Homeಅಂಕಣಗಳು"ನಮ್ಮ ರೈಲ್ವೆ ಬೋಗಿಗಳನ್ನ ನೋಡಿದ್ದೀರಾ!"

“ನಮ್ಮ ರೈಲ್ವೆ ಬೋಗಿಗಳನ್ನ ನೋಡಿದ್ದೀರಾ!”

- Advertisement -
- Advertisement -

ನೀವು ನಮ್ಮ ರೈಲುಗಳನ್ನು ನೋಡಿದ್ದೀರಾ? ನೋಡದಿದ್ದರೆ ಈಗ ಸರಿಯಾಗಿ ನೋಡಿ. ಎಷ್ಟೇ ದಿನ ತೊಳೆಯದಿದ್ದರೂ ಧೂಳು ಕಾಣದಂತೆ ಕಡುನೀಲಿ ಬಣ್ಣ ಹೊದ್ದು ಸಂಚರಿಸುತ್ತಿದ್ದ ರೈಲುಗಳನ್ನ ಹಿಡಿದುಕೊಂಡು ಹಳದಿ ಬಣ್ಣ ಬಳಿದದ್ದೂ ಅಲ್ಲದೆ, ಅವುಗಳ ಮೇಲೆ ರಕ್ತ ಬಣ್ಣದ ಕೆಂಪು ಪಟ್ಟಿ ಎಳೆದು ಹದಗೆಡಿಸಿದ್ದು ಬಿಜೆಪಿ ಅವದಿಯಲ್ಲಿ. ಇದೂ ಹಾಳುಬಿದ್ದು ಹೋಗಲಿ, ಒಳಗೆ ಕುಳಿತು ಪ್ರಯಾಣ ಮಾಡುವವನಿಗೆ ರೈಲು ಯಾವ ಬಣ್ಣದಲ್ಲಿದ್ದರೇನು. ಆದರೆ ಈ ಹೊಸ ರೈಲು ಬೋಗಿ ನಿರ್ಮಾಪಕರಾದ ಮಂದಮತಿಗಳು ಕೂರಲಾಗದ ಒಂದು ಅನಾಹುತ ಮಾಡಿದ್ದಾರೆ. ಅದೇನೆಂದರೆ, ಸೀಟುಗಳ ಉದ್ದವನ್ನೇ ಕಮ್ಮಿ ಮಾಡಿರುವುದು. ಅದರಿಂದ ಸೀಟುಗಳು ತೊಡೆಗೆ ಒತ್ತಿ ಹಿಂಸೆ ಕೊಡುತ್ತವೆ. ಸರಿಯಾಗಿ ಕೂರಲು ಹೋದರೆ ಬೆನ್ನಿನ ಭಾಗದಲ್ಲಿ ನೋವು ಆರಂಭವಾಗುತ್ತದೆ. ಜನಕ್ಕೆ ತೊಂದರೆ ಕೊಡುವುದೆಂದರೆ ಇದೆ. ಎಷ್ಟೆ, ಆಗಲಿ ಇದು ಪ್ರಜಾಪೀಡಕ ಸರಕಾರ ಆದ್ದರಿಂದ ಈ ಹಿಂದಿನ ಸುಖಕರ ಪ್ರಯಾಣವೀಗ ಹಿಂಸಾಯಾನವಾಗಿದೆ. ರೈಲ್ವೆ ಇಲಾಖೆ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಹಿರಿಯ ನಾಗರಿಕರ ರಿಯಾಯಿತಿ ದರವನ್ನು ರದ್ದು ಮಾಡಿದೆ. ಸಾಮಾಜಿಕವಾಗಿ ಎಲ್ಲರ ತಾತ್ಸಾರಕ್ಕೆ ಗುರಿಯಾದ ವೃದ್ಧರು ರೈಲ್ವೆ ಕಳ್ಳರಿಂದಲೂ ಅವಕೃಪೆಗೊಳಗಾದರಲ್ಲಾ, ಥೂತ್ತೇರಿ.

***

ರೈಲ್ವೆ ಅವಾಂತರ ಇಷ್ಟಕ್ಕೆ ಮುಗಿಯಲಿಲ್ಲ. ಈ ರಾಷ್ಟ್ರದ ಮೇಲೆ ನಿಧಾನವಾಗಿ ಹಿಂದಿ ಹೇರುವ ಸಂಚು ರೂಪಿಸಿರುವ ಬಿಜೆಪಿಗಳು ರೈಲ್ವೆ ನಿಲ್ದಾಣದಲ್ಲಿ ಪ್ರಧಾನವಾಗಿದ್ದ ಕನ್ನಡ ಬೋರ್ಡಿನ ಬದಲು ಹಿಂದಿ ಬಳಸತೊಡಗಿದ್ದಾರೆ. ಒಟ್ಟು ರೈಲ್ವೆ ಬೋಗಿ ಮತ್ತು ನಿಲ್ದಾಣದಿಂದಲೇ ಕನ್ನಡವನ್ನ ಕೊನೆಗಾಣಿಸುತ್ತಿದ್ದಾರೆ. ಇನ್ನು ಬಿಜೆಪಿಗಳ ಇನ್ನೊಂದು ಸಂಚು ಆಶ್ಚರ್ಯ ಹುಟ್ಟಿಸಿದೆ. ಕೆಲ ರೈಲು ಬೋಗಿಗಳ ಹೊಟ್ಟೆಯ ಮೇಲೆ ದೀನದಯಾಳು ಬೋಗಿ ಎಂದು ಬರೆಯಲಾಗಿದೆ. ಈ ದಿನದಯಾಳಿಗೂ ರೈಲ್ವೆ ಬೋಗಿಗೂ ಏನು ಸಂಬಂಧ ಎಂಬುದು ಹೊಸ ತಲೆಮಾರಿಗೆ ತಿಳಿಯುತ್ತಿರುವುದು ಹೀಗೆ: ರೈಲ್ವೆ ಬೋಗಿಗಳು ಈ ರೂಪದಲ್ಲಿ ಇರಬೇಕಾದರೆ ದೀನದಯಾಳರೇ ಇಂತವನ್ನ ತಯಾರಿಸಿ ಹಳಿಗಳ ಮೇಲೆ ಕೂರಿಸಿರಬೇಕು ಅಥವ ರೈಲು ಕಂಡುಹಿಡಿದವರು ಇವರೇ ಇರಬೇಕು ಎಂದು ಅಂದಾಜು ಮಾಡುವ ಸಂಭವವಿದೆ. ಮುಂದೆ ಹರ್ಡಿಕರ್ ಹವಾನಿಯಂತ್ರಿಕ ಬೋಗಿ, ಗೋಳ್ವಾಲ್ಕರ್ ಇಂಜನ್, ಹೆಡೆಗೆವಾರ್ ಕೋಚ್, ವಾಜಪೇಯಿ ಮಹಿಳಾ ಬೋಗಿ ಇಂತಹ ಹೆಸರುಹೊತ್ತ ಬೋಗಿಗಳು ರೈಲ್ವೆ ಹಳಿಗಳ ಮೇಲೆ ಕಾಣಿಸಿಕೊಳ್ಳಹುದಂತಲ್ಲಾ, ಥೂತ್ತೇರಿ.

****

ಕರ್ನಾಟಕದ ಮಟ್ಟಿಗೆ ಈ ವಾರ ಎರಡು ಮಹಾ ಘಟನೆಗಳು ಸಂಭವಿಸಿವೆಯಲ್ಲಾ. ಆ ಎರಡೂ ಘಟನೆಗಳು ಶಿವಮೊಗ್ಗ ಜಿಲ್ಲೆಯ ಜೋಡೆತ್ತಿನಂತಿದ್ದ ಎಡೂರಪ್ಪ ಮತ್ತು ಈಶ್ವರಪ್ಪನವರಿಗೆ ಸಂಬಂಧಿಸಿದ್ದು. ಒಬ್ಬರು ರಾಜಕೀಯದ ರಾಡಿಯಿಂದ ಚುಕ್ತಾ ಆಗಲು ತೀರ್ಮಾನಿಸಿದರೆ ಮತ್ತೊಬ್ಬರು 40 ಪರೆಸೆಂಟ್ ಆಪಾದನೆ ಮಾಡಿ ಸಾವಾದ ಪ್ರಕರಣದಿಂದ ಚುಕ್ತವಾಗಿದ್ದಾರೆ. ಮೊದಲನೆಯದಾಗಿ ತಮ್ಮ ರಾಜಕಾರಣಕ್ಕೆ ಇತಿಶ್ರೀ ಹಾಡಿ, ತಾವು ನಿಂತ ನೆಲವನ್ನ ಮಗನಿಗೆ ಬಿಟ್ಟುಕೊಟ್ಟು ನಿರ್ಗಮಿಸುವ ನಿರ್ಧಾರ ತೆಗೆದುಕೊಂಡಿರುವ ಎಡೂರಪ್ಪನ ಬಗ್ಗೆ ಎಲ್ಲರಿಂದ ಅನುಕಂಪ ವ್ಯಕ್ತವಾಗಿದೆ. ಏಕೆಂದರೆ ಅವರೇ ಇದ್ದಿದ್ದರೆ ಈ ನಾಡು ಈ ರೂಪದ ಕ್ಷೋಭೆಗೆ ಒಳಗಾಗುತ್ತಿರಲಿಲ್ಲ. ಬೆನ್ನು ಮೂಳೆಯಿಲ್ಲದ ಬೊಮ್ಮಾಯಿಯವರಿಂದ ನಡೆದ ಅನಾಹುತಗಳಾವುವೂ ಅವರಿದ್ದರೆ ಸಂಭವಿಸುತ್ತಿರಲಿಲ್ಲ ಶಿಕಾರಿಪುರದಲ್ಲಿ ಮುಸ್ಲಿಮರ ಓಟನ್ನು ತೆಗೆದುಕೊಳ್ಳುತ್ತಿರುವ ಎಡೂರಪ್ಪ ಮುಸ್ಲಿಮರಿಗೂ ಇಷ್ಟವಾದ ವ್ಯಕ್ತಿಯಾಗಿದ್ದರು. ಎಡೂರಪ್ಪನ ಬಗ್ಗೆ ಇನ್ನೊಂದು ರೂಪದ ಅನುಕಂಪ ಯಾವುದೆಂದರೆ, ಮುಖ್ಯಮಂತ್ರಿ ಹುದ್ದೆಯನ್ನು ಘನತೆಯಿಂದ ನಿಭಾಯಿಸಲಾಗದೆ, ಬರೀ ಹಗರಣ, ವಿವಾದ ಮತ್ತು ಸ್ವಜನಪಕ್ಷಪಾತ, ಕಾರಾಗೃಹದ ಕೆಟ್ಟ ಕನಸು ಬರೀ ಇಂತದರಲ್ಲೇ ಅವರ ಅವಧಿ ಮುಗಿದಂತೆ ಕಾಣುತ್ತಿದೆ; ಇದನ್ನೆಲ್ಲಾ ಎಡೂರಪ್ಪ ಮಾತ್ರ ತಡೆದುಕೊಳ್ಳುವ ಶಕ್ತಿ ಪಡೆದಿದ್ದರಂತಲ್ಲಾ, ಥೂತ್ತೇರಿ.

*****

ಈ ಬಿಜೆಪಿ ಹಿಂದಿನಿಂದಲೂ ಧನವಂತರು, ಖ್ಯಾತಿವಂತರು ಮತ್ತು ತೋಳ್ಬಲದ ಮಂದಮತಿಗಳನ್ನ ಮನಸೋ ಇಚ್ಛೆ ಬಳಸಿಕೊಂಡು ಒಂದು ಹಂತದಲ್ಲಿ ಬಿಸಾಡಿ ನಡೆಯುತ್ತಿರುವುದು, ಅದರ ಅಜೆಂಡಾದಂತೆಯೇ ನಡೆದು ಬರುತ್ತಿದೆಯಂತಲ್ಲಾ. ಎಡೂರಪ್ಪನ ಮುಖಾಂತರ ಲಿಂಗಾಯತರು ಬಿಜೆಪಿಯ ಪಡಸಾಲೆಗೆ ಬರಬೇಕಿತ್ತು, ಅದೂ ಆಯ್ತು. ಇನ್ನವರ ಅಗತ್ಯವಿಲ್ಲ. ಇನ್ನ ಧನವಂತರಾಗಿ ಮೆರೆದ ರೆಡ್ಡಿಗಳು ಗಣಿಮಣ್ಣಿನಲ್ಲಿ ಮರೆಯಾದರು. ತೋಳ್ಬಲದ ಈಶ್ವರಪ್ಪನ ಕಾಲ ಇನ್ನೊಂದಿಷ್ಟು ದಿನ ನಡೆಯಬಹುದು. ಆದರೆ ನಲವತ್ತು ಪರಸೆಂಟ್ ಆರೋಪ ಮಾಡಿ ಗುತ್ತಿಗೆದಾರನೊಬ್ಬ ಆತ್ಮಹತ್ಯೆ ಮಾಡಿಕೊಂಡ. ಸಂತೋಷ್ ಪಾಟೀಲ್ ಈಶ್ವರಪ್ಪನವರ ಮೇಲೆ ಆರೋಪ ಹೊರಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಸರಕಾರದ ಪೊಲಿಸ್ ಪೇದೆಗಳು ಎಲ್ಲರ ನಿರೀಕ್ಷೆಯಂತೆ, ’ಪಾಪ ಧರ್ಮವಂತರು, ಸತ್ಯವಂತರು, ನೀತಿವಂತರೂ ಆದ ಈಶ್ವರಪ್ಪನವರಿಗೂ ಸಂತೋಷ್ ಪಾಟೀಲ್ ಆತ್ಮಹತ್ಯೆಗೂ ಯಾವುದೇ ಸಂಬಂಧವಿಲ್ಲ; ಅವರು ಬೆಳಗಾವಿ ಕಡೆಯವರು, ಈಶ್ವರಪ್ಪ ಶಿವಮೊಗ್ಗದವರು. ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವುದು ಉಡುಪಿಯಲ್ಲಿ. ಹೇಗೆ ನೋಡಿದರೂ ಈ ಪ್ರಕರಣಕ್ಕೂ ಈಶ್ವರಪ್ಪರಿಗೂ ಕನಿಷ್ಟ ನಾನೂರು ಕಿಲೋಮೀಟರ್ ದೂರ. ಆದ್ದರಿಂದ ನಾವು ಮಾಡದೆ ಇದ್ದರೂ ಬಿ ರಿಪೋರ್ಟ್ ತಂತಾನೆ ರೂಪುಗೊಳ್ಳುತ್ತದೆ’ ಎಂದು ವಾದಿಸುತ್ತಿದ್ದಾರಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ಹೇಳದೆ ಮಾಡುವ ಉತ್ತಮ ಪ್ರಧಾನಿ ಮೋದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....