Homeಅಂಕಣಗಳುಕೆಂಪೇಗೌಡರ ಪ್ರತಿಮೆಯನ್ನು ಸರಿಯಾಗಿ ನೋಡಿದ್ದೀರ?

ಕೆಂಪೇಗೌಡರ ಪ್ರತಿಮೆಯನ್ನು ಸರಿಯಾಗಿ ನೋಡಿದ್ದೀರ?

- Advertisement -
- Advertisement -

ಬಿಜೆಪಿಯವರಿಂದ ನಿರ್ಮಿಸಿಕೊಂಡು ಅನಾವರಣಗೊಂಡ ಕೆಂಪೇಗೌಡರ ಪ್ರತಿಮೆಯನ್ನ ನೋಡಿದ್ದೀರಾ? ನೋಡದಿದ್ದರೆ ಸರಿಯಾಗಿ ನೋಡಿ, ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯವೇ ಮೆಚ್ಚಿದ ಪಾಳೇಗಾರ. ಪಾಳೇಗಾರ ಪರಾಕ್ರಮಿಯಾಗಿ ಮೆರೆಯುತ್ತಿದ್ದ ಕಾಲ ಅದು. ಆದರೆ ನಮ್ಮ ಬಿಜೆಪಿಗಳು ಕೆತ್ತಿಸಿ ನಿಲ್ಲಿಸಿರುವ ಕೆಂಪೇಗೌಡರು ಹಿಡಿದ ಕತ್ತಿ ಮತ್ತು ಮುಖಭಾವಕ್ಕೆ ಒಂದಿಷ್ಟು ಹೋಲಿಕೆಯಿಲ್ಲವಂತಲ್ಲಾ. ಅತ್ತ ಶಿವಗಂಗೆಯಲ್ಲಿರುವ ಕೆಂಪೇಗೌಡರ ಸಾತ್ವಿಕತೆಯೂ ಅದರಲ್ಲಿ ಇಲ್ಲವಂತಲ್ಲಾ. ಬೇಲಿ ಸವರಲು ಕತ್ತಿ ಹಿಡಿದಂತೆ ಕಾಣುವ ಕೆಂಪೇಗೌಡರ ಪ್ರತಿಮೆ ಕಡಿದ ಶಿಲ್ಪಿಗೆ ಕೆಂಪೇಗೌಡರ ತಲೆ ಅಷ್ಟುಗಾತ್ರವಿದ್ದ ಮೇಲೆ ಎದೆಭಾಗ ಎಷ್ಟಿರಬೇಕೆಂಬುದೇ ಗೊತ್ತಿಲ್ಲ ಅಂತ ಕಾಣಿಸುತ್ತೆ. ಪ್ರತಿಮೆಯಲ್ಲಿ ತೊಡಿಸಿರುವ ಬಟ್ಟೆಯಂತೂ ಕೆಂಪೇಗೌಡರ ಕಾಲವನ್ನು ಪ್ರತಿನಿಧಿಸುತ್ತಿಲ್ಲ. ಈಗಲೂ ಕಾಲ ಮಿಂಚಿಲ್ಲ ಕೆಂಪೇಗೌಡರ ಪ್ರತಿಮೆಯನ್ನ ಅನಾವರಣಗೊಳಿಸಲು ಆಹ್ವಾನವಿಲ್ಲದೆ ಅವಮಾನಗೊಂಡವರೆಲ್ಲಾ ಸೇರಿ ಒಳ್ಳೆ ಪ್ರತಿಮೆ ಮಾಡಿಸಿ ನಿಲ್ಲಿಸಬಹುದಂತಲ್ಲಾ, ಥೂತ್ತೇರಿ.

*****

ಬಿಜೆಪಿಗಳು ಯಾವ ಕೆಲಸ ಮಾಡಿದರೂ ಅಲ್ಲೊಂದು ಸಂಚು ಮತ್ತು ಸೇಡು ಇದೇ ಇರುತ್ತದೆ. ಅಶೋಕ ಮತ್ತು ಅಶ್ವತ್ಥ ನಾರಾಯಣರ ಜೊತೆಗೆ ನಿರ್ಮಲಾನಂದ ಸ್ವಾಮಿ ಇದ್ದರೆ ಸಾಕು, ಇಡೀ ಒಕ್ಕಲಿಗ ಸಮಾಜ ಬಿಜೆಪಿ ದೊಡ್ಡಿಗೆ ಬಂದು ತುಂಬಿಕೊಳ್ಳುತ್ತದೆ ಅಂದುಕೊಂಡಿದ್ದಾರೆ. ಹೀಗೆ ಭಾವಿಸಿರುವ ಅಶ್ವತ್ತಶೋಕರು ಆದಿಚುಂಚನಗಿರಿ ಸ್ವಾಮಿಗೆ ನಮ್ಮಷ್ಟು ಹತ್ತಿರ ಯಾರೂ ಇಲ್ಲ ಎಂಬ ಸಲುಗೆ ತೋರಲು ಅವರ ಭುಜ ಹಿಡಿದು ಪೋಜು ಕೊಟ್ಟಿವೆಯಲ್ಲಾ. ಜಗದ್ಗುರುವಿನ ಭುಜವನ್ನ ಸಲುಗೆಯಿಂದ ಮುಟ್ಟಿರುವ ಕಾರಣಕ್ಕೆ ದೂರು ದಾಖಲಿಸಿ ಕೇಸುಮಾಡಲು ಒಕ್ಕಲಿಗ ಲಾಯರು ತಯಾರಾಗಿದ್ದರಂತಲ್ಲಾ. ಆದರೆ ಭುಜವನ್ನ ಮುಟ್ಟಿಸಿಕೊಂಡ ಜಗದ್ಗುರುವೇ ಮೋಹಕವಾಗಿ ನಗುತ್ತ ಹಾಗೆ ಭುಜ ಮುಟ್ಟಲು ನಾನೇ ಹೇಳಿದೆ ಎಂದರೆ ಮಾಡುವುದೇನು ಎಂದು ಸುಮ್ಮನಾದರಂತಲ್ಲಾ. ಅದೇನಾದರಾಗಲಿ ಕೃಷಿಕ ಸಮಾಜದ ಸಿದ್ಧಾಂತಗಳನ್ನ ಕೈಬಿಟ್ಟು ವೈದಿಕ ಪರಂಪರೆ ಕಡೆ ಸಾಗುತ್ತಿರುವ ಚುಂಚನಗಿರಿ ಮಠವನ್ನ ಆ ಭೈರವೇಶ್ವರನೇ ಬಚಾವು ಮಾಡಬೇಕಂತಲ್ಲಾ, ಥೂತ್ತೇರಿ.

*****

ಇದನ್ನೂ ಓದಿ: ರಂಜಿಸಿ ವಂಚಿಸುವ ಕಾಂತಾರ

ಇತ್ತ ಹೊನ್ನಾಳಿ ಕಡೆಯಿಂದ ಬಂದ ಸುದ್ದಿ ಶಾನೆ ಶಾಕಿಂಗಾಗಿದೆಯಲ್ಲಾ. ನನ್ನ ಸೋದರನ ಮಗನದ್ದು ಗ್ಯಾರಂಟಿ ಕೊಲೆ, ಅದನ್ನ ಪತ್ತೆ ಹಚ್ಚಲಾಗದ ನೀವು ಎಂತಹ ಪೊಲೀಸರು ಎಂದು ಸಾರ್ವಜನಿಕವಾಗಿ ಅವಾಜುಹಾಕಿ ಅವಮಾನ ಮಾಡಿದ ರೇಣುಕಾಚಾರಿ ಇದ್ದಕ್ಕಿದ್ದಂತೆ ಬಾಯಿ ಬಂದ್ ಮಾಡಿಕೊಂಡು, ಇದ್ದಾರೂ ಇಲ್ಲವೋ ಅನ್ನುವಂತಾಗಿದ್ದಾರಲ್ಲಾ. ಹೊನ್ನಾಳಿ ಚಂದ್ರಶೇಖರರ ಸಾವು ಸಂಭವಿಸುವ ಮುನ್ನ ಆತ ಗೌರಿಗದ್ದೆ ಕಡೆಯಿಂದ ಬರಲು ಕಾರಣವೇನು ಎಂದು ಹುಡುಕಿಹೋದ ಪೊಲೀಸರಿಗೆ ಗೌರಿಗದ್ದೆಯಲ್ಲಿ ವಾಸಿಸುವ ’ಅವಧೂತ’ನ ಚರಿತ್ರೆ ಶಾನೆ ಕುತೂಹಲ ಮೂಡಿಸಿದೆಯಂತಲ್ಲಾ. ಈ ಮಠಗಳ ಕರ್ಮಕಾಂಡ ಶುರುವಾದದ್ದು ರಾಮಚಂದ್ರಾಪುರದ ಮಠದ ಕಡೆಯಿಂದ. ಆ ನಂತರ ಉಡುಪಿ ಮಠಗಳು. ಅಲ್ಲೂಬ್ಬ ಸ್ವಾಮಿ ಆತ್ಮಹತ್ಯೆ ಮಾಡಿಕೊಂಡ. ಈಚೆಗೆ ಮುರುಘ ಶರಣರ ಸ್ಥಿತಿ ನೋಡಿದ ಇಬ್ಬರು ಲಿಂಗೈಕ್ಯರಾದರು. ಇನ್ನು ದಿನದಿಂದ ದಿನಕ್ಕೆ ಮುರುಘ ಶರಣರ ದೌರ್ಜನ್ಯಗಳು ಬಿಚ್ಚಿಕೊಳ್ಳುತ್ತಿದ್ದಂತೆ ಗೌರಿಗದ್ದೆ ಬಾಲಕನ ವಿರುದ್ಧವೂ ಅನುಮಾನ ಆರೋಪಗಳು ಏಳುತ್ತಿವೆ. ಇದರ ಅಪಾಯವರಿತ ಜವಬ್ದಾರಿವಂತರು ಇಂಥ ಮಠಗಳ ಕಡೆಗೆ ಮಹಿಳೆ-ಮಕ್ಕಳು-ಹುಡುಗರನ್ನು ಕಳಿಸಬೇಡಿ ಎಂಬ ಎಚ್ಚರಿಕೆ ಫಲಕಗಳನ್ನ ಬರೆಯುತ್ತಿದ್ದಾರಂತಲ್ಲಾ, ಥೂತ್ತೇರಿ.

*****

ಹೇಗಾದರೂ ಮಾಡಿ ಟಿಪ್ಪು ಸುಲ್ತಾನನನ್ನು ಕನ್ನಡ ದ್ರೋಹಿ ಮಾಡಲು ಹೆಣಗುತ್ತಿರುವವರ ಜೊತೆಗೆ ಈಗ ಎಸ್ಸೆಲ್ ಭೈರಪ್ಪ ಕೂಡ ಸೇರಿದ್ದಾರಲ್ಲಾ. ಟಿಪ್ಪು ಕನ್ನಡ ದ್ರೋಹಿಯಾಗಿದ್ದ ಎಂಬುದಕ್ಕೆ ಭೈರಪ್ಪ ಕೊಡುವ ಕಾರಣ ಆತ ಕಂದಾಯ ಇಲಾಖೆಯಲ್ಲಿ ಪರ್ಶಿಯನ್, ಪಾರ್ಸಿ ಹೆಸರುಗಳನ್ನ ಸೇರಿಸಲಾಗಿದೆ ಎಂಬುದಾಗಿದೆ. ಇಂಗ್ಲಿಷ್ ವಿರೋಧಿಯಾಗಿದ್ದ ಟಿಪ್ಪು ಪರ್ಶಿಯನ್ ಭಾಷೆ ಸೇರಿಸಿದ್ದು ಸಹಜ ಕ್ರಿಯೆಯಾಗಿತ್ತು. ಆದರೆ ಶ್ಯಾನುಭೋಗರ ಮನೆಯವರಾದ ಭೈರಪ್ಪ ಇತಿಹಾಸ ಕೆದಕಿದರೆ, ಟಿಪ್ಪು ಕಾಲದಲ್ಲಿ ಇಡೀ ನಾಡಿನ ಕಂದಾಯ ಇಲಾಖೆ ನೋಡಿಕೊಳ್ಳುತ್ತಿದ್ದವರು ಶಾನುಭೋಗರು. ಇನ್ನ ಟಿಪ್ಪು ಸಚಿವ ಸಂಪುಟದಲ್ಲಿ ಐದು ಜನ ಬ್ರಾಹ್ಮಣರಿದ್ದರು. ಟಿಪ್ಪು ಆಡಳಿತದಲ್ಲಿ ಯಾವುದೇ ಕಾನೂನು ಜಾರಿಯಾಗುವುದಿದ್ದರೂ ಅದಕ್ಕೆ ಬ್ರಾಹ್ಮಣರ ಚರ್ಚೆಗಳೂ ಮುಖ್ಯವಾಗುತ್ತಿದ್ದವು. ಒಂದು ವೇಳೆ ಟಿಪ್ಪು ತನ್ನ ಆಡಳಿತದಲ್ಲಿ ಪರ್ಶಿಯನ್ ಭಾಷೆ ತುರುಕಲು ಯತ್ನಿಸಿದ್ದರೆ ಅದನ್ನು ಖಂಡಿಸಿ ಬ್ರಾಹ್ಮಣರು ತಮ್ಮ ಹುದ್ದೆಗೆ ರಾಜೀನಾಮೆ ಕೊಡಬೇಕಿತ್ತು. ಹಾಗೆ ಮಾಡದೆ ಬಂದ ಬಳವಳಿಯವರು ಈಗ ಟಿಪ್ಪುವನ್ನು ಕನ್ನಡ ದ್ರೋಹಿ ಎಂದು ಬಗೆಯಲು ಪ್ರಯತ್ನಿಸಿದರೆ ಅವರನ್ನೇ ಈ ದ್ರೋಹಿಗಳ ಪಟ್ಟಿಯಲ್ಲಿ ಸೇರಿಸಲು ಜನ ಕಾಯುತ್ತಿದ್ದಾರಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಂದಾಯ ಇಲಾಕೆಯ ಪರ್ಷೀಯನ್ ಪದಗಳಿಗೆ ಈಗಲಾದರೂ ಕನ್ನಡ ಪದಗಳನ್ನು ಹುಟ್ಟುಹಾಕಬಹುದಲ್ಲಾ?

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....