Homeಮುಖಪುಟತಾತಾ, ನೀವು ಎಂದಾದರೂ ಮಾಂಸ ತಿಂದಿದ್ದೀರಾ ಎಂಬ ಪ್ರಶ್ನೆಗೆ ದೊರೆಸ್ವಾಮಿಯವರ ಉತ್ತರವೇನು ಗೊತ್ತೆ?

ತಾತಾ, ನೀವು ಎಂದಾದರೂ ಮಾಂಸ ತಿಂದಿದ್ದೀರಾ ಎಂಬ ಪ್ರಶ್ನೆಗೆ ದೊರೆಸ್ವಾಮಿಯವರ ಉತ್ತರವೇನು ಗೊತ್ತೆ?

ಅಷ್ಟು ಎತ್ತರದ ವ್ಯಕ್ತಿ, ನನ್ನಂತ ಚಿಕ್ಕವಳ ಮುಂದೆ ತನ್ನನ್ನು ತಾನೇ ಈ ರೀತಿ ಆತ್ಮಾವಲೋಕನ ಮಾಡಿಕೊಳ್ಳುವುದು ಎಂದರೆ ಅದು ಸಲಭದ ಮಾತಲ್ಲ..

- Advertisement -
- Advertisement -

ಹೋರಾಟದ ಸ್ವೂರ್ತಿ, ಕರ್ನಾಟಕದ ಎಲ್ಲಾ ಚಳವಳಿಗಳ ಬೆನ್ನೆಲುಬು ಆಗಿದ್ದ ನಮ್ಮೆಲ್ಲರ ಚೇತನ ದೊರೆಸ್ವಾಮಿ ತಾತಾ ಇನ್ನಿಲ್ಲ ಎಂಬುದನ್ನ ಅರಗಿಸಿಕೊಳ್ಳಲು ಕಷ್ಟವಾಗುತ್ತಿದೆ. ಅವರೊಂದಿಗಿನ ನನ್ನ ಒಡನಾಟ, 20 ವರ್ಷದು ಎಂದು ಹೇಳಬಹುದಾದರೂ ಅದು ವೇದಿಕೆಯ ಮೇಲೆ, ಕಾರ್ಯಕ್ರಮಗಳಲ್ಲಿ ಬಿಟ್ಟರೆ, ಅವರನ್ನ ಇನ್ನೂ ಹತ್ತಿರದಿಂದ ನೋಡುವ ಅವಕಾಶ ದೊರೆಕಿದ್ದು 2020ರ ಮೊದಲ ಕರೋನಾ ಲಾಕ್ ಡೌನ್ ಸಮಯದಲ್ಲಿ.

ಆಗ ತಾತನನ್ನು ನೋಡಿಕೊಳ್ಳಲು ಯಾರು ಸಿಗದ ಸಂದರ್ಭ. ನರ್ಸ್ ಒಬ್ಬರನ್ನು ನೇಮಿಸುವ ಚರ್ಚೆ ಬಂದಾಗ ಅದಕ್ಕೆ ತಾತಾ ಒಪ್ಪುತ್ತಿರಲಿಲ್ಲ. ಅವರೊಂದಿಗೆ ರಾಜಕೀಯ ಚರ್ಚೆ ಮಾಡಬೇಕಾದ್ದರಿಂದ ಸಾಮಾಜಿಕ ಕಾರ್ಯಕರ್ತರು ಅವರನ್ನು ನೋಡಿಕೊಂಡರೆ ಅವರಿಗೆ ಸಮಾಧಾನ. ಕೊನೆಗೆ ನಾನು ನನ್ನ ಬಾಳ ಸಂಗಾತಿ ಕುಮಾರ್ ಹೊರಡಲು ಸಿದ್ದರಾದೆವು. ಮೊದಲು ಹೇಗೆ ನೋಡಿಕೊಳ್ಳಬೇಕು ಅವರ ಪದ್ದತಿಗಳು ಎಲ್ಲಾ ಭಿನ್ನವಾಗಿ ಇರುತ್ತದೆ ಅದಕ್ಕೆ ನಾವು ಸರಿ ಹೊಂದುತ್ತೇವೊ ಇಲ್ಲವೊ ಎಂಬ ಸಣ್ಣ ಅಳುಕಿತ್ತು, ನಾವು ಹೋಗಿದ್ದರಿಂದ ಅವರಿಗೆ ತೊಂದರೆಯಾಗಬಾರದು ಎಂಬ ಕಾಳಜಿಯಿಂದಷ್ಟೆ. ಆದರೆ ಹೋದ ಒಂದು ದಿನಕ್ಕೆ ತಾತನದು ನಮ್ಮದು ಎಷ್ಟೋ ವರ್ಷದ ಸಂಬಂಧ ಎನಿಸುವಷ್ಟು ಹತ್ತಿರವಾದೆವು.

ಇದು ಬಹುಶಃ ಸಮಾಜದ ಬದಲಾಣೆಯ ಬಗೆಗಿರುವ ಸಮಾನ ನಂಟಿರಬೇಕು ಅನಿಸಿತ್ತು. ನನಗೊ ಬಹಳಷ್ಟು ಕುತೂಹಲದ ಪ್ರಶ್ನೆಗಳಿದ್ದವು. ಆ ಕಾಲದಲ್ಲಿ ಸ್ವಾತಂತ್ರ್ಯ ಚಳವಳಿಗಳು ಹೇಗೆ ನಡೆಯುತ್ತಿತ್ತು? ಅದರಲ್ಲಿ ತಾತನ ಪಾತ್ರ ಏನಾಗಿತ್ತು ಎಂಬ ಹತ್ತು ಹಲವು ಪ್ರಶ್ನೆಗಳನ್ನು ಕೇಳುತ್ತಿದೆ? ಎಲ್ಲದ್ದಕ್ಕೂ ಉತ್ಸಾಹದಿಂದ ಉತ್ತರಿಸುತ್ತಿದ್ದರು. ಅವರ ಮದುವೆಯ ಬಗ್ಗೆ, ಪ್ರೀತಿಯ ಬಗ್ಗೆ ಹೀಗೆ ಮಾತನಾಡುತ್ತಿದ್ದರೆ ನಮಗೆ ಸಮಯ ಹೋಗುತ್ತಿದ್ದದೆ ಗೊತ್ತಾಗುತ್ತಿರಲಿಲ್ಲ. ಒಂದು ಸಲ ನಾನು, “ತಾತ ನೀವು ಅಜ್ಜಿನ, ಮಕ್ಕಳನ ನೋಡೋಕೆ ವರ್ಷವಾದರೂ ಮನೆಗೆ ಬರುತ್ತಿರಲಿಲ್ಲವಂತೆ, ಪಾಪ ಅಜ್ಜಿ ಎಷ್ಟು ಕಷ್ಟ ಪಟ್ಟಿರಬೇಕು” ಎಂದೆ. ಸಡನ್ನಾಗಿ ತಾತ ನನ್ನ ಕಡೆ ನೋಡಿದರು, ನನಗೆ ಕೇಳಬಾರದ ಪ್ರಶ್ನೆ ಏನಾದರು ಕೇಳಿದೆನಾ ಅಂತ ಒಂದು ಕ್ಷಣ ಗಲಿಬಿಲಿಗೊಂಡೆ, ಅದಕ್ಕೆ ತಾತ ಶಾಂತವಾಗಿ “ಹೌದಮ್ಮ ಅವಳಿಗೆ ನನ್ನ ಮದುವೆ ಮಾಡಿಕೊಂಡು ಏನು ಸಿಕ್ಕಿಲ್ಲ, ಕಷ್ಟಗಳ ಹೊರತು” ಎಂದು ಎರಡು ನಿಮಿಷ ಮೌನಕ್ಕೆ ಜಾರಿದರು. ಅಷ್ಟು ಎತ್ತರದ ವ್ಯಕ್ತಿ ನನ್ನಂತ ಚಿಕ್ಕವಳ ಮುಂದೆ ತನ್ನನ್ನು ತಾನೇ ಈ ರೀತಿ ಆತ್ಮಾವಲೋಕನ ಮಾಡಿಕೊಳ್ಳುವುದು ಎಂದರೆ ಅದು ಸಲಭದ ಮಾತಲ್ಲ. ಅದೇ ನಾವೆಲ್ಲರೂ ಅವರಿಂದ ಅಳವಡಿಸಿಕೊಳ್ಳಬೇಕಾದ ನಡೆ ಎನಿಸಿತ್ತು.

ನಮಗೇ ಕೆಲವು ಸಲ ತಾತನನ್ನ ಜಾಸ್ತಿ ಆಯಾಸ ಮಾಡಿಸಿದೆವಾ ಅನ್ನಿಸುತ್ತಿತ್ತು. ಆದರೆ ತಾತ ಮಾತ್ರ ವಿಷಯ ತೆಗೆದಷ್ಟು ಜ್ಞಾನದ ಭಂಡಾರವೆ ಬಿಚ್ಚಿಕೊಳ್ಳುತ್ತಿತ್ತು. ಈಗ ನೆನಸಿಕೊಂಡರೆ ಬಹುರ್ಶ ಆ ಲಾಕ್ ಡೌನ್ ಸಮಯದಲ್ಲಿ ಹೊರಗೆ ಹೋಗಲು ಆಗದೆ, ಚಳವಳಿಗಳಲ್ಲಿ, ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಹಾಗದೆ ಅವರು ಚಡಪಡಿಸುತ್ತಿದ್ದರು ಎನಿಸುತ್ತದೆ. ಆಗ ನಡೆದ ಕೆಲವು ಘಟನೆಗಳನ್ನು ವಿಡಿಯೊ ಮಾಡಿ ಕೆಲ ಸಮಾನ ಮನಸ್ಕ ಸ್ನೇಹಿತರಿಗೆ ಕಳಿಸುತ್ತಿದ್ದೆವು. ಓದುಗರ ಮೆಚ್ಚುಗೆಯ ಮಾತುಗಳು ತಾತನಿಗೆ ಖುಷಿ ತರುತ್ತಿತು. ನನ್ನ ಕುಮಾರ್ ಬಗ್ಗೆಯೂ ಕೇಳಿ ಬೇಷ್ ಎಂದರು. ಜೊತೆಗೆ ಇದಷ್ಟು ದಿನ ಅವರ ಮಗುವಿನಂತ ಮನಸ್ಸಿನಿಂದ ತಾತನ ಹತ್ತಿರ ಏನು ಪ್ರಶ್ನೆ ಬೇಕಾದರೂ ಕೇಳಬಹುದು ಎಂಬ ಸಲುಗೆಯೂ ಬೆಳೆಯಿತು.

ಇನ್ನೊಂದು ಸಲ ನಾನು ತಾತನಿಗೆ, ನೀವು ಎಂದಾದರೂ ಮಾಂಸ ತಿಂದಿದ್ದೀರಾ ಅಂತ ಕೇಳಿದೆ? “ಒಮ್ಮೆ ನನ್ನ ಯೂತ್ ಲೀಡರ್ ಆಗಿ ಕಾರವಾರಕ್ಕೆ ಕಳಿಸಿದ್ದರು. ಆಗ ನಾವು ಹಲವು ಗೆಳೆಯರು ಸೇರಿ ಮನೆಮನೆಗೆ ಪ್ರಚಾರ ಮಾಡಿ ಬಂದಾಗ ತುಂಬಾ ಹಸಿವಾಗಿತ್ತು. ಬಂದ ಎಲ್ಲಾ ಕಾರ್ಯಕರ್ತರಿಗೆ ಒಂದೇ ಕಡೆ ಊಟದ ವ್ಯವಸ್ಥೆ ಮಾಡಿದ್ದರು. ನಾನು ಅವರ ಪಂಕ್ತಿಯಲ್ಲಿ ಕುಳಿತೆ. ಊಟಕ್ಕೊ ಬಡಿಸಿದರು ನಾನು ಊಟನು ಮಾಡಿದೆ. ಅಲ್ಲಿ ನಮಗೆ ಮಾಂಸಾಹಾರ ಬಡಿಸಿದ್ದರು. ನಾನು ನಾಲ್ಕು- ಐದು ತುತ್ತು ತಿಂದಿದ್ದೆ. ಆಮೇಲೆ ಸ್ನೇಹಿತರು ನೋಡಿ ನಿಮಗೆ ಇಲ್ಲಿ ಒಳಗೆ ಊಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಅದು ಮಾಂಸಹಾರಿಗಳಿಗೆ ಎಂದು ನನ್ನ ಕರೆದುಕೊಂಡು ಒಳ ಹೋದರು” ಅಂತ ಹೇಳಿದರು. ಅಷ್ಟರಲ್ಲಿ ನಾನು ಗೊತ್ತಿಲ್ಲದೆ ಐದು ತುತ್ತು ತಿಂದಿದ್ದೆ. ಆ ರುಚಿ ನನಗೆ ಅಭ್ಯಾಸವಿಲ್ಲದಿದ್ದರಿಂದ ನನಗೇನೂ ಅನಿಲಿಲ್ಲ. ಅವರವರ ಆಹಾರ ಅವರಿಗೆ ಹೆಚ್ಚು, ಎಲ್ಲರ ಆಹಾರವನ್ನು ಗೌರವಿಸಬೇಕು. ಯಾರ ಆಹಾರವೂ ಇಲ್ಲಿ ಮೇಲೂ ಇಲ್ಲ ಕೀಳು ಇಲ್ಲ ಅಂದರು ಸಾಮಾಧಾನದಿಂದ. ಇಷ್ಟು ಸರಳವಾಗಿ ಉತ್ತರಿಸುತ್ತಾರೆಂದು ನಾನು ನಿರೀಕ್ಷೆ ಮಾಡಿರಲಿಲ್ಲ. ಮನಸ್ಸಿನಲ್ಲೆ ಹ್ಯಾಟ್ಸ್‌ಆಫ್‌ ತಾತ ಎಂದು ಅವರ ಕೈಕುಲುಕಿದೆ.

ಇಲ್ಲಿ ಮತ್ತೊಂದು ವಿಷಯ ಪ್ರಸ್ತಾಪ ಮಾಡಲೇಬೇಕು. ಅವರ ಹೋರಾಟದ ಬೆಳವಣಿಗೆಗೆ ಅವರ ಬಾಳ ಸಂಗಾತಿಯಾದ ಲಲಿತಮ್ಮನವರ ಬೆಂಬಲವು ಬಹಳ ಮುಖ್ಯ. ಮನೆಯ ಮಕ್ಕಳ ಎಲ್ಲಾ ಜವಾಬ್ದಾರಿಯನ್ನ ಲಲಿತಮ್ಮನವರು ಏಕಾಂಗಿಯಾಗಿಯೇ ನಿರ್ವಹಿಸಿದ್ದಾರೆ. ಈ ಹಿಂದೆ ಅವರೊಂದಿಗೆ ಸಹ ಆಸ್ಪತ್ರೆಯಲ್ಲಿ ಎರಡು ದಿನ ಇದ್ದು ಅವರ ಜೀವನದ ಸಂಗತಿಗಳನ್ನ ಕೇಳಿದ್ದೇನೆ. ಅವರು ಕೂಡಾ ತಾತನ ಬಗ್ಗೆ ಒಂದು ಸಣ್ಣ ಅಸಮಾಧಾನವನ್ನು ವ್ಯಕ್ತಪಡಿಸಲಿಲ್ಲ. ಹೀಗೆ ಸಾರ್ಥಕ ಜೀವನ ಇಬ್ಬರದು. ಹೋಗಿ ಬನ್ನಿ ತಾತ. ಧಣಿವರಿಯದ ನಿಮ್ಮ ಹೋರಾಟದಿಂದ ವಿಶ್ರಾಂತಿ ಪಡೆಯುತ್ತಾ, ನಮ್ಮಂಥವರನ್ನ ಸದಾ ಕಾಲ ಎಚ್ಚರಿಸುತ್ತಿರಿ.

  • ಗೌರಿ, (ಕರ್ನಾಟಕ ಜನಶಕ್ತಿಯ ಗೌರವಾಧ್ಯಕ್ಷರು. ಮಹಿಳಾ ಹೋರಾಟಗಾರರು)

ಇದನ್ನೂ ಓದಿ: ‘ಏನಪ್ಪ, ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ?’ ದೊರೆಸ್ವಾಮಿಯವರ ಜೊತೆಗಿನ ನೆನಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...