Homeಮುಖಪುಟ'ತಕ್ಷಣ ಮಕ್ಕಳನ್ನು ಹೊಂದಿ' | ಕ್ಷೇತ್ರ ವಿಂಗಡನೆ ಬಗ್ಗೆ ತಮಿಳುನಾಡು ನಿವಾಸಿಗಳಿಗೆ ಸಿಎಂ ಸ್ಟಾಲಿನ್...

‘ತಕ್ಷಣ ಮಕ್ಕಳನ್ನು ಹೊಂದಿ’ | ಕ್ಷೇತ್ರ ವಿಂಗಡನೆ ಬಗ್ಗೆ ತಮಿಳುನಾಡು ನಿವಾಸಿಗಳಿಗೆ ಸಿಎಂ ಸ್ಟಾಲಿನ್ ಸಲಹೆ

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸೋಮವಾರ ರಾಜ್ಯದ ನವವಿವಾಹಿತ ನಿವಾಸಿಗಳಿಗೆ “ತಕ್ಷಣ ಮಕ್ಕಳನ್ನು ಹೊಂದುವ ಬಗ್ಗೆ ಯೋಜನೆ ರೂಪಿಸಿ” ಎಂದು ಒತ್ತಾಯಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಜನಸಂಖ್ಯಾ ಆಧಾರಿತ ರಾಷ್ಟ್ರವ್ಯಾಪಿ ಕ್ಷೇತ್ರ ವಿಂಗಡಣೆಯು ಸಂಸತ್ತಿನಲ್ಲಿ ರಾಜ್ಯದ ಪ್ರಾತಿನಿಧ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಬಗ್ಗೆಗಿನ ಕಳವಳಗಳ ನಡುವೆ ಅವರು ಈ ಹೇಳಿಕೆ ನೀಡಿದ್ದಾರೆ. ತಕ್ಷಣ ಮಕ್ಕಳನ್ನು ಹೊಂದಿ

“ಈ ಹಿಂದೆ, ನವವಿವಾಹಿತರು ತಮ್ಮ ಕುಟುಂಬವನ್ನು ವಿಸ್ತರಿಸುವ ಮೊದಲು ಸಮಯ ತೆಗೆದುಕೊಳ್ಳುವಂತೆ ನಾನು ಕೇಳುತ್ತಿದ್ದೆ. ಈಗ ಕೇಂದ್ರ ಸರ್ಕಾರ ಜಾರಿಗೆ ತರಲು ಯೋಜಿಸುತ್ತಿರುವ ಕ್ಷೇತ್ರ ವಿಂಗಡಣೆಯಿಂದಾಗಿ ಅಂತಹ ಸಲಹೆಯು ನೀಡುವುದಿಲ್ಲ.” ಎಂದು ತಮ್ಮ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂ ಕಾರ್ಯಕರ್ತನ ಮಗನ ವಿವಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಸ್ಟಾಲಿನ್ ಹೇಳಿದ್ದಾರೆ.

ಇದೇ ವೇಳೆ ನಿವಾಸಿಗಳು ತಮ್ಮ ಮಕ್ಕಳಿಗೆ “ಸುಂದರವಾದ ತಮಿಳು ಹೆಸರುಗಳನ್ನು” ನೀಡಬೇಕೆಂದು ಸ್ಟಾಲಿನ್ ಒತ್ತಾಯಿಸಿದ್ದಾರೆ. ತಕ್ಷಣ ಮಕ್ಕಳನ್ನು ಹೊಂದಿ

ಲೋಕಸಭಾ ಕ್ಷೇತ್ರಗಳ ಗಡಿಗಳನ್ನು ಪುನರ್ರಚಿಸುವ ಪ್ರಕ್ರಿಯೆಯೇ ಕ್ಷೇತ್ರ ವಿಂಗಡಣೆ. ಸಂವಿಧಾನದ 82 ನೇ ವಿಧಿಯು ಪ್ರತಿ ಜನಗಣತಿ ಪೂರ್ಣಗೊಂಡ ನಂತರ, ಪ್ರತಿ ರಾಜ್ಯಕ್ಕೆ ಲೋಕಸಭಾ ಸ್ಥಾನಗಳ ಹಂಚಿಕೆಯನ್ನು ಅವರ ಜನಸಂಖ್ಯೆಯಲ್ಲಿನ ಬದಲಾವಣೆಗಳ ಆಧಾರದ ಮೇಲೆ ಸರಿಹೊಂದಿಸಬೇಕು ಎಂದು ಹೇಳುತ್ತದೆ. ಪ್ರಸ್ತುತ ಲೋಕಸಭೆಯ ಸಂಯೋಜನೆಯು 1971 ರ ಜನಗಣತಿಯನ್ನು ಆಧರಿಸಿದೆ.

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಮಾಡಲು ಯೋಜಿಸುತ್ತಿರುವ ಜನಸಂಖ್ಯೆ ಆಧಾರಿತ ಕ್ಷೇತ್ರ ವಿಂಗಡಣೆಯು ಲೋಕಸಭೆಯಲ್ಲಿ ಭಾರತದ ಉತ್ತರ ಮತ್ತು ಮಧ್ಯ ರಾಜ್ಯಗಳಿಗೆ ಅನಗತ್ಯ ಪ್ರಯೋಜನವನ್ನು ನೀಡಲಿದೆ ಎಂದು ದಕ್ಷಿಣ ಭಾರತದ ರಾಜ್ಯಗಳು ಕಳವಳ ವ್ಯಕ್ತಪಡಿಸಿವೆ.

ಫೆಬ್ರವರಿ 25 ರಂದು, ಈ ಬಗ್ಗೆ ಚರ್ಚಿಸಲು ಸಿಎಂ ಸ್ಟಾಲಿನ್ ಮಾರ್ಚ್ 5 ರಂದು ಚೆನ್ನೈನಲ್ಲಿ ಸರ್ವಪಕ್ಷ ಸಭೆಯನ್ನು ಘೋಷಿಸಿದ್ದು. ಕ್ಷೇತ್ರ ವಿಂಗಡನೆಯಿಂದ ತಮ್ಮ ರಾಜ್ಯ ಎಂಟು ಲೋಕಸಭಾ ಸ್ಥಾನಗಳು ಕಳೆದುಕೊಳ್ಳಲಿದೆ ಎಂದು ಅವರು ಹೇಳಿಕೊಂಡಿದ್ದಾರೆ. “ತಮಿಳುನಾಡು ತನ್ನ ಹಕ್ಕುಗಳಿಗಾಗಿ ಗಂಭೀರ ಹೋರಾಟವನ್ನು ನಡೆಸಬೇಕಾಗಿದೆ. ಕ್ಷೇತ್ರ ವಿಂಗಡಣೆಯ ಬೆದರಿಕೆ ದಕ್ಷಿಣ ಭಾರತದ ರಾಜ್ಯಗಳ ಮೇಲೆ ಡಮೋಕ್ಲಿಸ್‌ನ ಕತ್ತಿಯಂತೆ ನೇತಾಡುತ್ತಿದೆ” ಎಂದು ಸ್ಟಾಲಿನ್ ಹೇಳಿದ್ದರು.

ಅವರ ಹೇಳಿಕೆಗಳ ಒಂದು ದಿನದ ನಂತರ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಸ್ತಾವಿತ ಕ್ಷೇತ್ರ ವಿಂಗಡಣೆ ಪ್ರಕ್ರಿಯೆಯಿಂದಾಗಿ ದಕ್ಷಿಣ ಭಾರತದ ರಾಜ್ಯಗಳು ಒಂದೇ ಒಂದು ಲೋಕಸಭಾ ಸ್ಥಾನವನ್ನು ಕಳೆದುಕೊಳ್ಳುವುದಿಲ್ಲ ಎಂದು ಹೇಳಿದ್ದರು.

“ಒಂದೇ ಒಂದು ಸ್ಥಾನವನ್ನು ಕೂಡಾ ಅನುಪಾತದಲ್ಲಿ ಕಡಿಮೆ ಮಾಡದಂತೆ ನೋಡಿಕೊಳ್ಳಲು ಮೋದಿ ಅವರು ನಿಮ್ಮ ಹಿತಾಸಕ್ತಿಯನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದಾರೆ ಎಂದು ದಕ್ಷಿಣ ಭಾರತದ ಸಾರ್ವಜನಿಕರಿಗೆ ನಾನು ಭರವಸೆ ನೀಡಲು ಬಯಸುತ್ತೇನೆ. ಮತ್ತು ಎಷ್ಟೇ ಹೆಚ್ಚಳವಾದರೂ, ದಕ್ಷಿಣದ ರಾಜ್ಯಗಳಿಗೆ ನ್ಯಾಯಯುತ ಪಾಲು ಸಿಗುತ್ತದೆ, ಇದನ್ನು ಅನುಮಾನಿಸಲು ಯಾವುದೇ ಕಾರಣವಿಲ್ಲ” ಎಂದು ಅಮಿತ್‌ ಶಾ ಕೊಯಮತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದರು.

ಇದರ ನಂತರ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಮಿತ್‌ ಶಾ ಅವರ ಭರವಸೆಗಳು ವಿಶ್ವಾಸಾರ್ಹವಲ್ಲ ಎಂದು ಹೇಳಿದ್ದಾರೆ. “ದಕ್ಷಿಣ ರಾಜ್ಯಗಳಲ್ಲಿ ಗೊಂದಲ ಸೃಷ್ಟಿಸುವ ದುರುದ್ದೇಶಪೂರಿತ ಉದ್ದೇಶದಿಂದ ಈ ಹೇಳಿಕೆ ನೀಡಲಾಗಿದೆ” ಎಂದು ಅವರು ಆರೋಪಿಸಿದ್ದಾರೆ.

ಶುಕ್ರವಾರ, ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರು ಕೂಡಾ ಬಿಜೆಪಿಯು ದಕ್ಷಿಣದ ರಾಜ್ಯಗಳನ್ನು ರಾಜಕೀಯವಾಗಿ ಮತ್ತು ಆರ್ಥಿಕವಾಗಿ ದುರ್ಬಲಗೊಳಿಸಲು ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

2024ರ ಫೆಬ್ರವರಿ ತಿಂಗಳಲ್ಲಿ ತಮಿಳುನಾಡು ವಿಧಾನಸಭೆಯು ಪ್ರಸ್ತಾವಿತ ಕ್ಷೇತ್ರ ವಿಂಗಡನೆಯ ವಿರುದ್ಧ ನಿರ್ಣಯವನ್ನು ಅಂಗೀಕರಿಸಿತು.

ಕ್ಷೇತ್ರ ವಿಂಗಡನೆಯಿಂದ ಅತಿ ದೊಡ್ಡ ಹಿಂದಿ ಬೆಲ್ಟ್ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಪ್ರಸ್ತುತ 80 ಸ್ಥಾನಗಳಿದ್ದು, 143 ಸ್ಥಾನಗಳು ಹೆಚ್ಚಾಗಲಿವೆ. ಅದೇ ರೀತಿ, ಬಿಹಾರದ ಸ್ಥಾನಗಳು 40 ರಿಂದ 79 ಕ್ಕೆ ದ್ವಿಗುಣಗೊಳ್ಳಲಿವೆ ಎಂದು ವರದಿಯಾಗಿದೆ.

ಒಟ್ಟಾರೆಯಾಗಿ, 10 ಹಿಂದಿ ಬೆಲ್ಟ್ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ಬಿಹಾರ, ಛತ್ತೀಸ್‌ಗಢ, ದೆಹಲಿ, ಹರಿಯಾಣ, ಹಿಮಾಚಲ ಪ್ರದೇಶ, ಜಾರ್ಖಂಡ್, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಉತ್ತರಾಖಂಡಗಳಲ್ಲಿನ ಲೋಕಸಭಾ ಸ್ಥಾನಗಳ ಪ್ರಮಾಣವು ಈಗಿರುವ ಸುಮಾರು 42% ರಿಂದ ಸುಮಾರು 48% ಕ್ಕೆ ಏರಲಿದೆ.

ಇದಕ್ಕೆ ಅನುಗುಣವಾಗಿ, ಹಿಂದಿ ಬೆಲ್ಟ್ ಅಲ್ಲದ ಕೇರಳ, ಪಶ್ಚಿಮ ಬಂಗಾಳ ಮತ್ತು ಎಲ್ಲಾ ಈಶಾನ್ಯ ರಾಜ್ಯಗಳ ಪ್ರಾತಿನಿಧ್ಯ ಕುಸಿಯಲಿದೆ ಎಂದು ವರದಿ ಹೇಳಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉತ್ತರ ಪ್ರದೇಶದ ದಲಿತರ ಮೇಲೆ ಹೆಚ್ಚುತ್ತಿರುವ ದಬ್ಬಾಳಿಕೆ; ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿ ಪ್ರತಿಭಟನೆ

ಉತ್ತರ ಪ್ರದೇಶದ ದಲಿತರ ಮೇಲೆ ಹೆಚ್ಚುತ್ತಿರುವ ದಬ್ಬಾಳಿಕೆ; ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿ ಪ್ರತಿಭಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...