Homeಮುಖಪುಟತಾತಾ, ನೀವು ಎಂದಾದರೂ ಮಾಂಸ ತಿಂದಿದ್ದೀರಾ ಎಂಬ ಪ್ರಶ್ನೆಗೆ ದೊರೆಸ್ವಾಮಿಯವರ ಉತ್ತರವೇನು ಗೊತ್ತೆ?

ತಾತಾ, ನೀವು ಎಂದಾದರೂ ಮಾಂಸ ತಿಂದಿದ್ದೀರಾ ಎಂಬ ಪ್ರಶ್ನೆಗೆ ದೊರೆಸ್ವಾಮಿಯವರ ಉತ್ತರವೇನು ಗೊತ್ತೆ?

ಅಷ್ಟು ಎತ್ತರದ ವ್ಯಕ್ತಿ, ನನ್ನಂತ ಚಿಕ್ಕವಳ ಮುಂದೆ ತನ್ನನ್ನು ತಾನೇ ಈ ರೀತಿ ಆತ್ಮಾವಲೋಕನ ಮಾಡಿಕೊಳ್ಳುವುದು ಎಂದರೆ ಅದು ಸಲಭದ ಮಾತಲ್ಲ..

- Advertisement -
- Advertisement -

ಹೋರಾಟದ ಸ್ವೂರ್ತಿ, ಕರ್ನಾಟಕದ ಎಲ್ಲಾ ಚಳವಳಿಗಳ ಬೆನ್ನೆಲುಬು ಆಗಿದ್ದ ನಮ್ಮೆಲ್ಲರ ಚೇತನ ದೊರೆಸ್ವಾಮಿ ತಾತಾ ಇನ್ನಿಲ್ಲ ಎಂಬುದನ್ನ ಅರಗಿಸಿಕೊಳ್ಳಲು ಕಷ್ಟವಾಗುತ್ತಿದೆ. ಅವರೊಂದಿಗಿನ ನನ್ನ ಒಡನಾಟ, 20 ವರ್ಷದು ಎಂದು ಹೇಳಬಹುದಾದರೂ ಅದು ವೇದಿಕೆಯ ಮೇಲೆ, ಕಾರ್ಯಕ್ರಮಗಳಲ್ಲಿ ಬಿಟ್ಟರೆ, ಅವರನ್ನ ಇನ್ನೂ ಹತ್ತಿರದಿಂದ ನೋಡುವ ಅವಕಾಶ ದೊರೆಕಿದ್ದು 2020ರ ಮೊದಲ ಕರೋನಾ ಲಾಕ್ ಡೌನ್ ಸಮಯದಲ್ಲಿ.

ಆಗ ತಾತನನ್ನು ನೋಡಿಕೊಳ್ಳಲು ಯಾರು ಸಿಗದ ಸಂದರ್ಭ. ನರ್ಸ್ ಒಬ್ಬರನ್ನು ನೇಮಿಸುವ ಚರ್ಚೆ ಬಂದಾಗ ಅದಕ್ಕೆ ತಾತಾ ಒಪ್ಪುತ್ತಿರಲಿಲ್ಲ. ಅವರೊಂದಿಗೆ ರಾಜಕೀಯ ಚರ್ಚೆ ಮಾಡಬೇಕಾದ್ದರಿಂದ ಸಾಮಾಜಿಕ ಕಾರ್ಯಕರ್ತರು ಅವರನ್ನು ನೋಡಿಕೊಂಡರೆ ಅವರಿಗೆ ಸಮಾಧಾನ. ಕೊನೆಗೆ ನಾನು ನನ್ನ ಬಾಳ ಸಂಗಾತಿ ಕುಮಾರ್ ಹೊರಡಲು ಸಿದ್ದರಾದೆವು. ಮೊದಲು ಹೇಗೆ ನೋಡಿಕೊಳ್ಳಬೇಕು ಅವರ ಪದ್ದತಿಗಳು ಎಲ್ಲಾ ಭಿನ್ನವಾಗಿ ಇರುತ್ತದೆ ಅದಕ್ಕೆ ನಾವು ಸರಿ ಹೊಂದುತ್ತೇವೊ ಇಲ್ಲವೊ ಎಂಬ ಸಣ್ಣ ಅಳುಕಿತ್ತು, ನಾವು ಹೋಗಿದ್ದರಿಂದ ಅವರಿಗೆ ತೊಂದರೆಯಾಗಬಾರದು ಎಂಬ ಕಾಳಜಿಯಿಂದಷ್ಟೆ. ಆದರೆ ಹೋದ ಒಂದು ದಿನಕ್ಕೆ ತಾತನದು ನಮ್ಮದು ಎಷ್ಟೋ ವರ್ಷದ ಸಂಬಂಧ ಎನಿಸುವಷ್ಟು ಹತ್ತಿರವಾದೆವು.

ಇದು ಬಹುಶಃ ಸಮಾಜದ ಬದಲಾಣೆಯ ಬಗೆಗಿರುವ ಸಮಾನ ನಂಟಿರಬೇಕು ಅನಿಸಿತ್ತು. ನನಗೊ ಬಹಳಷ್ಟು ಕುತೂಹಲದ ಪ್ರಶ್ನೆಗಳಿದ್ದವು. ಆ ಕಾಲದಲ್ಲಿ ಸ್ವಾತಂತ್ರ್ಯ ಚಳವಳಿಗಳು ಹೇಗೆ ನಡೆಯುತ್ತಿತ್ತು? ಅದರಲ್ಲಿ ತಾತನ ಪಾತ್ರ ಏನಾಗಿತ್ತು ಎಂಬ ಹತ್ತು ಹಲವು ಪ್ರಶ್ನೆಗಳನ್ನು ಕೇಳುತ್ತಿದೆ? ಎಲ್ಲದ್ದಕ್ಕೂ ಉತ್ಸಾಹದಿಂದ ಉತ್ತರಿಸುತ್ತಿದ್ದರು. ಅವರ ಮದುವೆಯ ಬಗ್ಗೆ, ಪ್ರೀತಿಯ ಬಗ್ಗೆ ಹೀಗೆ ಮಾತನಾಡುತ್ತಿದ್ದರೆ ನಮಗೆ ಸಮಯ ಹೋಗುತ್ತಿದ್ದದೆ ಗೊತ್ತಾಗುತ್ತಿರಲಿಲ್ಲ. ಒಂದು ಸಲ ನಾನು, “ತಾತ ನೀವು ಅಜ್ಜಿನ, ಮಕ್ಕಳನ ನೋಡೋಕೆ ವರ್ಷವಾದರೂ ಮನೆಗೆ ಬರುತ್ತಿರಲಿಲ್ಲವಂತೆ, ಪಾಪ ಅಜ್ಜಿ ಎಷ್ಟು ಕಷ್ಟ ಪಟ್ಟಿರಬೇಕು” ಎಂದೆ. ಸಡನ್ನಾಗಿ ತಾತ ನನ್ನ ಕಡೆ ನೋಡಿದರು, ನನಗೆ ಕೇಳಬಾರದ ಪ್ರಶ್ನೆ ಏನಾದರು ಕೇಳಿದೆನಾ ಅಂತ ಒಂದು ಕ್ಷಣ ಗಲಿಬಿಲಿಗೊಂಡೆ, ಅದಕ್ಕೆ ತಾತ ಶಾಂತವಾಗಿ “ಹೌದಮ್ಮ ಅವಳಿಗೆ ನನ್ನ ಮದುವೆ ಮಾಡಿಕೊಂಡು ಏನು ಸಿಕ್ಕಿಲ್ಲ, ಕಷ್ಟಗಳ ಹೊರತು” ಎಂದು ಎರಡು ನಿಮಿಷ ಮೌನಕ್ಕೆ ಜಾರಿದರು. ಅಷ್ಟು ಎತ್ತರದ ವ್ಯಕ್ತಿ ನನ್ನಂತ ಚಿಕ್ಕವಳ ಮುಂದೆ ತನ್ನನ್ನು ತಾನೇ ಈ ರೀತಿ ಆತ್ಮಾವಲೋಕನ ಮಾಡಿಕೊಳ್ಳುವುದು ಎಂದರೆ ಅದು ಸಲಭದ ಮಾತಲ್ಲ. ಅದೇ ನಾವೆಲ್ಲರೂ ಅವರಿಂದ ಅಳವಡಿಸಿಕೊಳ್ಳಬೇಕಾದ ನಡೆ ಎನಿಸಿತ್ತು.

ನಮಗೇ ಕೆಲವು ಸಲ ತಾತನನ್ನ ಜಾಸ್ತಿ ಆಯಾಸ ಮಾಡಿಸಿದೆವಾ ಅನ್ನಿಸುತ್ತಿತ್ತು. ಆದರೆ ತಾತ ಮಾತ್ರ ವಿಷಯ ತೆಗೆದಷ್ಟು ಜ್ಞಾನದ ಭಂಡಾರವೆ ಬಿಚ್ಚಿಕೊಳ್ಳುತ್ತಿತ್ತು. ಈಗ ನೆನಸಿಕೊಂಡರೆ ಬಹುರ್ಶ ಆ ಲಾಕ್ ಡೌನ್ ಸಮಯದಲ್ಲಿ ಹೊರಗೆ ಹೋಗಲು ಆಗದೆ, ಚಳವಳಿಗಳಲ್ಲಿ, ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಹಾಗದೆ ಅವರು ಚಡಪಡಿಸುತ್ತಿದ್ದರು ಎನಿಸುತ್ತದೆ. ಆಗ ನಡೆದ ಕೆಲವು ಘಟನೆಗಳನ್ನು ವಿಡಿಯೊ ಮಾಡಿ ಕೆಲ ಸಮಾನ ಮನಸ್ಕ ಸ್ನೇಹಿತರಿಗೆ ಕಳಿಸುತ್ತಿದ್ದೆವು. ಓದುಗರ ಮೆಚ್ಚುಗೆಯ ಮಾತುಗಳು ತಾತನಿಗೆ ಖುಷಿ ತರುತ್ತಿತು. ನನ್ನ ಕುಮಾರ್ ಬಗ್ಗೆಯೂ ಕೇಳಿ ಬೇಷ್ ಎಂದರು. ಜೊತೆಗೆ ಇದಷ್ಟು ದಿನ ಅವರ ಮಗುವಿನಂತ ಮನಸ್ಸಿನಿಂದ ತಾತನ ಹತ್ತಿರ ಏನು ಪ್ರಶ್ನೆ ಬೇಕಾದರೂ ಕೇಳಬಹುದು ಎಂಬ ಸಲುಗೆಯೂ ಬೆಳೆಯಿತು.

ಇನ್ನೊಂದು ಸಲ ನಾನು ತಾತನಿಗೆ, ನೀವು ಎಂದಾದರೂ ಮಾಂಸ ತಿಂದಿದ್ದೀರಾ ಅಂತ ಕೇಳಿದೆ? “ಒಮ್ಮೆ ನನ್ನ ಯೂತ್ ಲೀಡರ್ ಆಗಿ ಕಾರವಾರಕ್ಕೆ ಕಳಿಸಿದ್ದರು. ಆಗ ನಾವು ಹಲವು ಗೆಳೆಯರು ಸೇರಿ ಮನೆಮನೆಗೆ ಪ್ರಚಾರ ಮಾಡಿ ಬಂದಾಗ ತುಂಬಾ ಹಸಿವಾಗಿತ್ತು. ಬಂದ ಎಲ್ಲಾ ಕಾರ್ಯಕರ್ತರಿಗೆ ಒಂದೇ ಕಡೆ ಊಟದ ವ್ಯವಸ್ಥೆ ಮಾಡಿದ್ದರು. ನಾನು ಅವರ ಪಂಕ್ತಿಯಲ್ಲಿ ಕುಳಿತೆ. ಊಟಕ್ಕೊ ಬಡಿಸಿದರು ನಾನು ಊಟನು ಮಾಡಿದೆ. ಅಲ್ಲಿ ನಮಗೆ ಮಾಂಸಾಹಾರ ಬಡಿಸಿದ್ದರು. ನಾನು ನಾಲ್ಕು- ಐದು ತುತ್ತು ತಿಂದಿದ್ದೆ. ಆಮೇಲೆ ಸ್ನೇಹಿತರು ನೋಡಿ ನಿಮಗೆ ಇಲ್ಲಿ ಒಳಗೆ ಊಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಅದು ಮಾಂಸಹಾರಿಗಳಿಗೆ ಎಂದು ನನ್ನ ಕರೆದುಕೊಂಡು ಒಳ ಹೋದರು” ಅಂತ ಹೇಳಿದರು. ಅಷ್ಟರಲ್ಲಿ ನಾನು ಗೊತ್ತಿಲ್ಲದೆ ಐದು ತುತ್ತು ತಿಂದಿದ್ದೆ. ಆ ರುಚಿ ನನಗೆ ಅಭ್ಯಾಸವಿಲ್ಲದಿದ್ದರಿಂದ ನನಗೇನೂ ಅನಿಲಿಲ್ಲ. ಅವರವರ ಆಹಾರ ಅವರಿಗೆ ಹೆಚ್ಚು, ಎಲ್ಲರ ಆಹಾರವನ್ನು ಗೌರವಿಸಬೇಕು. ಯಾರ ಆಹಾರವೂ ಇಲ್ಲಿ ಮೇಲೂ ಇಲ್ಲ ಕೀಳು ಇಲ್ಲ ಅಂದರು ಸಾಮಾಧಾನದಿಂದ. ಇಷ್ಟು ಸರಳವಾಗಿ ಉತ್ತರಿಸುತ್ತಾರೆಂದು ನಾನು ನಿರೀಕ್ಷೆ ಮಾಡಿರಲಿಲ್ಲ. ಮನಸ್ಸಿನಲ್ಲೆ ಹ್ಯಾಟ್ಸ್‌ಆಫ್‌ ತಾತ ಎಂದು ಅವರ ಕೈಕುಲುಕಿದೆ.

ಇಲ್ಲಿ ಮತ್ತೊಂದು ವಿಷಯ ಪ್ರಸ್ತಾಪ ಮಾಡಲೇಬೇಕು. ಅವರ ಹೋರಾಟದ ಬೆಳವಣಿಗೆಗೆ ಅವರ ಬಾಳ ಸಂಗಾತಿಯಾದ ಲಲಿತಮ್ಮನವರ ಬೆಂಬಲವು ಬಹಳ ಮುಖ್ಯ. ಮನೆಯ ಮಕ್ಕಳ ಎಲ್ಲಾ ಜವಾಬ್ದಾರಿಯನ್ನ ಲಲಿತಮ್ಮನವರು ಏಕಾಂಗಿಯಾಗಿಯೇ ನಿರ್ವಹಿಸಿದ್ದಾರೆ. ಈ ಹಿಂದೆ ಅವರೊಂದಿಗೆ ಸಹ ಆಸ್ಪತ್ರೆಯಲ್ಲಿ ಎರಡು ದಿನ ಇದ್ದು ಅವರ ಜೀವನದ ಸಂಗತಿಗಳನ್ನ ಕೇಳಿದ್ದೇನೆ. ಅವರು ಕೂಡಾ ತಾತನ ಬಗ್ಗೆ ಒಂದು ಸಣ್ಣ ಅಸಮಾಧಾನವನ್ನು ವ್ಯಕ್ತಪಡಿಸಲಿಲ್ಲ. ಹೀಗೆ ಸಾರ್ಥಕ ಜೀವನ ಇಬ್ಬರದು. ಹೋಗಿ ಬನ್ನಿ ತಾತ. ಧಣಿವರಿಯದ ನಿಮ್ಮ ಹೋರಾಟದಿಂದ ವಿಶ್ರಾಂತಿ ಪಡೆಯುತ್ತಾ, ನಮ್ಮಂಥವರನ್ನ ಸದಾ ಕಾಲ ಎಚ್ಚರಿಸುತ್ತಿರಿ.

  • ಗೌರಿ, (ಕರ್ನಾಟಕ ಜನಶಕ್ತಿಯ ಗೌರವಾಧ್ಯಕ್ಷರು. ಮಹಿಳಾ ಹೋರಾಟಗಾರರು)

ಇದನ್ನೂ ಓದಿ: ‘ಏನಪ್ಪ, ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ?’ ದೊರೆಸ್ವಾಮಿಯವರ ಜೊತೆಗಿನ ನೆನಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...