Homeಅಂಕಣಗಳು"ನಮ್ಮ ರೈಲ್ವೆ ಬೋಗಿಗಳನ್ನ ನೋಡಿದ್ದೀರಾ!"

“ನಮ್ಮ ರೈಲ್ವೆ ಬೋಗಿಗಳನ್ನ ನೋಡಿದ್ದೀರಾ!”

- Advertisement -
- Advertisement -

ನೀವು ನಮ್ಮ ರೈಲುಗಳನ್ನು ನೋಡಿದ್ದೀರಾ? ನೋಡದಿದ್ದರೆ ಈಗ ಸರಿಯಾಗಿ ನೋಡಿ. ಎಷ್ಟೇ ದಿನ ತೊಳೆಯದಿದ್ದರೂ ಧೂಳು ಕಾಣದಂತೆ ಕಡುನೀಲಿ ಬಣ್ಣ ಹೊದ್ದು ಸಂಚರಿಸುತ್ತಿದ್ದ ರೈಲುಗಳನ್ನ ಹಿಡಿದುಕೊಂಡು ಹಳದಿ ಬಣ್ಣ ಬಳಿದದ್ದೂ ಅಲ್ಲದೆ, ಅವುಗಳ ಮೇಲೆ ರಕ್ತ ಬಣ್ಣದ ಕೆಂಪು ಪಟ್ಟಿ ಎಳೆದು ಹದಗೆಡಿಸಿದ್ದು ಬಿಜೆಪಿ ಅವದಿಯಲ್ಲಿ. ಇದೂ ಹಾಳುಬಿದ್ದು ಹೋಗಲಿ, ಒಳಗೆ ಕುಳಿತು ಪ್ರಯಾಣ ಮಾಡುವವನಿಗೆ ರೈಲು ಯಾವ ಬಣ್ಣದಲ್ಲಿದ್ದರೇನು. ಆದರೆ ಈ ಹೊಸ ರೈಲು ಬೋಗಿ ನಿರ್ಮಾಪಕರಾದ ಮಂದಮತಿಗಳು ಕೂರಲಾಗದ ಒಂದು ಅನಾಹುತ ಮಾಡಿದ್ದಾರೆ. ಅದೇನೆಂದರೆ, ಸೀಟುಗಳ ಉದ್ದವನ್ನೇ ಕಮ್ಮಿ ಮಾಡಿರುವುದು. ಅದರಿಂದ ಸೀಟುಗಳು ತೊಡೆಗೆ ಒತ್ತಿ ಹಿಂಸೆ ಕೊಡುತ್ತವೆ. ಸರಿಯಾಗಿ ಕೂರಲು ಹೋದರೆ ಬೆನ್ನಿನ ಭಾಗದಲ್ಲಿ ನೋವು ಆರಂಭವಾಗುತ್ತದೆ. ಜನಕ್ಕೆ ತೊಂದರೆ ಕೊಡುವುದೆಂದರೆ ಇದೆ. ಎಷ್ಟೆ, ಆಗಲಿ ಇದು ಪ್ರಜಾಪೀಡಕ ಸರಕಾರ ಆದ್ದರಿಂದ ಈ ಹಿಂದಿನ ಸುಖಕರ ಪ್ರಯಾಣವೀಗ ಹಿಂಸಾಯಾನವಾಗಿದೆ. ರೈಲ್ವೆ ಇಲಾಖೆ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಹಿರಿಯ ನಾಗರಿಕರ ರಿಯಾಯಿತಿ ದರವನ್ನು ರದ್ದು ಮಾಡಿದೆ. ಸಾಮಾಜಿಕವಾಗಿ ಎಲ್ಲರ ತಾತ್ಸಾರಕ್ಕೆ ಗುರಿಯಾದ ವೃದ್ಧರು ರೈಲ್ವೆ ಕಳ್ಳರಿಂದಲೂ ಅವಕೃಪೆಗೊಳಗಾದರಲ್ಲಾ, ಥೂತ್ತೇರಿ.

***

ರೈಲ್ವೆ ಅವಾಂತರ ಇಷ್ಟಕ್ಕೆ ಮುಗಿಯಲಿಲ್ಲ. ಈ ರಾಷ್ಟ್ರದ ಮೇಲೆ ನಿಧಾನವಾಗಿ ಹಿಂದಿ ಹೇರುವ ಸಂಚು ರೂಪಿಸಿರುವ ಬಿಜೆಪಿಗಳು ರೈಲ್ವೆ ನಿಲ್ದಾಣದಲ್ಲಿ ಪ್ರಧಾನವಾಗಿದ್ದ ಕನ್ನಡ ಬೋರ್ಡಿನ ಬದಲು ಹಿಂದಿ ಬಳಸತೊಡಗಿದ್ದಾರೆ. ಒಟ್ಟು ರೈಲ್ವೆ ಬೋಗಿ ಮತ್ತು ನಿಲ್ದಾಣದಿಂದಲೇ ಕನ್ನಡವನ್ನ ಕೊನೆಗಾಣಿಸುತ್ತಿದ್ದಾರೆ. ಇನ್ನು ಬಿಜೆಪಿಗಳ ಇನ್ನೊಂದು ಸಂಚು ಆಶ್ಚರ್ಯ ಹುಟ್ಟಿಸಿದೆ. ಕೆಲ ರೈಲು ಬೋಗಿಗಳ ಹೊಟ್ಟೆಯ ಮೇಲೆ ದೀನದಯಾಳು ಬೋಗಿ ಎಂದು ಬರೆಯಲಾಗಿದೆ. ಈ ದಿನದಯಾಳಿಗೂ ರೈಲ್ವೆ ಬೋಗಿಗೂ ಏನು ಸಂಬಂಧ ಎಂಬುದು ಹೊಸ ತಲೆಮಾರಿಗೆ ತಿಳಿಯುತ್ತಿರುವುದು ಹೀಗೆ: ರೈಲ್ವೆ ಬೋಗಿಗಳು ಈ ರೂಪದಲ್ಲಿ ಇರಬೇಕಾದರೆ ದೀನದಯಾಳರೇ ಇಂತವನ್ನ ತಯಾರಿಸಿ ಹಳಿಗಳ ಮೇಲೆ ಕೂರಿಸಿರಬೇಕು ಅಥವ ರೈಲು ಕಂಡುಹಿಡಿದವರು ಇವರೇ ಇರಬೇಕು ಎಂದು ಅಂದಾಜು ಮಾಡುವ ಸಂಭವವಿದೆ. ಮುಂದೆ ಹರ್ಡಿಕರ್ ಹವಾನಿಯಂತ್ರಿಕ ಬೋಗಿ, ಗೋಳ್ವಾಲ್ಕರ್ ಇಂಜನ್, ಹೆಡೆಗೆವಾರ್ ಕೋಚ್, ವಾಜಪೇಯಿ ಮಹಿಳಾ ಬೋಗಿ ಇಂತಹ ಹೆಸರುಹೊತ್ತ ಬೋಗಿಗಳು ರೈಲ್ವೆ ಹಳಿಗಳ ಮೇಲೆ ಕಾಣಿಸಿಕೊಳ್ಳಹುದಂತಲ್ಲಾ, ಥೂತ್ತೇರಿ.

****

ಕರ್ನಾಟಕದ ಮಟ್ಟಿಗೆ ಈ ವಾರ ಎರಡು ಮಹಾ ಘಟನೆಗಳು ಸಂಭವಿಸಿವೆಯಲ್ಲಾ. ಆ ಎರಡೂ ಘಟನೆಗಳು ಶಿವಮೊಗ್ಗ ಜಿಲ್ಲೆಯ ಜೋಡೆತ್ತಿನಂತಿದ್ದ ಎಡೂರಪ್ಪ ಮತ್ತು ಈಶ್ವರಪ್ಪನವರಿಗೆ ಸಂಬಂಧಿಸಿದ್ದು. ಒಬ್ಬರು ರಾಜಕೀಯದ ರಾಡಿಯಿಂದ ಚುಕ್ತಾ ಆಗಲು ತೀರ್ಮಾನಿಸಿದರೆ ಮತ್ತೊಬ್ಬರು 40 ಪರೆಸೆಂಟ್ ಆಪಾದನೆ ಮಾಡಿ ಸಾವಾದ ಪ್ರಕರಣದಿಂದ ಚುಕ್ತವಾಗಿದ್ದಾರೆ. ಮೊದಲನೆಯದಾಗಿ ತಮ್ಮ ರಾಜಕಾರಣಕ್ಕೆ ಇತಿಶ್ರೀ ಹಾಡಿ, ತಾವು ನಿಂತ ನೆಲವನ್ನ ಮಗನಿಗೆ ಬಿಟ್ಟುಕೊಟ್ಟು ನಿರ್ಗಮಿಸುವ ನಿರ್ಧಾರ ತೆಗೆದುಕೊಂಡಿರುವ ಎಡೂರಪ್ಪನ ಬಗ್ಗೆ ಎಲ್ಲರಿಂದ ಅನುಕಂಪ ವ್ಯಕ್ತವಾಗಿದೆ. ಏಕೆಂದರೆ ಅವರೇ ಇದ್ದಿದ್ದರೆ ಈ ನಾಡು ಈ ರೂಪದ ಕ್ಷೋಭೆಗೆ ಒಳಗಾಗುತ್ತಿರಲಿಲ್ಲ. ಬೆನ್ನು ಮೂಳೆಯಿಲ್ಲದ ಬೊಮ್ಮಾಯಿಯವರಿಂದ ನಡೆದ ಅನಾಹುತಗಳಾವುವೂ ಅವರಿದ್ದರೆ ಸಂಭವಿಸುತ್ತಿರಲಿಲ್ಲ ಶಿಕಾರಿಪುರದಲ್ಲಿ ಮುಸ್ಲಿಮರ ಓಟನ್ನು ತೆಗೆದುಕೊಳ್ಳುತ್ತಿರುವ ಎಡೂರಪ್ಪ ಮುಸ್ಲಿಮರಿಗೂ ಇಷ್ಟವಾದ ವ್ಯಕ್ತಿಯಾಗಿದ್ದರು. ಎಡೂರಪ್ಪನ ಬಗ್ಗೆ ಇನ್ನೊಂದು ರೂಪದ ಅನುಕಂಪ ಯಾವುದೆಂದರೆ, ಮುಖ್ಯಮಂತ್ರಿ ಹುದ್ದೆಯನ್ನು ಘನತೆಯಿಂದ ನಿಭಾಯಿಸಲಾಗದೆ, ಬರೀ ಹಗರಣ, ವಿವಾದ ಮತ್ತು ಸ್ವಜನಪಕ್ಷಪಾತ, ಕಾರಾಗೃಹದ ಕೆಟ್ಟ ಕನಸು ಬರೀ ಇಂತದರಲ್ಲೇ ಅವರ ಅವಧಿ ಮುಗಿದಂತೆ ಕಾಣುತ್ತಿದೆ; ಇದನ್ನೆಲ್ಲಾ ಎಡೂರಪ್ಪ ಮಾತ್ರ ತಡೆದುಕೊಳ್ಳುವ ಶಕ್ತಿ ಪಡೆದಿದ್ದರಂತಲ್ಲಾ, ಥೂತ್ತೇರಿ.

*****

ಈ ಬಿಜೆಪಿ ಹಿಂದಿನಿಂದಲೂ ಧನವಂತರು, ಖ್ಯಾತಿವಂತರು ಮತ್ತು ತೋಳ್ಬಲದ ಮಂದಮತಿಗಳನ್ನ ಮನಸೋ ಇಚ್ಛೆ ಬಳಸಿಕೊಂಡು ಒಂದು ಹಂತದಲ್ಲಿ ಬಿಸಾಡಿ ನಡೆಯುತ್ತಿರುವುದು, ಅದರ ಅಜೆಂಡಾದಂತೆಯೇ ನಡೆದು ಬರುತ್ತಿದೆಯಂತಲ್ಲಾ. ಎಡೂರಪ್ಪನ ಮುಖಾಂತರ ಲಿಂಗಾಯತರು ಬಿಜೆಪಿಯ ಪಡಸಾಲೆಗೆ ಬರಬೇಕಿತ್ತು, ಅದೂ ಆಯ್ತು. ಇನ್ನವರ ಅಗತ್ಯವಿಲ್ಲ. ಇನ್ನ ಧನವಂತರಾಗಿ ಮೆರೆದ ರೆಡ್ಡಿಗಳು ಗಣಿಮಣ್ಣಿನಲ್ಲಿ ಮರೆಯಾದರು. ತೋಳ್ಬಲದ ಈಶ್ವರಪ್ಪನ ಕಾಲ ಇನ್ನೊಂದಿಷ್ಟು ದಿನ ನಡೆಯಬಹುದು. ಆದರೆ ನಲವತ್ತು ಪರಸೆಂಟ್ ಆರೋಪ ಮಾಡಿ ಗುತ್ತಿಗೆದಾರನೊಬ್ಬ ಆತ್ಮಹತ್ಯೆ ಮಾಡಿಕೊಂಡ. ಸಂತೋಷ್ ಪಾಟೀಲ್ ಈಶ್ವರಪ್ಪನವರ ಮೇಲೆ ಆರೋಪ ಹೊರಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಸರಕಾರದ ಪೊಲಿಸ್ ಪೇದೆಗಳು ಎಲ್ಲರ ನಿರೀಕ್ಷೆಯಂತೆ, ’ಪಾಪ ಧರ್ಮವಂತರು, ಸತ್ಯವಂತರು, ನೀತಿವಂತರೂ ಆದ ಈಶ್ವರಪ್ಪನವರಿಗೂ ಸಂತೋಷ್ ಪಾಟೀಲ್ ಆತ್ಮಹತ್ಯೆಗೂ ಯಾವುದೇ ಸಂಬಂಧವಿಲ್ಲ; ಅವರು ಬೆಳಗಾವಿ ಕಡೆಯವರು, ಈಶ್ವರಪ್ಪ ಶಿವಮೊಗ್ಗದವರು. ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವುದು ಉಡುಪಿಯಲ್ಲಿ. ಹೇಗೆ ನೋಡಿದರೂ ಈ ಪ್ರಕರಣಕ್ಕೂ ಈಶ್ವರಪ್ಪರಿಗೂ ಕನಿಷ್ಟ ನಾನೂರು ಕಿಲೋಮೀಟರ್ ದೂರ. ಆದ್ದರಿಂದ ನಾವು ಮಾಡದೆ ಇದ್ದರೂ ಬಿ ರಿಪೋರ್ಟ್ ತಂತಾನೆ ರೂಪುಗೊಳ್ಳುತ್ತದೆ’ ಎಂದು ವಾದಿಸುತ್ತಿದ್ದಾರಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ಹೇಳದೆ ಮಾಡುವ ಉತ್ತಮ ಪ್ರಧಾನಿ ಮೋದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...