Homeಅಂಕಣಗಳುಕೆಂಪೇಗೌಡರ ಪ್ರತಿಮೆಯನ್ನು ಸರಿಯಾಗಿ ನೋಡಿದ್ದೀರ?

ಕೆಂಪೇಗೌಡರ ಪ್ರತಿಮೆಯನ್ನು ಸರಿಯಾಗಿ ನೋಡಿದ್ದೀರ?

- Advertisement -
- Advertisement -

ಬಿಜೆಪಿಯವರಿಂದ ನಿರ್ಮಿಸಿಕೊಂಡು ಅನಾವರಣಗೊಂಡ ಕೆಂಪೇಗೌಡರ ಪ್ರತಿಮೆಯನ್ನ ನೋಡಿದ್ದೀರಾ? ನೋಡದಿದ್ದರೆ ಸರಿಯಾಗಿ ನೋಡಿ, ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯವೇ ಮೆಚ್ಚಿದ ಪಾಳೇಗಾರ. ಪಾಳೇಗಾರ ಪರಾಕ್ರಮಿಯಾಗಿ ಮೆರೆಯುತ್ತಿದ್ದ ಕಾಲ ಅದು. ಆದರೆ ನಮ್ಮ ಬಿಜೆಪಿಗಳು ಕೆತ್ತಿಸಿ ನಿಲ್ಲಿಸಿರುವ ಕೆಂಪೇಗೌಡರು ಹಿಡಿದ ಕತ್ತಿ ಮತ್ತು ಮುಖಭಾವಕ್ಕೆ ಒಂದಿಷ್ಟು ಹೋಲಿಕೆಯಿಲ್ಲವಂತಲ್ಲಾ. ಅತ್ತ ಶಿವಗಂಗೆಯಲ್ಲಿರುವ ಕೆಂಪೇಗೌಡರ ಸಾತ್ವಿಕತೆಯೂ ಅದರಲ್ಲಿ ಇಲ್ಲವಂತಲ್ಲಾ. ಬೇಲಿ ಸವರಲು ಕತ್ತಿ ಹಿಡಿದಂತೆ ಕಾಣುವ ಕೆಂಪೇಗೌಡರ ಪ್ರತಿಮೆ ಕಡಿದ ಶಿಲ್ಪಿಗೆ ಕೆಂಪೇಗೌಡರ ತಲೆ ಅಷ್ಟುಗಾತ್ರವಿದ್ದ ಮೇಲೆ ಎದೆಭಾಗ ಎಷ್ಟಿರಬೇಕೆಂಬುದೇ ಗೊತ್ತಿಲ್ಲ ಅಂತ ಕಾಣಿಸುತ್ತೆ. ಪ್ರತಿಮೆಯಲ್ಲಿ ತೊಡಿಸಿರುವ ಬಟ್ಟೆಯಂತೂ ಕೆಂಪೇಗೌಡರ ಕಾಲವನ್ನು ಪ್ರತಿನಿಧಿಸುತ್ತಿಲ್ಲ. ಈಗಲೂ ಕಾಲ ಮಿಂಚಿಲ್ಲ ಕೆಂಪೇಗೌಡರ ಪ್ರತಿಮೆಯನ್ನ ಅನಾವರಣಗೊಳಿಸಲು ಆಹ್ವಾನವಿಲ್ಲದೆ ಅವಮಾನಗೊಂಡವರೆಲ್ಲಾ ಸೇರಿ ಒಳ್ಳೆ ಪ್ರತಿಮೆ ಮಾಡಿಸಿ ನಿಲ್ಲಿಸಬಹುದಂತಲ್ಲಾ, ಥೂತ್ತೇರಿ.

*****

ಬಿಜೆಪಿಗಳು ಯಾವ ಕೆಲಸ ಮಾಡಿದರೂ ಅಲ್ಲೊಂದು ಸಂಚು ಮತ್ತು ಸೇಡು ಇದೇ ಇರುತ್ತದೆ. ಅಶೋಕ ಮತ್ತು ಅಶ್ವತ್ಥ ನಾರಾಯಣರ ಜೊತೆಗೆ ನಿರ್ಮಲಾನಂದ ಸ್ವಾಮಿ ಇದ್ದರೆ ಸಾಕು, ಇಡೀ ಒಕ್ಕಲಿಗ ಸಮಾಜ ಬಿಜೆಪಿ ದೊಡ್ಡಿಗೆ ಬಂದು ತುಂಬಿಕೊಳ್ಳುತ್ತದೆ ಅಂದುಕೊಂಡಿದ್ದಾರೆ. ಹೀಗೆ ಭಾವಿಸಿರುವ ಅಶ್ವತ್ತಶೋಕರು ಆದಿಚುಂಚನಗಿರಿ ಸ್ವಾಮಿಗೆ ನಮ್ಮಷ್ಟು ಹತ್ತಿರ ಯಾರೂ ಇಲ್ಲ ಎಂಬ ಸಲುಗೆ ತೋರಲು ಅವರ ಭುಜ ಹಿಡಿದು ಪೋಜು ಕೊಟ್ಟಿವೆಯಲ್ಲಾ. ಜಗದ್ಗುರುವಿನ ಭುಜವನ್ನ ಸಲುಗೆಯಿಂದ ಮುಟ್ಟಿರುವ ಕಾರಣಕ್ಕೆ ದೂರು ದಾಖಲಿಸಿ ಕೇಸುಮಾಡಲು ಒಕ್ಕಲಿಗ ಲಾಯರು ತಯಾರಾಗಿದ್ದರಂತಲ್ಲಾ. ಆದರೆ ಭುಜವನ್ನ ಮುಟ್ಟಿಸಿಕೊಂಡ ಜಗದ್ಗುರುವೇ ಮೋಹಕವಾಗಿ ನಗುತ್ತ ಹಾಗೆ ಭುಜ ಮುಟ್ಟಲು ನಾನೇ ಹೇಳಿದೆ ಎಂದರೆ ಮಾಡುವುದೇನು ಎಂದು ಸುಮ್ಮನಾದರಂತಲ್ಲಾ. ಅದೇನಾದರಾಗಲಿ ಕೃಷಿಕ ಸಮಾಜದ ಸಿದ್ಧಾಂತಗಳನ್ನ ಕೈಬಿಟ್ಟು ವೈದಿಕ ಪರಂಪರೆ ಕಡೆ ಸಾಗುತ್ತಿರುವ ಚುಂಚನಗಿರಿ ಮಠವನ್ನ ಆ ಭೈರವೇಶ್ವರನೇ ಬಚಾವು ಮಾಡಬೇಕಂತಲ್ಲಾ, ಥೂತ್ತೇರಿ.

*****

ಇದನ್ನೂ ಓದಿ: ರಂಜಿಸಿ ವಂಚಿಸುವ ಕಾಂತಾರ

ಇತ್ತ ಹೊನ್ನಾಳಿ ಕಡೆಯಿಂದ ಬಂದ ಸುದ್ದಿ ಶಾನೆ ಶಾಕಿಂಗಾಗಿದೆಯಲ್ಲಾ. ನನ್ನ ಸೋದರನ ಮಗನದ್ದು ಗ್ಯಾರಂಟಿ ಕೊಲೆ, ಅದನ್ನ ಪತ್ತೆ ಹಚ್ಚಲಾಗದ ನೀವು ಎಂತಹ ಪೊಲೀಸರು ಎಂದು ಸಾರ್ವಜನಿಕವಾಗಿ ಅವಾಜುಹಾಕಿ ಅವಮಾನ ಮಾಡಿದ ರೇಣುಕಾಚಾರಿ ಇದ್ದಕ್ಕಿದ್ದಂತೆ ಬಾಯಿ ಬಂದ್ ಮಾಡಿಕೊಂಡು, ಇದ್ದಾರೂ ಇಲ್ಲವೋ ಅನ್ನುವಂತಾಗಿದ್ದಾರಲ್ಲಾ. ಹೊನ್ನಾಳಿ ಚಂದ್ರಶೇಖರರ ಸಾವು ಸಂಭವಿಸುವ ಮುನ್ನ ಆತ ಗೌರಿಗದ್ದೆ ಕಡೆಯಿಂದ ಬರಲು ಕಾರಣವೇನು ಎಂದು ಹುಡುಕಿಹೋದ ಪೊಲೀಸರಿಗೆ ಗೌರಿಗದ್ದೆಯಲ್ಲಿ ವಾಸಿಸುವ ’ಅವಧೂತ’ನ ಚರಿತ್ರೆ ಶಾನೆ ಕುತೂಹಲ ಮೂಡಿಸಿದೆಯಂತಲ್ಲಾ. ಈ ಮಠಗಳ ಕರ್ಮಕಾಂಡ ಶುರುವಾದದ್ದು ರಾಮಚಂದ್ರಾಪುರದ ಮಠದ ಕಡೆಯಿಂದ. ಆ ನಂತರ ಉಡುಪಿ ಮಠಗಳು. ಅಲ್ಲೂಬ್ಬ ಸ್ವಾಮಿ ಆತ್ಮಹತ್ಯೆ ಮಾಡಿಕೊಂಡ. ಈಚೆಗೆ ಮುರುಘ ಶರಣರ ಸ್ಥಿತಿ ನೋಡಿದ ಇಬ್ಬರು ಲಿಂಗೈಕ್ಯರಾದರು. ಇನ್ನು ದಿನದಿಂದ ದಿನಕ್ಕೆ ಮುರುಘ ಶರಣರ ದೌರ್ಜನ್ಯಗಳು ಬಿಚ್ಚಿಕೊಳ್ಳುತ್ತಿದ್ದಂತೆ ಗೌರಿಗದ್ದೆ ಬಾಲಕನ ವಿರುದ್ಧವೂ ಅನುಮಾನ ಆರೋಪಗಳು ಏಳುತ್ತಿವೆ. ಇದರ ಅಪಾಯವರಿತ ಜವಬ್ದಾರಿವಂತರು ಇಂಥ ಮಠಗಳ ಕಡೆಗೆ ಮಹಿಳೆ-ಮಕ್ಕಳು-ಹುಡುಗರನ್ನು ಕಳಿಸಬೇಡಿ ಎಂಬ ಎಚ್ಚರಿಕೆ ಫಲಕಗಳನ್ನ ಬರೆಯುತ್ತಿದ್ದಾರಂತಲ್ಲಾ, ಥೂತ್ತೇರಿ.

*****

ಹೇಗಾದರೂ ಮಾಡಿ ಟಿಪ್ಪು ಸುಲ್ತಾನನನ್ನು ಕನ್ನಡ ದ್ರೋಹಿ ಮಾಡಲು ಹೆಣಗುತ್ತಿರುವವರ ಜೊತೆಗೆ ಈಗ ಎಸ್ಸೆಲ್ ಭೈರಪ್ಪ ಕೂಡ ಸೇರಿದ್ದಾರಲ್ಲಾ. ಟಿಪ್ಪು ಕನ್ನಡ ದ್ರೋಹಿಯಾಗಿದ್ದ ಎಂಬುದಕ್ಕೆ ಭೈರಪ್ಪ ಕೊಡುವ ಕಾರಣ ಆತ ಕಂದಾಯ ಇಲಾಖೆಯಲ್ಲಿ ಪರ್ಶಿಯನ್, ಪಾರ್ಸಿ ಹೆಸರುಗಳನ್ನ ಸೇರಿಸಲಾಗಿದೆ ಎಂಬುದಾಗಿದೆ. ಇಂಗ್ಲಿಷ್ ವಿರೋಧಿಯಾಗಿದ್ದ ಟಿಪ್ಪು ಪರ್ಶಿಯನ್ ಭಾಷೆ ಸೇರಿಸಿದ್ದು ಸಹಜ ಕ್ರಿಯೆಯಾಗಿತ್ತು. ಆದರೆ ಶ್ಯಾನುಭೋಗರ ಮನೆಯವರಾದ ಭೈರಪ್ಪ ಇತಿಹಾಸ ಕೆದಕಿದರೆ, ಟಿಪ್ಪು ಕಾಲದಲ್ಲಿ ಇಡೀ ನಾಡಿನ ಕಂದಾಯ ಇಲಾಖೆ ನೋಡಿಕೊಳ್ಳುತ್ತಿದ್ದವರು ಶಾನುಭೋಗರು. ಇನ್ನ ಟಿಪ್ಪು ಸಚಿವ ಸಂಪುಟದಲ್ಲಿ ಐದು ಜನ ಬ್ರಾಹ್ಮಣರಿದ್ದರು. ಟಿಪ್ಪು ಆಡಳಿತದಲ್ಲಿ ಯಾವುದೇ ಕಾನೂನು ಜಾರಿಯಾಗುವುದಿದ್ದರೂ ಅದಕ್ಕೆ ಬ್ರಾಹ್ಮಣರ ಚರ್ಚೆಗಳೂ ಮುಖ್ಯವಾಗುತ್ತಿದ್ದವು. ಒಂದು ವೇಳೆ ಟಿಪ್ಪು ತನ್ನ ಆಡಳಿತದಲ್ಲಿ ಪರ್ಶಿಯನ್ ಭಾಷೆ ತುರುಕಲು ಯತ್ನಿಸಿದ್ದರೆ ಅದನ್ನು ಖಂಡಿಸಿ ಬ್ರಾಹ್ಮಣರು ತಮ್ಮ ಹುದ್ದೆಗೆ ರಾಜೀನಾಮೆ ಕೊಡಬೇಕಿತ್ತು. ಹಾಗೆ ಮಾಡದೆ ಬಂದ ಬಳವಳಿಯವರು ಈಗ ಟಿಪ್ಪುವನ್ನು ಕನ್ನಡ ದ್ರೋಹಿ ಎಂದು ಬಗೆಯಲು ಪ್ರಯತ್ನಿಸಿದರೆ ಅವರನ್ನೇ ಈ ದ್ರೋಹಿಗಳ ಪಟ್ಟಿಯಲ್ಲಿ ಸೇರಿಸಲು ಜನ ಕಾಯುತ್ತಿದ್ದಾರಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಂದಾಯ ಇಲಾಕೆಯ ಪರ್ಷೀಯನ್ ಪದಗಳಿಗೆ ಈಗಲಾದರೂ ಕನ್ನಡ ಪದಗಳನ್ನು ಹುಟ್ಟುಹಾಕಬಹುದಲ್ಲಾ?

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...