Homeಅಂಕಣಗಳುಕೆಂಪೇಗೌಡರ ಪ್ರತಿಮೆಯನ್ನು ಸರಿಯಾಗಿ ನೋಡಿದ್ದೀರ?

ಕೆಂಪೇಗೌಡರ ಪ್ರತಿಮೆಯನ್ನು ಸರಿಯಾಗಿ ನೋಡಿದ್ದೀರ?

- Advertisement -
- Advertisement -

ಬಿಜೆಪಿಯವರಿಂದ ನಿರ್ಮಿಸಿಕೊಂಡು ಅನಾವರಣಗೊಂಡ ಕೆಂಪೇಗೌಡರ ಪ್ರತಿಮೆಯನ್ನ ನೋಡಿದ್ದೀರಾ? ನೋಡದಿದ್ದರೆ ಸರಿಯಾಗಿ ನೋಡಿ, ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯವೇ ಮೆಚ್ಚಿದ ಪಾಳೇಗಾರ. ಪಾಳೇಗಾರ ಪರಾಕ್ರಮಿಯಾಗಿ ಮೆರೆಯುತ್ತಿದ್ದ ಕಾಲ ಅದು. ಆದರೆ ನಮ್ಮ ಬಿಜೆಪಿಗಳು ಕೆತ್ತಿಸಿ ನಿಲ್ಲಿಸಿರುವ ಕೆಂಪೇಗೌಡರು ಹಿಡಿದ ಕತ್ತಿ ಮತ್ತು ಮುಖಭಾವಕ್ಕೆ ಒಂದಿಷ್ಟು ಹೋಲಿಕೆಯಿಲ್ಲವಂತಲ್ಲಾ. ಅತ್ತ ಶಿವಗಂಗೆಯಲ್ಲಿರುವ ಕೆಂಪೇಗೌಡರ ಸಾತ್ವಿಕತೆಯೂ ಅದರಲ್ಲಿ ಇಲ್ಲವಂತಲ್ಲಾ. ಬೇಲಿ ಸವರಲು ಕತ್ತಿ ಹಿಡಿದಂತೆ ಕಾಣುವ ಕೆಂಪೇಗೌಡರ ಪ್ರತಿಮೆ ಕಡಿದ ಶಿಲ್ಪಿಗೆ ಕೆಂಪೇಗೌಡರ ತಲೆ ಅಷ್ಟುಗಾತ್ರವಿದ್ದ ಮೇಲೆ ಎದೆಭಾಗ ಎಷ್ಟಿರಬೇಕೆಂಬುದೇ ಗೊತ್ತಿಲ್ಲ ಅಂತ ಕಾಣಿಸುತ್ತೆ. ಪ್ರತಿಮೆಯಲ್ಲಿ ತೊಡಿಸಿರುವ ಬಟ್ಟೆಯಂತೂ ಕೆಂಪೇಗೌಡರ ಕಾಲವನ್ನು ಪ್ರತಿನಿಧಿಸುತ್ತಿಲ್ಲ. ಈಗಲೂ ಕಾಲ ಮಿಂಚಿಲ್ಲ ಕೆಂಪೇಗೌಡರ ಪ್ರತಿಮೆಯನ್ನ ಅನಾವರಣಗೊಳಿಸಲು ಆಹ್ವಾನವಿಲ್ಲದೆ ಅವಮಾನಗೊಂಡವರೆಲ್ಲಾ ಸೇರಿ ಒಳ್ಳೆ ಪ್ರತಿಮೆ ಮಾಡಿಸಿ ನಿಲ್ಲಿಸಬಹುದಂತಲ್ಲಾ, ಥೂತ್ತೇರಿ.

*****

ಬಿಜೆಪಿಗಳು ಯಾವ ಕೆಲಸ ಮಾಡಿದರೂ ಅಲ್ಲೊಂದು ಸಂಚು ಮತ್ತು ಸೇಡು ಇದೇ ಇರುತ್ತದೆ. ಅಶೋಕ ಮತ್ತು ಅಶ್ವತ್ಥ ನಾರಾಯಣರ ಜೊತೆಗೆ ನಿರ್ಮಲಾನಂದ ಸ್ವಾಮಿ ಇದ್ದರೆ ಸಾಕು, ಇಡೀ ಒಕ್ಕಲಿಗ ಸಮಾಜ ಬಿಜೆಪಿ ದೊಡ್ಡಿಗೆ ಬಂದು ತುಂಬಿಕೊಳ್ಳುತ್ತದೆ ಅಂದುಕೊಂಡಿದ್ದಾರೆ. ಹೀಗೆ ಭಾವಿಸಿರುವ ಅಶ್ವತ್ತಶೋಕರು ಆದಿಚುಂಚನಗಿರಿ ಸ್ವಾಮಿಗೆ ನಮ್ಮಷ್ಟು ಹತ್ತಿರ ಯಾರೂ ಇಲ್ಲ ಎಂಬ ಸಲುಗೆ ತೋರಲು ಅವರ ಭುಜ ಹಿಡಿದು ಪೋಜು ಕೊಟ್ಟಿವೆಯಲ್ಲಾ. ಜಗದ್ಗುರುವಿನ ಭುಜವನ್ನ ಸಲುಗೆಯಿಂದ ಮುಟ್ಟಿರುವ ಕಾರಣಕ್ಕೆ ದೂರು ದಾಖಲಿಸಿ ಕೇಸುಮಾಡಲು ಒಕ್ಕಲಿಗ ಲಾಯರು ತಯಾರಾಗಿದ್ದರಂತಲ್ಲಾ. ಆದರೆ ಭುಜವನ್ನ ಮುಟ್ಟಿಸಿಕೊಂಡ ಜಗದ್ಗುರುವೇ ಮೋಹಕವಾಗಿ ನಗುತ್ತ ಹಾಗೆ ಭುಜ ಮುಟ್ಟಲು ನಾನೇ ಹೇಳಿದೆ ಎಂದರೆ ಮಾಡುವುದೇನು ಎಂದು ಸುಮ್ಮನಾದರಂತಲ್ಲಾ. ಅದೇನಾದರಾಗಲಿ ಕೃಷಿಕ ಸಮಾಜದ ಸಿದ್ಧಾಂತಗಳನ್ನ ಕೈಬಿಟ್ಟು ವೈದಿಕ ಪರಂಪರೆ ಕಡೆ ಸಾಗುತ್ತಿರುವ ಚುಂಚನಗಿರಿ ಮಠವನ್ನ ಆ ಭೈರವೇಶ್ವರನೇ ಬಚಾವು ಮಾಡಬೇಕಂತಲ್ಲಾ, ಥೂತ್ತೇರಿ.

*****

ಇದನ್ನೂ ಓದಿ: ರಂಜಿಸಿ ವಂಚಿಸುವ ಕಾಂತಾರ

ಇತ್ತ ಹೊನ್ನಾಳಿ ಕಡೆಯಿಂದ ಬಂದ ಸುದ್ದಿ ಶಾನೆ ಶಾಕಿಂಗಾಗಿದೆಯಲ್ಲಾ. ನನ್ನ ಸೋದರನ ಮಗನದ್ದು ಗ್ಯಾರಂಟಿ ಕೊಲೆ, ಅದನ್ನ ಪತ್ತೆ ಹಚ್ಚಲಾಗದ ನೀವು ಎಂತಹ ಪೊಲೀಸರು ಎಂದು ಸಾರ್ವಜನಿಕವಾಗಿ ಅವಾಜುಹಾಕಿ ಅವಮಾನ ಮಾಡಿದ ರೇಣುಕಾಚಾರಿ ಇದ್ದಕ್ಕಿದ್ದಂತೆ ಬಾಯಿ ಬಂದ್ ಮಾಡಿಕೊಂಡು, ಇದ್ದಾರೂ ಇಲ್ಲವೋ ಅನ್ನುವಂತಾಗಿದ್ದಾರಲ್ಲಾ. ಹೊನ್ನಾಳಿ ಚಂದ್ರಶೇಖರರ ಸಾವು ಸಂಭವಿಸುವ ಮುನ್ನ ಆತ ಗೌರಿಗದ್ದೆ ಕಡೆಯಿಂದ ಬರಲು ಕಾರಣವೇನು ಎಂದು ಹುಡುಕಿಹೋದ ಪೊಲೀಸರಿಗೆ ಗೌರಿಗದ್ದೆಯಲ್ಲಿ ವಾಸಿಸುವ ’ಅವಧೂತ’ನ ಚರಿತ್ರೆ ಶಾನೆ ಕುತೂಹಲ ಮೂಡಿಸಿದೆಯಂತಲ್ಲಾ. ಈ ಮಠಗಳ ಕರ್ಮಕಾಂಡ ಶುರುವಾದದ್ದು ರಾಮಚಂದ್ರಾಪುರದ ಮಠದ ಕಡೆಯಿಂದ. ಆ ನಂತರ ಉಡುಪಿ ಮಠಗಳು. ಅಲ್ಲೂಬ್ಬ ಸ್ವಾಮಿ ಆತ್ಮಹತ್ಯೆ ಮಾಡಿಕೊಂಡ. ಈಚೆಗೆ ಮುರುಘ ಶರಣರ ಸ್ಥಿತಿ ನೋಡಿದ ಇಬ್ಬರು ಲಿಂಗೈಕ್ಯರಾದರು. ಇನ್ನು ದಿನದಿಂದ ದಿನಕ್ಕೆ ಮುರುಘ ಶರಣರ ದೌರ್ಜನ್ಯಗಳು ಬಿಚ್ಚಿಕೊಳ್ಳುತ್ತಿದ್ದಂತೆ ಗೌರಿಗದ್ದೆ ಬಾಲಕನ ವಿರುದ್ಧವೂ ಅನುಮಾನ ಆರೋಪಗಳು ಏಳುತ್ತಿವೆ. ಇದರ ಅಪಾಯವರಿತ ಜವಬ್ದಾರಿವಂತರು ಇಂಥ ಮಠಗಳ ಕಡೆಗೆ ಮಹಿಳೆ-ಮಕ್ಕಳು-ಹುಡುಗರನ್ನು ಕಳಿಸಬೇಡಿ ಎಂಬ ಎಚ್ಚರಿಕೆ ಫಲಕಗಳನ್ನ ಬರೆಯುತ್ತಿದ್ದಾರಂತಲ್ಲಾ, ಥೂತ್ತೇರಿ.

*****

ಹೇಗಾದರೂ ಮಾಡಿ ಟಿಪ್ಪು ಸುಲ್ತಾನನನ್ನು ಕನ್ನಡ ದ್ರೋಹಿ ಮಾಡಲು ಹೆಣಗುತ್ತಿರುವವರ ಜೊತೆಗೆ ಈಗ ಎಸ್ಸೆಲ್ ಭೈರಪ್ಪ ಕೂಡ ಸೇರಿದ್ದಾರಲ್ಲಾ. ಟಿಪ್ಪು ಕನ್ನಡ ದ್ರೋಹಿಯಾಗಿದ್ದ ಎಂಬುದಕ್ಕೆ ಭೈರಪ್ಪ ಕೊಡುವ ಕಾರಣ ಆತ ಕಂದಾಯ ಇಲಾಖೆಯಲ್ಲಿ ಪರ್ಶಿಯನ್, ಪಾರ್ಸಿ ಹೆಸರುಗಳನ್ನ ಸೇರಿಸಲಾಗಿದೆ ಎಂಬುದಾಗಿದೆ. ಇಂಗ್ಲಿಷ್ ವಿರೋಧಿಯಾಗಿದ್ದ ಟಿಪ್ಪು ಪರ್ಶಿಯನ್ ಭಾಷೆ ಸೇರಿಸಿದ್ದು ಸಹಜ ಕ್ರಿಯೆಯಾಗಿತ್ತು. ಆದರೆ ಶ್ಯಾನುಭೋಗರ ಮನೆಯವರಾದ ಭೈರಪ್ಪ ಇತಿಹಾಸ ಕೆದಕಿದರೆ, ಟಿಪ್ಪು ಕಾಲದಲ್ಲಿ ಇಡೀ ನಾಡಿನ ಕಂದಾಯ ಇಲಾಖೆ ನೋಡಿಕೊಳ್ಳುತ್ತಿದ್ದವರು ಶಾನುಭೋಗರು. ಇನ್ನ ಟಿಪ್ಪು ಸಚಿವ ಸಂಪುಟದಲ್ಲಿ ಐದು ಜನ ಬ್ರಾಹ್ಮಣರಿದ್ದರು. ಟಿಪ್ಪು ಆಡಳಿತದಲ್ಲಿ ಯಾವುದೇ ಕಾನೂನು ಜಾರಿಯಾಗುವುದಿದ್ದರೂ ಅದಕ್ಕೆ ಬ್ರಾಹ್ಮಣರ ಚರ್ಚೆಗಳೂ ಮುಖ್ಯವಾಗುತ್ತಿದ್ದವು. ಒಂದು ವೇಳೆ ಟಿಪ್ಪು ತನ್ನ ಆಡಳಿತದಲ್ಲಿ ಪರ್ಶಿಯನ್ ಭಾಷೆ ತುರುಕಲು ಯತ್ನಿಸಿದ್ದರೆ ಅದನ್ನು ಖಂಡಿಸಿ ಬ್ರಾಹ್ಮಣರು ತಮ್ಮ ಹುದ್ದೆಗೆ ರಾಜೀನಾಮೆ ಕೊಡಬೇಕಿತ್ತು. ಹಾಗೆ ಮಾಡದೆ ಬಂದ ಬಳವಳಿಯವರು ಈಗ ಟಿಪ್ಪುವನ್ನು ಕನ್ನಡ ದ್ರೋಹಿ ಎಂದು ಬಗೆಯಲು ಪ್ರಯತ್ನಿಸಿದರೆ ಅವರನ್ನೇ ಈ ದ್ರೋಹಿಗಳ ಪಟ್ಟಿಯಲ್ಲಿ ಸೇರಿಸಲು ಜನ ಕಾಯುತ್ತಿದ್ದಾರಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಂದಾಯ ಇಲಾಕೆಯ ಪರ್ಷೀಯನ್ ಪದಗಳಿಗೆ ಈಗಲಾದರೂ ಕನ್ನಡ ಪದಗಳನ್ನು ಹುಟ್ಟುಹಾಕಬಹುದಲ್ಲಾ?

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...