ಹೆಸರುಗಳನ್ನು” ನೀಡಬೇಕೆಂದು ಸ್ಟಾಲಿನ್ ಒತ್ತಾಯಿಸಿದ್ದಾರೆ. ತಕ್ಷಣ ಮಕ್ಕಳನ್ನು ಹೊಂದಿ

ಲೋಕಸಭಾ ಕ್ಷೇತ್ರಗಳ ಗಡಿಗಳನ್ನು ಪುನರ್ರಚಿಸುವ ಪ್ರಕ್ರಿಯೆಯೇ ಕ್ಷೇತ್ರ ವಿಂಗಡಣೆ. ಸಂವಿಧಾನದ 82 ನೇ ವಿಧಿಯು ಪ್ರತಿ ಜನಗಣತಿ ಪೂರ್ಣಗೊಂಡ ನಂತರ, ಪ್ರತಿ ರಾಜ್ಯಕ್ಕೆ ಲೋಕಸಭಾ ಸ್ಥಾನಗಳ ಹಂಚಿಕೆಯನ್ನು ಅವರ ಜನಸಂಖ್ಯೆಯಲ್ಲಿನ ಬದಲಾವಣೆಗಳ ಆಧಾರದ ಮೇಲೆ ಸರಿಹೊಂದಿಸಬೇಕು ಎಂದು ಹೇಳುತ್ತದೆ. ಪ್ರಸ್ತುತ ಲೋಕಸಭೆಯ ಸಂಯೋಜನೆಯು 1971 ರ ಜನಗಣತಿಯನ್ನು ಆಧರಿಸಿದೆ.

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಮಾಡಲು ಯೋಜಿಸುತ್ತಿರುವ ಜನಸಂಖ್ಯೆ ಆಧಾರಿತ ಕ್ಷೇತ್ರ ವಿಂಗಡಣೆಯು ಲೋಕಸಭೆಯಲ್ಲಿ ಭಾರತದ ಉತ್ತರ ಮತ್ತು ಮಧ್ಯ ರಾಜ್ಯಗಳಿಗೆ ಅನಗತ್ಯ ಪ್ರಯೋಜನವನ್ನು ನೀಡಲಿದೆ ಎಂದು ದಕ್ಷಿಣ ಭಾರತದ ರಾಜ್ಯಗಳು ಕಳವಳ ವ್ಯಕ್ತಪಡಿಸಿವೆ.

ಫೆಬ್ರವರಿ 25 ರಂದು, ಈ ಬಗ್ಗೆ ಚರ್ಚಿಸಲು ಸಿಎಂ ಸ್ಟಾಲಿನ್ ಮಾರ್ಚ್ 5 ರಂದು ಚೆನ್ನೈನಲ್ಲಿ ಸರ್ವಪಕ್ಷ ಸಭೆಯನ್ನು ಘೋಷಿಸಿದ್ದು. ಕ್ಷೇತ್ರ ವಿಂಗಡನೆಯಿಂದ ತಮ್ಮ ರಾಜ್ಯ ಎಂಟು ಲೋಕಸಭಾ ಸ್ಥಾನಗಳು ಕಳೆದುಕೊಳ್ಳಲಿದೆ ಎಂದು ಅವರು ಹೇಳಿಕೊಂಡಿದ್ದಾರೆ. “ತಮಿಳುನಾಡು ತನ್ನ ಹಕ್ಕುಗಳಿಗಾಗಿ ಗಂಭೀರ ಹೋರಾಟವನ್ನು ನಡೆಸಬೇಕಾಗಿದೆ. ಕ್ಷೇತ್ರ ವಿಂಗಡಣೆಯ ಬೆದರಿಕೆ ದಕ್ಷಿಣ ಭಾರತದ ರಾಜ್ಯಗಳ ಮೇಲೆ ಡಮೋಕ್ಲಿಸ್‌ನ ಕತ್ತಿಯಂತೆ ನೇತಾಡುತ್ತಿದೆ” ಎಂದು ಸ್ಟಾಲಿನ್ ಹೇಳಿದ್ದರು.

ಅವರ ಹೇಳಿಕೆಗಳ ಒಂದು ದಿನದ ನಂತರ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಸ್ತಾವಿತ ಕ್ಷೇತ್ರ ವಿಂಗಡಣೆ ಪ್ರಕ್ರಿಯೆಯಿಂದಾಗಿ ದಕ್ಷಿಣ ಭಾರತದ ರಾಜ್ಯಗಳು ಒಂದೇ ಒಂದು ಲೋಕಸಭಾ ಸ್ಥಾನವನ್ನು ಕಳೆದುಕೊಳ್ಳುವುದಿಲ್ಲ ಎಂದು ಹೇಳಿದ್ದರು.

“ಒಂದೇ ಒಂದು ಸ್ಥಾನವನ್ನು ಕೂಡಾ ಅನುಪಾತದಲ್ಲಿ ಕಡಿಮೆ ಮಾಡದಂತೆ ನೋಡಿಕೊಳ್ಳಲು ಮೋದಿ ಅವರು ನಿಮ್ಮ ಹಿತಾಸಕ್ತಿಯನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದಾರೆ ಎಂದು ದಕ್ಷಿಣ ಭಾರತದ ಸಾರ್ವಜನಿಕರಿಗೆ ನಾನು ಭರವಸೆ ನೀಡಲು ಬಯಸುತ್ತೇನೆ. ಮತ್ತು ಎಷ್ಟೇ ಹೆಚ್ಚಳವಾದರೂ, ದಕ್ಷಿಣದ ರಾಜ್ಯಗಳಿಗೆ ನ್ಯಾಯಯುತ ಪಾಲು ಸಿಗುತ್ತದೆ, ಇದನ್ನು ಅನುಮಾನಿಸಲು ಯಾವುದೇ ಕಾರಣವಿಲ್ಲ” ಎಂದು ಅಮಿತ್‌ ಶಾ ಕೊಯಮತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದರು.

ಇದರ ನಂತರ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಮಿತ್‌ ಶಾ ಅವರ ಭರವಸೆಗಳು ವಿಶ್ವಾಸಾರ್ಹವಲ್ಲ ಎಂದು ಹೇಳಿದ್ದಾರೆ. “ದಕ್ಷಿಣ ರಾಜ್ಯಗಳಲ್ಲಿ ಗೊಂದಲ ಸೃಷ್ಟಿಸುವ ದುರುದ್ದೇಶಪೂರಿತ ಉದ್ದೇಶದಿಂದ ಈ ಹೇಳಿಕೆ ನೀಡಲಾಗಿದೆ” ಎಂದು ಅವರು ಆರೋಪಿಸಿದ್ದಾರೆ.

ಶುಕ್ರವಾರ, ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರು ಕೂಡಾ ಬಿಜೆಪಿಯು ದಕ್ಷಿಣದ ರಾಜ್ಯಗಳನ್ನು ರಾಜಕೀಯವಾಗಿ ಮತ್ತು ಆರ್ಥಿಕವಾಗಿ ದುರ್ಬಲಗೊಳಿಸಲು ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

2024ರ ಫೆಬ್ರವರಿ ತಿಂಗಳಲ್ಲಿ ತಮಿಳುನಾಡು ವಿಧಾನಸಭೆಯು ಪ್ರಸ್ತಾವಿತ ಕ್ಷೇತ್ರ ವಿಂಗಡನೆಯ ವಿರುದ್ಧ ನಿರ್ಣಯವನ್ನು ಅಂಗೀಕರಿಸಿತು.

ಕ್ಷೇತ್ರ ವಿಂಗಡನೆಯಿಂದ ಅತಿ ದೊಡ್ಡ ಹಿಂದಿ ಬೆಲ್ಟ್ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಪ್ರಸ್ತುತ 80 ಸ್ಥಾನಗಳಿದ್ದು, 143 ಸ್ಥಾನಗಳು ಹೆಚ್ಚಾಗಲಿವೆ. ಅದೇ ರೀತಿ, ಬಿಹಾರದ ಸ್ಥಾನಗಳು 40 ರಿಂದ 79 ಕ್ಕೆ ದ್ವಿಗುಣಗೊಳ್ಳಲಿವೆ ಎಂದು ವರದಿಯಾಗಿದೆ.

ಒಟ್ಟಾರೆಯಾಗಿ, 10 ಹಿಂದಿ ಬೆಲ್ಟ್ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ಬಿಹಾರ, ಛತ್ತೀಸ್‌ಗಢ, ದೆಹಲಿ, ಹರಿಯಾಣ, ಹಿಮಾಚಲ ಪ್ರದೇಶ, ಜಾರ್ಖಂಡ್, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಉತ್ತರಾಖಂಡಗಳಲ್ಲಿನ ಲೋಕಸಭಾ ಸ್ಥಾನಗಳ ಪ್ರಮಾಣವು ಈಗಿರುವ ಸುಮಾರು 42% ರಿಂದ ಸುಮಾರು 48% ಕ್ಕೆ ಏರಲಿದೆ.

ಇದಕ್ಕೆ ಅನುಗುಣವಾಗಿ, ಹಿಂದಿ ಬೆಲ್ಟ್ ಅಲ್ಲದ ಕೇರಳ, ಪಶ್ಚಿಮ ಬಂಗಾಳ ಮತ್ತು ಎಲ್ಲಾ ಈಶಾನ್ಯ ರಾಜ್ಯಗಳ ಪ್ರಾತಿನಿಧ್ಯ ಕುಸಿಯಲಿದೆ ಎಂದು ವರದಿ ಹೇಳಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉತ್ತರ ಪ್ರದೇಶದ ದಲಿತರ ಮೇಲೆ ಹೆಚ್ಚುತ್ತಿರುವ ದಬ್ಬಾಳಿಕೆ; ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿ ಪ್ರತಿಭಟನೆ

ಉತ್ತರ ಪ್ರದೇಶದ ದಲಿತರ ಮೇಲೆ ಹೆಚ್ಚುತ್ತಿರುವ ದಬ್ಬಾಳಿಕೆ; ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿ ಪ್ರತಿಭಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...