Homeಅಂಕಣಗಳುಮುತ್ತು-ಸುತ್ತು: ಗಗನಚುಕ್ಕಿ, ಭರಚುಕ್ಕಿ ಜಲಪಾತ ನೋಡಿದ್ದೀರಾ?

ಮುತ್ತು-ಸುತ್ತು: ಗಗನಚುಕ್ಕಿ, ಭರಚುಕ್ಕಿ ಜಲಪಾತ ನೋಡಿದ್ದೀರಾ?

- Advertisement -
- Advertisement -

’ಜೀವನದಾಗೆ ಒಮ್ಮೆ ನೋಡಿ ಜೋಗದ ಗುಂಡಿ’ ಅಂತ ಮೂಗೂರು ಮಲ್ಲಪ್ಪನವರು ಬರೆದ ಹಾಡನ್ನು ಅಣ್ಣಾವ್ರು ಜೀವನಚೈತ್ರ ಸಿನಿಮಾದಲ್ಲಿ ಹಾಡಿದ್ದು ಕೇಳಿ ಎಷ್ಟೋ ಜನ ಜೋಗ ಜಲಪಾತ ನೋಡಿರಬಹುದು. ಇನ್ನು ಕೆಲವರಿಗೆ ಬೆಂಗಳೂರಿನಿಂದ ದೂರವಿರುವ (400 ಕಿ.ಮೀ) ಜೋಗ ಜಲಪಾತವನ್ನು ಒಂದು ದಿನದಲ್ಲಿ ನೋಡಿಬರಲು ಆಗದೇ ಇರಬಹುದು. ಜೋಗ ನೋಡಿರುವವರು ಮತ್ತು ನೋಡದೇ ಇರುವವರು ಎಲ್ಲರೂ ನೋಡಲೇಬೇಕಾದ, ಬೆಂಗಳೂರಿನಿಂದ ಒಂದು ದಿನದಲ್ಲಿ ನೋಡಿ ಬರಬಹುದಾದ ಆಕರ್ಷಕ ಪ್ರೇಕ್ಷಣೀಯ ಸ್ಥಳವೆಂದರೆ ಗಗನಚುಕ್ಕಿ, ಭರಚುಕ್ಕಿ ಜಲಪಾತ.

ಬೆಂಗಳೂರಿನಿಂದ 130 ಕಿ.ಮೀ ದೂರವಿರುವ, ಮಂಡ್ಯ ಮತ್ತು ಚಾಮರಾಜನಗರ ಗಡಿಭಾಗ ಶಿವನಸಮುದ್ರ ಎಂಬ ಊರಿನಲ್ಲಿರುವ ಈ ಎರಡು ಜಲಪಾತಗಳು ಮನಸ್ಸಿಗೆ ಮುದ ನೀಡುವುದರಲ್ಲಿ ಸಂದೇಹವೇ ಇಲ್ಲ. ಬೆಂಗಳೂರಿನಿಂದ ಕನಕಪುರ ಮಳವಳ್ಳಿ ಅಥವಾ ರಾಮನಗರ-ಮದ್ದೂರು-ಮಳವಳ್ಳಿ ಮಾರ್ಗದಲ್ಲಿ ನಾವು ಶಿವನಸಮುದ್ರ ತಲುಪಬಹುದು. ಜೂನ್‌ನಿಂದ ಜನವರಿವರೆಗಿನ ಸಮಯವು ಈ ಪ್ರವಾಸಕ್ಕೆ ಸೂಕ್ತವಾಗಿದ್ದು ದಾರಿಯುದ್ದಕ್ಕೂ ಹಸಿರು ಮರಗಳು, ಬೆಟ್ಟಗಳು ಕಣ್ಮನ ಸೆಳೆಯುತ್ತವೆ.

ಕಾವೇರಿ ಮತ್ತು ಕಬಿನಿ ನದಿಗಳು ಒಟ್ಟಾಗಿ ಹರಿಯುವಾಗ ಎರಡು ಕವಲಾಗಿ ಹೊಡೆದು ಎತ್ತರದಿಂದ ಧುಮ್ಮಿಕ್ಕುವುದೇ ಗಗನಚುಕ್ಕಿ, ಭರಚುಕ್ಕಿ ಜಲಪಾತಗಳಾಗಿವೆ. ಗಗನಚುಕ್ಕಿ ಜಲಪಾತವು ಮಂಡ್ಯ ಜಿಲ್ಲೆಯ ಮಳವಳ್ಳಿ ಜಿಲ್ಲೆಯ ವ್ಯಾಪ್ತಿಗೆ ಬಂದರೆ, ಭರಚುಕ್ಕಿಯು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಗೆ ಬರುತ್ತದೆ.

ಐತಿಹಾಸಿಕ ಮಹತ್ವ

ಈ ಎರಡು ಜಲಪಾತಗಳನ್ನು ಶಿಂಷಾ ಜಲಪಾತ ಎಂತಲೂ ಕರೆಯುತ್ತಾರೆ. ಕಾರಣವೆಂದರೆ 1902ರಲ್ಲಿ ಇಲ್ಲಿ ಶಿಂಷಾ ಜಲವಿದ್ಯುತ್ ಉತ್ಪಾದನೆಯನ್ನು ಆರಂಭಿಸಲಾಗಿತ್ತು. ಅಂದರೆ 120 ವರ್ಷದ ಹಿಂದೆಯೇ ಇಲ್ಲಿ ಜಲವಿದ್ಯುತ್ ಉತ್ಪಾದಿಸಿ ಕೋಲಾರ್ ಗೋಲ್ಡ್ ಫೀಲ್ಡ್‌ನಲ್ಲಿ (ಕೆಜಿಎಫ್ ಕೋಲಾರ) ಚಿನ್ನದ ಗಣಿಗಾರಿಕೆ ನಡೆಸಲು ಸರಬರಾಜು ಮಾಡಲಾಗುತ್ತಿತ್ತು. ಇದು ಏಷ್ಯಾದ ಮೊದಲ ಜಲವಿದ್ಯುತ್ ಉತ್ಪಾದನಾ ಕೇಂದ್ರ ಎಂದು ಪ್ರಸಿದ್ಧಿಯಾಗಿದೆ. ಹಾಗೆಯೇ ಶಿವನ ಸಮುದ್ರ ಊರಿನ ಪಕ್ಕ ಈ ಜಲಪಾತಗಳಿರುವುದಿಂದ ಶಿವನಸಮುದ್ರ ಜಲಪಾತ, ಬ್ಲಫ್ ಮುಂತಾದ ಹೆಸರುಗಳಿಂದ ಕರೆಯಲ್ಪಡುತ್ತದೆ.

ಗಗನ ಚುಕ್ಕಿ

ಕಾವೇರಿ ಮತ್ತು ಕಬಿನಿ ನದಿಗಳು ಒಟ್ಟಾಗಿ ಧುಮ್ಮಿಕ್ಕುವುದೇ ಗಗನ ಚುಕ್ಕಿ ಜಲಪಾತ. ಈ ಜಲಪಾತವನ್ನು ನೋಡಲಿಕ್ಕಾಗಿಯೇ ದೂರದಿಂದ ವೀಕ್ಷಣಾ ಗೋಪುರವನ್ನು ನಿರ್ಮಿಸಲಾಗಿದೆ. ಅಲ್ಲಿ ಸರ್ಕಾರದ ಮಯೂರ ಹೋಟೆಲ್ ಸಹ ಇದ್ದು ತಂಗಲು ಬಯಸುವವರಿಗೆ ಅವಕಾಶವಿದೆ. 75 ಮೀಟರ್ ಎತ್ತರದಿಂದ ಧುಮ್ಮಿಕ್ಕುವ ಈ ಜಲಪಾತ ನೋಡಲು ಸಾಕಷ್ಟು ಪ್ರವಾಸಿಗರು ನೆರೆಯುತ್ತಾರೆ. ಅಲ್ಲದೆ ಜಲಪಾತದ ಸಮೀಪದಲ್ಲಿಯೇ ಹಜರತ್ ಮರ್ದಾನ ಎ-ಫೈಬ್ ಎಂಬ ದರ್ಗಾ ಇದ್ದು ಅಲ್ಲಿಂದ ಬಹಳ ಹತ್ತಿರದಲ್ಲಿ ಜಲಪಾತವನ್ನು ಕಣ್ತುಂಬಿಕೊಳ್ಳಬಹುದು.

ಭರಚುಕ್ಕಿ

ಕಾವೇರಿ ನದಿಯ ಮತ್ತೊಂದು ಕವಲು ಭರಚುಕ್ಕಿಯಾಗಿ ಧುಮ್ಮಿಕ್ಕುತ್ತದೆ. ಐದಾರು ಕಡೆ ಹಾಲುನೊರೆಯಂತೆ ಉಕ್ಕುವ ನೀರು ದೊಡ್ಡ ಸದ್ದು ಮಾಡುತ್ತದೆ. ಪೂರ್ತಿ ತಳದವರೆಗೂ ಹೋಗಲು ಮೆಟ್ಟಿಲುಗಳಿದ್ದು, ಈ ಮುಂಚೆ ನೀರು ಬೀಳವವರೆಗೂ ಹೋಗಿ ಮೈಯೊಡ್ಡಬಹುದಿತ್ತು. ಆದರೆ ನೀರಿನ ರಭಸ ಹೆಚ್ಚಾದಂತೆ ಈಗ ಕೆಳಗಿಳಿಯಲು ಅವಕಾಶವಿಲ್ಲ. ಮೇಲಿಂದಲೇ ನೋಡಲು ವೀಕ್ಷಣಾ ಗೋಪುರಗಳಿದ್ದು ಅಲ್ಲಿಂದಲೆ ಜಲಪಾತದ ಸೌಂದರ್ಯ ಸವಿಯಬಹುದು.

ಗಗನಚುಕ್ಕಿ, ಭರಚುಕ್ಕಿ ಜಲಪಾತೋತ್ಸವ

ಈ ಜಲಪಾತಗಳಿಗೆ ಪ್ರವಾಸಿಗರನ್ನು ಆಕರ್ಷಿಸಲು ಕರ್ನಾಟಕ ಸರ್ಕಾರವು ಇಲ್ಲಿ ಪ್ರತಿವರ್ಷ ’ಗಗನಚುಕ್ಕಿ, ಭರಚುಕ್ಕಿ ಜಲಪಾತೋತ್ಸವ’ ಹೆಸರಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸುತ್ತದೆ. ಖ್ಯಾತ ಚಲನಚಿತ್ರ ನಟ-ನಟಿಯರನ್ನು ಆಹ್ವಾನಿಸಿ ಕಾರ್ಯಕ್ರಮ ನಡೆಸುತ್ತಿತ್ತು. ಆದರೆ ಕಳೆದ ವರ್ಷದ ಕೋವಿಡ್ ಸಾಂಕ್ರಾಮಿಕದ ಕಾರಣದಿಂದ ಅದನ್ನು ಸ್ಥಗಿತಗೊಳಿಸಲಾಗಿದೆ. 2021ರ ಸೆಪ್ಟಂಬರ್-ಅಕ್ಟೋಬರ್‌ನಲ್ಲಿ ಕಾರ್ಯಕ್ರಮ ನಡೆಸುವ ನಿರೀಕ್ಷೆಯಿದೆ.

ಪ್ಲಾಸ್ಟಿಕ್ ಮುಕ್ತ ವಲಯ

ಸ್ವಚ್ಛತೆಯನ್ನು ಕಾಪಾಡುವ ಉದ್ದೇಶದಿಂದ ಈ ಪ್ರದೇಶಗಳನ್ನು ಪ್ಲಾಸ್ಟಿಕ್ ಮುಕ್ತ ವಲಯಗಳಾಗಿ ಘೋಷಿಸಲಾಗಿದೆ. ಹಾಗಾಗಿ ರಸ್ತೆಗಳು ಮತ್ತು ಅಲ್ಲಿನ ಪ್ರವಾಸಿತಾಣಗಳು ಸುಂದರವಾಗಿಯೂ, ಸ್ವಚ್ಛವಾಗಿಯೂ ಕಂಗೊಳಿಸುತ್ತಿವೆ. ಕುಟುಂಬಸಮೇತ ಯಾವುದೇ ಕುಂದುಕೊರತೆಗಳಿಲ್ಲದೆ ಪ್ರವಾಸ ಮಾಡಬಹುದಾದ ಸ್ಥಳ ಇದಾಗಿದೆ. ಇಲ್ಲಿ ಮೀನು ಮತ್ತು ಫಾಸ್ಟ್‌ಫುಡ್ ಮಾತ್ರ ದೊರೆಯುತ್ತಿದ್ದು, ಹತ್ತಿರದಲ್ಲಿ ಹೇಳಿಕೊಳ್ಳುವ ಉತ್ತಮ ಹೋಟೆಲ್‌ಗಳಿಲ್ಲ. ಮನೆಯಿಂದಲೇ ಅಡುಗೆ ಮಾಡಿ ಒಯ್ದರೆ ಜಲಪಾತ ನೋಡುತ್ತಾ ಊಟ ಮಾಡಬಹುದು.

ದೋಣಿವಿಹಾರ

ನಾವು ಶಿವನಸಮುದ್ರ ಗ್ರಾಮ ತಲುಪುವ ಮೊದಲೇ ಸತ್ತೇಗಾಲ ಹ್ಯಾಂಡ್‌ಪೋಸ್ಟ್ ಬಳಿ ವಿಸ್ತಾರ ನದಿ ಕಾಣಬಹುದು. ಅಲ್ಲಿ ಮೀನುಗಾರರು ದೋಣಿ ನಡೆಸುತ್ತಾರೆ. ನೀರಿನ ಹರಿವು ಕಡಿಮೆ ಇದ್ದಾಗ ಆಸಕ್ತರು ತೆಪ್ಪದಲ್ಲಿ ವಿಹಾರ ನಡೆಸಬಹುದು. ಮಕ್ಕಳಂತೂ ಇದನ್ನು ತುಂಬಾ ಖುಷಿಪಟ್ಟು ಸಂಭ್ರಮಿಸುತ್ತಾರೆ.

ಹತ್ತಿರದ ಇತರ ಸ್ಥಳಗಳು

ಶಿವನ ಸಮುದ್ರದ ಅನತಿ ದೂರದಲ್ಲಿಯೇ ತಲಕಾಡು ಇದೆ. ಅಲ್ಲಿನ ಹೊಳೆಯಲ್ಲಿ ಈಜಾಡಬಹುದು. ಇನ್ನೂ ಮುಂದೆ ಹೋದರೆ ಸೋಮನಾಥಪುರ ದೇವಾಲಯ ನೋಡಬಹುದು. ಇನ್ನು ಬೆಂಗಳೂರಿನತ್ತ ಕನಕಪುರ ಮಾರ್ಗದಲ್ಲಿ ವಾಪಸ್ ಬರುವಾಗ ಸಂಗಮ, ತಲಕಾಡು, ಚುಂಚಿ ಫಾಲ್ಸ್, ಟಿಕೆ ಫಾಲ್ಸ್ ನೋಡಬಹುದು.

ಬಸ್ ವ್ಯವಸ್ಥೆ

ಸಮಯದ ದೃಷ್ಟಿಯಿಂದ ಸ್ವಂತ ವಾಹನದಲ್ಲಿ ಈ ಸ್ಥಳಗಳಿಗೆ ಭೇಟಿ ಕೊಟ್ಟರೆ ಒಳ್ಳೆಯದು. ಇಲ್ಲದಿದ್ದಲ್ಲಿ ಬೆಂಗಳೂರಿನಿಂದ ಮಳವಳ್ಳಿಗೆ ಬಸ್ ಹಿಡಿಯಬೇಕು ಮತ್ತು ಅಲ್ಲಿಂದ ಸತ್ತೇಗಾಲ ಹ್ಯಾಂಡ್‌ಪೋಸ್ಟ್‌ಗೆ ಬಸ್ ವ್ಯವಸ್ಥೆ ಇದೆ. ಅಲ್ಲಿಂದ ಆಟೊದಲ್ಲಿ ಪ್ರಯಾಣಿಸಬೇಕು.


ಇದನ್ನೂ ಓದಿ: ಮುತ್ತು-ಸುತ್ತು: ಕುಂತಿ ಬೆಟ್ಟ ಹತ್ತಿ ನೋಡಿ, ತೊಣ್ಣೂರು ಕೆರೆಯಲ್ಲಿ ಈಜಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಬಿನಿ,ಕಾವೇರಿ ಹೊಳೆಗಳು ಗಗನಚುಕ್ಕಿ,ಬರಚುಕ್ಕಿ ಗಳಿಂದ ಮೊದಲು ಸುಮಾರು ೨೦ ಕಿಮೀ ದೂರದ ತಿರುಮಕೂಡಲು ನರಸಿಪುರದಿಂದ ಸೇರುತ್ತವೆ.
    ತರುವಾಯ ಒಂದಾಗಿ ಹರಿಯುವ ಹೊಳೆ ಸತ್ತೇಗಾಲದ ತರುವಾಯ ಎರಡಾಗಿ ಈ ಎರಡು ಅಬ್ಬಿಗಳುಂಟಾಗುತ್ತವೆ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...