Homeಅಂಕಣಗಳುಮುತ್ತು-ಸುತ್ತು: ಗಗನಚುಕ್ಕಿ, ಭರಚುಕ್ಕಿ ಜಲಪಾತ ನೋಡಿದ್ದೀರಾ?

ಮುತ್ತು-ಸುತ್ತು: ಗಗನಚುಕ್ಕಿ, ಭರಚುಕ್ಕಿ ಜಲಪಾತ ನೋಡಿದ್ದೀರಾ?

- Advertisement -
- Advertisement -

’ಜೀವನದಾಗೆ ಒಮ್ಮೆ ನೋಡಿ ಜೋಗದ ಗುಂಡಿ’ ಅಂತ ಮೂಗೂರು ಮಲ್ಲಪ್ಪನವರು ಬರೆದ ಹಾಡನ್ನು ಅಣ್ಣಾವ್ರು ಜೀವನಚೈತ್ರ ಸಿನಿಮಾದಲ್ಲಿ ಹಾಡಿದ್ದು ಕೇಳಿ ಎಷ್ಟೋ ಜನ ಜೋಗ ಜಲಪಾತ ನೋಡಿರಬಹುದು. ಇನ್ನು ಕೆಲವರಿಗೆ ಬೆಂಗಳೂರಿನಿಂದ ದೂರವಿರುವ (400 ಕಿ.ಮೀ) ಜೋಗ ಜಲಪಾತವನ್ನು ಒಂದು ದಿನದಲ್ಲಿ ನೋಡಿಬರಲು ಆಗದೇ ಇರಬಹುದು. ಜೋಗ ನೋಡಿರುವವರು ಮತ್ತು ನೋಡದೇ ಇರುವವರು ಎಲ್ಲರೂ ನೋಡಲೇಬೇಕಾದ, ಬೆಂಗಳೂರಿನಿಂದ ಒಂದು ದಿನದಲ್ಲಿ ನೋಡಿ ಬರಬಹುದಾದ ಆಕರ್ಷಕ ಪ್ರೇಕ್ಷಣೀಯ ಸ್ಥಳವೆಂದರೆ ಗಗನಚುಕ್ಕಿ, ಭರಚುಕ್ಕಿ ಜಲಪಾತ.

ಬೆಂಗಳೂರಿನಿಂದ 130 ಕಿ.ಮೀ ದೂರವಿರುವ, ಮಂಡ್ಯ ಮತ್ತು ಚಾಮರಾಜನಗರ ಗಡಿಭಾಗ ಶಿವನಸಮುದ್ರ ಎಂಬ ಊರಿನಲ್ಲಿರುವ ಈ ಎರಡು ಜಲಪಾತಗಳು ಮನಸ್ಸಿಗೆ ಮುದ ನೀಡುವುದರಲ್ಲಿ ಸಂದೇಹವೇ ಇಲ್ಲ. ಬೆಂಗಳೂರಿನಿಂದ ಕನಕಪುರ ಮಳವಳ್ಳಿ ಅಥವಾ ರಾಮನಗರ-ಮದ್ದೂರು-ಮಳವಳ್ಳಿ ಮಾರ್ಗದಲ್ಲಿ ನಾವು ಶಿವನಸಮುದ್ರ ತಲುಪಬಹುದು. ಜೂನ್‌ನಿಂದ ಜನವರಿವರೆಗಿನ ಸಮಯವು ಈ ಪ್ರವಾಸಕ್ಕೆ ಸೂಕ್ತವಾಗಿದ್ದು ದಾರಿಯುದ್ದಕ್ಕೂ ಹಸಿರು ಮರಗಳು, ಬೆಟ್ಟಗಳು ಕಣ್ಮನ ಸೆಳೆಯುತ್ತವೆ.

ಕಾವೇರಿ ಮತ್ತು ಕಬಿನಿ ನದಿಗಳು ಒಟ್ಟಾಗಿ ಹರಿಯುವಾಗ ಎರಡು ಕವಲಾಗಿ ಹೊಡೆದು ಎತ್ತರದಿಂದ ಧುಮ್ಮಿಕ್ಕುವುದೇ ಗಗನಚುಕ್ಕಿ, ಭರಚುಕ್ಕಿ ಜಲಪಾತಗಳಾಗಿವೆ. ಗಗನಚುಕ್ಕಿ ಜಲಪಾತವು ಮಂಡ್ಯ ಜಿಲ್ಲೆಯ ಮಳವಳ್ಳಿ ಜಿಲ್ಲೆಯ ವ್ಯಾಪ್ತಿಗೆ ಬಂದರೆ, ಭರಚುಕ್ಕಿಯು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಗೆ ಬರುತ್ತದೆ.

ಐತಿಹಾಸಿಕ ಮಹತ್ವ

ಈ ಎರಡು ಜಲಪಾತಗಳನ್ನು ಶಿಂಷಾ ಜಲಪಾತ ಎಂತಲೂ ಕರೆಯುತ್ತಾರೆ. ಕಾರಣವೆಂದರೆ 1902ರಲ್ಲಿ ಇಲ್ಲಿ ಶಿಂಷಾ ಜಲವಿದ್ಯುತ್ ಉತ್ಪಾದನೆಯನ್ನು ಆರಂಭಿಸಲಾಗಿತ್ತು. ಅಂದರೆ 120 ವರ್ಷದ ಹಿಂದೆಯೇ ಇಲ್ಲಿ ಜಲವಿದ್ಯುತ್ ಉತ್ಪಾದಿಸಿ ಕೋಲಾರ್ ಗೋಲ್ಡ್ ಫೀಲ್ಡ್‌ನಲ್ಲಿ (ಕೆಜಿಎಫ್ ಕೋಲಾರ) ಚಿನ್ನದ ಗಣಿಗಾರಿಕೆ ನಡೆಸಲು ಸರಬರಾಜು ಮಾಡಲಾಗುತ್ತಿತ್ತು. ಇದು ಏಷ್ಯಾದ ಮೊದಲ ಜಲವಿದ್ಯುತ್ ಉತ್ಪಾದನಾ ಕೇಂದ್ರ ಎಂದು ಪ್ರಸಿದ್ಧಿಯಾಗಿದೆ. ಹಾಗೆಯೇ ಶಿವನ ಸಮುದ್ರ ಊರಿನ ಪಕ್ಕ ಈ ಜಲಪಾತಗಳಿರುವುದಿಂದ ಶಿವನಸಮುದ್ರ ಜಲಪಾತ, ಬ್ಲಫ್ ಮುಂತಾದ ಹೆಸರುಗಳಿಂದ ಕರೆಯಲ್ಪಡುತ್ತದೆ.

ಗಗನ ಚುಕ್ಕಿ

ಕಾವೇರಿ ಮತ್ತು ಕಬಿನಿ ನದಿಗಳು ಒಟ್ಟಾಗಿ ಧುಮ್ಮಿಕ್ಕುವುದೇ ಗಗನ ಚುಕ್ಕಿ ಜಲಪಾತ. ಈ ಜಲಪಾತವನ್ನು ನೋಡಲಿಕ್ಕಾಗಿಯೇ ದೂರದಿಂದ ವೀಕ್ಷಣಾ ಗೋಪುರವನ್ನು ನಿರ್ಮಿಸಲಾಗಿದೆ. ಅಲ್ಲಿ ಸರ್ಕಾರದ ಮಯೂರ ಹೋಟೆಲ್ ಸಹ ಇದ್ದು ತಂಗಲು ಬಯಸುವವರಿಗೆ ಅವಕಾಶವಿದೆ. 75 ಮೀಟರ್ ಎತ್ತರದಿಂದ ಧುಮ್ಮಿಕ್ಕುವ ಈ ಜಲಪಾತ ನೋಡಲು ಸಾಕಷ್ಟು ಪ್ರವಾಸಿಗರು ನೆರೆಯುತ್ತಾರೆ. ಅಲ್ಲದೆ ಜಲಪಾತದ ಸಮೀಪದಲ್ಲಿಯೇ ಹಜರತ್ ಮರ್ದಾನ ಎ-ಫೈಬ್ ಎಂಬ ದರ್ಗಾ ಇದ್ದು ಅಲ್ಲಿಂದ ಬಹಳ ಹತ್ತಿರದಲ್ಲಿ ಜಲಪಾತವನ್ನು ಕಣ್ತುಂಬಿಕೊಳ್ಳಬಹುದು.

ಭರಚುಕ್ಕಿ

ಕಾವೇರಿ ನದಿಯ ಮತ್ತೊಂದು ಕವಲು ಭರಚುಕ್ಕಿಯಾಗಿ ಧುಮ್ಮಿಕ್ಕುತ್ತದೆ. ಐದಾರು ಕಡೆ ಹಾಲುನೊರೆಯಂತೆ ಉಕ್ಕುವ ನೀರು ದೊಡ್ಡ ಸದ್ದು ಮಾಡುತ್ತದೆ. ಪೂರ್ತಿ ತಳದವರೆಗೂ ಹೋಗಲು ಮೆಟ್ಟಿಲುಗಳಿದ್ದು, ಈ ಮುಂಚೆ ನೀರು ಬೀಳವವರೆಗೂ ಹೋಗಿ ಮೈಯೊಡ್ಡಬಹುದಿತ್ತು. ಆದರೆ ನೀರಿನ ರಭಸ ಹೆಚ್ಚಾದಂತೆ ಈಗ ಕೆಳಗಿಳಿಯಲು ಅವಕಾಶವಿಲ್ಲ. ಮೇಲಿಂದಲೇ ನೋಡಲು ವೀಕ್ಷಣಾ ಗೋಪುರಗಳಿದ್ದು ಅಲ್ಲಿಂದಲೆ ಜಲಪಾತದ ಸೌಂದರ್ಯ ಸವಿಯಬಹುದು.

ಗಗನಚುಕ್ಕಿ, ಭರಚುಕ್ಕಿ ಜಲಪಾತೋತ್ಸವ

ಈ ಜಲಪಾತಗಳಿಗೆ ಪ್ರವಾಸಿಗರನ್ನು ಆಕರ್ಷಿಸಲು ಕರ್ನಾಟಕ ಸರ್ಕಾರವು ಇಲ್ಲಿ ಪ್ರತಿವರ್ಷ ’ಗಗನಚುಕ್ಕಿ, ಭರಚುಕ್ಕಿ ಜಲಪಾತೋತ್ಸವ’ ಹೆಸರಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸುತ್ತದೆ. ಖ್ಯಾತ ಚಲನಚಿತ್ರ ನಟ-ನಟಿಯರನ್ನು ಆಹ್ವಾನಿಸಿ ಕಾರ್ಯಕ್ರಮ ನಡೆಸುತ್ತಿತ್ತು. ಆದರೆ ಕಳೆದ ವರ್ಷದ ಕೋವಿಡ್ ಸಾಂಕ್ರಾಮಿಕದ ಕಾರಣದಿಂದ ಅದನ್ನು ಸ್ಥಗಿತಗೊಳಿಸಲಾಗಿದೆ. 2021ರ ಸೆಪ್ಟಂಬರ್-ಅಕ್ಟೋಬರ್‌ನಲ್ಲಿ ಕಾರ್ಯಕ್ರಮ ನಡೆಸುವ ನಿರೀಕ್ಷೆಯಿದೆ.

ಪ್ಲಾಸ್ಟಿಕ್ ಮುಕ್ತ ವಲಯ

ಸ್ವಚ್ಛತೆಯನ್ನು ಕಾಪಾಡುವ ಉದ್ದೇಶದಿಂದ ಈ ಪ್ರದೇಶಗಳನ್ನು ಪ್ಲಾಸ್ಟಿಕ್ ಮುಕ್ತ ವಲಯಗಳಾಗಿ ಘೋಷಿಸಲಾಗಿದೆ. ಹಾಗಾಗಿ ರಸ್ತೆಗಳು ಮತ್ತು ಅಲ್ಲಿನ ಪ್ರವಾಸಿತಾಣಗಳು ಸುಂದರವಾಗಿಯೂ, ಸ್ವಚ್ಛವಾಗಿಯೂ ಕಂಗೊಳಿಸುತ್ತಿವೆ. ಕುಟುಂಬಸಮೇತ ಯಾವುದೇ ಕುಂದುಕೊರತೆಗಳಿಲ್ಲದೆ ಪ್ರವಾಸ ಮಾಡಬಹುದಾದ ಸ್ಥಳ ಇದಾಗಿದೆ. ಇಲ್ಲಿ ಮೀನು ಮತ್ತು ಫಾಸ್ಟ್‌ಫುಡ್ ಮಾತ್ರ ದೊರೆಯುತ್ತಿದ್ದು, ಹತ್ತಿರದಲ್ಲಿ ಹೇಳಿಕೊಳ್ಳುವ ಉತ್ತಮ ಹೋಟೆಲ್‌ಗಳಿಲ್ಲ. ಮನೆಯಿಂದಲೇ ಅಡುಗೆ ಮಾಡಿ ಒಯ್ದರೆ ಜಲಪಾತ ನೋಡುತ್ತಾ ಊಟ ಮಾಡಬಹುದು.

ದೋಣಿವಿಹಾರ

ನಾವು ಶಿವನಸಮುದ್ರ ಗ್ರಾಮ ತಲುಪುವ ಮೊದಲೇ ಸತ್ತೇಗಾಲ ಹ್ಯಾಂಡ್‌ಪೋಸ್ಟ್ ಬಳಿ ವಿಸ್ತಾರ ನದಿ ಕಾಣಬಹುದು. ಅಲ್ಲಿ ಮೀನುಗಾರರು ದೋಣಿ ನಡೆಸುತ್ತಾರೆ. ನೀರಿನ ಹರಿವು ಕಡಿಮೆ ಇದ್ದಾಗ ಆಸಕ್ತರು ತೆಪ್ಪದಲ್ಲಿ ವಿಹಾರ ನಡೆಸಬಹುದು. ಮಕ್ಕಳಂತೂ ಇದನ್ನು ತುಂಬಾ ಖುಷಿಪಟ್ಟು ಸಂಭ್ರಮಿಸುತ್ತಾರೆ.

ಹತ್ತಿರದ ಇತರ ಸ್ಥಳಗಳು

ಶಿವನ ಸಮುದ್ರದ ಅನತಿ ದೂರದಲ್ಲಿಯೇ ತಲಕಾಡು ಇದೆ. ಅಲ್ಲಿನ ಹೊಳೆಯಲ್ಲಿ ಈಜಾಡಬಹುದು. ಇನ್ನೂ ಮುಂದೆ ಹೋದರೆ ಸೋಮನಾಥಪುರ ದೇವಾಲಯ ನೋಡಬಹುದು. ಇನ್ನು ಬೆಂಗಳೂರಿನತ್ತ ಕನಕಪುರ ಮಾರ್ಗದಲ್ಲಿ ವಾಪಸ್ ಬರುವಾಗ ಸಂಗಮ, ತಲಕಾಡು, ಚುಂಚಿ ಫಾಲ್ಸ್, ಟಿಕೆ ಫಾಲ್ಸ್ ನೋಡಬಹುದು.

ಬಸ್ ವ್ಯವಸ್ಥೆ

ಸಮಯದ ದೃಷ್ಟಿಯಿಂದ ಸ್ವಂತ ವಾಹನದಲ್ಲಿ ಈ ಸ್ಥಳಗಳಿಗೆ ಭೇಟಿ ಕೊಟ್ಟರೆ ಒಳ್ಳೆಯದು. ಇಲ್ಲದಿದ್ದಲ್ಲಿ ಬೆಂಗಳೂರಿನಿಂದ ಮಳವಳ್ಳಿಗೆ ಬಸ್ ಹಿಡಿಯಬೇಕು ಮತ್ತು ಅಲ್ಲಿಂದ ಸತ್ತೇಗಾಲ ಹ್ಯಾಂಡ್‌ಪೋಸ್ಟ್‌ಗೆ ಬಸ್ ವ್ಯವಸ್ಥೆ ಇದೆ. ಅಲ್ಲಿಂದ ಆಟೊದಲ್ಲಿ ಪ್ರಯಾಣಿಸಬೇಕು.


ಇದನ್ನೂ ಓದಿ: ಮುತ್ತು-ಸುತ್ತು: ಕುಂತಿ ಬೆಟ್ಟ ಹತ್ತಿ ನೋಡಿ, ತೊಣ್ಣೂರು ಕೆರೆಯಲ್ಲಿ ಈಜಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಬಿನಿ,ಕಾವೇರಿ ಹೊಳೆಗಳು ಗಗನಚುಕ್ಕಿ,ಬರಚುಕ್ಕಿ ಗಳಿಂದ ಮೊದಲು ಸುಮಾರು ೨೦ ಕಿಮೀ ದೂರದ ತಿರುಮಕೂಡಲು ನರಸಿಪುರದಿಂದ ಸೇರುತ್ತವೆ.
    ತರುವಾಯ ಒಂದಾಗಿ ಹರಿಯುವ ಹೊಳೆ ಸತ್ತೇಗಾಲದ ತರುವಾಯ ಎರಡಾಗಿ ಈ ಎರಡು ಅಬ್ಬಿಗಳುಂಟಾಗುತ್ತವೆ.

LEAVE A REPLY

Please enter your comment!
Please enter your name here

- Advertisment -

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...