Homeಅಂಕಣಗಳುಕೆಂಪೇಗೌಡರ ಪ್ರತಿಮೆಯನ್ನು ಸರಿಯಾಗಿ ನೋಡಿದ್ದೀರ?

ಕೆಂಪೇಗೌಡರ ಪ್ರತಿಮೆಯನ್ನು ಸರಿಯಾಗಿ ನೋಡಿದ್ದೀರ?

- Advertisement -
- Advertisement -

ಬಿಜೆಪಿಯವರಿಂದ ನಿರ್ಮಿಸಿಕೊಂಡು ಅನಾವರಣಗೊಂಡ ಕೆಂಪೇಗೌಡರ ಪ್ರತಿಮೆಯನ್ನ ನೋಡಿದ್ದೀರಾ? ನೋಡದಿದ್ದರೆ ಸರಿಯಾಗಿ ನೋಡಿ, ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯವೇ ಮೆಚ್ಚಿದ ಪಾಳೇಗಾರ. ಪಾಳೇಗಾರ ಪರಾಕ್ರಮಿಯಾಗಿ ಮೆರೆಯುತ್ತಿದ್ದ ಕಾಲ ಅದು. ಆದರೆ ನಮ್ಮ ಬಿಜೆಪಿಗಳು ಕೆತ್ತಿಸಿ ನಿಲ್ಲಿಸಿರುವ ಕೆಂಪೇಗೌಡರು ಹಿಡಿದ ಕತ್ತಿ ಮತ್ತು ಮುಖಭಾವಕ್ಕೆ ಒಂದಿಷ್ಟು ಹೋಲಿಕೆಯಿಲ್ಲವಂತಲ್ಲಾ. ಅತ್ತ ಶಿವಗಂಗೆಯಲ್ಲಿರುವ ಕೆಂಪೇಗೌಡರ ಸಾತ್ವಿಕತೆಯೂ ಅದರಲ್ಲಿ ಇಲ್ಲವಂತಲ್ಲಾ. ಬೇಲಿ ಸವರಲು ಕತ್ತಿ ಹಿಡಿದಂತೆ ಕಾಣುವ ಕೆಂಪೇಗೌಡರ ಪ್ರತಿಮೆ ಕಡಿದ ಶಿಲ್ಪಿಗೆ ಕೆಂಪೇಗೌಡರ ತಲೆ ಅಷ್ಟುಗಾತ್ರವಿದ್ದ ಮೇಲೆ ಎದೆಭಾಗ ಎಷ್ಟಿರಬೇಕೆಂಬುದೇ ಗೊತ್ತಿಲ್ಲ ಅಂತ ಕಾಣಿಸುತ್ತೆ. ಪ್ರತಿಮೆಯಲ್ಲಿ ತೊಡಿಸಿರುವ ಬಟ್ಟೆಯಂತೂ ಕೆಂಪೇಗೌಡರ ಕಾಲವನ್ನು ಪ್ರತಿನಿಧಿಸುತ್ತಿಲ್ಲ. ಈಗಲೂ ಕಾಲ ಮಿಂಚಿಲ್ಲ ಕೆಂಪೇಗೌಡರ ಪ್ರತಿಮೆಯನ್ನ ಅನಾವರಣಗೊಳಿಸಲು ಆಹ್ವಾನವಿಲ್ಲದೆ ಅವಮಾನಗೊಂಡವರೆಲ್ಲಾ ಸೇರಿ ಒಳ್ಳೆ ಪ್ರತಿಮೆ ಮಾಡಿಸಿ ನಿಲ್ಲಿಸಬಹುದಂತಲ್ಲಾ, ಥೂತ್ತೇರಿ.

*****

ಬಿಜೆಪಿಗಳು ಯಾವ ಕೆಲಸ ಮಾಡಿದರೂ ಅಲ್ಲೊಂದು ಸಂಚು ಮತ್ತು ಸೇಡು ಇದೇ ಇರುತ್ತದೆ. ಅಶೋಕ ಮತ್ತು ಅಶ್ವತ್ಥ ನಾರಾಯಣರ ಜೊತೆಗೆ ನಿರ್ಮಲಾನಂದ ಸ್ವಾಮಿ ಇದ್ದರೆ ಸಾಕು, ಇಡೀ ಒಕ್ಕಲಿಗ ಸಮಾಜ ಬಿಜೆಪಿ ದೊಡ್ಡಿಗೆ ಬಂದು ತುಂಬಿಕೊಳ್ಳುತ್ತದೆ ಅಂದುಕೊಂಡಿದ್ದಾರೆ. ಹೀಗೆ ಭಾವಿಸಿರುವ ಅಶ್ವತ್ತಶೋಕರು ಆದಿಚುಂಚನಗಿರಿ ಸ್ವಾಮಿಗೆ ನಮ್ಮಷ್ಟು ಹತ್ತಿರ ಯಾರೂ ಇಲ್ಲ ಎಂಬ ಸಲುಗೆ ತೋರಲು ಅವರ ಭುಜ ಹಿಡಿದು ಪೋಜು ಕೊಟ್ಟಿವೆಯಲ್ಲಾ. ಜಗದ್ಗುರುವಿನ ಭುಜವನ್ನ ಸಲುಗೆಯಿಂದ ಮುಟ್ಟಿರುವ ಕಾರಣಕ್ಕೆ ದೂರು ದಾಖಲಿಸಿ ಕೇಸುಮಾಡಲು ಒಕ್ಕಲಿಗ ಲಾಯರು ತಯಾರಾಗಿದ್ದರಂತಲ್ಲಾ. ಆದರೆ ಭುಜವನ್ನ ಮುಟ್ಟಿಸಿಕೊಂಡ ಜಗದ್ಗುರುವೇ ಮೋಹಕವಾಗಿ ನಗುತ್ತ ಹಾಗೆ ಭುಜ ಮುಟ್ಟಲು ನಾನೇ ಹೇಳಿದೆ ಎಂದರೆ ಮಾಡುವುದೇನು ಎಂದು ಸುಮ್ಮನಾದರಂತಲ್ಲಾ. ಅದೇನಾದರಾಗಲಿ ಕೃಷಿಕ ಸಮಾಜದ ಸಿದ್ಧಾಂತಗಳನ್ನ ಕೈಬಿಟ್ಟು ವೈದಿಕ ಪರಂಪರೆ ಕಡೆ ಸಾಗುತ್ತಿರುವ ಚುಂಚನಗಿರಿ ಮಠವನ್ನ ಆ ಭೈರವೇಶ್ವರನೇ ಬಚಾವು ಮಾಡಬೇಕಂತಲ್ಲಾ, ಥೂತ್ತೇರಿ.

*****

ಇದನ್ನೂ ಓದಿ: ರಂಜಿಸಿ ವಂಚಿಸುವ ಕಾಂತಾರ

ಇತ್ತ ಹೊನ್ನಾಳಿ ಕಡೆಯಿಂದ ಬಂದ ಸುದ್ದಿ ಶಾನೆ ಶಾಕಿಂಗಾಗಿದೆಯಲ್ಲಾ. ನನ್ನ ಸೋದರನ ಮಗನದ್ದು ಗ್ಯಾರಂಟಿ ಕೊಲೆ, ಅದನ್ನ ಪತ್ತೆ ಹಚ್ಚಲಾಗದ ನೀವು ಎಂತಹ ಪೊಲೀಸರು ಎಂದು ಸಾರ್ವಜನಿಕವಾಗಿ ಅವಾಜುಹಾಕಿ ಅವಮಾನ ಮಾಡಿದ ರೇಣುಕಾಚಾರಿ ಇದ್ದಕ್ಕಿದ್ದಂತೆ ಬಾಯಿ ಬಂದ್ ಮಾಡಿಕೊಂಡು, ಇದ್ದಾರೂ ಇಲ್ಲವೋ ಅನ್ನುವಂತಾಗಿದ್ದಾರಲ್ಲಾ. ಹೊನ್ನಾಳಿ ಚಂದ್ರಶೇಖರರ ಸಾವು ಸಂಭವಿಸುವ ಮುನ್ನ ಆತ ಗೌರಿಗದ್ದೆ ಕಡೆಯಿಂದ ಬರಲು ಕಾರಣವೇನು ಎಂದು ಹುಡುಕಿಹೋದ ಪೊಲೀಸರಿಗೆ ಗೌರಿಗದ್ದೆಯಲ್ಲಿ ವಾಸಿಸುವ ’ಅವಧೂತ’ನ ಚರಿತ್ರೆ ಶಾನೆ ಕುತೂಹಲ ಮೂಡಿಸಿದೆಯಂತಲ್ಲಾ. ಈ ಮಠಗಳ ಕರ್ಮಕಾಂಡ ಶುರುವಾದದ್ದು ರಾಮಚಂದ್ರಾಪುರದ ಮಠದ ಕಡೆಯಿಂದ. ಆ ನಂತರ ಉಡುಪಿ ಮಠಗಳು. ಅಲ್ಲೂಬ್ಬ ಸ್ವಾಮಿ ಆತ್ಮಹತ್ಯೆ ಮಾಡಿಕೊಂಡ. ಈಚೆಗೆ ಮುರುಘ ಶರಣರ ಸ್ಥಿತಿ ನೋಡಿದ ಇಬ್ಬರು ಲಿಂಗೈಕ್ಯರಾದರು. ಇನ್ನು ದಿನದಿಂದ ದಿನಕ್ಕೆ ಮುರುಘ ಶರಣರ ದೌರ್ಜನ್ಯಗಳು ಬಿಚ್ಚಿಕೊಳ್ಳುತ್ತಿದ್ದಂತೆ ಗೌರಿಗದ್ದೆ ಬಾಲಕನ ವಿರುದ್ಧವೂ ಅನುಮಾನ ಆರೋಪಗಳು ಏಳುತ್ತಿವೆ. ಇದರ ಅಪಾಯವರಿತ ಜವಬ್ದಾರಿವಂತರು ಇಂಥ ಮಠಗಳ ಕಡೆಗೆ ಮಹಿಳೆ-ಮಕ್ಕಳು-ಹುಡುಗರನ್ನು ಕಳಿಸಬೇಡಿ ಎಂಬ ಎಚ್ಚರಿಕೆ ಫಲಕಗಳನ್ನ ಬರೆಯುತ್ತಿದ್ದಾರಂತಲ್ಲಾ, ಥೂತ್ತೇರಿ.

*****

ಹೇಗಾದರೂ ಮಾಡಿ ಟಿಪ್ಪು ಸುಲ್ತಾನನನ್ನು ಕನ್ನಡ ದ್ರೋಹಿ ಮಾಡಲು ಹೆಣಗುತ್ತಿರುವವರ ಜೊತೆಗೆ ಈಗ ಎಸ್ಸೆಲ್ ಭೈರಪ್ಪ ಕೂಡ ಸೇರಿದ್ದಾರಲ್ಲಾ. ಟಿಪ್ಪು ಕನ್ನಡ ದ್ರೋಹಿಯಾಗಿದ್ದ ಎಂಬುದಕ್ಕೆ ಭೈರಪ್ಪ ಕೊಡುವ ಕಾರಣ ಆತ ಕಂದಾಯ ಇಲಾಖೆಯಲ್ಲಿ ಪರ್ಶಿಯನ್, ಪಾರ್ಸಿ ಹೆಸರುಗಳನ್ನ ಸೇರಿಸಲಾಗಿದೆ ಎಂಬುದಾಗಿದೆ. ಇಂಗ್ಲಿಷ್ ವಿರೋಧಿಯಾಗಿದ್ದ ಟಿಪ್ಪು ಪರ್ಶಿಯನ್ ಭಾಷೆ ಸೇರಿಸಿದ್ದು ಸಹಜ ಕ್ರಿಯೆಯಾಗಿತ್ತು. ಆದರೆ ಶ್ಯಾನುಭೋಗರ ಮನೆಯವರಾದ ಭೈರಪ್ಪ ಇತಿಹಾಸ ಕೆದಕಿದರೆ, ಟಿಪ್ಪು ಕಾಲದಲ್ಲಿ ಇಡೀ ನಾಡಿನ ಕಂದಾಯ ಇಲಾಖೆ ನೋಡಿಕೊಳ್ಳುತ್ತಿದ್ದವರು ಶಾನುಭೋಗರು. ಇನ್ನ ಟಿಪ್ಪು ಸಚಿವ ಸಂಪುಟದಲ್ಲಿ ಐದು ಜನ ಬ್ರಾಹ್ಮಣರಿದ್ದರು. ಟಿಪ್ಪು ಆಡಳಿತದಲ್ಲಿ ಯಾವುದೇ ಕಾನೂನು ಜಾರಿಯಾಗುವುದಿದ್ದರೂ ಅದಕ್ಕೆ ಬ್ರಾಹ್ಮಣರ ಚರ್ಚೆಗಳೂ ಮುಖ್ಯವಾಗುತ್ತಿದ್ದವು. ಒಂದು ವೇಳೆ ಟಿಪ್ಪು ತನ್ನ ಆಡಳಿತದಲ್ಲಿ ಪರ್ಶಿಯನ್ ಭಾಷೆ ತುರುಕಲು ಯತ್ನಿಸಿದ್ದರೆ ಅದನ್ನು ಖಂಡಿಸಿ ಬ್ರಾಹ್ಮಣರು ತಮ್ಮ ಹುದ್ದೆಗೆ ರಾಜೀನಾಮೆ ಕೊಡಬೇಕಿತ್ತು. ಹಾಗೆ ಮಾಡದೆ ಬಂದ ಬಳವಳಿಯವರು ಈಗ ಟಿಪ್ಪುವನ್ನು ಕನ್ನಡ ದ್ರೋಹಿ ಎಂದು ಬಗೆಯಲು ಪ್ರಯತ್ನಿಸಿದರೆ ಅವರನ್ನೇ ಈ ದ್ರೋಹಿಗಳ ಪಟ್ಟಿಯಲ್ಲಿ ಸೇರಿಸಲು ಜನ ಕಾಯುತ್ತಿದ್ದಾರಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಂದಾಯ ಇಲಾಕೆಯ ಪರ್ಷೀಯನ್ ಪದಗಳಿಗೆ ಈಗಲಾದರೂ ಕನ್ನಡ ಪದಗಳನ್ನು ಹುಟ್ಟುಹಾಕಬಹುದಲ್ಲಾ?

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...