Homeಅಂಕಣಗಳು"ನಮ್ಮ ರೈಲ್ವೆ ಬೋಗಿಗಳನ್ನ ನೋಡಿದ್ದೀರಾ!"

“ನಮ್ಮ ರೈಲ್ವೆ ಬೋಗಿಗಳನ್ನ ನೋಡಿದ್ದೀರಾ!”

- Advertisement -
- Advertisement -

ನೀವು ನಮ್ಮ ರೈಲುಗಳನ್ನು ನೋಡಿದ್ದೀರಾ? ನೋಡದಿದ್ದರೆ ಈಗ ಸರಿಯಾಗಿ ನೋಡಿ. ಎಷ್ಟೇ ದಿನ ತೊಳೆಯದಿದ್ದರೂ ಧೂಳು ಕಾಣದಂತೆ ಕಡುನೀಲಿ ಬಣ್ಣ ಹೊದ್ದು ಸಂಚರಿಸುತ್ತಿದ್ದ ರೈಲುಗಳನ್ನ ಹಿಡಿದುಕೊಂಡು ಹಳದಿ ಬಣ್ಣ ಬಳಿದದ್ದೂ ಅಲ್ಲದೆ, ಅವುಗಳ ಮೇಲೆ ರಕ್ತ ಬಣ್ಣದ ಕೆಂಪು ಪಟ್ಟಿ ಎಳೆದು ಹದಗೆಡಿಸಿದ್ದು ಬಿಜೆಪಿ ಅವದಿಯಲ್ಲಿ. ಇದೂ ಹಾಳುಬಿದ್ದು ಹೋಗಲಿ, ಒಳಗೆ ಕುಳಿತು ಪ್ರಯಾಣ ಮಾಡುವವನಿಗೆ ರೈಲು ಯಾವ ಬಣ್ಣದಲ್ಲಿದ್ದರೇನು. ಆದರೆ ಈ ಹೊಸ ರೈಲು ಬೋಗಿ ನಿರ್ಮಾಪಕರಾದ ಮಂದಮತಿಗಳು ಕೂರಲಾಗದ ಒಂದು ಅನಾಹುತ ಮಾಡಿದ್ದಾರೆ. ಅದೇನೆಂದರೆ, ಸೀಟುಗಳ ಉದ್ದವನ್ನೇ ಕಮ್ಮಿ ಮಾಡಿರುವುದು. ಅದರಿಂದ ಸೀಟುಗಳು ತೊಡೆಗೆ ಒತ್ತಿ ಹಿಂಸೆ ಕೊಡುತ್ತವೆ. ಸರಿಯಾಗಿ ಕೂರಲು ಹೋದರೆ ಬೆನ್ನಿನ ಭಾಗದಲ್ಲಿ ನೋವು ಆರಂಭವಾಗುತ್ತದೆ. ಜನಕ್ಕೆ ತೊಂದರೆ ಕೊಡುವುದೆಂದರೆ ಇದೆ. ಎಷ್ಟೆ, ಆಗಲಿ ಇದು ಪ್ರಜಾಪೀಡಕ ಸರಕಾರ ಆದ್ದರಿಂದ ಈ ಹಿಂದಿನ ಸುಖಕರ ಪ್ರಯಾಣವೀಗ ಹಿಂಸಾಯಾನವಾಗಿದೆ. ರೈಲ್ವೆ ಇಲಾಖೆ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಹಿರಿಯ ನಾಗರಿಕರ ರಿಯಾಯಿತಿ ದರವನ್ನು ರದ್ದು ಮಾಡಿದೆ. ಸಾಮಾಜಿಕವಾಗಿ ಎಲ್ಲರ ತಾತ್ಸಾರಕ್ಕೆ ಗುರಿಯಾದ ವೃದ್ಧರು ರೈಲ್ವೆ ಕಳ್ಳರಿಂದಲೂ ಅವಕೃಪೆಗೊಳಗಾದರಲ್ಲಾ, ಥೂತ್ತೇರಿ.

***

ರೈಲ್ವೆ ಅವಾಂತರ ಇಷ್ಟಕ್ಕೆ ಮುಗಿಯಲಿಲ್ಲ. ಈ ರಾಷ್ಟ್ರದ ಮೇಲೆ ನಿಧಾನವಾಗಿ ಹಿಂದಿ ಹೇರುವ ಸಂಚು ರೂಪಿಸಿರುವ ಬಿಜೆಪಿಗಳು ರೈಲ್ವೆ ನಿಲ್ದಾಣದಲ್ಲಿ ಪ್ರಧಾನವಾಗಿದ್ದ ಕನ್ನಡ ಬೋರ್ಡಿನ ಬದಲು ಹಿಂದಿ ಬಳಸತೊಡಗಿದ್ದಾರೆ. ಒಟ್ಟು ರೈಲ್ವೆ ಬೋಗಿ ಮತ್ತು ನಿಲ್ದಾಣದಿಂದಲೇ ಕನ್ನಡವನ್ನ ಕೊನೆಗಾಣಿಸುತ್ತಿದ್ದಾರೆ. ಇನ್ನು ಬಿಜೆಪಿಗಳ ಇನ್ನೊಂದು ಸಂಚು ಆಶ್ಚರ್ಯ ಹುಟ್ಟಿಸಿದೆ. ಕೆಲ ರೈಲು ಬೋಗಿಗಳ ಹೊಟ್ಟೆಯ ಮೇಲೆ ದೀನದಯಾಳು ಬೋಗಿ ಎಂದು ಬರೆಯಲಾಗಿದೆ. ಈ ದಿನದಯಾಳಿಗೂ ರೈಲ್ವೆ ಬೋಗಿಗೂ ಏನು ಸಂಬಂಧ ಎಂಬುದು ಹೊಸ ತಲೆಮಾರಿಗೆ ತಿಳಿಯುತ್ತಿರುವುದು ಹೀಗೆ: ರೈಲ್ವೆ ಬೋಗಿಗಳು ಈ ರೂಪದಲ್ಲಿ ಇರಬೇಕಾದರೆ ದೀನದಯಾಳರೇ ಇಂತವನ್ನ ತಯಾರಿಸಿ ಹಳಿಗಳ ಮೇಲೆ ಕೂರಿಸಿರಬೇಕು ಅಥವ ರೈಲು ಕಂಡುಹಿಡಿದವರು ಇವರೇ ಇರಬೇಕು ಎಂದು ಅಂದಾಜು ಮಾಡುವ ಸಂಭವವಿದೆ. ಮುಂದೆ ಹರ್ಡಿಕರ್ ಹವಾನಿಯಂತ್ರಿಕ ಬೋಗಿ, ಗೋಳ್ವಾಲ್ಕರ್ ಇಂಜನ್, ಹೆಡೆಗೆವಾರ್ ಕೋಚ್, ವಾಜಪೇಯಿ ಮಹಿಳಾ ಬೋಗಿ ಇಂತಹ ಹೆಸರುಹೊತ್ತ ಬೋಗಿಗಳು ರೈಲ್ವೆ ಹಳಿಗಳ ಮೇಲೆ ಕಾಣಿಸಿಕೊಳ್ಳಹುದಂತಲ್ಲಾ, ಥೂತ್ತೇರಿ.

****

ಕರ್ನಾಟಕದ ಮಟ್ಟಿಗೆ ಈ ವಾರ ಎರಡು ಮಹಾ ಘಟನೆಗಳು ಸಂಭವಿಸಿವೆಯಲ್ಲಾ. ಆ ಎರಡೂ ಘಟನೆಗಳು ಶಿವಮೊಗ್ಗ ಜಿಲ್ಲೆಯ ಜೋಡೆತ್ತಿನಂತಿದ್ದ ಎಡೂರಪ್ಪ ಮತ್ತು ಈಶ್ವರಪ್ಪನವರಿಗೆ ಸಂಬಂಧಿಸಿದ್ದು. ಒಬ್ಬರು ರಾಜಕೀಯದ ರಾಡಿಯಿಂದ ಚುಕ್ತಾ ಆಗಲು ತೀರ್ಮಾನಿಸಿದರೆ ಮತ್ತೊಬ್ಬರು 40 ಪರೆಸೆಂಟ್ ಆಪಾದನೆ ಮಾಡಿ ಸಾವಾದ ಪ್ರಕರಣದಿಂದ ಚುಕ್ತವಾಗಿದ್ದಾರೆ. ಮೊದಲನೆಯದಾಗಿ ತಮ್ಮ ರಾಜಕಾರಣಕ್ಕೆ ಇತಿಶ್ರೀ ಹಾಡಿ, ತಾವು ನಿಂತ ನೆಲವನ್ನ ಮಗನಿಗೆ ಬಿಟ್ಟುಕೊಟ್ಟು ನಿರ್ಗಮಿಸುವ ನಿರ್ಧಾರ ತೆಗೆದುಕೊಂಡಿರುವ ಎಡೂರಪ್ಪನ ಬಗ್ಗೆ ಎಲ್ಲರಿಂದ ಅನುಕಂಪ ವ್ಯಕ್ತವಾಗಿದೆ. ಏಕೆಂದರೆ ಅವರೇ ಇದ್ದಿದ್ದರೆ ಈ ನಾಡು ಈ ರೂಪದ ಕ್ಷೋಭೆಗೆ ಒಳಗಾಗುತ್ತಿರಲಿಲ್ಲ. ಬೆನ್ನು ಮೂಳೆಯಿಲ್ಲದ ಬೊಮ್ಮಾಯಿಯವರಿಂದ ನಡೆದ ಅನಾಹುತಗಳಾವುವೂ ಅವರಿದ್ದರೆ ಸಂಭವಿಸುತ್ತಿರಲಿಲ್ಲ ಶಿಕಾರಿಪುರದಲ್ಲಿ ಮುಸ್ಲಿಮರ ಓಟನ್ನು ತೆಗೆದುಕೊಳ್ಳುತ್ತಿರುವ ಎಡೂರಪ್ಪ ಮುಸ್ಲಿಮರಿಗೂ ಇಷ್ಟವಾದ ವ್ಯಕ್ತಿಯಾಗಿದ್ದರು. ಎಡೂರಪ್ಪನ ಬಗ್ಗೆ ಇನ್ನೊಂದು ರೂಪದ ಅನುಕಂಪ ಯಾವುದೆಂದರೆ, ಮುಖ್ಯಮಂತ್ರಿ ಹುದ್ದೆಯನ್ನು ಘನತೆಯಿಂದ ನಿಭಾಯಿಸಲಾಗದೆ, ಬರೀ ಹಗರಣ, ವಿವಾದ ಮತ್ತು ಸ್ವಜನಪಕ್ಷಪಾತ, ಕಾರಾಗೃಹದ ಕೆಟ್ಟ ಕನಸು ಬರೀ ಇಂತದರಲ್ಲೇ ಅವರ ಅವಧಿ ಮುಗಿದಂತೆ ಕಾಣುತ್ತಿದೆ; ಇದನ್ನೆಲ್ಲಾ ಎಡೂರಪ್ಪ ಮಾತ್ರ ತಡೆದುಕೊಳ್ಳುವ ಶಕ್ತಿ ಪಡೆದಿದ್ದರಂತಲ್ಲಾ, ಥೂತ್ತೇರಿ.

*****

ಈ ಬಿಜೆಪಿ ಹಿಂದಿನಿಂದಲೂ ಧನವಂತರು, ಖ್ಯಾತಿವಂತರು ಮತ್ತು ತೋಳ್ಬಲದ ಮಂದಮತಿಗಳನ್ನ ಮನಸೋ ಇಚ್ಛೆ ಬಳಸಿಕೊಂಡು ಒಂದು ಹಂತದಲ್ಲಿ ಬಿಸಾಡಿ ನಡೆಯುತ್ತಿರುವುದು, ಅದರ ಅಜೆಂಡಾದಂತೆಯೇ ನಡೆದು ಬರುತ್ತಿದೆಯಂತಲ್ಲಾ. ಎಡೂರಪ್ಪನ ಮುಖಾಂತರ ಲಿಂಗಾಯತರು ಬಿಜೆಪಿಯ ಪಡಸಾಲೆಗೆ ಬರಬೇಕಿತ್ತು, ಅದೂ ಆಯ್ತು. ಇನ್ನವರ ಅಗತ್ಯವಿಲ್ಲ. ಇನ್ನ ಧನವಂತರಾಗಿ ಮೆರೆದ ರೆಡ್ಡಿಗಳು ಗಣಿಮಣ್ಣಿನಲ್ಲಿ ಮರೆಯಾದರು. ತೋಳ್ಬಲದ ಈಶ್ವರಪ್ಪನ ಕಾಲ ಇನ್ನೊಂದಿಷ್ಟು ದಿನ ನಡೆಯಬಹುದು. ಆದರೆ ನಲವತ್ತು ಪರಸೆಂಟ್ ಆರೋಪ ಮಾಡಿ ಗುತ್ತಿಗೆದಾರನೊಬ್ಬ ಆತ್ಮಹತ್ಯೆ ಮಾಡಿಕೊಂಡ. ಸಂತೋಷ್ ಪಾಟೀಲ್ ಈಶ್ವರಪ್ಪನವರ ಮೇಲೆ ಆರೋಪ ಹೊರಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಸರಕಾರದ ಪೊಲಿಸ್ ಪೇದೆಗಳು ಎಲ್ಲರ ನಿರೀಕ್ಷೆಯಂತೆ, ’ಪಾಪ ಧರ್ಮವಂತರು, ಸತ್ಯವಂತರು, ನೀತಿವಂತರೂ ಆದ ಈಶ್ವರಪ್ಪನವರಿಗೂ ಸಂತೋಷ್ ಪಾಟೀಲ್ ಆತ್ಮಹತ್ಯೆಗೂ ಯಾವುದೇ ಸಂಬಂಧವಿಲ್ಲ; ಅವರು ಬೆಳಗಾವಿ ಕಡೆಯವರು, ಈಶ್ವರಪ್ಪ ಶಿವಮೊಗ್ಗದವರು. ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವುದು ಉಡುಪಿಯಲ್ಲಿ. ಹೇಗೆ ನೋಡಿದರೂ ಈ ಪ್ರಕರಣಕ್ಕೂ ಈಶ್ವರಪ್ಪರಿಗೂ ಕನಿಷ್ಟ ನಾನೂರು ಕಿಲೋಮೀಟರ್ ದೂರ. ಆದ್ದರಿಂದ ನಾವು ಮಾಡದೆ ಇದ್ದರೂ ಬಿ ರಿಪೋರ್ಟ್ ತಂತಾನೆ ರೂಪುಗೊಳ್ಳುತ್ತದೆ’ ಎಂದು ವಾದಿಸುತ್ತಿದ್ದಾರಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ಹೇಳದೆ ಮಾಡುವ ಉತ್ತಮ ಪ್ರಧಾನಿ ಮೋದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...