Homeಮುಖಪುಟ'ತಕ್ಷಣ ಮಕ್ಕಳನ್ನು ಹೊಂದಿ' | ಕ್ಷೇತ್ರ ವಿಂಗಡನೆ ಬಗ್ಗೆ ತಮಿಳುನಾಡು ನಿವಾಸಿಗಳಿಗೆ ಸಿಎಂ ಸ್ಟಾಲಿನ್...

‘ತಕ್ಷಣ ಮಕ್ಕಳನ್ನು ಹೊಂದಿ’ | ಕ್ಷೇತ್ರ ವಿಂಗಡನೆ ಬಗ್ಗೆ ತಮಿಳುನಾಡು ನಿವಾಸಿಗಳಿಗೆ ಸಿಎಂ ಸ್ಟಾಲಿನ್ ಸಲಹೆ

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸೋಮವಾರ ರಾಜ್ಯದ ನವವಿವಾಹಿತ ನಿವಾಸಿಗಳಿಗೆ “ತಕ್ಷಣ ಮಕ್ಕಳನ್ನು ಹೊಂದುವ ಬಗ್ಗೆ ಯೋಜನೆ ರೂಪಿಸಿ” ಎಂದು ಒತ್ತಾಯಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಜನಸಂಖ್ಯಾ ಆಧಾರಿತ ರಾಷ್ಟ್ರವ್ಯಾಪಿ ಕ್ಷೇತ್ರ ವಿಂಗಡಣೆಯು ಸಂಸತ್ತಿನಲ್ಲಿ ರಾಜ್ಯದ ಪ್ರಾತಿನಿಧ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಬಗ್ಗೆಗಿನ ಕಳವಳಗಳ ನಡುವೆ ಅವರು ಈ ಹೇಳಿಕೆ ನೀಡಿದ್ದಾರೆ. ತಕ್ಷಣ ಮಕ್ಕಳನ್ನು ಹೊಂದಿ

“ಈ ಹಿಂದೆ, ನವವಿವಾಹಿತರು ತಮ್ಮ ಕುಟುಂಬವನ್ನು ವಿಸ್ತರಿಸುವ ಮೊದಲು ಸಮಯ ತೆಗೆದುಕೊಳ್ಳುವಂತೆ ನಾನು ಕೇಳುತ್ತಿದ್ದೆ. ಈಗ ಕೇಂದ್ರ ಸರ್ಕಾರ ಜಾರಿಗೆ ತರಲು ಯೋಜಿಸುತ್ತಿರುವ ಕ್ಷೇತ್ರ ವಿಂಗಡಣೆಯಿಂದಾಗಿ ಅಂತಹ ಸಲಹೆಯು ನೀಡುವುದಿಲ್ಲ.” ಎಂದು ತಮ್ಮ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂ ಕಾರ್ಯಕರ್ತನ ಮಗನ ವಿವಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಸ್ಟಾಲಿನ್ ಹೇಳಿದ್ದಾರೆ.

ಇದೇ ವೇಳೆ ನಿವಾಸಿಗಳು ತಮ್ಮ ಮಕ್ಕಳಿಗೆ “ಸುಂದರವಾದ ತಮಿಳು ಹೆಸರುಗಳನ್ನು” ನೀಡಬೇಕೆಂದು ಸ್ಟಾಲಿನ್ ಒತ್ತಾಯಿಸಿದ್ದಾರೆ. ತಕ್ಷಣ ಮಕ್ಕಳನ್ನು ಹೊಂದಿ

ಲೋಕಸಭಾ ಕ್ಷೇತ್ರಗಳ ಗಡಿಗಳನ್ನು ಪುನರ್ರಚಿಸುವ ಪ್ರಕ್ರಿಯೆಯೇ ಕ್ಷೇತ್ರ ವಿಂಗಡಣೆ. ಸಂವಿಧಾನದ 82 ನೇ ವಿಧಿಯು ಪ್ರತಿ ಜನಗಣತಿ ಪೂರ್ಣಗೊಂಡ ನಂತರ, ಪ್ರತಿ ರಾಜ್ಯಕ್ಕೆ ಲೋಕಸಭಾ ಸ್ಥಾನಗಳ ಹಂಚಿಕೆಯನ್ನು ಅವರ ಜನಸಂಖ್ಯೆಯಲ್ಲಿನ ಬದಲಾವಣೆಗಳ ಆಧಾರದ ಮೇಲೆ ಸರಿಹೊಂದಿಸಬೇಕು ಎಂದು ಹೇಳುತ್ತದೆ. ಪ್ರಸ್ತುತ ಲೋಕಸಭೆಯ ಸಂಯೋಜನೆಯು 1971 ರ ಜನಗಣತಿಯನ್ನು ಆಧರಿಸಿದೆ.

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಮಾಡಲು ಯೋಜಿಸುತ್ತಿರುವ ಜನಸಂಖ್ಯೆ ಆಧಾರಿತ ಕ್ಷೇತ್ರ ವಿಂಗಡಣೆಯು ಲೋಕಸಭೆಯಲ್ಲಿ ಭಾರತದ ಉತ್ತರ ಮತ್ತು ಮಧ್ಯ ರಾಜ್ಯಗಳಿಗೆ ಅನಗತ್ಯ ಪ್ರಯೋಜನವನ್ನು ನೀಡಲಿದೆ ಎಂದು ದಕ್ಷಿಣ ಭಾರತದ ರಾಜ್ಯಗಳು ಕಳವಳ ವ್ಯಕ್ತಪಡಿಸಿವೆ.

ಫೆಬ್ರವರಿ 25 ರಂದು, ಈ ಬಗ್ಗೆ ಚರ್ಚಿಸಲು ಸಿಎಂ ಸ್ಟಾಲಿನ್ ಮಾರ್ಚ್ 5 ರಂದು ಚೆನ್ನೈನಲ್ಲಿ ಸರ್ವಪಕ್ಷ ಸಭೆಯನ್ನು ಘೋಷಿಸಿದ್ದು. ಕ್ಷೇತ್ರ ವಿಂಗಡನೆಯಿಂದ ತಮ್ಮ ರಾಜ್ಯ ಎಂಟು ಲೋಕಸಭಾ ಸ್ಥಾನಗಳು ಕಳೆದುಕೊಳ್ಳಲಿದೆ ಎಂದು ಅವರು ಹೇಳಿಕೊಂಡಿದ್ದಾರೆ. “ತಮಿಳುನಾಡು ತನ್ನ ಹಕ್ಕುಗಳಿಗಾಗಿ ಗಂಭೀರ ಹೋರಾಟವನ್ನು ನಡೆಸಬೇಕಾಗಿದೆ. ಕ್ಷೇತ್ರ ವಿಂಗಡಣೆಯ ಬೆದರಿಕೆ ದಕ್ಷಿಣ ಭಾರತದ ರಾಜ್ಯಗಳ ಮೇಲೆ ಡಮೋಕ್ಲಿಸ್‌ನ ಕತ್ತಿಯಂತೆ ನೇತಾಡುತ್ತಿದೆ” ಎಂದು ಸ್ಟಾಲಿನ್ ಹೇಳಿದ್ದರು.

ಅವರ ಹೇಳಿಕೆಗಳ ಒಂದು ದಿನದ ನಂತರ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಸ್ತಾವಿತ ಕ್ಷೇತ್ರ ವಿಂಗಡಣೆ ಪ್ರಕ್ರಿಯೆಯಿಂದಾಗಿ ದಕ್ಷಿಣ ಭಾರತದ ರಾಜ್ಯಗಳು ಒಂದೇ ಒಂದು ಲೋಕಸಭಾ ಸ್ಥಾನವನ್ನು ಕಳೆದುಕೊಳ್ಳುವುದಿಲ್ಲ ಎಂದು ಹೇಳಿದ್ದರು.

“ಒಂದೇ ಒಂದು ಸ್ಥಾನವನ್ನು ಕೂಡಾ ಅನುಪಾತದಲ್ಲಿ ಕಡಿಮೆ ಮಾಡದಂತೆ ನೋಡಿಕೊಳ್ಳಲು ಮೋದಿ ಅವರು ನಿಮ್ಮ ಹಿತಾಸಕ್ತಿಯನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದಾರೆ ಎಂದು ದಕ್ಷಿಣ ಭಾರತದ ಸಾರ್ವಜನಿಕರಿಗೆ ನಾನು ಭರವಸೆ ನೀಡಲು ಬಯಸುತ್ತೇನೆ. ಮತ್ತು ಎಷ್ಟೇ ಹೆಚ್ಚಳವಾದರೂ, ದಕ್ಷಿಣದ ರಾಜ್ಯಗಳಿಗೆ ನ್ಯಾಯಯುತ ಪಾಲು ಸಿಗುತ್ತದೆ, ಇದನ್ನು ಅನುಮಾನಿಸಲು ಯಾವುದೇ ಕಾರಣವಿಲ್ಲ” ಎಂದು ಅಮಿತ್‌ ಶಾ ಕೊಯಮತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದರು.

ಇದರ ನಂತರ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಮಿತ್‌ ಶಾ ಅವರ ಭರವಸೆಗಳು ವಿಶ್ವಾಸಾರ್ಹವಲ್ಲ ಎಂದು ಹೇಳಿದ್ದಾರೆ. “ದಕ್ಷಿಣ ರಾಜ್ಯಗಳಲ್ಲಿ ಗೊಂದಲ ಸೃಷ್ಟಿಸುವ ದುರುದ್ದೇಶಪೂರಿತ ಉದ್ದೇಶದಿಂದ ಈ ಹೇಳಿಕೆ ನೀಡಲಾಗಿದೆ” ಎಂದು ಅವರು ಆರೋಪಿಸಿದ್ದಾರೆ.

ಶುಕ್ರವಾರ, ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರು ಕೂಡಾ ಬಿಜೆಪಿಯು ದಕ್ಷಿಣದ ರಾಜ್ಯಗಳನ್ನು ರಾಜಕೀಯವಾಗಿ ಮತ್ತು ಆರ್ಥಿಕವಾಗಿ ದುರ್ಬಲಗೊಳಿಸಲು ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

2024ರ ಫೆಬ್ರವರಿ ತಿಂಗಳಲ್ಲಿ ತಮಿಳುನಾಡು ವಿಧಾನಸಭೆಯು ಪ್ರಸ್ತಾವಿತ ಕ್ಷೇತ್ರ ವಿಂಗಡನೆಯ ವಿರುದ್ಧ ನಿರ್ಣಯವನ್ನು ಅಂಗೀಕರಿಸಿತು.

ಕ್ಷೇತ್ರ ವಿಂಗಡನೆಯಿಂದ ಅತಿ ದೊಡ್ಡ ಹಿಂದಿ ಬೆಲ್ಟ್ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಪ್ರಸ್ತುತ 80 ಸ್ಥಾನಗಳಿದ್ದು, 143 ಸ್ಥಾನಗಳು ಹೆಚ್ಚಾಗಲಿವೆ. ಅದೇ ರೀತಿ, ಬಿಹಾರದ ಸ್ಥಾನಗಳು 40 ರಿಂದ 79 ಕ್ಕೆ ದ್ವಿಗುಣಗೊಳ್ಳಲಿವೆ ಎಂದು ವರದಿಯಾಗಿದೆ.

ಒಟ್ಟಾರೆಯಾಗಿ, 10 ಹಿಂದಿ ಬೆಲ್ಟ್ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ಬಿಹಾರ, ಛತ್ತೀಸ್‌ಗಢ, ದೆಹಲಿ, ಹರಿಯಾಣ, ಹಿಮಾಚಲ ಪ್ರದೇಶ, ಜಾರ್ಖಂಡ್, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಉತ್ತರಾಖಂಡಗಳಲ್ಲಿನ ಲೋಕಸಭಾ ಸ್ಥಾನಗಳ ಪ್ರಮಾಣವು ಈಗಿರುವ ಸುಮಾರು 42% ರಿಂದ ಸುಮಾರು 48% ಕ್ಕೆ ಏರಲಿದೆ.

ಇದಕ್ಕೆ ಅನುಗುಣವಾಗಿ, ಹಿಂದಿ ಬೆಲ್ಟ್ ಅಲ್ಲದ ಕೇರಳ, ಪಶ್ಚಿಮ ಬಂಗಾಳ ಮತ್ತು ಎಲ್ಲಾ ಈಶಾನ್ಯ ರಾಜ್ಯಗಳ ಪ್ರಾತಿನಿಧ್ಯ ಕುಸಿಯಲಿದೆ ಎಂದು ವರದಿ ಹೇಳಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉತ್ತರ ಪ್ರದೇಶದ ದಲಿತರ ಮೇಲೆ ಹೆಚ್ಚುತ್ತಿರುವ ದಬ್ಬಾಳಿಕೆ; ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿ ಪ್ರತಿಭಟನೆ

ಉತ್ತರ ಪ್ರದೇಶದ ದಲಿತರ ಮೇಲೆ ಹೆಚ್ಚುತ್ತಿರುವ ದಬ್ಬಾಳಿಕೆ; ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿ ಪ್ರತಿಭಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...