Homeಮುಖಪುಟತಾತಾ, ನೀವು ಎಂದಾದರೂ ಮಾಂಸ ತಿಂದಿದ್ದೀರಾ ಎಂಬ ಪ್ರಶ್ನೆಗೆ ದೊರೆಸ್ವಾಮಿಯವರ ಉತ್ತರವೇನು ಗೊತ್ತೆ?

ತಾತಾ, ನೀವು ಎಂದಾದರೂ ಮಾಂಸ ತಿಂದಿದ್ದೀರಾ ಎಂಬ ಪ್ರಶ್ನೆಗೆ ದೊರೆಸ್ವಾಮಿಯವರ ಉತ್ತರವೇನು ಗೊತ್ತೆ?

ಅಷ್ಟು ಎತ್ತರದ ವ್ಯಕ್ತಿ, ನನ್ನಂತ ಚಿಕ್ಕವಳ ಮುಂದೆ ತನ್ನನ್ನು ತಾನೇ ಈ ರೀತಿ ಆತ್ಮಾವಲೋಕನ ಮಾಡಿಕೊಳ್ಳುವುದು ಎಂದರೆ ಅದು ಸಲಭದ ಮಾತಲ್ಲ..

- Advertisement -
- Advertisement -

ಹೋರಾಟದ ಸ್ವೂರ್ತಿ, ಕರ್ನಾಟಕದ ಎಲ್ಲಾ ಚಳವಳಿಗಳ ಬೆನ್ನೆಲುಬು ಆಗಿದ್ದ ನಮ್ಮೆಲ್ಲರ ಚೇತನ ದೊರೆಸ್ವಾಮಿ ತಾತಾ ಇನ್ನಿಲ್ಲ ಎಂಬುದನ್ನ ಅರಗಿಸಿಕೊಳ್ಳಲು ಕಷ್ಟವಾಗುತ್ತಿದೆ. ಅವರೊಂದಿಗಿನ ನನ್ನ ಒಡನಾಟ, 20 ವರ್ಷದು ಎಂದು ಹೇಳಬಹುದಾದರೂ ಅದು ವೇದಿಕೆಯ ಮೇಲೆ, ಕಾರ್ಯಕ್ರಮಗಳಲ್ಲಿ ಬಿಟ್ಟರೆ, ಅವರನ್ನ ಇನ್ನೂ ಹತ್ತಿರದಿಂದ ನೋಡುವ ಅವಕಾಶ ದೊರೆಕಿದ್ದು 2020ರ ಮೊದಲ ಕರೋನಾ ಲಾಕ್ ಡೌನ್ ಸಮಯದಲ್ಲಿ.

ಆಗ ತಾತನನ್ನು ನೋಡಿಕೊಳ್ಳಲು ಯಾರು ಸಿಗದ ಸಂದರ್ಭ. ನರ್ಸ್ ಒಬ್ಬರನ್ನು ನೇಮಿಸುವ ಚರ್ಚೆ ಬಂದಾಗ ಅದಕ್ಕೆ ತಾತಾ ಒಪ್ಪುತ್ತಿರಲಿಲ್ಲ. ಅವರೊಂದಿಗೆ ರಾಜಕೀಯ ಚರ್ಚೆ ಮಾಡಬೇಕಾದ್ದರಿಂದ ಸಾಮಾಜಿಕ ಕಾರ್ಯಕರ್ತರು ಅವರನ್ನು ನೋಡಿಕೊಂಡರೆ ಅವರಿಗೆ ಸಮಾಧಾನ. ಕೊನೆಗೆ ನಾನು ನನ್ನ ಬಾಳ ಸಂಗಾತಿ ಕುಮಾರ್ ಹೊರಡಲು ಸಿದ್ದರಾದೆವು. ಮೊದಲು ಹೇಗೆ ನೋಡಿಕೊಳ್ಳಬೇಕು ಅವರ ಪದ್ದತಿಗಳು ಎಲ್ಲಾ ಭಿನ್ನವಾಗಿ ಇರುತ್ತದೆ ಅದಕ್ಕೆ ನಾವು ಸರಿ ಹೊಂದುತ್ತೇವೊ ಇಲ್ಲವೊ ಎಂಬ ಸಣ್ಣ ಅಳುಕಿತ್ತು, ನಾವು ಹೋಗಿದ್ದರಿಂದ ಅವರಿಗೆ ತೊಂದರೆಯಾಗಬಾರದು ಎಂಬ ಕಾಳಜಿಯಿಂದಷ್ಟೆ. ಆದರೆ ಹೋದ ಒಂದು ದಿನಕ್ಕೆ ತಾತನದು ನಮ್ಮದು ಎಷ್ಟೋ ವರ್ಷದ ಸಂಬಂಧ ಎನಿಸುವಷ್ಟು ಹತ್ತಿರವಾದೆವು.

ಇದು ಬಹುಶಃ ಸಮಾಜದ ಬದಲಾಣೆಯ ಬಗೆಗಿರುವ ಸಮಾನ ನಂಟಿರಬೇಕು ಅನಿಸಿತ್ತು. ನನಗೊ ಬಹಳಷ್ಟು ಕುತೂಹಲದ ಪ್ರಶ್ನೆಗಳಿದ್ದವು. ಆ ಕಾಲದಲ್ಲಿ ಸ್ವಾತಂತ್ರ್ಯ ಚಳವಳಿಗಳು ಹೇಗೆ ನಡೆಯುತ್ತಿತ್ತು? ಅದರಲ್ಲಿ ತಾತನ ಪಾತ್ರ ಏನಾಗಿತ್ತು ಎಂಬ ಹತ್ತು ಹಲವು ಪ್ರಶ್ನೆಗಳನ್ನು ಕೇಳುತ್ತಿದೆ? ಎಲ್ಲದ್ದಕ್ಕೂ ಉತ್ಸಾಹದಿಂದ ಉತ್ತರಿಸುತ್ತಿದ್ದರು. ಅವರ ಮದುವೆಯ ಬಗ್ಗೆ, ಪ್ರೀತಿಯ ಬಗ್ಗೆ ಹೀಗೆ ಮಾತನಾಡುತ್ತಿದ್ದರೆ ನಮಗೆ ಸಮಯ ಹೋಗುತ್ತಿದ್ದದೆ ಗೊತ್ತಾಗುತ್ತಿರಲಿಲ್ಲ. ಒಂದು ಸಲ ನಾನು, “ತಾತ ನೀವು ಅಜ್ಜಿನ, ಮಕ್ಕಳನ ನೋಡೋಕೆ ವರ್ಷವಾದರೂ ಮನೆಗೆ ಬರುತ್ತಿರಲಿಲ್ಲವಂತೆ, ಪಾಪ ಅಜ್ಜಿ ಎಷ್ಟು ಕಷ್ಟ ಪಟ್ಟಿರಬೇಕು” ಎಂದೆ. ಸಡನ್ನಾಗಿ ತಾತ ನನ್ನ ಕಡೆ ನೋಡಿದರು, ನನಗೆ ಕೇಳಬಾರದ ಪ್ರಶ್ನೆ ಏನಾದರು ಕೇಳಿದೆನಾ ಅಂತ ಒಂದು ಕ್ಷಣ ಗಲಿಬಿಲಿಗೊಂಡೆ, ಅದಕ್ಕೆ ತಾತ ಶಾಂತವಾಗಿ “ಹೌದಮ್ಮ ಅವಳಿಗೆ ನನ್ನ ಮದುವೆ ಮಾಡಿಕೊಂಡು ಏನು ಸಿಕ್ಕಿಲ್ಲ, ಕಷ್ಟಗಳ ಹೊರತು” ಎಂದು ಎರಡು ನಿಮಿಷ ಮೌನಕ್ಕೆ ಜಾರಿದರು. ಅಷ್ಟು ಎತ್ತರದ ವ್ಯಕ್ತಿ ನನ್ನಂತ ಚಿಕ್ಕವಳ ಮುಂದೆ ತನ್ನನ್ನು ತಾನೇ ಈ ರೀತಿ ಆತ್ಮಾವಲೋಕನ ಮಾಡಿಕೊಳ್ಳುವುದು ಎಂದರೆ ಅದು ಸಲಭದ ಮಾತಲ್ಲ. ಅದೇ ನಾವೆಲ್ಲರೂ ಅವರಿಂದ ಅಳವಡಿಸಿಕೊಳ್ಳಬೇಕಾದ ನಡೆ ಎನಿಸಿತ್ತು.

ನಮಗೇ ಕೆಲವು ಸಲ ತಾತನನ್ನ ಜಾಸ್ತಿ ಆಯಾಸ ಮಾಡಿಸಿದೆವಾ ಅನ್ನಿಸುತ್ತಿತ್ತು. ಆದರೆ ತಾತ ಮಾತ್ರ ವಿಷಯ ತೆಗೆದಷ್ಟು ಜ್ಞಾನದ ಭಂಡಾರವೆ ಬಿಚ್ಚಿಕೊಳ್ಳುತ್ತಿತ್ತು. ಈಗ ನೆನಸಿಕೊಂಡರೆ ಬಹುರ್ಶ ಆ ಲಾಕ್ ಡೌನ್ ಸಮಯದಲ್ಲಿ ಹೊರಗೆ ಹೋಗಲು ಆಗದೆ, ಚಳವಳಿಗಳಲ್ಲಿ, ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಹಾಗದೆ ಅವರು ಚಡಪಡಿಸುತ್ತಿದ್ದರು ಎನಿಸುತ್ತದೆ. ಆಗ ನಡೆದ ಕೆಲವು ಘಟನೆಗಳನ್ನು ವಿಡಿಯೊ ಮಾಡಿ ಕೆಲ ಸಮಾನ ಮನಸ್ಕ ಸ್ನೇಹಿತರಿಗೆ ಕಳಿಸುತ್ತಿದ್ದೆವು. ಓದುಗರ ಮೆಚ್ಚುಗೆಯ ಮಾತುಗಳು ತಾತನಿಗೆ ಖುಷಿ ತರುತ್ತಿತು. ನನ್ನ ಕುಮಾರ್ ಬಗ್ಗೆಯೂ ಕೇಳಿ ಬೇಷ್ ಎಂದರು. ಜೊತೆಗೆ ಇದಷ್ಟು ದಿನ ಅವರ ಮಗುವಿನಂತ ಮನಸ್ಸಿನಿಂದ ತಾತನ ಹತ್ತಿರ ಏನು ಪ್ರಶ್ನೆ ಬೇಕಾದರೂ ಕೇಳಬಹುದು ಎಂಬ ಸಲುಗೆಯೂ ಬೆಳೆಯಿತು.

ಇನ್ನೊಂದು ಸಲ ನಾನು ತಾತನಿಗೆ, ನೀವು ಎಂದಾದರೂ ಮಾಂಸ ತಿಂದಿದ್ದೀರಾ ಅಂತ ಕೇಳಿದೆ? “ಒಮ್ಮೆ ನನ್ನ ಯೂತ್ ಲೀಡರ್ ಆಗಿ ಕಾರವಾರಕ್ಕೆ ಕಳಿಸಿದ್ದರು. ಆಗ ನಾವು ಹಲವು ಗೆಳೆಯರು ಸೇರಿ ಮನೆಮನೆಗೆ ಪ್ರಚಾರ ಮಾಡಿ ಬಂದಾಗ ತುಂಬಾ ಹಸಿವಾಗಿತ್ತು. ಬಂದ ಎಲ್ಲಾ ಕಾರ್ಯಕರ್ತರಿಗೆ ಒಂದೇ ಕಡೆ ಊಟದ ವ್ಯವಸ್ಥೆ ಮಾಡಿದ್ದರು. ನಾನು ಅವರ ಪಂಕ್ತಿಯಲ್ಲಿ ಕುಳಿತೆ. ಊಟಕ್ಕೊ ಬಡಿಸಿದರು ನಾನು ಊಟನು ಮಾಡಿದೆ. ಅಲ್ಲಿ ನಮಗೆ ಮಾಂಸಾಹಾರ ಬಡಿಸಿದ್ದರು. ನಾನು ನಾಲ್ಕು- ಐದು ತುತ್ತು ತಿಂದಿದ್ದೆ. ಆಮೇಲೆ ಸ್ನೇಹಿತರು ನೋಡಿ ನಿಮಗೆ ಇಲ್ಲಿ ಒಳಗೆ ಊಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಅದು ಮಾಂಸಹಾರಿಗಳಿಗೆ ಎಂದು ನನ್ನ ಕರೆದುಕೊಂಡು ಒಳ ಹೋದರು” ಅಂತ ಹೇಳಿದರು. ಅಷ್ಟರಲ್ಲಿ ನಾನು ಗೊತ್ತಿಲ್ಲದೆ ಐದು ತುತ್ತು ತಿಂದಿದ್ದೆ. ಆ ರುಚಿ ನನಗೆ ಅಭ್ಯಾಸವಿಲ್ಲದಿದ್ದರಿಂದ ನನಗೇನೂ ಅನಿಲಿಲ್ಲ. ಅವರವರ ಆಹಾರ ಅವರಿಗೆ ಹೆಚ್ಚು, ಎಲ್ಲರ ಆಹಾರವನ್ನು ಗೌರವಿಸಬೇಕು. ಯಾರ ಆಹಾರವೂ ಇಲ್ಲಿ ಮೇಲೂ ಇಲ್ಲ ಕೀಳು ಇಲ್ಲ ಅಂದರು ಸಾಮಾಧಾನದಿಂದ. ಇಷ್ಟು ಸರಳವಾಗಿ ಉತ್ತರಿಸುತ್ತಾರೆಂದು ನಾನು ನಿರೀಕ್ಷೆ ಮಾಡಿರಲಿಲ್ಲ. ಮನಸ್ಸಿನಲ್ಲೆ ಹ್ಯಾಟ್ಸ್‌ಆಫ್‌ ತಾತ ಎಂದು ಅವರ ಕೈಕುಲುಕಿದೆ.

ಇಲ್ಲಿ ಮತ್ತೊಂದು ವಿಷಯ ಪ್ರಸ್ತಾಪ ಮಾಡಲೇಬೇಕು. ಅವರ ಹೋರಾಟದ ಬೆಳವಣಿಗೆಗೆ ಅವರ ಬಾಳ ಸಂಗಾತಿಯಾದ ಲಲಿತಮ್ಮನವರ ಬೆಂಬಲವು ಬಹಳ ಮುಖ್ಯ. ಮನೆಯ ಮಕ್ಕಳ ಎಲ್ಲಾ ಜವಾಬ್ದಾರಿಯನ್ನ ಲಲಿತಮ್ಮನವರು ಏಕಾಂಗಿಯಾಗಿಯೇ ನಿರ್ವಹಿಸಿದ್ದಾರೆ. ಈ ಹಿಂದೆ ಅವರೊಂದಿಗೆ ಸಹ ಆಸ್ಪತ್ರೆಯಲ್ಲಿ ಎರಡು ದಿನ ಇದ್ದು ಅವರ ಜೀವನದ ಸಂಗತಿಗಳನ್ನ ಕೇಳಿದ್ದೇನೆ. ಅವರು ಕೂಡಾ ತಾತನ ಬಗ್ಗೆ ಒಂದು ಸಣ್ಣ ಅಸಮಾಧಾನವನ್ನು ವ್ಯಕ್ತಪಡಿಸಲಿಲ್ಲ. ಹೀಗೆ ಸಾರ್ಥಕ ಜೀವನ ಇಬ್ಬರದು. ಹೋಗಿ ಬನ್ನಿ ತಾತ. ಧಣಿವರಿಯದ ನಿಮ್ಮ ಹೋರಾಟದಿಂದ ವಿಶ್ರಾಂತಿ ಪಡೆಯುತ್ತಾ, ನಮ್ಮಂಥವರನ್ನ ಸದಾ ಕಾಲ ಎಚ್ಚರಿಸುತ್ತಿರಿ.

  • ಗೌರಿ, (ಕರ್ನಾಟಕ ಜನಶಕ್ತಿಯ ಗೌರವಾಧ್ಯಕ್ಷರು. ಮಹಿಳಾ ಹೋರಾಟಗಾರರು)

ಇದನ್ನೂ ಓದಿ: ‘ಏನಪ್ಪ, ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ?’ ದೊರೆಸ್ವಾಮಿಯವರ ಜೊತೆಗಿನ ನೆನಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...