Homeಅಂಕಣಗಳುಕೆಂಪೇಗೌಡರ ಪ್ರತಿಮೆಯನ್ನು ಸರಿಯಾಗಿ ನೋಡಿದ್ದೀರ?

ಕೆಂಪೇಗೌಡರ ಪ್ರತಿಮೆಯನ್ನು ಸರಿಯಾಗಿ ನೋಡಿದ್ದೀರ?

- Advertisement -
- Advertisement -

ಬಿಜೆಪಿಯವರಿಂದ ನಿರ್ಮಿಸಿಕೊಂಡು ಅನಾವರಣಗೊಂಡ ಕೆಂಪೇಗೌಡರ ಪ್ರತಿಮೆಯನ್ನ ನೋಡಿದ್ದೀರಾ? ನೋಡದಿದ್ದರೆ ಸರಿಯಾಗಿ ನೋಡಿ, ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯವೇ ಮೆಚ್ಚಿದ ಪಾಳೇಗಾರ. ಪಾಳೇಗಾರ ಪರಾಕ್ರಮಿಯಾಗಿ ಮೆರೆಯುತ್ತಿದ್ದ ಕಾಲ ಅದು. ಆದರೆ ನಮ್ಮ ಬಿಜೆಪಿಗಳು ಕೆತ್ತಿಸಿ ನಿಲ್ಲಿಸಿರುವ ಕೆಂಪೇಗೌಡರು ಹಿಡಿದ ಕತ್ತಿ ಮತ್ತು ಮುಖಭಾವಕ್ಕೆ ಒಂದಿಷ್ಟು ಹೋಲಿಕೆಯಿಲ್ಲವಂತಲ್ಲಾ. ಅತ್ತ ಶಿವಗಂಗೆಯಲ್ಲಿರುವ ಕೆಂಪೇಗೌಡರ ಸಾತ್ವಿಕತೆಯೂ ಅದರಲ್ಲಿ ಇಲ್ಲವಂತಲ್ಲಾ. ಬೇಲಿ ಸವರಲು ಕತ್ತಿ ಹಿಡಿದಂತೆ ಕಾಣುವ ಕೆಂಪೇಗೌಡರ ಪ್ರತಿಮೆ ಕಡಿದ ಶಿಲ್ಪಿಗೆ ಕೆಂಪೇಗೌಡರ ತಲೆ ಅಷ್ಟುಗಾತ್ರವಿದ್ದ ಮೇಲೆ ಎದೆಭಾಗ ಎಷ್ಟಿರಬೇಕೆಂಬುದೇ ಗೊತ್ತಿಲ್ಲ ಅಂತ ಕಾಣಿಸುತ್ತೆ. ಪ್ರತಿಮೆಯಲ್ಲಿ ತೊಡಿಸಿರುವ ಬಟ್ಟೆಯಂತೂ ಕೆಂಪೇಗೌಡರ ಕಾಲವನ್ನು ಪ್ರತಿನಿಧಿಸುತ್ತಿಲ್ಲ. ಈಗಲೂ ಕಾಲ ಮಿಂಚಿಲ್ಲ ಕೆಂಪೇಗೌಡರ ಪ್ರತಿಮೆಯನ್ನ ಅನಾವರಣಗೊಳಿಸಲು ಆಹ್ವಾನವಿಲ್ಲದೆ ಅವಮಾನಗೊಂಡವರೆಲ್ಲಾ ಸೇರಿ ಒಳ್ಳೆ ಪ್ರತಿಮೆ ಮಾಡಿಸಿ ನಿಲ್ಲಿಸಬಹುದಂತಲ್ಲಾ, ಥೂತ್ತೇರಿ.

*****

ಬಿಜೆಪಿಗಳು ಯಾವ ಕೆಲಸ ಮಾಡಿದರೂ ಅಲ್ಲೊಂದು ಸಂಚು ಮತ್ತು ಸೇಡು ಇದೇ ಇರುತ್ತದೆ. ಅಶೋಕ ಮತ್ತು ಅಶ್ವತ್ಥ ನಾರಾಯಣರ ಜೊತೆಗೆ ನಿರ್ಮಲಾನಂದ ಸ್ವಾಮಿ ಇದ್ದರೆ ಸಾಕು, ಇಡೀ ಒಕ್ಕಲಿಗ ಸಮಾಜ ಬಿಜೆಪಿ ದೊಡ್ಡಿಗೆ ಬಂದು ತುಂಬಿಕೊಳ್ಳುತ್ತದೆ ಅಂದುಕೊಂಡಿದ್ದಾರೆ. ಹೀಗೆ ಭಾವಿಸಿರುವ ಅಶ್ವತ್ತಶೋಕರು ಆದಿಚುಂಚನಗಿರಿ ಸ್ವಾಮಿಗೆ ನಮ್ಮಷ್ಟು ಹತ್ತಿರ ಯಾರೂ ಇಲ್ಲ ಎಂಬ ಸಲುಗೆ ತೋರಲು ಅವರ ಭುಜ ಹಿಡಿದು ಪೋಜು ಕೊಟ್ಟಿವೆಯಲ್ಲಾ. ಜಗದ್ಗುರುವಿನ ಭುಜವನ್ನ ಸಲುಗೆಯಿಂದ ಮುಟ್ಟಿರುವ ಕಾರಣಕ್ಕೆ ದೂರು ದಾಖಲಿಸಿ ಕೇಸುಮಾಡಲು ಒಕ್ಕಲಿಗ ಲಾಯರು ತಯಾರಾಗಿದ್ದರಂತಲ್ಲಾ. ಆದರೆ ಭುಜವನ್ನ ಮುಟ್ಟಿಸಿಕೊಂಡ ಜಗದ್ಗುರುವೇ ಮೋಹಕವಾಗಿ ನಗುತ್ತ ಹಾಗೆ ಭುಜ ಮುಟ್ಟಲು ನಾನೇ ಹೇಳಿದೆ ಎಂದರೆ ಮಾಡುವುದೇನು ಎಂದು ಸುಮ್ಮನಾದರಂತಲ್ಲಾ. ಅದೇನಾದರಾಗಲಿ ಕೃಷಿಕ ಸಮಾಜದ ಸಿದ್ಧಾಂತಗಳನ್ನ ಕೈಬಿಟ್ಟು ವೈದಿಕ ಪರಂಪರೆ ಕಡೆ ಸಾಗುತ್ತಿರುವ ಚುಂಚನಗಿರಿ ಮಠವನ್ನ ಆ ಭೈರವೇಶ್ವರನೇ ಬಚಾವು ಮಾಡಬೇಕಂತಲ್ಲಾ, ಥೂತ್ತೇರಿ.

*****

ಇದನ್ನೂ ಓದಿ: ರಂಜಿಸಿ ವಂಚಿಸುವ ಕಾಂತಾರ

ಇತ್ತ ಹೊನ್ನಾಳಿ ಕಡೆಯಿಂದ ಬಂದ ಸುದ್ದಿ ಶಾನೆ ಶಾಕಿಂಗಾಗಿದೆಯಲ್ಲಾ. ನನ್ನ ಸೋದರನ ಮಗನದ್ದು ಗ್ಯಾರಂಟಿ ಕೊಲೆ, ಅದನ್ನ ಪತ್ತೆ ಹಚ್ಚಲಾಗದ ನೀವು ಎಂತಹ ಪೊಲೀಸರು ಎಂದು ಸಾರ್ವಜನಿಕವಾಗಿ ಅವಾಜುಹಾಕಿ ಅವಮಾನ ಮಾಡಿದ ರೇಣುಕಾಚಾರಿ ಇದ್ದಕ್ಕಿದ್ದಂತೆ ಬಾಯಿ ಬಂದ್ ಮಾಡಿಕೊಂಡು, ಇದ್ದಾರೂ ಇಲ್ಲವೋ ಅನ್ನುವಂತಾಗಿದ್ದಾರಲ್ಲಾ. ಹೊನ್ನಾಳಿ ಚಂದ್ರಶೇಖರರ ಸಾವು ಸಂಭವಿಸುವ ಮುನ್ನ ಆತ ಗೌರಿಗದ್ದೆ ಕಡೆಯಿಂದ ಬರಲು ಕಾರಣವೇನು ಎಂದು ಹುಡುಕಿಹೋದ ಪೊಲೀಸರಿಗೆ ಗೌರಿಗದ್ದೆಯಲ್ಲಿ ವಾಸಿಸುವ ’ಅವಧೂತ’ನ ಚರಿತ್ರೆ ಶಾನೆ ಕುತೂಹಲ ಮೂಡಿಸಿದೆಯಂತಲ್ಲಾ. ಈ ಮಠಗಳ ಕರ್ಮಕಾಂಡ ಶುರುವಾದದ್ದು ರಾಮಚಂದ್ರಾಪುರದ ಮಠದ ಕಡೆಯಿಂದ. ಆ ನಂತರ ಉಡುಪಿ ಮಠಗಳು. ಅಲ್ಲೂಬ್ಬ ಸ್ವಾಮಿ ಆತ್ಮಹತ್ಯೆ ಮಾಡಿಕೊಂಡ. ಈಚೆಗೆ ಮುರುಘ ಶರಣರ ಸ್ಥಿತಿ ನೋಡಿದ ಇಬ್ಬರು ಲಿಂಗೈಕ್ಯರಾದರು. ಇನ್ನು ದಿನದಿಂದ ದಿನಕ್ಕೆ ಮುರುಘ ಶರಣರ ದೌರ್ಜನ್ಯಗಳು ಬಿಚ್ಚಿಕೊಳ್ಳುತ್ತಿದ್ದಂತೆ ಗೌರಿಗದ್ದೆ ಬಾಲಕನ ವಿರುದ್ಧವೂ ಅನುಮಾನ ಆರೋಪಗಳು ಏಳುತ್ತಿವೆ. ಇದರ ಅಪಾಯವರಿತ ಜವಬ್ದಾರಿವಂತರು ಇಂಥ ಮಠಗಳ ಕಡೆಗೆ ಮಹಿಳೆ-ಮಕ್ಕಳು-ಹುಡುಗರನ್ನು ಕಳಿಸಬೇಡಿ ಎಂಬ ಎಚ್ಚರಿಕೆ ಫಲಕಗಳನ್ನ ಬರೆಯುತ್ತಿದ್ದಾರಂತಲ್ಲಾ, ಥೂತ್ತೇರಿ.

*****

ಹೇಗಾದರೂ ಮಾಡಿ ಟಿಪ್ಪು ಸುಲ್ತಾನನನ್ನು ಕನ್ನಡ ದ್ರೋಹಿ ಮಾಡಲು ಹೆಣಗುತ್ತಿರುವವರ ಜೊತೆಗೆ ಈಗ ಎಸ್ಸೆಲ್ ಭೈರಪ್ಪ ಕೂಡ ಸೇರಿದ್ದಾರಲ್ಲಾ. ಟಿಪ್ಪು ಕನ್ನಡ ದ್ರೋಹಿಯಾಗಿದ್ದ ಎಂಬುದಕ್ಕೆ ಭೈರಪ್ಪ ಕೊಡುವ ಕಾರಣ ಆತ ಕಂದಾಯ ಇಲಾಖೆಯಲ್ಲಿ ಪರ್ಶಿಯನ್, ಪಾರ್ಸಿ ಹೆಸರುಗಳನ್ನ ಸೇರಿಸಲಾಗಿದೆ ಎಂಬುದಾಗಿದೆ. ಇಂಗ್ಲಿಷ್ ವಿರೋಧಿಯಾಗಿದ್ದ ಟಿಪ್ಪು ಪರ್ಶಿಯನ್ ಭಾಷೆ ಸೇರಿಸಿದ್ದು ಸಹಜ ಕ್ರಿಯೆಯಾಗಿತ್ತು. ಆದರೆ ಶ್ಯಾನುಭೋಗರ ಮನೆಯವರಾದ ಭೈರಪ್ಪ ಇತಿಹಾಸ ಕೆದಕಿದರೆ, ಟಿಪ್ಪು ಕಾಲದಲ್ಲಿ ಇಡೀ ನಾಡಿನ ಕಂದಾಯ ಇಲಾಖೆ ನೋಡಿಕೊಳ್ಳುತ್ತಿದ್ದವರು ಶಾನುಭೋಗರು. ಇನ್ನ ಟಿಪ್ಪು ಸಚಿವ ಸಂಪುಟದಲ್ಲಿ ಐದು ಜನ ಬ್ರಾಹ್ಮಣರಿದ್ದರು. ಟಿಪ್ಪು ಆಡಳಿತದಲ್ಲಿ ಯಾವುದೇ ಕಾನೂನು ಜಾರಿಯಾಗುವುದಿದ್ದರೂ ಅದಕ್ಕೆ ಬ್ರಾಹ್ಮಣರ ಚರ್ಚೆಗಳೂ ಮುಖ್ಯವಾಗುತ್ತಿದ್ದವು. ಒಂದು ವೇಳೆ ಟಿಪ್ಪು ತನ್ನ ಆಡಳಿತದಲ್ಲಿ ಪರ್ಶಿಯನ್ ಭಾಷೆ ತುರುಕಲು ಯತ್ನಿಸಿದ್ದರೆ ಅದನ್ನು ಖಂಡಿಸಿ ಬ್ರಾಹ್ಮಣರು ತಮ್ಮ ಹುದ್ದೆಗೆ ರಾಜೀನಾಮೆ ಕೊಡಬೇಕಿತ್ತು. ಹಾಗೆ ಮಾಡದೆ ಬಂದ ಬಳವಳಿಯವರು ಈಗ ಟಿಪ್ಪುವನ್ನು ಕನ್ನಡ ದ್ರೋಹಿ ಎಂದು ಬಗೆಯಲು ಪ್ರಯತ್ನಿಸಿದರೆ ಅವರನ್ನೇ ಈ ದ್ರೋಹಿಗಳ ಪಟ್ಟಿಯಲ್ಲಿ ಸೇರಿಸಲು ಜನ ಕಾಯುತ್ತಿದ್ದಾರಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಂದಾಯ ಇಲಾಕೆಯ ಪರ್ಷೀಯನ್ ಪದಗಳಿಗೆ ಈಗಲಾದರೂ ಕನ್ನಡ ಪದಗಳನ್ನು ಹುಟ್ಟುಹಾಕಬಹುದಲ್ಲಾ?

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...